ಗುಪ್ತಚರ ವೈಫಲ್ಯವೇ ಭಾರತದ ಭಯೋತ್ಪಾದನಾ ವಿರೋಧಿ ಹೋರಾಟಕ್ಕೆ ಅಡ್ಡಿ

ಎನ್.ಎಸ್.ಜಿ. ಕಮಾಂಡೋ ಪಡೆಗಳಿಗೆ ಸೂಕ್ತ ಸೌಲಭ್ಯಗಳ ಕೊರತೆ ; ಸಮೀಕ್ಷಾ ವರದಿಯಲ್ಲಿ ಬಯಲಾದದ್ದೇನು?

Team Udayavani, Nov 3, 2019, 6:30 PM IST

Counter-Terrorism-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ನವದೆಹಲಿ: ಭಾರತ ಕಳೆದ ಕೆಲವು ದಶಕಗಳಿಂದ ಭಯೋತ್ಪಾದನೆಯ ವಿರುದ್ಧ ಹೋರಾಡುತ್ತಲೇ ಬರುತ್ತಿದೆ. ಗಡಿಯಾಚೆಗಿನ ಮತ್ತು ಆಂತರಿಕ ಭಯೋತ್ಪಾದನೆಯ ವಿರುದ್ಧ ಭಾರತದ ಹೋರಾಟ ನಡೆಯುತ್ತಲೇ ಇದೆ. ಮತ್ತು ವಿಶ್ವಮಟ್ಟದಲ್ಲೂ ಭಾರತವು ಭಯೋತ್ಪಾದನಾ ವಿರುದ್ಧದ ಸಮರದಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುವ ಶಕ್ತಿಯಾಗಿ ಬೆಳೆದು ನಿಂತಿದೆ.

ಸಶಕ್ತ ಸೇನಾಬಲ, ದೇಶಕ್ಕಾಗಿ ಪ್ರಾಣ ನೀಡಲೂ ಸಿದ್ಧರಿರುವ ನಮ್ಮ ಸೈನಿಕರು, ಆಧುನಿಕ ತಂತ್ರಜ್ಞಾನಗಳ ಬಳಕೆ ಮತ್ತು ರಾಜಕೀಯ ಇಚ್ಛಾಶಕ್ತಿ ಸಹಿತ ಇಷ್ಟೆಲ್ಲಾ ಪೂರಕ ಅಂಶಗಳಿದ್ದರೂ ಭಯೋತ್ಪಾದನೆಯ ವಿರುದ್ಧ ಭಾರತ ಸಂಘಟಿಸುತ್ತಿರುವ ಹೋರಾಟ ನಿರ್ಣಾಯಕ ಹಂತವನ್ನು ಮುಟ್ಟದಿರಲು ಏನು ಕಾರಣ ಎಂಬ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಿದೆ.

ವಿವಿಧ ಗುಪ್ತಚರ ಏಜೆನ್ಸಿಗಳು ನೀಡುವ ಗುಪ್ತ ಮಾಹಿತಿಗಳನ್ನು ಆಧರಿಸಿ ನಮ್ಮ ಸೇನಾಪಡೆಗಳು ಭಯೋತ್ಪಾದಕರ ವಿರುದ್ಧ ಕಾರ್ಯತಂತ್ರವನ್ನು ರೂಪಿಸಿ ಸಂಭಾವ್ಯ ದಾಳಿಗಳ ಸಂಚನ್ನು ತಡೆಯುತ್ತವೆ. ಆದರೆ ಪುಲ್ವಾಮ ದುರಂತದಂತಹ ಪ್ರಕರಣಗಳಲ್ಲಿ ನಮ್ಮ ಗುಪ್ತಚರ ದಳಗಳ ಮಾಹಿತಿ ಕೊರತೆಯಿದ್ದಿದ್ದು ಜಗಜ್ಜಾಹೀರಾಗಿತ್ತು. ಇದೀಗ ಜಾಗತಿಕ ಭಯೋತ್ಪಾದನೆ ಕುರಿತಾಗಿ ಅಮೆರಿಕಾದ ಸ್ಟೇಟ್ ಡಿಪಾರ್ಟ್ ಮೆಂಟ್ ನಡೆಸಿರುವ ವಾರ್ಷಿಕ ಸಮೀಕ್ಷೆಯಲ್ಲೂ ಈ ವಿವರಗಳು ಬಹಿರಂಗಗೊಂಡಿವೆ.

ಗುಪ್ತಚರ ಇಲಾಖೆಗಳ ನಡುವಿನ ಸಮನ್ವಯತೆಯ ಕೊರತೆ ಮತ್ತು ಮಾಹಿತಿ ಹಂಚಿಕೊಳ್ಳುವಿಕೆಯ ವಿಷಯದಲ್ಲಿರುವ ದೌರ್ಬಲ್ಯಗಳು ರಾಜ್ಯ ಮತ್ತು ಕೇಂದ್ರದಲ್ಲಿನ ಕಾನೂನು ಅನುಷ್ಠಾನ ಸಂಸ್ಥೆಗಳಿಗೆ ಬಹುದೊಡ್ಡ ತೊಡಕಾಗಿದೆ ಎಂಬ ವಿವರ ಬಹಿರಂಗವಾಗಿದೆ.

ಇನ್ನು ಸಂಕಷ್ಟ ಕಾಲದಲ್ಲಿ ಸದಾ ನೆರವಿಗೆ ಧಾವಿಸುವ ರಾಷ್ಟ್ರೀಯ ಭದ್ರತಾ ಪಡೆ (NSG) ಕಮಾಂಡೋಗಳ ಸೀಮಿತ ಸಾಮರ್ಥ್ಯದ ಕುರಿತಾಗಿಯೂ ಸಹ ಈ ಸಮೀಕ್ಷೆಯಲ್ಲಿ ಉಲ್ಲೇಖಿಸಲಾಗಿದೆ. ಭಾರತದ ಎನ್.ಎಸ್.ಜಿ, ಕಮಾಂಡೊಗಳ ಸಾಮರ್ಥ್ಯ ವಿಶ್ವಶ್ರೇಷ್ಠ ಮಟ್ಟದ್ದಾಗಿದೆ ಆದರೂ ಭಾರತದಂತಹ ದೊಡ್ಡ ದೇಶಕ್ಕೆ ಅತ್ಯಗತ್ಯವಾಗಿರುವ ಸಂಖ್ಯೆಯ ಕಮಾಂಡೋ ಪಡೆಗಳು ಭಾರತದ ಬಳಿ ಇಲ್ಲ ಮಾತ್ರವಲ್ಲದೇ ಈ ಪಡೆಗಳು ಕೆಲವೊಂದು ಆಂತರಿಕ ಸಮಸ್ಯೆಗಳಿಂದ ಬಳಲುತ್ತಿರುವುದು ಭಯೋತ್ಪಾದನೆಯ ವಿರುದ್ಧದ ಭಾರತದ ಹೋರಾಟಕ್ಕೆ ಹಿನ್ನಡೆಯನ್ನುಂಟು ಮಾಡುತ್ತಿದೆ ಎಂಬ ವಿಷಯ ಈ ಸಮೀಕ್ಷಾ ವರದಿಯಲ್ಲಿದೆ.

ಇನ್ನು ಭಾರತದಲ್ಲಿನ ಹಲವಾರು ರಾಜ್ಯಗಳು ತಮ್ಮದೇ ಆದ ಮಲ್ಟಿ ಏಜೆನ್ಸಿ ಸೆಂಟರ್ ಗಳನ್ನು ಸ್ಥಾಪಿಸಿಕೊಂಡಿದ್ದು ಈ ಮೂಲಕ ಭಯೋತ್ಪಾದನೆಗೆ ಸಂಬಂಧಿಸಿದಂತೆ ಸಕಾಲಿಕ ಮಾಹಿತಿಯನ್ನು ದೇಶದ ವಿವಿಧ ಕಾನೂನು ಅನುಷ್ಠಾನ ಸಂಸ್ಥೆಗಳೊಂದಿಗೆ ಹಂಚಿಕೊಳ್ಳುತ್ತಿರುವ ಕುರಿತಾದ ಆಶಾದಾಯಕ ವಿಚಾರವನ್ನೂ ಸಹ ಈ ಸಮೀಕ್ಷೆ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

2008ರ ಮುಂಬಯಿ ದಾಳಿಯ ಹೊಣೆ ಹೊತ್ತಿಕೊಂಡಿರುವ ಲಷ್ಕರ್ ಇ ತೆಯ್ಬಾ ಮತ್ತು ಜೈಶ್ ಎ ಮಹಮ್ಮದ್ ಉಗ್ರ ಸಂಘಟನೆಗಳು ಭಾರತ ಮತ್ತು ಅಫ್ಘಾನಿಸ್ಥಾನದಲ್ಲಿ ತಮ್ಮ ಉದ್ದೇಶಿತ ಗುರಿಗಳ ಮೇಲೆ ದಾಳಿ ನಡೆಸುವ ಸಾಮರ್ಥ್ಯವನ್ನು ಈಗಲೂ ಹೊಂದಿದೆ ಎಂಬ ಎಚ್ಚರಿಕೆಯ ಅಂಶವೂ ಸಹ ಈ ವರದಿಯಲ್ಲಿದೆ.

ಕಳೆದ ವಾರ ವಾಷಿಂಗ್ಟನ್ ನಲ್ಲಿ ಬಿಡುಗಡೆಯಾಗಿರುವ ಈ ಸಮೀಕ್ಷಾ ವರದಿಯಲ್ಲಿ ಉಲ್ಲೇಖಿಸಲಾಗಿರುವಂತೆ 2018ರಲ್ಲಿ ವಿಶ್ವದಲ್ಲಿ ಸಂಭವಿಸಿದ್ದ ಪ್ರಮುಖ ಭಯೋತ್ಪಾದನಾ ಕೃತ್ಯಗಳು ದಕ್ಷಿಣ ಏಷ್ಯಾ, ಮಧ್ಯಪ್ರಾಚ್ಯ ಮತ್ತು ಆಫ್ರಿಕಾದ ಸಬ್ ಸಹಾರ ಪ್ರದೇಶಗಳಲ್ಲಿ ಸಂಭವಿಸಿದೆ. ಈ ಪ್ರಮಾಣ 85 ಪ್ರತಿಶತವಾಗಿದೆ ಎಂಬ ಅಂಶ ಕಳವಳಕಾರಿಯಾಗಿದೆ.

ಟಾಪ್ ನ್ಯೂಸ್

INDvsNZ: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ದಾಖಲೆ ಬರೆದ ರವಿ ಅಶ್ವಿನ್

INDvsNZ: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ದಾಖಲೆ ಬರೆದ ರವಿ ಅಶ್ವಿನ್

Arrested: ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

Arrested: ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

2-bbk11

BBK11: ಬಿಗ್ ಬಾಸ್ ಮನೆಗೆ ಖ್ಯಾತ ಆ್ಯಂಕರ್ ರಾಧಾ ಹಿರೇಗೌಡರ್ ಎಂಟ್ರಿ

1

Udupi; ಜಗತ್ತು ಯೋಗಮಯವಾಗುವ ಆಕಾಂಕ್ಷೆ: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್‌ದೇವ್‌

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

Arrested: ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Post Office Fined: 50 ಪೈಸೆ ಹಿಂದಿರುಗಿಸದ ಅಂಚೆ ಕಚೇರಿಗೆ 15,000 ದಂಡ!

Post Office Fined: 50 ಪೈಸೆ ಹಿಂದಿರುಗಿಸದ ಅಂಚೆ ಕಚೇರಿಗೆ 15,000 ದಂಡ!

Cyclone Dana: 10ಲಕ್ಷ ಜನ ಸ್ಥಳಾಂತರ… ಅಪಾಯದ ಭೀತಿಯಲ್ಲಿ ಒಡಿಶಾದ 3,000ಗ್ರಾಮಗಳು

Cyclone Dana: 10ಲಕ್ಷ ಜನ ಸ್ಥಳಾಂತರ… ಅಪಾಯದ ಭೀತಿಯಲ್ಲಿ ಒಡಿಶಾದ 3,000 ಗ್ರಾಮಗಳು

Threats To Airlines: ಬಾಂಬ್‌ ಬೆದರಿಕೆ… ಟ್ವಿಟರ್‌ಗೆ ಕೇಂದ್ರ ಸರಕಾರ ತರಾಟೆ !

Threats To Airlines: ಬಾಂಬ್‌ ಬೆದರಿಕೆ… ಟ್ವಿಟರ್‌ಗೆ ಕೇಂದ್ರ ಸರಕಾರ ತರಾಟೆ !

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

INDvsNZ: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ದಾಖಲೆ ಬರೆದ ರವಿ ಅಶ್ವಿನ್

INDvsNZ: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ದಾಖಲೆ ಬರೆದ ರವಿ ಅಶ್ವಿನ್

Arrested: ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

Arrested: ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

2-bbk11

BBK11: ಬಿಗ್ ಬಾಸ್ ಮನೆಗೆ ಖ್ಯಾತ ಆ್ಯಂಕರ್ ರಾಧಾ ಹಿರೇಗೌಡರ್ ಎಂಟ್ರಿ

1

Udupi; ಜಗತ್ತು ಯೋಗಮಯವಾಗುವ ಆಕಾಂಕ್ಷೆ: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್‌ದೇವ್‌

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.