![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 26, 2023, 7:05 AM IST
ನವದೆಹಲಿ: ಮಣಿಪುರ ಹಿಂಸಾಚಾರವು ಸಂಸತ್ನ ಮುಂಗಾರು ಅಧಿವೇಶನವನ್ನು ಸಂಪೂರ್ಣವಾಗಿ ಬಲಿಪಡೆಯುವ ಎಲ್ಲ ಲಕ್ಷಣಗಳು ಗೋಚರಿಸುತ್ತಿರುವ ನಡುವೆಯೇ, ಕೇಂದ್ರ ಸರ್ಕಾರದ ವಿರುದ್ಧ “ಅವಿಶ್ವಾಸ”ದ ಅಸ್ತ್ರ ಪ್ರಯೋಗಿಸಲು ಪ್ರತಿಪಕ್ಷಗಳು ಸಜ್ಜಾಗಿವೆ.
ಮಣಿಪುರ ಸಂಘರ್ಷದ ಕುರಿತು ಪ್ರಧಾನಿ ನರೇಂದ್ರ ಮೋದಿಯವರೇ ಹೇಳಿಕೆ ನೀಡಬೇಕು ಎಂದು ಪ್ರತಿಪಕ್ಷಗಳು ಪಟ್ಟು ಹಿಡಿದಿದ್ದು, ಆಡಳಿತಾರೂಢ ಬಿಜೆಪಿ ಇದಕ್ಕೆ ಒಪ್ಪುತ್ತಿಲ್ಲ. ಹೀಗಾಗಿ, ಸರ್ಕಾರದ ವಿರುದ್ಧ ಬುಧವಾರವೇ ಲೋಕಸಭೆಯಲ್ಲಿ ಅವಿಶ್ವಾಸ ಗೊತ್ತುವಳಿ ನೋಟಿಸ್ ಮಂಡಿಸಲು ಪ್ರತಿಪಕ್ಷಗಳ ಒಕ್ಕೂಟ ಮುಂದಾಗಿವೆ.
ಮಂಗಳವಾರ ಬೆಳಗ್ಗೆ ಇಂಡಿಯನ್ ನ್ಯಾಷನಲ್ ಡೆವಲಪ್ಮೆಂಟ್ ಇನ್ಕ್ಲೂಸಿವ್ ಅಲಯನ್ಸ್(ಐಎನ್ಡಿಐಎ)ನ ಸಭೆ ನಡೆದಿದ್ದು, ನೋಟಿಸ್ ನೀಡುವ ಕುರಿತು ಇಲ್ಲಿ ಪ್ರಸ್ತಾಪಿಸಲಾಗಿದೆ. ಮಣಿಪುರ ಗಲಭೆ ಕುರಿತು ಸರ್ಕಾರ ಚರ್ಚೆಗೆ ಅವಕಾಶ ನೀಡುವಂತೆ ಒಪ್ಪಿಸಲು ಇದೊಂದೇ ಮಾರ್ಗ ಎಂಬ ನಿರ್ಧಾರಕ್ಕೆ ಪ್ರತಿಪಕ್ಷಗಳ ಮೈತ್ರಿಕೂಟ ಬಂದಿದೆ. ಹಾಗೆಯೇ, ಲೋಕಸಭೆಯಲ್ಲಿಯೂ “ಇಂಡಿಯಾ’ದ ಒಗ್ಗಟ್ಟು ಪ್ರದರ್ಶನಕ್ಕೂ ಅವುಗಳು ಮುಂದಾಗಿವೆ.
ಬುಧವಾರ ಬೆಳಗ್ಗೆ 10.30ಕ್ಕೆ ಕಾಂಗ್ರೆಸ್ ಸಂಸದೀಯ ಪಕ್ಷದ ಕಚೇರಿಯಲ್ಲಿ ಪ್ರತಿಪಕ್ಷಗಳ ನಾಯಕರ ಮತ್ತೂಂದು ಸುತ್ತಿನ ಸಭೆ ನಡೆಯಲಿದ್ದು, ಅಲ್ಲಿ ಅವಿಶ್ವಾಸ ಗೊತ್ತುವಳಿ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ಅಲ್ಲದೇ, ಬುಧವಾರ ಲೋಕಸಭೆಯಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ಕಾಂಗ್ರೆಸ್ ತನ್ನ ಎಲ್ಲ ಸಂಸದರಿಗೂ ವಿಪ್ ಜಾರಿ ಮಾಡಿದೆ. ಈಗಾಗಲೇ ಅವಿಶ್ವಾಸ ಗೊತ್ತುವಳಿಯ ಕರಡು ಸಿದ್ಧಪಡಿಸಲಾಗಿದ್ದು, ಅಗತ್ಯವಿರುವ 50 ಸಂಸದರ ಸಹಿ ಪಡೆಯುವ ಪ್ರಕ್ರಿಯೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.
ಗೆಲುವು ನಮ್ಮದೇ ಎಂದ ಸರ್ಕಾರ:
ಅವಿಶ್ವಾಸ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, “ಅವರ ನಿರ್ಧಾರವೇನೆಂದು ನನಗೆ ಗೊತ್ತಿಲ್ಲ. ಆದರೆ, ಕಳೆದ ಬಾರಿಯೂ ಅವರು ಅವಿಶ್ವಾಸ ನಿರ್ಣಯ ಮಂಡಿಸಿದ್ದರು. ಆದರೆ, ಬಿಜೆಪಿ ಮತ್ತಷ್ಟು ಬಲಿಷ್ಠವಾಗಿ 300 ಸೀಟುಗಳನ್ನು ಪಡೆದು ಮಗದೊಮ್ಮೆ ಅಧಿಕಾರಕ್ಕೇರಿತು. ಈಗ ಮತ್ತೆ ಅದುವೇ ಮರುಕಳಿಸಲಿದೆ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ನಮಗೆ 350ಕ್ಕೂ ಹೆಚ್ಚು ಸ್ಥಾನಗಳು ಬರಲಿವೆ’ ಎಂದಿದ್ದಾರೆ.
2018ರ ಜು.20ರಂದು ಮೋದಿ ಸರ್ಕಾರದ ವಿರುದ್ಧ ಮೊದಲ ಬಾರಿಗೆ ಪ್ರತಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಿದ್ದವು. ಆಗ ಎನ್ಡಿಎ ಮಿತ್ರಕೂಟದ ಪರ 325 ಮತ್ತು ಅವಿಶ್ವಾಸ ನಿರ್ಣಯದ ಪರ 126 ಮತಗಳು ಬಿದ್ದಿದ್ದವು.
ಶಾ ಪತ್ರ:
ಈ ನಡುವೆ, ಸಂಸತ್ನಲ್ಲಿ ಮಣಿಪುರ ಕುರಿತ ಚರ್ಚೆಗೆ ಸಹಕಾರ ನೀಡುವಂತೆ ಕೋರಿ ಕೇಂದ್ರ ಸಚಿವ ಅಮಿತ್ ಶಾ ಮಂಗಳವಾರ ಸಂಸತ್ನ ಎರಡೂ ಸದನಗಳ ಪ್ರತಿಪಕ್ಷ ನಾಯಕರಾದ ಖರ್ಗೆ ಹಾಗೂ ಅಧೀರ್ ರಂಜನ್ ಚೌಧರಿ ಅವರಿಗೆ ಪತ್ರ ಬರೆದಿದ್ದಾರೆ. ಜತೆಗೆ ಸದನದಲ್ಲಿಯೂ ಮನವಿ ಮಾಡಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.