ಪಶ್ಚಿಮ ಬಂಗಾಳ: ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಸ್ವಪನ್ ದಾಸ್ ಗುಪ್ತಾ ರಾಜಿನಾಮೆ


Team Udayavani, Mar 16, 2021, 3:58 PM IST

West Bengal Assembly polls 2021: Swapan Dasgupta tenders resignation from Rajya Sabha after getting BJP ticket

ನವ ದೆಹಲಿ : ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಅಖಾಡಕ್ಕಿಳಿದ ನಂತರ ತಮ್ಮ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಸ್ವಪನ್ ದಾಸ್ ಗುಪ್ತಾ ರಾಜಿನಾಮೆ ನೀಡಿದ್ದಾರೆ.

ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು ಅವರಿಗೆ ತಮ್ಮ ರಾಜಿನಾಮೆ ಪತ್ರವನ್ನು ಸ್ವಪನ್ ದಾಸ್ ಗುಪ್ತಾ ಕಳುಹಿಸಿಕೊಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಹೂಗ್ಲಿ ಜಿಲ್ಲೆಯ ತಾರಕೇಶ್ವರ ವಿಧಾನಸಭಾ ಸ್ಥಾನದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾಮನಿರ್ದೇಶನಗೊಂಡ ಕೆಲವೇ ನಿಮಿಷಗಳಲ್ಲಿ, ಪಶ್ಚಿಮ ಬಂಗಾಳದ ತೃಣ ಮೂಲ ಕಾಂಗ್ರೆಸ್ ನವರ ‘ಸಿಂಡಿಕೇಟ್ ರಾಜ್’ ಅನ್ನು ಕೊನೆಗೊಳಿಸಲು ತಮ್ಮ ಪಕ್ಷ ಬಯಸಿದೆ ಎಂದು ದಾಸ್‌ಗುಪ್ತಾ ಹೇಳಿದ್ದಾರೆ.

ರಾಜ್ಯದಲ್ಲಿರುವ ಪರಿಸ್ಥಿತಿಯ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ. ಈ ಹಿಂಸಾಚಾರ, ಸುಲಿಗೆ…. ನಾವು ಅದನ್ನು ಕೊನೆಗೊಳಿಸಲು ಬಯಸುತ್ತೇವೆ. ಬಂಗಾಳದ ಜನರು ಶಾಂತಿಯಿಂದ ಬದುಕಲು ಬಿಜೆಪಿಯನ್ನು ಆಯ್ಕೆ ಮಾಡುತ್ತಾರೆ” ರಾಜ್ಯದಲ್ಲಿ ‘ಉದ್ಯೋಗಾವಕಾಶಗಳು ಇಲ್ಲದಂತಾಗಿದೆ’ ಮತ್ತು ಪ್ರತಿಭಾವಂತ ಯುವಕರು ಉದ್ಯೋಗವನ್ನು ಅರಸುತ್ತಿದ್ದಾರೆ ಎಂದು ದಾಸ್ ಗುಪ್ತಾ ಹೇಳಿದ್ದಾರೆ.

ಓದಿ :ಆಸ್ಕರ್ 2021 : ಅಂತಿಮ ಸುತ್ತಿಗೆ ಆಯ್ಕೆಗೊಂಡ ಸಿನೆಮಾ ನಟ, ನಟಿಯರ ಪಟ್ಟಿ 

ಸ್ವಪನ್ ದಾಸ್ ಗುಪ್ತಾ ಅವರು ಪಶ್ಚಿಮ ಬಂಗಾಳದ ವಿಧಾನ ಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ. ಸಂವಿಧಾನದ 10 ನೇ ವೇಳಾಪಟ್ಟಿಯ ಪ್ರಕಾರ, ರಾಜ್ಯ ಸಭೆಯಲ್ಲಿ ಪ್ರಮಾಣ ವಚನ ಸ್ವಿಕರಿಸಿದ 6 ತಿಂಗಳುಗಳೊಳಗೆ ಯಾವುದಾದರೂ ರಾಜಕಿಯ ಪಕ್ಷಕ್ಕೆ ಸೇರಿದರೇ, ಅವರು ರಾಜ್ಯ ಸಭಾ ಸದಸ್ಯ ಸ್ಥಾನಕ್ಕೆ ಅನರ್ಹರಾಗುತ್ತಾರೆ. ಅವರು ಏಪ್ರಿಲ್ 26 2016 ರಂದು ಪ್ರಮಾಣ ವಚನವನ್ನು ಸ್ವಿಕರಿಸಿದ್ದರು. ಬಿಜೆಪಿ ಸೇರಲು, ಅವರನ್ನು ರಾಜ್ಯ ಸಭಾ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ತೃಣಮೂಲ ಕಾಂಗ್ರೆಸ್ ನ ಸಂಸದೆ ಮಹುವಾ ಮೊಹಿತ್ರಾ ತಮ್ಮ ಟ್ವೀಟರ್ ನಲ್ಲಿ ಬರೆದುಕೊಂಡಿದ್ದರು.

ರಾಜ್ಯ ಸಭಾ ವೆಬ್ ಸೈಟ್, ಸ್ವಪನ್ ದಾಸ್ ಗುಪ್ತಾ ಅವರ ನಾಮ ನಿರ್ದೇಶನಗೊಂಡಿದ್ದಾರೆ ಎಂದು ಹೇಳಿದೆ. ಒಂದು ವೇಳೆ ಬಿಜೆಪಿ ಅಭ್ಯರ್ಥಿಯಾಗಿ ಅವರು ನಾಮ ನಿರ್ದೆಶನವನ್ನು ಸಲ್ಲಿಸಿದ್ದು ಹೌದಾದಲ್ಲಿ ಸಂವಿಧಾನದ 10 ನೇ ವೇಳಾಪಟ್ಟಿಯ ಪ್ರಕಾರ, ರಾಜ್ಯ ಸಭಾ ಸದಸ್ಯ ಸ್ಥಾನಕ್ಕೆ ಅವರು ರಾಜಿನಾಮೆ ನೀಡಬೇಕು ಎಂದು ಅವರು ಬರೆದುಕೊಂಡಿದ್ದರು.

ಓದಿ : ‘ಬ್ಲ್ಯಾಕ್ ಮೇಲ್ ಸಂಪುಟ’ ‘ಕಾಂಗ್ರೆಸ್‌ ಹಗೆತನ’: ಮತ್ತೆ ಕಾಂಗ್ರೆಸ್- ಬಿಜೆಪಿ ಟ್ವೀಟ್ ವಾರ್

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.