![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 30, 2022, 8:53 AM IST
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಅಧ್ಯಕ್ಷೆ ಮೆಹಬೂಬಾ ಮುಫ್ತಿ ಶುಕ್ರವಾರ ಕೇಂದ್ರಾಡಳಿತ ಪ್ರದೇಶದಲ್ಲಿ ಭದ್ರತಾ ಪಡೆಗಳ ಕೆಲಸವನ್ನು ಪ್ರಶ್ನಿಸಿದ್ದಾರೆ. 200 ಮಂದಿ ಉಗ್ರರನ್ನು ಎದುರಿಸಲಾಗದೆ ಇದ್ದರೆ ಹತ್ತು ಲಕ್ಷ ಭಾರತೀಯ ಸೇನಾ ಪಡೆಗಳು ಏನು ಮಾಡುತ್ತಿದ್ದಾರೆ ಎಂದು ಕೇಳಿದ್ದಾರೆ.
ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ನಿರಂತರವಾಗಿ ದಾಳಿ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂಬ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಮೆಹಬೂಬಾ, “ನಮ್ಮ ಹತ್ತು ಲಕ್ಷ ಸೇನೆಯು ಇಲ್ಲಿ ಏನು ಮಾಡುತ್ತಿದೆ? ಅವರು (ಸೇನೆ) ಕೇವಲ 100-150 ಭಯೋತ್ಪಾದಕರು ಮಾತ್ರ ಸಕ್ರಿಯರಾಗಿದ್ದಾರೆ ಎಂದು ಹೇಳುತ್ತಾರೆ, ಅವರನ್ನು ಎದುರಿಸಲು ಸಾಧ್ಯವಾಗದಿದ್ದರೆ, ಇವರು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ;ಟಾಟಾದಿಂದ ಅನ್ವಿಯಾ ಕಾನ್ಸೆಪ್ಟ್ ಅನಾವರಣ; 2025ಕ್ಕೆ ರಸ್ತೆಗಿಳಿಯುವ ಸಾಧ್ಯತೆ
ಪಾಕಿಸ್ತಾನವನ್ನು ಹೆಸರಿಸದೆ, ಮೆಹಬೂಬಾ ಮತ್ತೊಮ್ಮೆ ಮಾತುಕತೆ ವಿಚಾರವೆತ್ತಿದರು. ಮಾತುಕತೆ ಅಲ್ಲದೆ ಬೇರೆ ಯಾವುದೇ ಆಯ್ಕೆಯಿಲ್ಲ ಎಂದು ಹೇಳಿದರು.
“ನೀವು ಇಲ್ಲಿಗೆ ಎಷ್ಟು ಸೈನ್ಯವನ್ನು ಕರೆತಂದರೂ ಮತ್ತು ಎಷ್ಟು ಜನರನ್ನು ಜೈಲಿಗೆ ಹಾಕಿದರೂ, ಕೊನೆಯಲ್ಲಿ, ನೀವು ಮಾತುಕತೆ ನಡೆಸಲೇಬೇಕು” ಎಂದು ಮೆಹಬೂಬಾ ಹೇಳಿದರು.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.