ಪ್ರಧಾನಿ ನರೇಂದ್ರ ಮೋದಿಯವರೇ ತೂಕದ ಮಾತು ಯಾವಾಗ ಆಡ್ತೀರಿ? 


Team Udayavani, Feb 13, 2017, 3:45 AM IST

PTI2_12_2017_000210B.jpg

ನವದೆಹಲಿ: ರೇಡಿಯೋ, ಟೀವಿಯಲ್ಲಿ ಮನ್‌ ಕೀ ಬಾತ್‌ ನಡೆಸುವ ಮೋದಿ ಉತ್ತರಪ್ರದೇಶದಲ್ಲಿ ಕರ್ನಾಮಾಗಳೇ (ಅವ್ಯವಹಾರಗಳೇ) ನಡೆದಿವೆ ಎಂದು ಆರೋಪಿಸುತ್ತಾರೆ. ಮೋದಿ ಯಾವಾಗ ತೂಕದ ಮಾತನಾಡುತ್ತಾರೆನ್ನುವುದು ಪ್ರಶ್ನೆ. ಹೀಗೆಂದು ಮುಖ್ಯಮಂತ್ರಿ ಅಖೀಲೇಶ್‌ ಯಾದವ್‌ ವ್ಯಂಗ್ಯವಾಡಿದ್ದಾರೆ. 

ಉತ್ತರ ಪ್ರದೇಶದ ಬದೌನ್‌ನಲ್ಲಿ ಚುನಾವಣಾ ಪ್ರಚಾರ ಮಾಡಿದ ಅವರು, ಬದೌನ್‌ನಲ್ಲಿ ನಡೆದ ಅತ್ಯಾಚಾರದ ವಿಚಾರ ವಿಶ್ವಸಂಸ್ಥೆಯಲ್ಲಿಯೂ ಪ್ರಸ್ತಾಪವಾಯಿತು. ಎಲ್ಲ ರಾಜಕೀಯ ಪಕ್ಷಗಳ ನಾಯಕರೂ ಸ್ಥಳಕ್ಕೆ ಭೇಟಿ ನೀಡಿದ್ದರು. ಘಟನೆಯ ಬಗ್ಗೆ ಸಿಬಿಐ ತನಿಖೆ ನಡೆಸಲಾಗಿದ್ದರೂ, ರಾಜ್ಯಕ್ಕೆ ಕ್ಲೀನ್‌ ಚಿಟ್‌ ನೀಡಿತ್ತು ಎಂದರು. ಈ ಮೂಲಕ ರಾಜ್ಯಕ್ಕೆ ಕೆಟ್ಟ ಹೆಸರು ತರುವ ಹುನ್ನಾರವೂ ಬಯಲಾಯಿತು ಎಂದು ಲೇವಡಿ ಮಾಡಿದ್ದಾರೆ. ಚುನಾವಣಾ ರ್ಯಾಲಿಯೊಂದರಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ  ಕಾಮ್‌ ಬೋಲ್ತಾ ಹೈ (ಕೆಲಸ ಎಲ್ಲವನ್ನೂ ಹೇಳುತ್ತದೆ) ಎಂದು ಅಖೀಲೇಶ್‌ ಹೇಳುತ್ತಾರೆ. 

ಆದರೆ ಇಲ್ಲಿನ ಪ್ರತಿ ಮಗುವಿಗೂ ನಿಮ್ಮ ಕರ್ನಾಮಾಗಳು (ದುವ್ಯìಹಾರಗಳು) ಏನು ಹೇಳುತ್ತವೆ ಎಂದು ಗೊತ್ತು ಎಂದು ಟೀಕಿಸಿದ್ದರು. ಈ ನಡುವೆ ಉತ್ತರಪ್ರದೇಶ 2ನೇ ಹಂತದ ಚುನಾವಣೆ ಪ್ರಚಾರಕ್ಕೆ ಸೋಮವಾರ ತೆರೆ ಬೀಳಲಿದೆ. ಒಟ್ಟು 11 ಜಿಲ್ಲೆಗಳ 67 ವಿಧಾನಸಭಾ ಕ್ಷೇತ್ರಗಳಿಗೆ ಫೆ.15ರಂದು ಮತದಾನ ನಡೆಯಲಿದೆ. ಇದೇ ವೇಳೆ ನೆರೆ ರಾಜ್ಯ ಉತ್ತರಾಖಂಡದ 70 ಸ್ಥಾನಗಳಿಗೂ ಅದೇ ದಿನ ಚುನಾವಣೆ ನಡೆಯಲಿದೆ.

ಕೊಳ್ಳೆ ಹೊಡೆದವರ ಬಿಡಲ್ಲ: ಈ ನಡುವೆ ಉತ್ತರಾಖಂಡದ ಎರಡು ಸ್ಥಳಗಳಲ್ಲಿ ಚುನಾವಣಾ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ದೇಶವನ್ನು  ಕೊಳ್ಳೆ ಹೊಡೆದ ವ್ಯಕ್ತಿಗಳನ್ನು ಅದನ್ನು ಹಿಂದಿರುಗಿ ನೀಡುವವರೆಗೆ ತಾನು ವಿರಮಿಸುವುದಿಲ್ಲ ಎಂದು ಗುಡುಗಿದರು. ದೇಶವನ್ನು 70 ವರ್ಷಗಳ ಕಾಲ ಆಳಿದವರ ಅಂತ್ಯ ಸಮೀಪಿಸಿದೆ. ನಾನು ವಿಶ್ರಾಂತಿಯನ್ನೂ ತೆಗೆದುಕೊಳ್ಳುವುದಿಲ್ಲ, ದೇಶವನ್ನು ಕೊಳ್ಳೆ ಹೊಡೆಯಲೂ ಬಿಡುವುದಿಲ್ಲ. ಈಗ ಪ್ರತಿಯೊಬ್ಬರೂ ಲೆಕ್ಕ ನೀಡಲೇಬೇಕಾದ ಸಮಯ ಎಂದು ಮೋದಿ ಹೇಳಿದ್ದಾರೆ.

ಕೆಲವು ತಿಂಗಳ ಹಿಂದೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಮೇಲೆ ಸೇನೆ ನಡೆಸಿದ್ದ ಸರ್ಜಿಕಲ್‌ ದಾಳಿ ಬಗ್ಗೆ ಟೀಕೆ ನಡೆಸಿದ ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ವಿರುದ್ಧವೂ ಮೋದಿ ಪರೋಕ್ಷವಾಗಿ ಹರಿಹಾಯ್ದರು. ಸೀಮಿತ ದಾಳಿಯನ್ನು ಟೀಕಿಸುವ ಮೂಲಕ ಕಾಂಗ್ರೆಸ್‌ ಯೋಧರಿಗೆ ಅವಮಾನ ಮಾಡುತ್ತಿದೆ. ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ ಯೋಧರ ಧಕ್ಕೆ ತಂದಿದ್ದಾರೆ ಎಂದು ಮೋದಿ ಕಿಡಿಕಾರಿದರು. 

ರಾಹುಲ್‌ ರೋಡ್‌ ಶೋದಲ್ಲಿ ಪ್ರಧಾನಿ ಮೋದಿಗೆ ಜೈಕಾರ
ಉತ್ತರಾಖಂಡದ ಹರಿದ್ವಾರದಲ್ಲಿ ಉ.ಪ್ರ. ಮುಖ್ಯಮಂತ್ರಿ ಅಖೀಲೇಶ್‌ ಯಾದವ್‌ ಜತೆಗೆ ಜಂಟಿಯಾಗಿ ನಡೆಸುತ್ತಿದ್ದ ರೋಡ್‌ ಶೋ ವೇಳೆ ರಾಹುಲ್‌ ಗಾಂಧಿ ತೀವ್ರ ಮುಖಭಂಗಕ್ಕೀಡಾಗಿದ್ದಾರೆ. ರೋಡ್‌ ಶೋ ನಡೆಯುತ್ತಿದ್ದ ವೇಳೆಯೇ ಭಾರೀ ಪ್ರಮಾಣದಲ್ಲಿ ನುಗ್ಗಿ ಬಂದ ಬಿಜೆಪಿ ಧ್ವಜ ಹಿಡಿದ ಕಾರ್ಯಕರ್ತರು ಮೋದಿಗೆ ಜೈಕಾರ ಹಾಕಿದ್ದಾರೆ. ಇದರಿಂದ ಕಾಂಗ್ರೆಸ್‌ ಉಪಾಧ್ಯಕ್ಷ ಇರಿಸು ಮುರುಸಿಗೊಳಗಾಗಿದ್ದಾರೆ. ಈ ವೀಡಿಯೋ ಅಂತರ್ಜಾಲ ತಾಣದಲ್ಲಿ ವೈರಲ್‌ ಆಗಿದೆ.

2007ರಲ್ಲೂ ಬಿಎಸ್ಪಿ ಅಧಿಕಾರಕ್ಕೆ ಬರುವುದಿಲ್ಲವೆಂದು ಚುನಾವಣೆ ಸಮೀಕ್ಷೆಗಳು ನುಡಿದಿದ್ದವು. ಆದರೆ ಅದನ್ನೆಲ್ಲ ಹುಸಿಗೊಳಿಸಿ ಬಿಎಸ್ಪಿ ಅಧಿಕಾರಕ್ಕೇರಿತ್ತು. ಈ ಬಾರಿಯೂ ಅಂತಹ ಹುಸಿ ಸಮೀಕ್ಷೆಗಳನ್ನು ನಂಬುವ ಅಗತ್ಯವಿಲ್ಲ.
– ಮಾಯಾವತಿ, ಬಿಎಸ್ಪಿ ನಾಯಕಿ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

7

Crime: ಸೈನೈಡ್ ಮಿಶ್ರಿತ ಜ್ಯೂಸ್‌ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್‌ ಅರೆಸ್ಟ್

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.