![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, May 25, 2019, 6:00 AM IST
ಭರ್ಜರಿ ಜಯಗಳಿಸಿದ ಬಳಿಕ ಶುಕ್ರವಾರ ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಅವರ ಆಶೀರ್ವಾದ ಪಡೆದ ಪ್ರಧಾನಿ ಮೋದಿ.
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿರುವ ಬಿಜೆಪಿ, ಸರ್ಕಾರ ರಚನೆಯ ಸಿದ್ಧತೆಗಳನ್ನು ಆರಂಭಿಸಿದೆ. ಹೊಸದಾಗಿ ರಚನೆಯಾಗಲಿರುವ ಮೋದಿ ಸಂಪುಟದಲ್ಲಿ ಸೇರುವವರು ಯಾರು, ಯಾರಿಗೆ ಸಚಿವ ಸ್ಥಾನ ಕೈತಪ್ಪಲಿದೆ ಎಂಬ ಬಗ್ಗೆಯೂ ಚರ್ಚೆಗಳು ಶುರುವಾಗಿದೆ. ಕೆಲವೊಂದು ಹೊಸ ಮುಖಗಳೂ ಸೇರ್ಪಡೆಯಾಗುವ ಸಾಧ್ಯತೆಗಳಿವೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಸಂಪುಟ ಸೇರಲಿದ್ದಾರೆ ಎಂಬ ಬಗ್ಗೆ ಸುದ್ದಿಗಳು ಜೋರಾಗಿಯೇ ಓಡುತ್ತಿವೆ. ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್ ಅವರು ಕ್ಯಾಬಿನೆಟ್ನ ಅಗ್ರ 4 ಸ್ಥಾನಗಳಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ. ನಿರ್ಮಲಾ ಸೀತಾರಾಮನ್ ಅವರಿಗೆ ವಿದೇಶಾಂಗ ಸ್ಥಾನ, ರಾಜನಾಥ್ಗೆ ರಕ್ಷಣೆ ಮತ್ತು ಅಮಿತ್ ಶಾ ಅವರಿಗೆ ರಕ್ಷಣಾ ಖಾತೆ ಸಿಗುವ ಸಂಭವವಿದೆ ಎನ್ನಲಾಗಿದೆ.
ಆದರೆ, ಪ್ರಮುಖ ಖಾತೆಗಳನ್ನು ಹೊತ್ತಿದ್ದ ಸುಷ್ಮಾ ಸ್ವರಾಜ್ ಮತ್ತು ಅರುಣ್ ಜೇಟ್ಲಿ ಅವರು, ಆರೋಗ್ಯದ ಸಮಸ್ಯೆಯಿಂದ ಸಂಪುಟದಿಂದ ಹೊರಗುಳಿಯಲಿದ್ದಾರೆ ಎಂದೇ ಹೇಳಲಾಗುತ್ತಿದೆ. ಈ ಎರಡರಲ್ಲಿ ಒಂದು ಸ್ಥಾನ ಅಮಿತ್ ಶಾ ಅವರಿಗೆ ಸಿಗಬಹುದು ಎನ್ನಲಾಗಿದ್ದು, ಮತ್ತೂಂದು ಸ್ಥಾನ ಸ್ಮತಿ ಇರಾನಿ ಅವರಿಗೆ ಸಿಗಬಹುದೇ ಎಂಬ ಮಾತುಗಳು ಕೇಳಿಬರುತ್ತಿವೆ. ಅಮೇಠಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಸೋಲಿಸಿರುವ ಸ್ಮತಿ ಇರಾನಿ ಅವರಿಗೆ ಪ್ರಮುಖ ಖಾತೆಯನ್ನೇ ನೀಡಬಹುದು ಎಂದು ಮೂಲಗಳು ಹೇಳಿವೆ.
ಶಿವಸೇನೆ, ಜೆಡಿಯು ಮತ್ತು ಎಲ್ಜೆಪಿಯ ಸಂಸತ್ ಸದಸ್ಯರು ಸಂಪುಟ ಸೇರ್ಪಡೆಯಾಗುವ ಸಾಧ್ಯತೆ ಇದೆ.
ಯಾರಿಗೆ ಸಿಗುತ್ತೆಸಚಿವ ಸ್ಥಾನ?
1. ರಾಜನಾಥ್ ಸಿಂಗ್ 2. ಅಮಿತ್ ಶಾ 3. ನಿರ್ಮಲಾ ಸೀತಾರಾಮನ್ 4. ನಿತಿನ್ ಗಡ್ಕರಿ 5. ಸ್ಮತಿ ಇರಾನಿ 6. ರವಿಶಂಕರ್ ಪ್ರಸಾದ್ 7. ಪಿಯೂಶ್ ಗೋಯಲ್ 8. ಸದಾನಂದಗೌಡ 9. ಪ್ರಹ್ಲಾದ್ ಜೋಶಿ 10. ಪ್ರಕಾಶ್ ಜಾವಡೇಕರ್
ಮೇ 30ಕ್ಕೆ ಪ್ರಮಾಣ ವಚನ; ಇಂದು ಸಭೆ
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.