BJP: ಜೆ.ಪಿ.ನಡ್ಡಾ ಬಳಿಕ ಯಾರಾಗಲಿದ್ದಾರೆ ಬಿಜೆಪಿ ಅಧ್ಯಕ್ಷ? ರೇಸ್ ನಲ್ಲಿದೆ ಹಲವು ಹೆಸರುಗಳು


Team Udayavani, Jun 10, 2024, 5:08 PM IST

Who will be BJP president after JP Nadda? There are many names in the race

ಹೊಸದಿಲ್ಲಿ: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ರವಿವಾರ ನರೇಂದ್ರ ಮೋದಿ ಅವರ ಸಂಪುಟಕ್ಕೆ ಕ್ಯಾಬಿನೆಟ್ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕ್ಯಾಬಿನೆಟ್ ಸೇರಿದ ಕಾರಣದಿಂದ ಅವರು ಬಿಜೆಪಿ ರಾಷ್ಟ್ರಾಧ್ಯಕ್ಷ ಸ್ಥಾನದಿಂದ ಕೆಳಕ್ಕೆ ಇಳಿಯುವುದು ಬಹುತೇಕ ಖಚಿತವಾಗಿದೆ.

ನಡ್ಡಾ ಅವರು 2014ರಿಂದ 2019ರವರೆಗೆ ಮೋದಿ ಸಂಪುಟದಲ್ಲಿ ಸಚಿವರಾಗಿ ಕೆಲಸ ಮಾಡಿದ್ದರು. ಆಗ ಅಮಿತ್ ಶಾ ಅವರು ಬಿಜೆಪಿ ಅಧ್ಯಕ್ಷರಾಗಿದ್ದರು. 2019ರ ಚುನಾವಣೆಯ ಬಳಿಕ ಶಾ ಗೃಹ ಸಚಿವರಾಗಿ ಸಂಪುಟದ ಸೇರಿದ ಬಳಿಕ ನಡ್ಡಾ ಅವರನ್ನು ಅಧ್ಯಕ್ಷರನ್ನಾಗಿ ಮಾಡಲಾಗಿತ್ತು.

2023ರ ಸಪ್ಟೆಂಬರ್ ನಲ್ಲಿ ನಡ್ಡಾ ಅವರ ಅವಧಿ ಅಂತ್ಯವಾಗಿತ್ತು. ಆದರೆ ಚುನಾವಣೆಯ ಕಾರಣದಿಂದ ಅಧಿಕಾರವಧಿ ವಿಸ್ತರಿಸಲಾಗಿತ್ತು. ಇದೀಗ ಬಿಜೆಪಿ ಹೊಸ ಅಧ್ಯಕ್ಷರ ಹುಡುಕಾಟದಲ್ಲಿದೆ.

ಹಲವರು ಇದ್ದಾರೆ ರೇಸ್ ನಲ್ಲಿ

ಇತ್ತೀಚೆಗಷ್ಟೇ ಮುಕ್ತಾಯಗೊಂಡ ಲೋಕಸಭೆಯಲ್ಲಿ ಹಿನ್ನಡೆ ಅನುಭವಿಸಿರುವ ಉತ್ತರದ ರಾಜ್ಯಗಳಲ್ಲಿ ಬಿಜೆಪಿ ಈಗ ತನ್ನ ಸಂಘಟನೆಯ ಬಲವನ್ನು ಹೆಚ್ಚಿಸಿಕೊಂಡಿರುವುದರಿಂದ ಅಮಿತ್ ಶಾ ಅವರು ಅಧ್ಯಕ್ಷ ಸ್ಥಾನಕ್ಕೆ ಮರಳಬಹುದು ಅಥವಾ ಧರ್ಮೇಂದ್ರ ಪ್ರಧಾನ್ ಅಥವಾ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಜವಾಬ್ದಾರಿಯನ್ನು ವಹಿಸಬಹುದು ಎಂದು ಮೊದಲು ಊಹಿಸಲಾಗಿತ್ತು. ಆದರೆ ಅವರೆಲ್ಲರೂ ಮೋದಿ ಕ್ಯಾಬಿನೆಟ್ ಸೇರಿದ್ದಾರೆ.

ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರ ಹೆಸರು ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ. ಮಹಾರಾಷ್ಟ್ರದಲ್ಲಿ ಕೆಲವೇ ತಿಂಗಳಲ್ಲಿ ಚುನಾವಣೆ ನಡೆಯಲಿರುವ ಕಾರಣ ವಿನೋದ್ ಹೆಸರು ಪ್ರಮುಖವಾಗಿದೆ.

ತೆಲಂಗಾಣದ ಬಿಜೆಪಿಯ ಒಬಿಸಿ ಮೋರ್ಚಾ ಮುಖ್ಯಸ್ಥ ಕೆ ಲಕ್ಷ್ಮಣ್ ಅವರನ್ನು ಹುದ್ದೆಗೆ ಪರಿಗಣಿಸಲಾಗುತ್ತಿದೆ. ಆಂಧ್ರಪ್ರದೇಶದ ನಂತರ ತೆಲಂಗಾಣ ಬಿಜೆಪಿಯ ಮುಂದಿನ ಪ್ರಮುಖ ರಾಜ್ಯವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಲಕ್ಷ್ಮಣ್ ಅವರು ಕೂಲ್ ಮತ್ತು ಆಕ್ರಮಣಕಾರಿ ಎಂಬ ಸಮತೋಲಿತ ವಿಧಾನಕ್ಕೆ ಹೆಸರುವಾಸಿಯಾಗಿದ್ದಾರೆ.

ಇನ್ನೊಬ್ಬ ಸ್ಪರ್ಧಿ ಸುನಿಲ್ ಬನ್ಸಾಲ್, ಪ್ರಸ್ತುತ ಪಶ್ಚಿಮ ಬಂಗಾಳ, ತೆಲಂಗಾಣ ಮತ್ತು ಒಡಿಶಾದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ರಾಜಸ್ಥಾನದ ರಾಜ್ಯ ಸಭಾ ಸದದ್ಯ ಓಂ ಮಾಥುರ್ ಕೂಡಾ ಈ ಸ್ಪರ್ಧೆಯಲ್ಲಿದ್ದಾರೆ.

ಉಳಿದಂತೆ ಈ ಬಾರಿ ಸಚಿವ ಸ್ಥಾನ ಕಳೆದುಕೊಂಡ ಸ್ಮೃತಿ ಇರಾನಿ ಮತ್ತು ಅನುರಾಗ್ ಠಾಕೂರ್ ಅವರ ಹೆಸರು ಕೂಡಾ ಕೇಳಿ ಬರುತ್ತಿದೆ. ಒಂದು ವೇಳೆ ಇರಾನಿ ಅಧ್ಯಕ್ಷರಾದರೆ ಬಿಜೆಪಿಯ ಮೊದಲ ಮಹಿಳಾ ಅಧ್ಯಕ್ಷೆಯಾಗಲಿದ್ದಾರೆ.

ಟಾಪ್ ನ್ಯೂಸ್

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

033

Urmila Matondkar To Jayam Ravi.. ಈ ವರ್ಷ ವಿಚ್ಛೇದನ ಪಡೆದ ಸೆಲೆಬ್ರಿಟಿಗಳು ಜೋಡಿಗಳಿವು..

Basangouda Patil Yatnal

BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Nirmala Sitharaman

Bengaluru; ಚುನಾವಣಾ ಬಾಂಡ್‌ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್‌ ವಿರುದ್ದ ಎಫ್‌ಐಆರ್

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

ಭೀಕರ ರಸ್ತೆ ಅಪಘಾತ… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

Bus Overturns… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.