![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 23, 2022, 9:30 PM IST
ನವದೆಹಲಿ: ಅಲೋಪತಿ ವೈದ್ಯರ ವಿರುದ್ಧ ಅಸಮಾಧಾನವೇಕೆ ಎಂದು ಯೋಗಗುರು ಬಾಬಾ ರಾಮ್ದೇವ್ ಅವರನ್ನು ಸುಪ್ರೀಂಕೋರ್ಟ್ ಮಂಗಳವಾರ ಖಡಕ್ ಆಗಿ ಪ್ರಶ್ನಿಸಿದೆ.
ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ನ್ಯಾಯಪೀಠ ರಾಮದೇವ್ ಅವರು ಯೋಗ ಮತ್ತು ಆಯುರ್ವೇದವನ್ನು ಪ್ರಚಾರ ಮಾಡಿದ್ದಾರೆ. ಅದರ ಬಗ್ಗೆ ಖುಷಿಯಿದೆ. ಹಾಗೆಂದ ಮಾತ್ರಕ್ಕೆ ಅವರು ಬೇರೆ ವೈದ್ಯಕೀಯ ಪದ್ಧತಿಯನ್ನು ಅವಹೇಳನ ಮಾಡುವಂತಿಲ್ಲ ಎಂದು ಕಟುವಾಗಿ ಹೇಳಿದೆ.
ಕೊರೊನಾ ಹೆಚ್ಚಾಗಿದ್ದ ಸಂದರ್ಭದಲ್ಲಿ ಅಲೋಪತಿ ವೈದ್ಯ ಪದ್ಧತಿ ವಿರುದ್ಧ ರಾಮ್ದೇವ್ ಮಾಡಿದ್ದ ಟೀಕೆ ವಿರುದ್ಧ ಇಂಡಿಯನ್ ಮೆಡಿಕಲ್ ಎಸೋಸಿಯೇಷನ್ ಸೇರಿದಂತೆ ಹಲವರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ವೇಳೆ ನ್ಯಾಯಪೀಠ ಈ ಮಾತುಗಳನ್ನಾಡಿದೆ. ಜತೆಗೆ ಈ ಬಗ್ಗೆ ಪತಿಕ್ರಿಯೆ ನೀಡಲು ಕೇಂದ್ರ ಸರ್ಕಾರಕ್ಕೂ ಸೂಚನೆ ನೀಡಿದೆ.
You seem to have an Ad Blocker on.
To continue reading, please turn it off or whitelist Udayavani.