Coast Guard; ನಾರಿಶಕ್ತಿ ಎಂದು ಪಿತೃಪ್ರಭುತ್ವ ಧೋರಣೆ ಅನುಸರಿಸುವುದೇಕೆ: ಸುಪ್ರೀಂ ಚಾಟಿ

ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಚಾಟಿ

Team Udayavani, Feb 20, 2024, 8:28 AM IST

Coast Guard; ನಾರಿಶಕ್ತಿ ಎಂದು ಪಿತೃಪ್ರಭುತ್ವ ಧೋರಣೆ ಅನುಸರಿಸುವುದೇಕೆ: ಸುಪ್ರೀಂ ಚಾಟಿ

ಹೊಸದಿಲ್ಲಿ: “ನಾರಿ ಶಕ್ತಿ, ನಾರಿ ಶಕ್ತಿ ಎಂದು ಹೇಳುತ್ತೀರಿ, ಅದನ್ನು ಈಗ ಸಾಬೀತುಪಡಿಸಿ. ಪಿತೃಪ್ರಭುತ್ವ ಧೋರಣೆಯನ್ನು ಅನುಸರಿಸುತ್ತಿರುವುದೇಕೆ” ಇದು ಕೋಸ್ಟ್ ಗಾರ್ಡ್ ಕುರಿತಾದ ಅರ್ಜಿ ವಿಚಾರಣೆ ನಡೆಸುತ್ತಿದ್ದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ರೀತಿ.

ಕೋಸ್ಟ್ ಗಾರ್ಡ್‌ ನಲ್ಲಿ ಮಹಿಳೆಯರಿಗೆ ಖಾಯಂ ಆಯೋಗದ ಕುರಿತು ಪಿತೃಪ್ರಭುತ್ವ ಧೋರಣೆಯನ್ನು ಅನುಸರಿಸುತ್ತಿರುವ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ಸೇನೆ ಮತ್ತು ನೌಕಾಪಡೆ ಈಗಾಗಲೇ ನೀತಿಯನ್ನು ಜಾರಿಗೆ ತಂದಿರುವಾಗ ಕೋಸ್ಟ್ ಗಾರ್ಡ್ ಯಾಕೆ ವಿಭಿನ್ನವಾಗಿರಬೇಕು ಎಂದು ಕೇಳಿದೆ.

ಮಹಿಳೆಯರು ಗಡಿಯನ್ನು ರಕ್ಷಿಸಲು ಸಾಧ್ಯವಾದರೆ ಅವರು ಕರಾವಳಿಯನ್ನು ಸಹ ರಕ್ಷಿಸಬಹುದು ಎಂದು ಹೇಳಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು, ಸರ್ಕಾರವು “ಮಹಿಳಾ ಶಕ್ತಿ” ಎಂದು ಹೇಳುತ್ತದೆ, ಇದು ತನ್ನ ಬದ್ಧತೆಯನ್ನು ಪ್ರದರ್ಶಿಸುವ ಸಮಯವಾಗಿದೆ ಎಂದು ಹೇಳಿದೆ.

ಮಹಿಳಾ ಕೋಸ್ಟ್ ಗಾರ್ಡ್ ಕಿರು ಸೇವಾ ನೇಮಕಾತಿ ಅಧಿಕಾರಿ ಪ್ರಿಯಾಂಕಾ ತ್ಯಾಗಿ ಅವರು ಸಲ್ಲಿಸಿದ ಅರ್ಜಿಯನ್ನು ಸೋಮವಾರ ಆಲಿಸಿದ ಅವರು, “ನೀವು (ಕೇಂದ್ರ ಸರ್ಕಾರ) ಮಹಿಳಾ ಶಕ್ತಿಯ ಬಗ್ಗೆ ಮಾತನಾಡುತ್ತೀರಿ, ಈಗ ಅದನ್ನು ಸಾಬೀತು ಪಡಿಸಿ. ಕೋಸ್ಟ್ ಗಾರ್ಡ್ ವಲಯದಲ್ಲಿ ಮಹಿಳೆಯರನ್ನು ನೋಡಲು ಇಷ್ಟಪಡದ ನೀವು ಏಕೆ ಪುರುಷಪ್ರಧಾನರಾಗಿದ್ದೀರಿ? ಕೋಸ್ಟ್ ಗಾರ್ಡ್ ಬಗ್ಗೆ ಏಕೆ ಅಸಡ್ಡೆ ಧೋರಣೆ ತಳೆದಿದ್ದೀರಿ” ಎಂದರು.

ಕೋಸ್ಟ್ ಗಾರ್ಡ್ ನಲ್ಲಿ ಮಹಿಳೆಯರು ಇರುವಂತಿಲ್ಲ ಎಂಬ ದಿನಗಳು ಕಳೆದು ಹೋದವು. ಮಹಿಳೆಯರು ಗಡಿ ಕಾಯಲು ಶಕ್ತರಾದರೆ ಅವರು ಕರಾವಳಿಯನ್ನು ಕಾಯಲು ಶಕ್ತರು ಎಂದು ನ್ಯಾ.ಜೆ.ಬಿ ಪಾರ್ದಿವಾಲ ಮತ್ತು ನ್ಯಾ.ಮನೋಜ್ ಮಿಶ್ರಾ ಅವರೂ ಇದ್ದ ಪೀಠವು ಹೇಳಿದೆ.

ತ್ಯಾಗಿ ಅವರು ಕೋಸ್ಟ್ ಗಾರ್ಡ್‌ನ ಮೊದಲ ಸಂಪೂರ್ಣ ಮಹಿಳಾ ಸಿಬ್ಬಂದಿಯ ಭಾಗವಾಗಿದ್ದರು. ಇದನ್ನು ಫೋರ್ಸ್ ಫ್ಲೀಟ್‌ನಲ್ಲಿ ಡೋರ್ನಿಯರ್ ವಿಮಾನವನ್ನು ನಿರ್ವಹಿಸಲು ನಿಯೋಜಿಸಲಾಗಿತ್ತು. ತನ್ನ ಅರ್ಜಿಯಲ್ಲಿ, ಅವರು ಖಾಯಂ ಆಯೋಗಕ್ಕಾಗಿ ಪುರುಷ ಅಧಿಕಾರಿಗಳೊಂದಿಗೆ ಸಮಾನತೆಯನ್ನು ಕೋರಿದ್ದಾರೆ. ಎಂಎಸ್ ತ್ಯಾಗಿ ಅವರಿಗೆ ಶಾಶ್ವತ ಆಯೋಗದ ಪರಿಗಣನೆಯನ್ನು ನಿರಾಕರಿಸಿದ ನಂತರ ಡಿಸೆಂಬರ್ ನಲ್ಲಿ ಸೇವೆಯಿಂದ ಬಿಡುಗಡೆ ಮಾಡಲಾಯಿತು. ಅಲ್ಲದೆ ದೆಹಲಿ ಹೈಕೋರ್ಟ್ ಮಧ್ಯಂತರ ಪರಿಹಾರವನ್ನು ನಿರಾಕರಿಸಿತು.

ಟಾಪ್ ನ್ಯೂಸ್

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.