ಪತಿಯನ್ನು ಕೊಂದವರಿಗೆ 50,000 ರೂ. ನೀಡುತ್ತೇನೆ ಎಂದು ವಾಟ್ಸಾಪ್ ಸ್ಟೇಟಸ್ ಹಾಕಿದ ಪತ್ನಿ
Team Udayavani, Mar 31, 2024, 3:42 PM IST
ಲಕ್ನೋ: ತನ್ನ ಪತಿಯನ್ನು ಕೊಂದವರಿಗೆ 50,000 ರೂಪಾಯಿ ಬಹುಮಾನವನ್ನು ನೀಡುವುದಾಗಿ ಪತ್ನಿಯೊಬ್ಬಳು ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿ ಘೋಷಿಸಿದ್ದಾಳೆ ಎಂದು ಪತಿ ಆರೋಪಿಸಿ ದೂರು ದಾಖಲಿಸಿರುವ ಘಟನೆ ಆಗ್ರಾದ ಬಹ್ ಜಿಲ್ಲೆಯಲ್ಲಿ ನಡೆದಿದೆ.
ಪತ್ನಿ ಮೊಬೈಲ್ ನಲ್ಲಿ ಸ್ಟೇಟಸ್ ಹಾಕಿದ ಬಳಿಕ, ಪತ್ನಿಯ ಸ್ನೇಹಿತರೊಬ್ಬರಿಂದ ಬೆದರಿಕೆಯ ಕರೆಯೊಂದು ಬಂದ ಬಳಿಕ ಪತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ದೂರಿನಲ್ಲಿ ಏನಿದೆ?:
ಜುಲೈ 9, 2022 ರಂದು ಮಧ್ಯಪ್ರದೇಶದ ಭಿಂಡ್ನ ಹಳ್ಳಿಯೊಂದರ ಮಹಿಳೆಯನ್ನು ನಾನು ವಿವಾಹವಾದೆ. ಸ್ವಲ್ಪ ಸಮಯದ ನಂತರ ನಮ್ಮಿಬ್ಬರ ನಡುವೆ ಭಿನ್ನಾಭಿಪ್ರಾಯಗಳು ಉಂಟಾಯಿತು. ಐದು ತಿಂಗಳ ನಂತರ ಡಿಸೆಂಬರ್ 2022 ರಲ್ಲಿ, ಪತ್ನಿ ಬಹ್ನಲ್ಲಿರುವ ನನ್ನ ಮನೆಯನ್ನು(ಗಂಡನ ಮನೆ) ತೊರೆದು ತನ್ನ ಹೆತ್ತವರ ಮನೆಗೆ ಹಿಂದಿರುಗಿದಳು. ಅಂದಿನಿಂದ ಆಕೆ ತನ್ನ ಪೋಷಕರೊಂದಿಗೆ ನೆಲೆಸಿದ್ದಾಳೆ.
ಡಿಸೆಂಬರ್ 21, 2023 ರಂದು ಭಿಂಡ್ನಿಂದ ಹಿಂದಿರುಗುತ್ತಿದ್ದಾಗ ಅತ್ತೆ ಮನೆಯವರು ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ. ಇದಾದ ಕೆಲವೇ ದಿನಗಳಲ್ಲಿ ನನ್ನ ಪತ್ನಿ ತನ್ನ ಪತಿಯನ್ನು ಕೊಲ್ಲುವ ವ್ಯಕ್ತಿಗೆ 50,000 ರೂ. ಬಹುಮಾನ ನೀಡುವುದಾಗಿ ವಾಟ್ಸಾಪ್ ಸ್ಟೇಟಸ್ ನ್ನು ಹಂಚಿಕೊಂಡಿದ್ದಾಳೆ ಎಂದು ದೂರಿನಲ್ಲಿ ಪತಿ ಹೇಳಿದ್ದಾರೆ.
ಪಕ್ಕದ ಮನೆಯಲ್ಲಿ ವಾಸವಾಗಿರುವ ಬಾಡಿಗೆದಾರನ ಜತೆ ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಪತಿ ಆರೋಪಿಸಿದ್ದಾರೆ. ಅವರ ಮದುವೆಯ ಆರಂಭದಿಂದಲೂ ಎಲ್ಲಾ ವಿವಾದಗಳಿಗೆ ಏಕೈಕ ಕಾರಣ ಈ ಅಕ್ರಮ ಸಂಬಂಧ ಎಂದು ಅವರು ಹೇಳಿದ್ದಾರೆ.
“ಆಕೆಯ ಪ್ರಿಯಕರ ಕೂಡ ದೂರವಾಣಿ ಕರೆ ಮೂಲಕ ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ” ಎಂದು ಅವರು ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.
ಇದೀಗ ದೂರು ಬಂದ ಬಳಿಕ ಮಹಿಳೆ ಭಿಂಡ್ನ ಪೊಲೀಸ್ ಠಾಣೆಯಲ್ಲಿ ಜೀವನಾಂಶ ದಾವೆ ಹೂಡಿದ್ದಾರೆ. ಮಹಿಳೆ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಬಹ್ ಪೊಲೀಸ್ ಠಾಣೆಯ ಉಸ್ತುವಾರಿ ಶ್ಯಾಮ್ ಸಿಂಗ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್ಡಿಎ ಬದ್ಧ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.