![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Sep 25, 2022, 6:27 PM IST
ನವದೆಹಲಿ: ರಾಖಿ ಸಾವಂತ್ ಕೂಡ ಚುನಾವಣೆ ಅಭ್ಯರ್ಥಿ ಆಗಬಹುದು ಎಂದು ಲೇವಡಿ ಮಾಡಿದ್ದ ಹಿರಿಯ ನಟಿ, ಸಂಸದೆ ಹೇಮಾ ಮಾಲಿನಿ ಅವರ ಹೇಳಿಕೆಗೆ ಐಟಂ ಗರ್ಲ್ ಪ್ರತಿಕ್ರಿಯಿಸಿದ್ದಾರೆ.
ರಾಖಿ ಸಾವಂತ್ ಅವರು ಹೇಮಾ ಮಾಲಿನಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದು,ನನ್ನ ಹೆಗಲ ಮೇಲೆ ಮಹತ್ತರವಾದ ಜವಾಬ್ದಾರಿಯನ್ನು ಹಾಕಿದ್ದಕ್ಕಾಗಿ, ನಾನು ಇದಕ್ಕೆ ಅರ್ಹಳೆಂದು ಪರಿಗಣಿಸಿದ್ದಕ್ಕಾಗಿ ನಾನು ಪ್ರಧಾನಿ ನರೇಂದ್ರ ಮೋದಿ ಜಿ ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಹೇಮಾ ಮಾಲಿನಿ ಜಿ ಅವರು ಈಗಾಗಲೇ ಘೋಷಿಸಿದಂತೆ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶವನ್ನು ನೀಡಿದ್ದಕ್ಕಾಗಿ ಧನ್ಯವಾದಗಳು ಎಂದು ರಾಖಿ ಹೇಳಿದ್ದಾರೆ.
ಇದನ್ನೂ ಓದಿ: ಕಮಲದ ಸುತ್ತಲಿರುವ ಕೆಸರನ್ನು “ಕೈ” ಯಿಂದ ಸ್ವಚ್ಛಗೊಳಿಸಲು ಸಾಧ್ಯವಿಲ್ಲ: ಕೇಜ್ರಿವಾಲ್
”ನನ್ನ ಮಟ್ಟಿಗೆ ಹೇಳುವುದಾದರೆ, ನಾನು ಬಾಲ್ಯದಿಂದಲೂ ಸಮಾಜಕ್ಕೆ ಸೇವೆ ಸಲ್ಲಿಸುತ್ತಿದ್ದೇನೆ. ನಾನು ಹುಟ್ಟಿದ್ದು ದೇಶಕ್ಕೆ ಸೇವೆ ಸಲ್ಲಿಸಲು ಮತ್ತು ನಾನು ಸೇವೆ ಮಾಡಲು ಬಯಸುತ್ತೇನೆ. ಚಹಾ ಮಾರಿ ಪ್ರಧಾನಿ ಆಗಬಹುದು ಎಂದಾಗ, ನಾನು ಬಾಲಿವುಡ್ನಲ್ಲಿ ಕೆಲಸ ಮಾಡಿದ ನಂತರ ಏಕೆ ಸಿಎಂ ಆಗಬಾರದು? ಖಂಡಿತವಾಗಿಯೂ, ನನಗೆ ನಿಮ್ಮೆಲ್ಲರ ಶುಭ ಹಾರೈಕೆಗಳು ಬೇಕು,” ಎಂದು ಸಾವಂತ್ ಹೇಳಿದ್ದಾರೆ.
”ನಾನು 2024ರ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದೇನೆ, ಆದರೆ ಯಾರ ವಿರುದ್ಧ ಎನ್ನುವುದು ಅಚ್ಚರಿ ಮೂಡಿಸುತ್ತದೆ” ಎಂದು ರಾಖಿ ಹೇಳಿದ್ದಾರೆ.
ಮಥುರಾದಲ್ಲಿಬಾಲಿವುಡ್ ನಟಿ ಕಂಗನಾ ರಣಾವತ್ ಸ್ಪರ್ಧಿಸಲಿದ್ದಾರೆ ಎನ್ನುವ ಊಹಾಪೋಹಗಳ ಕುರಿತು ಹಾಲಿ ಬಿಜೆಪಿ ಸಂಸದೆ ಹೇಮಾ ಮಾಲಿನಿ ಪ್ರತಿಕ್ರಿಯಿಸಿ” ಒಳ್ಳೆಯದು, ಕ್ಷೇತ್ರವನ್ನು ಸಿನಿ ತಾರೆಯರು ಮಾತ್ರ ಪ್ರತಿನಿಧಿಸಬೇಕೆಂದಿದೆಯೇ ಎಂದು ಪ್ರಶ್ನಿಸಿ, ”ನಾಳೆ ರಾಖಿ ಸಾವಂತ್ ಅವರನ್ನು ಕಳುಹಿಸುತ್ತಾರೆ ಅವರೂ ಅಭ್ಯರ್ಥಿಯಾಗಬಹುದು” ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದರು.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.