CWRC; ಕಾವೇರಿ ನೀರು ಬಿಡದಿದ್ದರೆ ಕೋರ್ಟ್ಗೆ: ತಮಿಳುನಾಡು ಬೆದರಿಕೆ
ಕಾವೇರಿಗಾಗಿ ತಮಿಳುನಾಡಿನ ಕೆಲವು ಕಡೆ ಪ್ರತಿಭಟನೆ, ರೈಲ್ ರೋಕೋ ಚಳವಳಿ
Team Udayavani, Jul 17, 2024, 7:01 AM IST
ಚೆನ್ನೈ: ಕರ್ನಾಟಕದಿಂದ ಕಾವೇರಿ ನೀರಿ ಪಡೆಯಲು ಅಗತ್ಯ ಬಿದ್ದರೆ ಸುಪ್ರೀಂ ಕೋರ್ಟ್ ಮೊರೆ ಹೋಗುವ ಬಗ್ಗೆ ತಮಿಳುನಾಡಿನ ಸರ್ವಪಕ್ಷ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಕಾವೇರಿ ನೀರು ನಿಯಂತ್ರಣ ಸಮಿತಿ(CWRC) ಆದೇಶದಂತೆ ನಿತ್ಯ 1 ಟಿಎಂಸಿ ನೀರು ಬಿಡಲು ಕರ್ನಾಟಕ ಸರ್ಕಾರವು ನಿರಾಕರಿಸಿದ್ದ ಹಿನ್ನೆಲೆಯಲ್ಲಿ ಸಿಎಂ ಎಂ.ಕೆ. ಸ್ಟಾಲಿನ್ ನೇತೃತ್ವದ ತಮಿಳುನಾಡು ಸರ್ಕಾರ, ಮಂಗಳವಾರ ಸರ್ವಪಕ್ಷ ಸಭೆ ಕರೆದಿತ್ತು. ಸಭೆಯಲ್ಲಿ ಕರ್ನಾಟಕದ ನಿರ್ಧಾರವನ್ನು ತೀವ್ರವಾಗಿ ಖಂಡಿಸಿ, ನಿರ್ಣಯ ಕೈಗೊಳ್ಳಲಾಯಿತು. ಜತೆಗೆ, ಸುಪ್ರೀಂ ಕೋರ್ಟ್ ಹಾಗೂ ಕಾವೇರಿ ನ್ಯಾಯಮಂಡಳಿ ತೀರ್ಪನ್ನು ಪಾಲಿಸುವಂತೆ ಕರ್ನಾಟಕಕ್ಕೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಒತ್ತಾಯಿಸುವ ನಿರ್ಣಯವನ್ನೂ ಸಭೆಯಲ್ಲಿ ಕೈಗೊಳ್ಳಲಾಯಿತು.
ಕಳೆದ ವರ್ಷ ಕೂಡ ಕರ್ನಾಟಕ ತಮಿಳುನಾಡಿಗೆ ಕಾವೇರಿ ನೀರು ಬಿಡಲಿಲ್ಲ ಎಂದು ಸಿಎಂ ಎಂ.ಕೆ.ಸ್ಟಾಲಿನ್ ಆರೋಪಿಸಿದ್ದಾರೆ. ಬಳಿಕ ಸುಪ್ರೀಂಕೋರ್ಟ್ಗೆ ಮೊರೆ ಸಲ್ಲಿಸಿದ ಬಳಿಕವೇ ನೀರು ಬಿಡುಗಡೆಯಾಗಿತ್ತು. ಹೀಗಾಗಿ ಈ ಬಾರಿಯೂ ಆದೇಶ ಪಾಲನೆ ಆಗದೇ ಇದ್ದರೆ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗುವುದು ಎಂದರು.
ಕಾವೇರಿಗಾಗಿ ರೈಲ್ ರೋಕೋ ಪ್ರತಿಭಟನೆ: ಮತ್ತೂಂದೆಡೆ ಕಾವೇರಿ ನೀರಿಗಾಗಿ ತಮಿಳುನಾಡಿನ ತಿರುವರೂರ್ ಜಿಲ್ಲೆಯ ತಿರುತುರೈಪುಡಿಯಲ್ಲಿ ರೈತರು ಪ್ರತಿಭಟನೆ ನಡೆಸಿದರು. ಎಡಪಕ್ಷಗಳ ಕಾರ್ಯಕರ್ತರು ರೈಲ್ ರೋಕೋ ಚಳವಳಿ ಕೈಗೊಂಡರು. ತಮಿಳುನಾಡು ತನ್ನ ಪಾಲಿನ ನೀರು ಪಡೆಯಲು ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ತಿರುಚಿರಾಪಳ್ಳಿಯಲ್ಲಿ ಕರ್ನಾಟಕ ಬ್ಯಾಂಕಿನ ಎದುರು ಪ್ರತಿಭಟನೆ ನಡೆಸಲಾಗಿದೆ.
ಕಾವೇರಿ ನೀರು ನಿಯಂತ್ರಣ ಸಮಿತಿ ಇತ್ತೀಚೆಗೆ ಜು.12ರಿಂದ ಮಾಸಾಂತ್ಯದವರೆಗೆ ಪ್ರತಿ ದಿನ 1 ಟಿಎಂಸಿ ನೀರನ್ನು ಕೆ.ಆರ್.ಎಸ್. ಅಣೆಕಟ್ಟಿನಿಂದ ಬಿಡುಗಡೆ ಮಾಡಬೇಕು ಎಂದು ಕರ್ನಾಟಕಕ್ಕೆ ಸೂಚಿಸಿತ್ತು. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದಿದ್ದ ಸರ್ವಪಕ್ಷಗಳ ಸಭೆಯಲ್ಲಿ 1 ಟಿಎಂಸಿಯ ಬದಲಾಗಿ ಪ್ರತಿ ದಿನ 8000 ಕ್ಯುಸೆಕ್ ನೀರು ಬಿಡುಗಡೆ ಮಾಡಲು ಸಾಧ್ಯ ಎಂದು ತೀರ್ಮಾನಿಸಲಾಗಿತ್ತು. ಅದಕ್ಕೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಆಕ್ರೋಶ ವ್ಯಕ್ತಪಡಿಸಿದ್ದರು.
ರಾಜ್ಯದ ವಿರುದ್ಧ ಆಕ್ರೋಶ
– ಕಾವೇರಿ ನೀರು ಬಿಡದ್ದಕ್ಕೆ ಕರ್ನಾಟಕದ ವಿರುದ್ಧ ಖಂಡನಾ ನಿರ್ಣಯ
– ಆದೇಶ ಪಾಲಿಸುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಲು ಸುಪ್ರೀಂಕೋರ್ಟ್, ಸಿಡಬ್ಲೂéಆರ್ಸಿಗೆ ಒತ್ತಾಯ
– ತಿರವರೂರ್ ಜಿಲ್ಲೆಯಲ್ಲಿ ನೀರಿಗಾಗಿ ರೈತರ, ಎಡಪಕ್ಷಗಳ ಪ್ರತಿಭಟನೆ
– ತಿರುಚಿರಾಪಳ್ಳಿಯಲ್ಲಿ ಕರ್ನಾಟಕ ಬ್ಯಾಂಕ್ ಶಾಖೆ ಎದುರು ಸಂಘಟನೆಗಳ ಧರಣಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ
ಗಂಟಲಲ್ಲಿ ಇಡ್ಲಿ ಸಿಲುಕಿ ವ್ಯಕ್ತಿ ಮೃತ್ಯು… ಜೀವಕ್ಕೆ ಮುಳುವಾದ ಇಡ್ಲಿ ತಿನ್ನುವ ಸ್ಪರ್ಧೆ
Fake Visa: ನಕಲಿ ವೀಸಾ ಉತ್ಪಾದನೆಯ ಫ್ಯಾಕ್ಟರಿ ಪತ್ತೆ-ಮೂವರು ಆರೋಪಿಗಳ ಬಂಧನ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.