Hindu rashtra; 82% ಹಿಂದೂಗಳಿರುವ ಭಾರತ ಈಗಾಗಲೇ ಹಿಂದೂ ರಾಷ್ಟ್ರವಾಗಿದೆ: ಕಮಲ್ ನಾಥ್
Team Udayavani, Aug 8, 2023, 3:29 PM IST
ಭೋಪಾಲ್: ಕಾಂಗ್ರೆಸ್ ಸಂಸದ ಮತ್ತು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರು ಮಂಗಳವಾರ, ರಾಷ್ಟ್ರದ 82% ಜನರು ಹಿಂದೂಗಳಾಗಿರುವುದರಿಂದ ಭಾರತವು ಈಗಾಗಲೇ ಹಿಂದೂ ರಾಷ್ಟ್ರವಾಗಿದೆ ಎಂದು ಹೇಳಿದ್ದಾರೆ.
ಸ್ವಯಂ-ಘೋಷಿತ ದೇವಮಾನವ ಧೀರೇಂದ್ರ ಶಾಸ್ತ್ರಿ ಅವರ ಹಿಂದೂ ರಾಷ್ಟ್ರದ ಬೇಡಿಕೆಗಳನ್ನು ಉಲ್ಲೇಖಿಸುವಾಗ ಕಮಲ್ ನಾಥ್ ಈ ರೀತಿ ಹೇಳಿದರು. ಈ ವಿಷಯದ ಬಗ್ಗೆ ಯಾವುದೇ ಚರ್ಚೆಯೇ ಅಗತ್ಯವಿಲ್ಲ, ಏಕೆಂದರೆ ಇದು ದತ್ತಾಂಶದಿಂದ ಬೆಂಬಲಿತವಾಗಿದೆ ಎಂದರು.
“ನಮ್ಮ ದೇಶದಲ್ಲಿ ಶೇಕಡಾ 82 ರಷ್ಟು ಹಿಂದೂಗಳು ಇದ್ದಾರೆ ಎಂದು ಡೇಟಾ ತೋರಿಸುತ್ತದೆ. ಹೀಗಾಗಿ ನಮ್ಮದು ಹಿಂದೂ ರಾಷ್ಟ್ರವೇ ಎನ್ನುವ ಬಗ್ಗೆ ಇಲ್ಲಿ ಯಾವುದೇ ಚರ್ಚೆ ಬರುವುದಿಲ್ಲ ಎಂದು ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥರು ಹೇಳಿದ್ದಾರೆ.
ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ನಾಯಕರೊಬ್ಬರು ಸಂಸದ ನಕುಲ್ ಕಮಲ್ ನಾಥ್ ಅವರ ವಿರುದ್ಧ ವಾಗ್ದಾಳಿ ನಡೆಸಿದ ಒಂದು ದಿನದ ನಂತರ ಕಮ್ ನಾಥ್ ಅವರ ಈ ಹೇಳಿಕೆ ಹೊರಬಿದ್ದಿದೆ.
ಇದನ್ನೂ ಓದಿ:ನನ್ ಕಾಸು ನನ್ ಕನಸು; ಸಂಜು ವೆಡ್ಸ್ ಗೀತಾ-2ಗೆ ನಾಗಶೇಖರ್ ರೆಡಿ
ಆರ್ಜೆಡಿ ಮತ್ತು ಕಾಂಗ್ರೆಸ್ ಎರಡೂ ವಿಪಕ್ಷಗಳ ಮೈತ್ರಿ ಇಂಡಿಯಾದ ಭಾಗವಾಗಿವೆ. ಈ ಟೀಕೆಯು ಹೊಸದಾಗಿ ರೂಪುಗೊಂಡ ವಿರೋಧ ಪಕ್ಷದ ಮೈತ್ರಿಯೊಳಗಿನ ಆಂತರಿಕ ಘರ್ಷಣೆಗಳ ಊಹಾಪೋಹವನ್ನು ಹೆಚ್ಚಿಸಿತು.
ಧೀರೇಂದ್ರ ಶಾಸ್ತ್ರಿ ಅವರಿಗೆ ಚಿಂದ್ವಾರದಲ್ಲಿ ಆತಿಥ್ಯ ನೀಡಿದ್ದಕ್ಕಾಗಿ ಕಾಂಗ್ರೆಸ್ ಸಂಸದ ನಕುಲ್ ಕಮಲ್ ನಾಥ್ ಅವರನ್ನು ಆರ್ಜೆಡಿ ಹಿರಿಯ ನಾಯಕ ಶಿವಾನಂದ್ ತಿವಾರಿ ಟೀಕಿಸಿದ್ದರು. ಬಾಗೇಶ್ವರ ಧಾಮದ ಮುಖ್ಯಸ್ಥರು ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಬಹಿರಂಗವಾಗಿ ಪ್ರತಿಪಾದಿಸಿದ್ದಾರೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್ಡಿಎ ಬದ್ಧ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.