Rohtak; ದಂತ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ವಿಕೃತಿ: ವೈದ್ಯನ ಬಂಧನ
ಕೋಲ್ಕತಾ ಘಟನೆ ವಿರುದ್ಧ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿರುವಾಗಲೇ ಇನ್ನೊಂದು ಘಟನೆ...
Team Udayavani, Aug 19, 2024, 7:19 PM IST
ರೋಹ್ಟಕ್(ಹರಿಯಾಣ): ಪೋಸ್ಟ್ಗ್ರಾಜುಯೇಟ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ನ ವೈದ್ಯರೊಬ್ಬರು ಅಪಹರಿಸಿ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದಂತ ವಿದ್ಯಾರ್ಥಿನಿಯೊಬ್ಬರು ಆರೋಪಿಸಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೋಲ್ಕತಾ ವೈದ್ಯೆಯ ಅ*ತ್ಯಾಚಾರ ಮತ್ತು ಹ*ತ್ಯೆ ವಿರುದ್ಧ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿರುವಾಗಲೇ ಈ ಘಟನೆ ನಡೆದಿದೆ.
ಕಾಲೇಜ್ ಕ್ಯಾಂಪಸ್ನಲ್ಲಿ ಬಿಡಿಎಸ್ ವಿದ್ಯಾರ್ಥಿಯೊಬ್ಬಳ ಮೇಲೆ ಹಲ್ಲೆ ನಡೆಸಿದ ಘಟನೆಯನ್ನು ಶನಿವಾರ ರಾತ್ರಿ ಪಿಜಿಐಎಂಎಸ್ ಅಧಿಕಾರಿಗಳು ತಮ್ಮ ಗಮನಕ್ಕೆ ತಂದರು. ಮಾಹಿತಿಯ ಮೇರೆಗೆ ಹಿರಿಯ ಪೊಲೀಸ್ ಅಧಿಕಾರಿಗಳು ವೈದ್ಯಕೀಯ ಕಾಲೇಜಿಗೆ ತೆರಳಿ ಸಂತ್ರಸ್ತೆ ಮತ್ತು ಅವರ ಕುಟುಂಬವನ್ನು ಸಂಪರ್ಕಿಸಿದ್ದಾರೆ ಎಂದು ರೋಹ್ಟಕ್ ಪೊಲೀಸರು ತಿಳಿಸಿದ್ದಾರೆ.
ವಿದ್ಯಾರ್ಥಿನಿ ತನ್ನ ದೂರಿನಲ್ಲಿ,’ಆಗಸ್ಟ್ 16 ರಂದು ಆರೋಪಿ ನನ್ನನ್ನು ಪಿಜಿಐಎಂಎಸ್ನಿಂದ ಅಪಹರಿಸಿ ಅಂಬಾಲಾ ಮತ್ತು ಚಂಡೀಗಢಕ್ಕೆ ಕರೆದೊಯ್ದು ಚಿತ್ರಹಿಂಸೆ ನೀಡಿ ಥಳಿಸಿದ್ದಾರೆ’ ಎಂದು ಆರೋಪಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಎಫ್ಐಆರ್ ದಾಖಲಿಸಿಕೊಂಡಿದ್ದು, ಆರೋಪಿಯನ್ನು ತತ್ ಕ್ಷಣ ಬಂಧಿಸಲಾಗಿದೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದ್ದು, ಆಕೆಯ ಹೇಳಿಕೆಯನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮುಂದೆ ದಾಖಲಿಸಲಾಗಿದೆ. ತನಿಖೆಯ ಸಮಯದಲ್ಲಿ ಲೈಂಗಿಕ ಕಿರುಕುಳದ ಯಾವುದೇ ಪುರಾವೆಗಳು ಇನ್ನೂ ಮುಂಚೂಣಿಗೆ ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ವೈದ್ಯ ಕಾಲೇಜಿನಲ್ಲಿ Anatomy ಕಲಿಸುತ್ತಿದ್ದ. ಸಂತ್ರಸ್ತೆ ಸಾಮಾಜಿಕ ಮಾಧ್ಯಮದಲ್ಲಿ ಅಪ್ಲೋಡ್ ಮಾಡಿದ ವಿಡಿಯೋದಲ್ಲಿ, ಗಾಯದ ಗುರುತುಗಳನ್ನು ತೋರಿಸಿದೆ.ತಾನು ಬಿಡಿಎಸ್ ಪ್ರಥಮ ವರ್ಷದ ವಿದ್ಯಾರ್ಥಿನಿ ಎಂದು ಹೇಳಿಕೊಂಡಿದ್ದು, ಆರೋಪಿ ತನಗೆ ಏಳು ತಿಂಗಳ ಕಾಲ ಚಿತ್ರಹಿಂಸೆ ನೀಡಿರುವುದಾಗಿ ಆರೋಪಿಸಿದ್ದಾಳೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Monkeypox; ಕೇರಳದಲ್ಲಿ ಮತ್ತೊಂದು ಶಂಕಿತ ಮಂಕಿಪಾಕ್ಸ್ ಪತ್ತೆ: ದೇಶದಲ್ಲಿ 2ನೇ ಪ್ರಕರಣ
Kolkata incident; ಸಿಬಿಐ ವರದಿ ಕಳವಳಕಾರಿ: ಸುಪ್ರೀಂ
Mallikarjun Kharge; ನಿಮ್ಮ ನಾಯಕರ ಬಾಯಿಗೆ ಬೀಗ ಹಾಕಿ: ಮೋದಿಗೆ ಖರ್ಗೆ ಪತ್ರ
Inflation: 4 ತಿಂಗಳ ಕನಿಷ್ಠಕ್ಕೆ ಸಗಟು ಹಣದುಬ್ಬರ: ಆಗಸ್ಟ್ನಲ್ಲಿ ಶೇ.1.31
Jio ನೆಟ್ವರ್ಕ್ನಲ್ಲಿ ತಾಂತ್ರಿಕ ದೋಷ: ಗ್ರಾಹಕರ ಪರದಾಟ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.