ಇಂದು ಅಂತಾರಾಷ್ಟ್ರೀಯ ಏಡ್ಸ್‌ ದಿನ; ಎಚ್‌ಐವಿ ಸೋಂಕಿನ ವಿರುದ್ಧ ಹೋರಾಡೋಣ


Team Udayavani, Dec 1, 2020, 6:10 AM IST

ಇಂದು ಅಂತಾರಾಷ್ಟ್ರೀಯ ಏಡ್ಸ್‌ ದಿನ; ಎಚ್‌ಐವಿ ಸೋಂಕಿನ ವಿರುದ್ಧ ಹೋರಾಡೋಣ

ಸಾಂದರ್ಭಿಕ ಚಿತ್ರ

ಜಗತ್ತನ್ನು ಕಾಡುವ ಮಾರಣಾಂತಿಕ ಕಾಯಿಲೆಗಳ ಪೈಕಿ ಒಂದಾದ ಎಚ್‌ಐವಿ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಈ ದಿನವನ್ನು ಮೀಸಲಿರಿಸಲಾಗಿದೆ. ರೋಗ ಬಾರದಂತೆ ಕೈಗೊಳ್ಳಬೇಕಾದ ಅಗತ್ಯ ಕ್ರಮ, ಚಿಕಿತ್ಸಾ ವಿಧಾನ ಮತ್ತು ರೋಗದ ಲಕ್ಷಣಗಳ ಕುರಿತು ಅರಿವು ಮೂಡಿಸಲು ಈ ದಿನವನ್ನು ಜಗತ್ತಿನಾದ್ಯಂತ ಆಚರಿಸಲಾಗುತ್ತದೆ.

1988ರಿಂದ ಆರಂಭ
ವಿಶ್ವ ಆರೋಗ್ಯ ಸಂಸ್ಥೆ (WHO)ಯು ವಿಶ್ವ ಏಡ್ಸ್ ದಿನವನ್ನು 1988ರ ಡಿಸೆಂಬರ್‌ 1ರಿಂದ ಪ್ರತಿ ವರ್ಷ ಆಚರಿಸುತ್ತಾ ಬಂದಿದೆ. ಪ್ರತಿವರ್ಷ ಸೋಂಕಿನ ಕುರಿತು ಇರುವ ಭಯವನ್ನು ನಿವಾರಿಸಿ, ಜನರಿಗೆ ಸರಿಯಾದ ಮಾಹಿತಿ ನೀಡಿ ಪ್ರಕರಣಗಳ ಸಂಖ್ಯೆಯನ್ನು ಕಡಿಮೆ ಮಾಡಲು ವಿಶ್ವ ಆರೋಗ್ಯ ಸಂಸ್ಥೆ ಸೇರಿದಂತೆ ಅದರ ಸದಸ್ಯ ರಾಷ್ಟ್ರಗಳು ಕಾರ್ಯೋನ್ಮುಖವಾಗುತ್ತಿವೆ. ಇದರ ಪ್ರಯತ್ನದ ಫ‌ಲವಾಗಿ ಇತ್ತೀಚಿನ ವರ್ಷಗಳಲ್ಲಿ ರೋಗಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಈ ವರ್ಷ “ಎಚ್‌ಐವಿ ಸೋಂಕು ನಿರ್ಮೂಲನೆ; ಪರಿಣಾಮಕಾರಿ ವಿಧಾನದಿಂದ ಕ್ಷಿಪ್ರವಾಗಿ ಸೋಂಕು ಮುಕ್ತರಾಗಿ’ ಎಂಬ ಘೋಷವಾಕ್ಯವನ್ನು ಇಟ್ಟುಕೊಳ್ಳಲಾಗಿದೆ.

ಎಚ್‌ಐವಿ/ಏಡ್ಸ್ ಎಂದರೇನು?
ಎಚ್‌ಐವಿ (Human Immunodeficiency Virus) ವಿನಿಂದ ಹರಡುವ ಕಾಯಿಲೆ. ರೋಗ ನಿರೋಧಕ ಶಕ್ತಿಯನ್ನು ಹಂತ ಹಂತವಾಗಿ ಕುಂಠಿತಗೊಳಿಸಿ ದೇಹವನ್ನು ದುರ್ಬಲ ಗೊಳಿಸುತ್ತಾ ಹೋಗುತ್ತದೆ. ಇದರಿಂದ ವಿವಿಧ ರೋಗಗಳು ಸುಲಭವಾಗಿ ದೇಹವನ್ನು ಆತಿಕ್ರಮಿಸಿ ಪ್ರಮುಖ ಸಿಡಿ-4 ಕೋಶವನ್ನು ನಾಶಪಡಿಸುತ್ತದೆ. ಬಳಿಕ ಎಚ್‌ಐವಿ ಪೀಡಿತ ವ್ಯಕ್ತಿ ಏಡ್ಸ್ (Acquired Immune Deficiency Syndrome)ಗೆ ತುತ್ತಾಗುತ್ತಾನೆ. ಆರೋಗ್ಯವಂತ ವ್ಯಕ್ತಿ ಪ್ರತಿ ಎಂಎಂ3ಗೆ 500-1,500ರ ವರೆಗೂ ಸಿಡಿ-4 ಕೋಶ ಹೊಂದಿರುತ್ತಾನೆ. ಆದರೆ ರೋಗಪೀಡಿ ತನಿಗೆ ಅವು 200ಕ್ಕಿಂತ ಕಡಿಮೆ ಇರುತ್ತವೆ.

ರೋಗಗಳ ಲಕ್ಷಣ ಏನು: ಎಚ್‌ಐವಿ ವೈರಾಣವು ಒಬ್ಬ ವ್ಯಕ್ತಿಯ ದೇಹವನ್ನು ಪ್ರವೇಶಿಸಿದರೂ ದೀರ್ಘ‌ ಸಮಯ ಯಾವುದೆ ರೋಗಲಕ್ಷಣವನ್ನು ಉಂಟು ಮಾಡದೇ ಇರಬಹುದು. ರೋಗವು ಪಕ್ವಗೊಳ್ಳುವ ಅವಧಿಯಲ್ಲಿ ಸೋಂಕು ತಗುಲಿದ ವ್ಯಕ್ತಿ ಸಾಮಾನ್ಯನಂತೆಯೇ ಇರುತ್ತಾನೆ. ಅನಂತರ ಆತನಲ್ಲಿ ಜ್ವರ. ತಲೆನೋವು, ಕೀಲುಗಳಲ್ಲಿ ನೋವು ಹಾಗೂ ಬಾಯಿ ಮತ್ತು ಗಂಟಲಿನಲ್ಲಿ ಹುಣ್ಣುಗಳು ಕಾಣಿಸಿಕೊಳ್ಳುತ್ತವೆ. ದುಗ್ಧ ಗ್ರಂಥಿಗಳು ಊದಿಕೊಳ್ಳುವ ಜತೆಗೆ ತುರಿಕೆಯೂ ಪ್ರಾರಂಭವಾಗುತ್ತದೆ. ಈ ಲಕ್ಷಣಗಳ ಜತೆಗೆ ಬಾಹ್ಯಲಕ್ಷಣಗಳು ಕಾಣಿಸಿಕೊಳ್ಳದೆ ವೈರಾಣುಗಳ ಸಂಖ್ಯೆ ವೃದ್ಧಿಯಾಗುತ್ತಾ ಹೋಗುತ್ತದೆ. ಕ್ರಮೇಣ ದೇಹದ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತದೆ. ದುಗ್ಧ ಗ್ರಂಥಿಗಳು ಊದಿಕೊಳ್ಳುತ್ತವೆ. ಮುಖ್ಯವಾಗಿ ಕತ್ತಿನ ಭಾಗದ ಸುತ್ತ ಈ ಊತ ಕಂಡು ಬರುತ್ತದೆ. ಇದು ಏಡ್ಸ್ ರೋಗ ಸಂಪೂರ್ಣವಾಗಿ ಪ್ರಾರಂಭವಾಗಿರುವುದರ ಸೂಚನೆ. ಎಲ್ಲಿ ಹೆಚ್ಚು

ಜಗತ್ತಿನಲ್ಲಿ ಅತೀ ಹೆಚ್ಚು ಎಂದರೆ ಆಫ್ರಿಕಾದಲ್ಲಿ ಸುಮಾರು ಶೇ. 67.99ರಷ್ಟು ಏಡ್ಸ್‌ ಪೀಡಿತರು ಇದ್ದಾರೆ. ಎರಡನೇ ಸ್ಥಾನದಲ್ಲಿ ಶೇ. 10.5ರಷ್ಟು ಪ್ರಕರಣ ಇರುವ ಆಗ್ನೇಯ ಏಷ್ಯಾ ಇದೆ.

ದ್ವಿತೀಯ ಹಂತದ ಲಕ್ಷಣಗಳು
 ರೋಗ ನಿರೋಧಕ ಶಕ್ತಿ ಪೂರ್ಣವಾಗಿ ಕುಂದಿರುತ್ತದೆ.
 ಪ್ರತಿ ತಿಂಗಳು ಶೇ.10ರಷ್ಟು ತೂಕ ಕಡಿಮೆ ಆಗುತ್ತದೆ.
 ಚರ್ಮದಲ್ಲಿ ತುರಿಕೆ, ಉಸಿರಿನ ನಾಳದಲ್ಲಿ ಉರಿಯೂತ, ಕೆಮ್ಮು ಹಾಗೂ ಕಫ‌ ಉಂಟಾಗುವಿಕೆ
 ನಿರಂತರವಾಗಿ ತೀವ್ರ ದಣಿವಾಗುವುದು.
 ಒಂದು ತಿಂಗಳಿಗೂ ದೀರ್ಘ‌ಕಾಲ ಉಳಿಯುವ ಜ್ವರ
 ಬಾಯಿಯಲ್ಲಿ ಬಿಳಿ ಮಚ್ಚೆಗಳು ಕಾಣಿಸಿಕೊಳ್ಳಬಹುದು.
 ಒಂದು ತಿಂಗಳಿಗೂ ಅಧಿಕ ಕಾಲ ಅತಿಸಾರ ಭೇದಿಯಾಗಬಹುದು.
 ವ್ಯಕ್ತಿಯ ನೆನಪಿನ ಶಕ್ತಿ ಕುಂದುತ್ತಾ ಹೋಗುತ್ತದೆ.

ಎಚ್‌ಐವಿ ಪತ್ತೆಗೆ ಇರುವ ಪರೀಕ್ಷೆಗಳು
 ಎಲಿಸಾ (ELISA) (Enzyme Linked Immunosorbent Assay)
 ಪಿಸಿಆರ್‌ ಪಾಲಿಮರೇಸ್‌ ಚೈನ್‌ ರಿಯಾಕ್ಷನ್‌ (Polymerase chain reaction)
 ವೆಸ್ಟರ್ನ್ ಬ್ಲಾಟ್‌

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.