World Environment Day:”ಅಭಿವೃದ್ಧಿ ಹೊಂದಿದ ದೇಶಗಳ ತಪ್ಪಿನಿಂದಾಗಿ ದುಸ್ಥಿತಿ’

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನೀಡಿದ ಸಂದೇಶದಲ್ಲಿ ಪ್ರಧಾನಿ ಮೋದಿ ಸಂದೇಶ

Team Udayavani, Jun 6, 2023, 6:40 AM IST

World Environment Day:”ಅಭಿವೃದ್ಧಿ ಹೊಂದಿದ ದೇಶಗಳ ತಪ್ಪಿನಿಂದಾಗಿ ದುಸ್ಥಿತಿ’

ನವದೆಹಲಿ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಬಹಳ ಮಹತ್ವದ ಸಂದೇಶವನ್ನು ನೀಡಿದ್ದಾರೆ. ಅವರು ಹಿಂದೆಯೇ ವ್ಯಕ್ತಪಡಿಸಿದ್ದ ಅಭಿಪ್ರಾಯಗಳನ್ನು ಪರಿಸರ ದಿನಾಚರಣೆ ನಿಮಿತ್ತ ಮಾಡಿದ ವಿಡಿಯೊದಲ್ಲಿ ಪುನರುಚ್ಚಿಸಿದ್ದಾರೆ. ಬೃಹತ್ತಾದ, ಅಭಿವೃದ್ಧಿ ಹೊಂದಿದ ಕೆಲ ದೇಶಗಳು ತಮ್ಮ ಅಭಿವೃದ್ಧಿಗಾಗಿ ಪರಿಸರವನ್ನು ಮರೆತರು. ಅದರ ಪರಿಣಾಮವನ್ನೇ ಇವತ್ತು ಬಡರಾಷ್ಟ್ರಗಳು ಅನುಭವಿಸುತ್ತಿರುವುದು ಎನ್ನುವುದು ಮೋದಿ ಮಾತಿನ ಸಾರಾಂಶ.

“ದೀರ್ಘಾವಧಿಯಿಂದ ಬೃಹತ್‌ ಮತ್ತು ಅಭಿವೃದ್ಧಿ ಹೊಂದಿದ ದೇಶಗಳಲ್ಲಿ ಅಭಿವೃದ್ಧಿಯ ಮಾದರಿ ವೈರುಧ್ಯಮಯವಾಗಿದೆ. ಆ ದೇಶಗಳಲ್ಲಿ ಮೊದಲು ತಮ್ಮ ದೇಶವನ್ನು ಅಭಿವೃದ್ಧಿ ಮಾಡೋಣ, ಆಮೇಲೆ ಪ್ರಕೃತಿಯ ಬಗ್ಗೆ ಚಿಂತಿಸೋಣ ಎನ್ನುವ ಮನೋಭಾವ ಇದೆ. ಇದರಲ್ಲಿ ಅವರು ಯಶಸ್ವಿಯೂ ಆಗಿದ್ದಾರೆ. ಅದಕ್ಕಾಗಿ ಜಾಗತಿಕ ಪರಿಸರ ಬೆಲೆ ತೆರಬೇಕಾಗಿದೆ. ಈಗಲೂ ಅಭಿವೃದ್ಧಿ ಹೊಂದುತ್ತಿರುವ, ಬಡ ದೇಶಗಳು ಮುಂದುವರಿದ ರಾಷ್ಟ್ರಗಳ ಈ ತಪ್ಪು ನೀತಿಗಳಿಗೆ ಬೆಲೆ ತೆರುತ್ತಿವೆ’ ಎಂದು ಮೋದಿ ಹೇಳಿದ್ದಾರೆ.

“ದಶಕಗಳಿಂದ ಈ ಬಗ್ಗೆ ಯಾರೂ ದನಿಯೆತ್ತಿರಲಿಲ್ಲ. ಭಾರತ ಅದರ ಬಗ್ಗೆ ದನಿಯೆತ್ತಿರುವುದಕ್ಕೆ ನನಗೆ ಹೆಮ್ಮೆಯಿದೆ. ಅಭಿವೃದ್ಧಿ ಹೊಂದಿದ ಎಲ್ಲ ದೇಶಗಳ ಬಳಿ ನಾನು ಪರಿಸರ ನ್ಯಾಯದ ಪ್ರಶ್ನೆ ಕೇಳಿದ್ದೇನೆ. ಭಾರತ ಇತರೆಲ್ಲ ಅಭಿವೃದ್ಧಿಯ ವಿಚಾರಗಳಂತೆ ಪರಿಸರವನ್ನು ಗಂಭೀರವಾಗಿ ಪರಿಗಣಿಸಿದೆ. ಈ ವರ್ಷದ ಗುರಿಯೇ ಏಕಬಳಕೆಯ ಪ್ಲಾಸ್ಟಿಕ್‌ನಿಂದ ಮುಕ್ತವಾಗುವುದು. ಭಾರತ 4ಜಿ, 5ಜಿಯನ್ನು ವಿಸ್ತರಿಸುತ್ತಾದರೆ ಅರಣ್ಯವನ್ನೂ ಬೆಳೆಸುತ್ತದೆ’ ಎಂದು ಮೋದಿ ಸ್ಪಷ್ಟಪಡಿಸಿದ್ದಾರೆ.

ಮೋದಿಯ ಮೊದಲ ಆಹ್ವಾನಿತ ಭೇಟಿ: ಭಾರತೀಯರಿಗೆ ಸಂಭ್ರಮ
-ಜೂ.21ರಿಂದ 24ರ ಅಮೆರಿಕ ಪ್ರವಾಸದ ಹಿನ್ನೆಲೆಯಲ್ಲಿ ಗರಿಗೆದರಿದೆ ಕುತೂಹಲ

ಪ್ರಧಾನಿ ಮೋದಿ ಇದೇ ಮೊದಲ ಬಾರಿಗೆ ಅಮೆರಿಕ ಅಧ್ಯಕ್ಷರಿಂದಲೇ ಆಹ್ವಾನಿತರಾಗಿ ಆ ದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ಮೋದಿ ಇದುವರೆಗೆ ಹಲವು ಬಾರಿ ಅಮೆರಿಕಕ್ಕೆ ಹೋಗಿದ್ದರೂ, ಇದು ಅತ್ಯಂತ ಮಹತ್ವದ್ದಾಗಿದೆ. ಕಾರಣ ಅಮೆರಿಕ ಸರ್ಕಾರದ ಆಹ್ವಾನದ ಮೇರೆಗೆ ಹೋಗುತ್ತಿರುವುದು ಇದೇ ಮೊದಲು.

ಈ ಕಾರಣದಿಂದ ಅಮೆರಿಕದಲ್ಲಿನ ಭಾರತೀಯ ಸಮುದಾಯ ಬಹಳ ಸಂತಸದಲ್ಲಿದೆ, ಜೊತೆಗೆ ಮೋದಿ ಬರುವಿಕೆಯನ್ನೇ ಕುತೂಹಲದಿಂದ ಕಾಯುತ್ತಿದೆ. ಜೂ.21ರಿಂದ 24ರವರೆಗಿನ ಈ ಭೇಟಿ ವೇಳೆ ವೈಟ್‌ಹೌಸ್‌ನಲ್ಲಿ ದೊಡ್ಡ ಕಾರ್ಯಕ್ರಮವೇ ನಡೆಯಲಿದೆ. ಈ ವೇಳೆ 5000 ಆಯ್ದ ಭಾರತೀಯ ಸಮುದಾಯದವರಿಗೆ ಆಹ್ವಾನ ನೀಡಲಾಗಿದೆ. ಅವರೆಲ್ಲರೂ ಈಗಾಗಲೇ ತಮ್ಮ ಟಿಕೆಟ್‌ಗಳನ್ನು ಬುಕ್‌ ಮಾಡಿ ವಾಷಿಂಗ್ಟನ್‌ ತೆರಳಲು ಕಾಯುತ್ತಿದ್ದಾರೆ!

ಟಾಪ್ ನ್ಯೂಸ್

10

Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ…  ಆರನೇ ಮಹಡಿಯಿಂದ ಬಿದ್ದು ಮೃತಪಟ್ಟ

Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತ್ಯು

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ…  ಆರನೇ ಮಹಡಿಯಿಂದ ಬಿದ್ದು ಮೃತಪಟ್ಟ

Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತ್ಯು

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್

1-LOP

Leader of the Opposition; ಚೊಚ್ಚಲ ಭಾಷಣದಲ್ಲೇ ಅಬ್ಬರ! ; ರಾಹುಲ್‌ ವಿರುದ್ಧ ಕ್ರಮ?

1-weww

Bhojshala; ಪೂಜೆ ಅವಕಾಶಕ್ಕಾಗಿ ಜೈನರ ಅರ್ಜಿ

NIA

MP ಎಂಜಿನಿಯರ್‌ ರಶೀದ್‌ ಪ್ರಮಾಣ ವಚನ ಸ್ವೀಕಾರಕ್ಕೆ ಕೊನೆಗೂ ಎನ್‌ಐಎ ಅಸ್ತು

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

10

Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ

Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್‌; ಯುವಕನ ವಿರುದ್ಧ ಎಫ್ಐಆರ್‌

Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್‌; ಯುವಕನ ವಿರುದ್ಧ ಎಫ್ಐಆರ್‌

BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ

BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ

Missing Case: ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ

Missing Case: ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.