ವಿಶ್ವದ ಬೃಹತ್‌ ಧ್ಯಾನಕೇಂದ್ರ ವಾರಾಣಸಿಯಲ್ಲಿ ಅನಾವರಣ

ಸ್ವರವೇದ ಮಂದಿರ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

Team Udayavani, Dec 19, 2023, 12:51 AM IST

1-sdsadsa

ವಾರಾಣಸಿ: ಉತ್ತರಪ್ರದೇಶದ ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ವಿಶ್ವದ ಅತೀದೊಡ್ಡ ಧ್ಯಾನ ಕೇಂದ್ರ “ಸ್ವರವೇದ ಮಹಾಮಂದಿರ’ವನ್ನು ಲೋಕಾರ್ಪಣೆಗೊಳಿಸಿದ್ದಾರೆ. ಏಕಕಾಲಕ್ಕೆ 20 ಸಾವಿರ ಮಂದಿ ಕುಳಿತು ಧ್ಯಾನಿಸಲು ಸಾಧ್ಯವಿರುವುದು ಈ ಕೇಂದ್ರದ ವಿಶೇಷ.

ವಾರಾಣಸಿಯಿಂದ 12 ಕಿ.ಮೀ. ದೂರದ ಉಮರಾಹಾ ಪ್ರದೇಶದಲ್ಲಿ ಸುಮಾರು 3 ಲಕ್ಷ ಚ.ಅಡಿ ವಿಸ್ತೀರ್ಣದಲ್ಲಿ ಮಂದಿರವನ್ನು ನಿರ್ಮಿಸಲಾಗಿದೆ. 7 ಮಹಡಿಗಳ ಈ ಮಂದಿರದ ಗೋಡೆಗಳಲ್ಲಿ ಸ್ವರವೇದದ ಶ್ಲೋಕಗಳನ್ನು ಕೆತ್ತಲಾಗಿದೆ.

ಮಂದಿರ ಲೋಕಾರ್ಪಣೆಗೊಳಿಸಿ ಮಾತನಾಡಿದ ಪ್ರಧಾನಿ ಮೋದಿ, “ಭಾರತವು ಈಗ ಗುಲಾಮಗಿರಿ ಮನಸ್ಥಿತಿಯಿಂದ ಮುಕ್ತವಾಗಿದ್ದು, ತನ್ನ ಪರಂಪರೆಯ ಬಗ್ಗೆ ಹೆಮ್ಮೆ ಪಡುತ್ತಿದೆ. ಗುಲಾಮಗಿರಿಯ ಸಮಯದಲ್ಲಿ ಶೋಷಕರು ಮೊದಲಿಗೆ ದೇಶದ ಸಂಕೇತಗಳ ಮೇಲೆ ದಾಳಿ ನಡೆಸಿ, ಭಾರತವನ್ನು ದುರ್ಬಲಗೊಳಿಸಲು ಯತ್ನಿಸಿದರು. ಸ್ವಾತಂತ್ರಾéನಂತರವೂ ಸೋಮನಾಥ ದೇಗುಲ ಸೇರಿದಂತೆ ಪ್ರಮುಖ ಸ್ಥಳಗಳ ಮರುಸ್ಥಾಪನೆಗೆ ಕೆಲವರು ವಿರೋಧ ವ್ಯಕ್ತಪಡಿಸಿದರು. ಹೀಗಾಗಿ ದೇಶವು ಕೀಳರಿಮೆಗೆ ಬಿದ್ದು, ತನ್ನ ಪರಂಪರೆಯ ಬಗ್ಗೆ ಹೆಮ್ಮೆ ಪಡುವುದನ್ನೇ ಮರೆತುಬಿಟ್ಟಿತು’ ಎಂದು ಹೇಳಿದ್ದಾರೆ.

ನಾಲ್ಕು ರೈಲುಗಳಿಗೆ ಹಸುರು ನಿಶಾನೆ
ಹೊಸದಿಲ್ಲಿ-ವಾರಾಣಸಿ ವಂದೇ ಭಾರತ್‌ ರೈಲು ಸೇರಿದಂತೆ ಒಟ್ಟು 4 ರೈಲುಗಳಿಗೆ ಸೋಮವಾರ ಪ್ರಧಾನಿ ಮೋದಿ ಹಸುರು ನಿಶಾನೆ ತೋರಿದ್ದಾರೆ. ಕೇಸರಿ ಬಣ್ಣದ ವಂದೇ ಭಾರತ್‌ ರೈಲಿನಲ್ಲಿ ವೈಫೈ, ಜಿಪಿಎಸ್‌ ಆಧರಿತ ಮಾಹಿತಿ ವ್ಯವಸ್ಥೆ, ಜೈವಿಕ ಶೌಚಾಲಯ, ಪ್ರತೀ ಸೀಟಿಗೂ ಚಾರ್ಜಿಂಗ್‌ ಪಾಯಿಂಟ್‌ ಸೇರಿ ಅತ್ಯಾಧುನಿಕ ಸೌಲಭ್ಯಗಳಿವೆ. ಇದೇ ವೇಳೆ ದೀನ್‌ ದಯಾಳ್‌ ಉಪಾಧ್ಯಾಯ್‌ ಜಂಕ್ಷನ್‌ನಿಂದ ಭಾವ್‌ಪುರ ಜಂಕ್ಷನ್‌ವರೆಗಿನ ಫ್ರೈಟ್‌ ಕಾರಿಡಾರ್‌ಗೂ ಚಾಲನೆ ನೀಡಿದ್ದಾರೆ. 10,903 ಕೋಟಿ ರೂ. ವೆಚ್ಚದಲ್ಲಿ ಇದು ನಿರ್ಮಾಣವಾಗಿದೆ.

ಸ್ವರವೇದ ಮಂದಿರದ ವೈಶಿಷ್ಟ್ಯ
7 ಮಹಡಿಗಳು, 20,000 ಆಸನ ಸಾಮರ್ಥ್ಯ, 3,00,000 ಚ.ಅಡಿ.: ಒಟ್ಟು ವ್ಯಾಪ್ತಿ

ಮೋದಿಯ ಗ್ಯಾರಂಟಿ ವಾಹನವು ದೇಶಾದ್ಯಂತ ಸೂಪರ್‌ಹಿಟ್‌ ಆಗುತ್ತಿದೆ. ಜನರ ಸ್ಪಂದನೆಯು ದೇಶವನ್ನು 2047ರ ವೇಳೆಗೆ ಅಭಿವೃದ್ಧಿಯ ಉತ್ತುಂಗಕ್ಕೇರಿಸಲಿದೆ.
ನರೇಂದ್ರ ಮೋದಿ, ಪ್ರಧಾನಿ

ದೇಶವಾಸಿಗಳಿಗೆ ಮೋದಿಯಿಂದ 9 ಆಗ್ರಹ
ಸ್ವರವೇದ ಮಂದಿರ ಉದ್ಘಾಟನೆ ವೇಳೆ ಮಾತನಾಡಿದ ಪ್ರಧಾನಿ ಮೋದಿ, “9 ಸಂಕಲ್ಪಗಳು ಮತ್ತು 9 ಆಗ್ರಹಗಳನ್ನು’ ಜನರ ಮುಂದಿಟ್ಟಿದ್ದಾರೆ. ನೀರು ಸಂರಕ್ಷಣೆ, ಡಿಜಿಟಲ್‌ ವಹಿವಾಟಿಗೆ ಪ್ರೇರಣೆ, ಸ್ವತ್ಛತೆಗೆ ಆದ್ಯತೆ, ಸ್ಥಳೀಯ ಉತ್ಪನ್ನಗಳಿಗೆ ಉತ್ತೇಜನ, ಸಾಧ್ಯವಾದಷ್ಟು ದೇಶದೊಳಗೇ ಪ್ರವಾಸ, ನೈಸರ್ಗಿಕ ಕೃಷಿಗೆ ಪ್ರೋತ್ಸಾಹ, ದಿನನಿತ್ಯ ಸಿರಿಧಾನ್ಯಗಳ ಬಳಕೆ, ಯೋಗ-ಕ್ರೀಡೆಯಂಥ ಫಿಟೆ°ಸ್‌ ವಿಧಾನಗಳ ಅಳವಡಿಕೆ, ಬಡ ಕುಟುಂಬಕ್ಕೆ ನೆರವು. ಈ 9 ಆಗ್ರಹಗಳನ್ನು ಪೂರೈಸುವಂತೆ ಮೋದಿ ಕರೆ ನೀಡಿದ್ದಾರೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

7

Crime: ಸೈನೈಡ್ ಮಿಶ್ರಿತ ಜ್ಯೂಸ್‌ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್‌ ಅರೆಸ್ಟ್

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.