Encounter: ಯೋಧ ಹುತಾತ್ಮ, ಉಗ್ರನೊಬ್ಬ ಹತ
Team Udayavani, Jul 24, 2024, 11:18 PM IST
ಶ್ರೀನಗರ: ಜಮ್ಮು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಯೋಧ ಹುತಾತ್ಮರಾಗಿದ್ದು, ಉಗ್ರನೊಬ್ಬ ಹತನಾಗಿದ್ದಾನೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಉಗ್ರರ ಚಲನವಲನದ ಹಿನ್ನೆಲೆಯಲ್ಲಿ ಕಾಶ್ಮೀರ ಪೊಲೀಸರು ಮತ್ತು ಸೇನೆ ಕುಪ್ವಾರಾದ ಲೋಲಬ್ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿದೆ. ಮಂಗಳ ವಾರ ಉಗ್ರರ ಅಡಗುತಾಣವನ್ನು ಪತ್ತೆ ಹಚ್ಚಿದ ಬಳಿಕ ಯೋಧರು, ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಒಬ್ಬ ಉಗ್ರನನ್ನು ಹತ್ಯೆ ಮಾಡ ಲಾಗಿದ್ದರೆ, ಯೋಧ ಲ್ಯಾನ್ಸ್ ನಾಯಿಕ್ ಸುಭಾಶ್ ಚಂದೇರ್ ತೀವ್ರವಾಗಿ ಗಾಯ ಗೊಂಡಿದ್ದು, ಬಳಿಕ ಅಸುನೀಗಿದರು.
ತಿಂಗಳಲ್ಲಿ 10 ಯೋಧರು ಹುತಾತ್ಮ: ಕುಪ್ವಾರಾ ಜಿಲ್ಲೆಯಲ್ಲಿ ಯೋಧ ಹುತಾತ್ಮ ರಾಗುವುದರೊಂದಿಗೆ, ಒಂದೇ ತಿಂಗಳಲ್ಲಿ 10 ಯೋಧರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದಂತಾಗಿದೆ. ಕಾಶ್ಮೀರ ಭಾಗದಲ್ಲಿ ಕಡಿಮೆಯಾಗಿದ್ದ ಉಗ್ರ ಚಟುವಟಿಕೆಗಳು ಇತ್ತೀಚೆಗೆ ಜಮ್ಮು ವಲಯದಲ್ಲಿ ಹೆಚ್ಚಾಗಿ ನಡೆಯುತ್ತಿವೆ. ಹೀಗಿದ್ದಾಗ್ಯೂ, ಜಮ್ಮು ವಿನಲ್ಲಿ ಉಗ್ರ ಚಟುವಟಿಕೆಗಳನ್ನು ನಿಯಂತ್ರಿಸಲು ಹೆಚ್ಚಿನ ಸೇನೆ ನಿಯೋಜನೆ ಮಾಡುವುದಾಗಿ ಇತ್ತೀ ಚೆಗೆಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್ಡಿಎ ಬದ್ಧ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.