![Lalu](https://www.udayavani.com/wp-content/uploads/2025/02/Lalu-2-415x282.jpg)
![Lalu](https://www.udayavani.com/wp-content/uploads/2025/02/Lalu-2-415x282.jpg)
Team Udayavani, Jun 17, 2023, 12:33 PM IST
ನಾಗ್ಪುರ: ರಾಜಕಾರಣಿಯೊಬ್ಬರು ಒಮ್ಮೆ ಕಾಂಗ್ರೆಸ್ ಸೇರಲು ಆಫರ್ ನೀಡಿದ್ದರು. ಆ ಪಕ್ಷದ ಸದಸ್ಯನಾಗುವುದಕ್ಕಿಂತ ಬಾವಿಗೆ ಹಾರಿ ಸಾಯುವುದೇ ಮೇಲು ಎಂದು ಕೇಂದ್ರ ಸಚಿವ ,ಬಿಜೆಪಿ ಹಿರಿಯ ನಾಯಕ ನಿತಿನ್ ಗಡ್ಕರಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ 9 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಸಭೆಯೊಂದರಲ್ಲಿ ಮಾತನಾಡಿದ ಅವರು , ಕಾಂಗ್ರೆಸ್ ತನ್ನ 60 ವರ್ಷಗಳ ಆಡಳಿತದಲ್ಲಿ ಮಾಡಲಾಗದ ಕೆಲಸ ಕಳೆದ 9 ವರ್ಷಗಳಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಸರ್ಕಾರವು ದೇಶದಲ್ಲಿ ದುಪ್ಪಟ್ಟು ಕೆಲಸ ಮಾಡಿದೆ ಎಂದರು.
ಬಿಜೆಪಿಗಾಗಿ ಕೆಲಸ ಮಾಡಿದ ತಮ್ಮ ಆರಂಭಿಕ ದಿನಗಳನ್ನು ನೆನಪಿಸಿಕೊಂಡರು. ತಾವು ವಿದ್ಯಾರ್ಥಿ ನಾಯಕರಾಗಿದ್ದಾಗ ಉತ್ತಮ ಭವಿಷ್ಯಕ್ಕಾಗಿ ಕಾಂಗ್ರೆಸ್ ಸೇರುವಂತೆ ಶ್ರೀಕಾಂತ್ ಜಿಚ್ಕರ್ ಕೇಳಿಕೊಂಡಿದ್ದರು ಎಂದು ಗಡ್ಕರಿ ಹಳೆಯ ಘಟನೆಯನ್ನು ನೆನಪಿಸಿಕೊಂಡರು. ಆಗ ಶ್ರೀಕಾಂತ್ಗೆ ಹೇಳಿದ್ದೆ, ನಾನು ಬಾವಿಗೆ ಹಾರಿ ಸಾಯುತ್ತೇನೆಯೇ ಹೊರತು ಕಾಂಗ್ರೆಸ್ಗೆ ಸೇರುವುದಿಲ್ಲ. ಏಕೆಂದರೆ ನನಗೆ ಕಾಂಗ್ರೆಸ್ ಪಕ್ಷದ ಸಿದ್ಧಾಂತ ಇಷ್ಟವಿಲ್ಲ ಎಂದು ಗಡ್ಕರಿ ಹೇಳಿದರು.
ಭಾರತವನ್ನು ಆರ್ಥಿಕ ಮಹಾಶಕ್ತಿಯನ್ನಾಗಿ ಮಾಡುವ ಮೋದಿ ಅವರ ದೃಷ್ಟಿಕೋನಕ್ಕೆ ಶ್ಲಾಘಿಸಿದ ಅವರು “ದೇಶದ ಭವಿಷ್ಯವು ತುಂಬಾ ಉಜ್ವಲವಾಗಿದೆ” ಎಂದರು.
ಬಿಜೆಪಿಯ ಸಿದ್ಧಾಂತದಲ್ಲಿ ಬಲವಾದ ನಂಬಿಕೆಯನ್ನು ಹೊಂದಿದ್ದೇನೆ ಅದಕ್ಕಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇನೆ ಎಂದು ಹೇಳಿದರು.
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
You seem to have an Ad Blocker on.
To continue reading, please turn it off or whitelist Udayavani.