ತಂದೆಯನ್ನೇ ಇರಿದು ಕೊಂದ ಮಾಜಿ ಅಧಿಕಾರಿ, ಮನೆಗೆ ಬೆಂಕಿಹಚ್ಚಿ ಡ್ರಾಮಾ


Team Udayavani, Jan 9, 2017, 12:09 PM IST

Matta-700.jpg

ಹೊಸದಿಲ್ಲಿ : ಅತ್ಯಂತ ಭಯಾನಕ ಪ್ರಕರಣವೊಂದರಲ್ಲಿ, ಸೇವೆಯಿಂದ ವಜಾಗೊಂಡಿದ್ದ,  ಮರ್ಚಂಟ್‌ ನೇವಿಯ ಮಾಜಿ ಅಧಿಕಾರಿಯೋರ್ವ ತನ್ನ ತಂದೆಯನ್ನು ಹಲವು ಬಾರಿ ಮಾರಣಾಂತಿಕವಾಗಿ ಇರಿದು, ಬಳಿಕ ಗ್ಯಾಸ್‌ ಸಿಲಿಂಡರ್ ಸ್ಫೋಟಿಸಿ ಮನೆಯನ್ನೇ ಸುಟ್ಟು ಹಾಕಲು ಯತ್ನಿಸುವ ಮೂಲಕ ಆತ್ಮಹತ್ಯೆಗೆ ಯತ್ನಿಸಿ ಬಂಧಿತನಾದ ಘಟನೆ ವರದಿಯಾಗಿದೆ.

ಈ ಘಟನೆ ನಿನ್ನೆ ಭಾನುವಾರ ಇಲ್ಲಿ ನಡೆದಿದೆ. ಆರೋಪಿಯು ಹರಿತವಾದ ಆಯುಧದೊಂದಿಗೆ ತನ್ನ ತಂದೆಯ ಮನೆಯನ್ನು ಪ್ರವೇಶಿಸಿ ಆತನನ್ನು ಹಲವು ಬಾರಿ ಇರಿದಿದ್ದಾನೆ. ಆರೋಪಿಯನ್ನು ರಾಹುಲ್‌ ಮಟ್ಟಾ ಎಂದು ಗುರುತಿಸಲಾಗಿದೆ. ಈತನಿಗೆ ಮನೋ ಖನ್ನತೆಯಿದ್ದು ಕ್ರಿಮಿನಲ್‌ ಇತಿಹಾಸವನ್ನೂ ಹೊಂದಿದ್ದಾನೆ. ಕಳೆದ ವರ್ಷ ಪೂರ್ವ ದಿಲ್ಲಿಯಲ್ಲಿ ಆತ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿ ದಿಲ್ಲಿ ಪೊಲೀಸರಿಂದ ಬಂಧಿತನಾಗಿದ್ದ. 

ರಾಹುಲ್‌ನ ತಂದೆ ಆರ್‌ ಪಿ ಮಟ್ಟಾ, ಹಣಕಾಸು ವಲಯದ ನಿವೃತ್ತ ನೌಕರ. ಈಚೆಗಷ್ಟೇ ಇವರು ಕೆನಡದಿಂದ ಇಲ್ಲಿಗೆ ಮರಳಿದ್ದರು. ಇವರು ತಮ್ಮ ಪತ್ನಿ ರೇಣು ಮಟ್ಟಾ ಅವರೊಂದಿಗೆ ಬೇರೊಂದು ಫ್ಲಾಟ್‌ನಲ್ಲಿ ವಾಸಿಸಿಕೊಂಡಿದ್ದಾರೆ. ಮಗನೊಂದಿಗೆ ಹಲವಾರು ವಿಷಯಗಳಲ್ಲಿ ಸರಿ ಬಾರದ ಕಾರಣಕ್ಕೆ ಈ ದಂಪತಿ ಮಗನಿಂದ ದೂರವಾಗಿ, ಆತ ತಮ್ಮ ಮನೆ ಮತ್ತು ತಮ್ಮ ಫ್ಲಾಟ್‌ ಇರುವ ಕಟ್ಟಡವನ್ನು ಪ್ರವೇಶಿಸದಂತೆ ನಿರ್ಬಂಧಿಸಿದ್ದಾರೆ.

ನಿನ್ನೆ ಭಾನುವಾರ ತಂದೆಯೊಂದಿಗಿನ ವೈಷಮ್ಯದಲ್ಲಿ ಅವರ ಮನೆಯನ್ನು ಪ್ರವೇಶಿಸಿದ ರಾಹುಲ್‌, ಸಿಟ್ಟಿನ ಪರಾಕಾಷ್ಠೆಯಲ್ಲಿ ಹರಿತವಾದ ಚೂರಿಯಿಂದ ತಂದೆಯ ಕುತ್ತಿಗೆಯನ್ನು ಸೀಳಿರುವುದಾಗಿ ಆರೋಪಿಸಲಾಗಿದೆ.

ರಾಹುಲ್‌ ಈಚೆಗೆ ಎರಡು ಮಕ್ಕಳಿಸುವ ವಿಚ್ಛೇದಿತ ಮಹಿಳೆಯನ್ನು ವಿವಾಹವಾಗಿದ್ದ . ಇದಕ್ಕೆ ಆತನ ಹೆತ್ತವರ ಒಪ್ಪಿಗೆ ಇರಲಿಲ್ಲ. ಹಾಗಾಗಿಯೂ ಅಪ್ಪ – ಮಗನ ನಡುವಿನ ಸಂಬಂಧ ಸರಿ ಇರಲಿಲ್ಲ. 

ನಿನ್ನೆ ಭಾನುವಾರ ರಾಹುಲ್‌, ತನ್ನ ತಂದೆ ವಾಸವಾಗಿರುವ ಫ್ಲಾಟ್‌ನ ಕಟ್ಟಡವನ್ನು ಪ್ರವೇಶಿಸಿದ್ದ. ಸೆಕ್ಯುರಿಟಿ ಗಾರ್ಡ್‌ಗಳು ಆತನನ್ನು ತಡೆದಿದ್ದರು. ಮಾತಿನ ಜಗಳದ ನಡುವೆ ಫ್ಲಾಟ್‌ ಕಟ್ಟಡದ ಕಾರ್ಯದರ್ಶಿ ಬಂದು ರಾಹುಲ್‌ನನ್ನು ಹೊರಗೆ ಕಳುಹಿಸಲು ಯತ್ನಿಸಿದ್ದರು. ಸಿಟ್ಟಿಗೆದ್ದ ರಾಹುಲ್‌ ತನ್ನಲ್ಲಿನ ಚೂರಿಯಿಂದ ಗಾರ್ಡ್‌ ಹಾಗೂ ಕಾರ್ಯದರ್ಶಿ ಮೇಲೆ ಹಲ್ಲೆ ಮಾಡಿ ಗಾಯಗೊಳಿಸಿದ್ದ. ಒಡನೆಯೇ ಆರ್‌ ಪಿ ಮಟ್ಟಾ ಅವರನ್ನು ಕರೆಸಿಕೊಳ್ಳಲಾಯಿತು. 

ಮಟ್ಟಾ ಬಂದೊಡನೆಯೇ ರಾಹುಲ್‌ ಅವರೊಂದಿಗೆ ಜಗಳಕ್ಕಿಳಿದು ಗಾರ್ಡ್‌ ಕೋಣೆಯಲ್ಲೇ ಅವರನ್ನು ಹಲವು ಬಾರಿ ಇರಿದ. ತತ್‌ಕ್ಷಣವೇ ಪೊಲೀಸರನ್ನು ಕರೆಸಲಾಯಿತು. ಪೊಲೀಸರನ್ನು ಕಾಣುತ್ತಲೇ ರಾಹುಲ್‌ ಇದೇ ಅಪಾರ್ಟ್‌ಮೆಂಟ್‌ನಲ್ಲಿರುವ ತನ್ನ ಗೆಳೆಯ ಶರ್ಮಾ ಅವರ ಮನೆಯೊಳಗೆ ನುಗ್ಗಿ ಅವಿತುಕೊಂಡ. 

ಅಲ್ಲಿಗೂ ಪೊಲೀಸರು ಬಂದಾಗ ರಾಹುಲ್‌ ಅಡುಗೆ ಕೋಣೆಯೊಳಗೆ ಹೋಗಿ ಬೋಲ್ಟ್ ಹಾಕಿಕೊಂಡು ಗ್ಯಾಸ್‌ ಉರಿಸಿದ. ಸಿಲಿಂಡರ್‌ ಸ್ಫೋಟಗೊಳ್ಳುವಂತೆ ಮಾಡಿದ. ಪೊಲೀಸರು ಬಾಗಿಲು ಒಡೆದು ಒಳಪ್ರವೇಶಿಸಿದರು. ಸಿಲಿಂಡರ್‌ ಸ್ಫೋಟದಿಂದಾಗಿ ರಾಹುಲ್‌ ಸಹಿತ 11 ಮಂದಿ ಪೊಲೀಸರು ಸುಟ್ಟಗಾಯಗಳಿಗೆ ಗುರಿಯಾದರು. ಒಟ್ಟು 13 ಮಂದಿಗೆ ಸುಟ್ಟ ಗಾಯಗಳಾಗಿವೆ. ಹಾಗಿದ್ದರೂ ಪೊಲೀಸರು ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಮುನ್ನುಗ್ಗಿ ರಾಹುಲ್‌ನನ್ನು ಸೆರೆ ಹಿಡಿದರು ಎಂದು ದಿಲ್ಲಿ ಪೂರ್ವ ಡಿಸಿಪಿ ಓಂವೀರ್‌ ಬಿಷ್‌ನೋಯ್‌  ತಿಳಿಸಿದ್ದಾರೆ.

ಗಾಯಾಳುಗಳಲ್ಲಿ ನಾಲ್ವರು ಎಸ್‌ಐಗಳಿಗೆ ಶೇ.30ರಿಂದ ಶೇ.40ರಷ್ಟು ಸುಟ್ಟಗಾಯಗಳಾಗಿವೆ. ಒಬ್ಬ ಎಎಸ್‌ಐಗೆ ಶೇ.25ರಷ್ಟು ಗಾಯಗಳಾಗಿವೆ ಎಂದವರು ತಿಳಿಸಿದರು. 

ರಾಹುಲ್‌ ಕುಟುಂಬದಲ್ಲಿ ಕಳೆದ 9 ತಿಂಗಳಿಂದಲೂ ಗಲಾಟೆ ನಡೆಯುತ್ತಿತ್ತು ಎಂದು ತನಿಖೆಯಿಂದ ಗೊತ್ತಾಗಿದೆ. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. 

ಟಾಪ್ ನ್ಯೂಸ್

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.