ವಿಮಾನದಲ್ಲೂ ಇನ್ನು ವೈಫೈ


Team Udayavani, May 3, 2018, 12:00 AM IST

Air-India-Flight-900.jpg

ಹೊಸದಿಲ್ಲಿ: ಭಾರತದಲ್ಲಿನ್ನು ವಿಮಾನದಲ್ಲಿ ಸಂಚರಿಸುವಾಗ ಪ್ರಯಾಣಿಕರು ತಮ್ಮ ಮೊಬೈಲ್‌ ಗ‌ಳನ್ನು ಸುಮ್ಮನೆ ಜೇಬಿನಲ್ಲಿಟ್ಟುಕೊಳ್ಳಬೇಕಿಲ್ಲ. ಇತರ ದೇಶಗಳಲ್ಲಿ ಹಾರಾಡುವಾಗಿನಂತೆಯೇ ವೈಫೈ ಹಾಗೂ ಇಂಟರ್‌ ನೆಟ್‌ ಸೌಲಭ್ಯ ಭಾರತದಲ್ಲೂ ಸಿಗಲಿದೆ. ಇದಕ್ಕೆ ಸಂಬಂಧಿಸಿದ ಪ್ರಸ್ತಾವನೆಗೆ ಕೇಂದ್ರ ಸರಕಾರದ ಟೆಲಿಕಾಂ ಆಯೋಗ ಸಮ್ಮತಿ ನೀಡಿದೆ.

ಮುಂದಿನ 3-4 ತಿಂಗಳಲ್ಲಿ ಈ ಸೇವೆ ಪ್ರಯಾಣಿಕರಿಗೆ ಲಭ್ಯವಾಗಲಿದೆ. ಟೆಲಿಕಾಂ ಕಂಪೆನಿಗಳು, ವಿಮಾನಯಾನ ಸಂಸ್ಥೆಗಳು ಇದಕ್ಕೆ ಸೂಕ್ತ ತಯಾರಿ ಮಾಡಿಕೊಳ್ಳಬೇಕಿರುತ್ತದೆ. ಅಷ್ಟೇ ಅಲ್ಲ, ಪ್ರಯಾಣಿಕರು ವೈಫೈಗಾಗಿ ಹೆಚ್ಚುವರಿ ವೆಚ್ಚವನ್ನೂ ತೆರಬೇಕಾಗುತ್ತದೆ. ಮುಂದಿನ ದಿನಗಳಲ್ಲಿ ಪದೇ ಪದೆ ವಿಮಾನ ಪ್ರಯಾಣ ಮಾಡುವವರಿಗೆ ಟೆಲಿಕಾಂ ಸಂಸ್ಥೆಗಳು ವಿಶೇಷ ಪ್ಯಾಕೇಜ್‌ ಗಳನ್ನೂ ಘೋಷಿಸಬಹುದಾಗಿದೆ.

ಈ ಸೌಲಭ್ಯವನ್ನು ವಿಮಾನಯಾನ ಸಂಸ್ಥೆ ಒದಗಿಸಿದರೆ ವಿಮಾನವು 3 ಸಾವಿರ ಮೀಟರ್‌ ಎತ್ತರಕ್ಕೆ ಏರುತ್ತಿದ್ದಂತೆಯೇ ಪ್ರಯಾಣಿಕರು ವೈಫೈಗೆ ಸಂಪರ್ಕ ಸಾಧಿಸಬಹುದಾಗಿದೆ. ಸಾಮಾನ್ಯವಾಗಿ ವಿಮಾನ 3 ಸಾವಿರ ಮೀಟರ್‌ ಏರಲು 4-5 ನಿಮಿಷ ಬೇಕು. ಅಷ್ಟೇ ಅಲ್ಲ, ವೈಫೈ ಮೂಲಕ ಇಂಟರ್‌ ನೆಟ್‌ ಕರೆಗಳನ್ನೂ ಮಾಡಬಹುದು.

ಅಂದರೆ ವಾಟ್ಸ್‌ಆ್ಯಪ್‌, ಸ್ಕೈಪ್‌ ಮೂಲಕ ಮೊಬೈಲ್‌ಗ‌ಳಿಗೆ ಕರೆ ಮಾಡಬಹುದಾಗಿದೆ. ಈ ವೇಳೆ ಮೊಬೈಲ್‌ನ ಏರ್‌ಪ್ಲೇನ್‌ ಮೋಡ್‌ ಆಫ್ ಮಾಡಬೇಕು. ಸಾಮಾನ್ಯವಾಗಿ ವಿಮಾನ ಪ್ರಯಾಣದಲ್ಲಿ ಮೊಬೈಲ್‌ ನ ಏರ್‌ ಪ್ಲೇನ್‌ ಮೋಡ್‌ ಆನ್‌ ಮಾಡಬೇಕಾಗುತ್ತದೆ. ಈ ಸೌಲಭ್ಯವನ್ನು ಪ್ರಯಾಣಿಕರಿಗೆ ಒದಗಿಸಲು ವಿಮಾನಯಾನ ಸಂಸ್ಥೆಗಳು ಭಾರೀ ವೆಚ್ಚ ಮಾಡಬೇಕಿದೆ ಎಂದು ಹೇಳಲಾಗಿದೆ. ಆದರೆ ಈ ಸೇವೆ ಅತ್ಯಂತ ಮಹತ್ವದ್ದಾಗಿದ್ದು, ಅಂತಾರಾಷ್ಟ್ರೀಯ ವಿಮಾನಯಾನ ಸಂಸ್ಥೆಗಳಿಗೆ ಭಾರತೀಯ ಸಂಸ್ಥೆಗಳು ಪೈಪೋಟಿ ನೀಡಬಹುದಾಗಿದೆ. ವಿಶ್ವದ 30ಕ್ಕೂ ಹೆಚ್ಚು ವಿಮಾನಯಾನ ಸಂಸ್ಥೆಗಳು ಸದ್ಯ ಇಂಟರ್‌ನೆಟ್‌ ಹಾಗೂ ಕರೆಗಳ ಸೌಲಭ್ಯವನ್ನು ಪ್ರಯಾಣಿಕರಿಗೆ ಒದಗಿಸುತ್ತಿವೆ.

ಟೆಲಿಕಾಂ ಒಂಬುಡ್ಸ್‌ ಮನ್‌ ರಚನೆ
ಟೆಲಿಕಾಂ ಕಂಪೆನಿಗಳಿಗೆ ಸಂಬಂಧಿಸಿದ ದೂರುಗಳನ್ನು ನಿರ್ವಹಿಸಲು ಟೆಲಿಕಾಂ ಒಂಬುಡ್ಸ್‌ ಮನ್‌ ರಚನೆಗೂ ಟೆಲಿಕಾಂ ಆಯೋಗ ನಿರ್ಧರಿಸಿದೆ. ಇಲಾಖೆಗೆ ಪ್ರತಿ 3 ತಿಂಗಳಿಗೆ 1 ಕೋಟಿ ದೂರುಗಳು ಬರುತ್ತವೆ. ಹೀಗಾಗಿ ದೂರು ನಿರ್ವಹಣೆಗೆ ಹೆಚ್ಚುವರಿ ಅಧಿಕಾರ ಅಗತ್ಯವಿದೆ ಎಂದು ಟ್ರಾಯ್‌ ಆಗ್ರಹಿಸಿತ್ತು. ಶೀಘ್ರದಲ್ಲೇ ಟ್ರಾಯ್‌ ಕಾಯ್ದೆಗೆ ತಿದ್ದುಪಡಿ ತಂದು, ಒಂಬುಡ್ಸ್‌ ಮನ್‌ ಕಾರ್ಯನಿರ್ವಹಣೆಯ ರೂಪುರೇಷೆ ಸಿದ್ಧಪಡಿಸಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರತ್ಯೇಕ ಲೈಸೆನ್ಸ್‌ ನೀಡಲು ಕೇಂದ್ರ ನಿರ್ಧಾರ
ವಿಮಾನದಲ್ಲಿ ವೈಫೈ ಸೇವೆ ಒದಗಿಸುವುದಕ್ಕಾಗಿಯೇ ಸಂಸ್ಥೆಗಳಿಗೆ ಪ್ರತ್ಯೇಕ ಲೈಸೆನ್ಸನ್ನು ಸರಕಾರ ಒದಗಿಸಲಿದೆ. ಈ ಪ್ರಕ್ರಿಯೆ ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ಟೆಲಿಕಾಂ ಇಲಾಖೆ ಹೇಳಿದೆ. ಈ ಸೇವಾ ಪೂರೈಕೆದಾರರಿಗೆ ವಾರ್ಷಿಕ 1 ರೂ. ಶುಲ್ಕ ವಿಧಿಸಲಾಗುತ್ತದೆ. ಇಂಟರ್ನೆಟ್‌ ದರವನ್ನು ಸರಕಾರ ನಿಯಂತ್ರಿಸುವುದಿಲ್ಲ.

ಈ ಸೌಲಭ್ಯ ದೇಶೀಯ ಪ್ರಯಾಣದಲ್ಲಿ ಬಳಕೆಯಾಗುವುದಕ್ಕಿಂತ ಹೆಚ್ಚಾಗಿ, ವಿದೇಶಕ್ಕೆ ಪ್ರಯಾಣಿಸುವವರಿಗೆ ಅನುಕೂಲವಾಗಲಿದೆ. 2-3 ಗಂಟೆಗಳ ಪ್ರಯಾಣದಲ್ಲಿ ವೈಫೈಗಾಗಿ 200 ರಿಂದ 300 ರೂ. ವೆಚ್ಚ ಮಾಡಲು ಜನರು ಇಷ್ಟಪಡುವುದಿಲ್ಲ.
– ಅಂಬರ್‌ ದುಬೆ, ಕೆಪಿಎಂಜಿ ಇಂಡಿಯಾ ಮುಖ್ಯಸ್ಥ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.