ಮಾಸ್ಕ್ ಧರಿಸದವರ ವಿರುದ್ಧ ಬಿಎಂಸಿ ಅಭಿಯಾನ : ಒಂದೇ ದಿನ 26.47 ಲಕ್ಷ ರೂ. ದಂಡ ಸಂಗ್ರಹ


Team Udayavani, Dec 27, 2020, 12:13 PM IST

ಮಾಸ್ಕ್ ಧರಿಸದವರ ವಿರುದ್ಧ ಬಿಎಂಸಿ ಅಭಿಯಾನ : ಒಂದೇ ದಿನ 26.47 ಲಕ್ಷ ರೂ. ದಂಡ ಸಂಗ್ರಹ

ಮುಂಬಯಿ, ಡಿ. 26: ಒಂದೆಡೆ ಕೋವಿಡ್  ಸೋಂಕನ್ನು ಹತೋಟಿಗೆ ತರಲು ಮುಂಬಯಿ ಮಹಾನಗರ ಪಾಲಿಕೆಯ ಹಗಲಿರುಳು ಶ್ರಮಿಸುತ್ತಿದ್ದರೆ, ಇನ್ನೊಂದೆಡೆ ಮಾಸ್ಕ್ ಧರಿಸದೆ ತಿರುಗಾಡುವವರ ಸಂಖ್ಯೆಯು ದಿನೇ ದಿನೇ ಹೆಚ್ಚುತ್ತಿರುವುದು ಮುಂಬಯಿ ಮಹಾನಗರ ಪಾಲಿಕೆಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ನಗರದ ವಿವಿಧ ವಾರ್ಡ್‌ಗಳಿಂದ ಪ್ರತಿದಿನ 24,000ಕ್ಕೂ ಹೆಚ್ಚು ಮಂದಿಗೆ ಮುಂಬಯಿ ಮನಪಾವು ದಂಡ ವಿಧಿಸುತ್ತಿದ್ದು, ಮಾರ್ಗಸೂಚಿಗಳನ್ನು ಉಲ್ಲಂಘಿಸುವವರಿಗೆ ದಂಡ ವಿಧಿಸುವ ಗುರಿಯ ಶೇ. 55ರಿಂದ ಶೇ. 60ರಷ್ಟು ಸಾಧ್ಯವಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕೋವಿಡ್ ವೈರಸ್‌ ವಿರುದ್ಧ ರಕ್ಷಣಾತ್ಮಕ ಸಾಧನಗಳಿಲ್ಲದೆ ಹೊರಗಡೆ ತಿರುಗಾಡುತ್ತಿದ್ದ 13,235 ಮಂದಿಯಿಂದ ಬಿಎಂಸಿ 26.47 ಲಕ್ಷ ರೂ. ಗಳ ದಂಡವನ್ನು ಶುಕ್ರವಾರ ಒಂದೇ ದಿನ ಸಂಗ್ರಹಿಸಿದೆ. ಮಾರ್ಚ್‌ನಲ್ಲಿಕೊರೊನಾ ಸೋಂಕು ಹರಡಿದ ಬಳಿಕ ಮಾಸ್ಕ್ ಧರಿಸದೆ ತಿರುಗಾಡಿ ದಂಡಕ್ಕೆ ಗುರಿಯಾದವರ ಸಂಖ್ಯೆ 8.33 ಲಕ್ಷಕ್ಕೆ ಏರಿಕೆಯಾಗಿದೆ. ಕಳೆದ ಒಂದು ತಿಂಗಳಲ್ಲಿ 8 ಕೋಟಿ ರೂ. ಗಳ ದಂಡ ಸಂಗ್ರಹಿಸಲಾಗಿದ್ದು, ಈ ವರೆಗೆ ಮುಂಬಯಿ ಮಹಾನಗರ ಪಾಲಿಕೆಯು 17 ಕೋ. ರೂ. ಗಳ ದಂಡ ಸಂಗ್ರಹಿಸಿದೆ ಎಂದು ಮೂಲಗಳು ತಿಳಿಸಿವೆ.

ಕಳೆದ ಕೆಲವು ವಾರಗಳಲ್ಲಿ ನಗರವು ಕೋವಿಡ್‌ ಪ್ರಕರಣಗಳಲ್ಲಿ ಏರಿಕೆಯನ್ನು ದಾಖಲಿಸಿಲ್ಲವಾದರೂ, ಯುಕೆಯಲ್ಲಿ ವೇಗವಾಗಿ ಹರಡುವ ರೋಪಾಂತರಿತ ಸೋಂಕಿನಿಂದ ಎಚ್ಚೆತ್ತುಕೊಂಡಿರುವ ಬಿಎಂಸಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.  ಮಧ್ಯರಾತ್ರಿ ನಮ್ಮ ಮಾರ್ಷಲ್‌ಗ‌ಳು ನಿಯಮಿತವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಮಧ್ಯೆ ಅವರು ನಾಗರಿಕರಿಂದಲೂ ಕಿರುಕುಳಕ್ಕೊಳಗಾಗುತ್ತಿದ್ದಾರೆ. ಕೆಲವು ಮಾರ್ಷಲ್‌ಗ‌ಳ ವಿರುದ್ಧ ನಾಗರಿಕರು ಹಲ್ಲೆ ಮಾಡಿರುವ ಪ್ರಕರಣಗಳೂ ಇವೆ.

ನಾಗರಿಕ ಮುಖ್ಯಸ್ಥ ಇಕ್ಬಾಲ್‌ ಸಿಂಗ್‌ ಚಾಹಲ್‌ ಅವರು  ರಸ್ತೆಗಳು, ಮಾರುಕಟ್ಟೆಗಳು ಮತ್ತು ಉದ್ಯಾನವನಗಳಂತಹ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ಗಳಿಲ್ಲದೆ ಸಂಚರಿಸುವವರ ವಿರುದ್ಧ ಕಠಿನ ಕ್ರಮ ಕೈಗೊಳ್ಳುವಂತೆ ತಂಡಕ್ಕೆ ನಿರ್ದೇಶಿಸಿದ ಬಳಿಕ ಸೆಪ್ಟಂಬರ್‌ನಿಂದ ಅಭಿಯಾನವನ್ನು ಪ್ರಾರಂಭಿಸಲಾಯಿತು. ನವೆಂಬರ್‌ನಿಂದ ಅಭಿಯಾನಕ್ಕೆ ಮತ್ತಷ್ಟು ಚುರುಕು ನೀಡಲಾಯಿತು. ಮಾರ್ಷಲ್‌ಗ‌ಳ ಹೊರತಾಗಿ ಮುಂಬಯಿಯಾದ್ಯಂತ ಬಿಎಂಸಿ ಅಧಿಕಾರಿಗಳನ್ನು ನಿಯೋಜಿಸಿದೆ.

ಮಾಸ್ಕ್ ಧರಿಸುವುದು ಅತ್ಯಗತ್ಯ :

ನಾಅಗರಿಕರು ನಮ್ಮೊಂದಿಗೆ ಸಹಕರಿಸುವುದು ಮತ್ತು ಮನೆಯಿಂದ ಹೊರಗಡೆ ಹೋಗುವಾಗ ಮಾಸ್ಕ್ ಧರಿಸುವುದು ಮುಖ್ಯವಾಗಿದೆ ಎಂದು ಮುಂಬಯಿ ಮಹಾನಗರ ಪಾಲಿಕೆಯ ಅಧಿಕಾರಿ ಹೇಳಿದ್ದಾರೆ. ಅಂಧೇರಿ, ಜೋಗೇಶ್ವರಿ ಮತ್ತು ವಿಲೇ ಪಾರ್ಲೆ ವೆಸ್ಟ್‌ ಅನ್ನು ಒಳಗೊಂಡಿರುವ ಕೆ ವೆಸ್ಟ್‌ ವಾರ್ಡ್‌ನಲ್ಲಿ ಅತೀ ಹೆಚ್ಚು 55,232 ಪ್ರಕರಣಗಳು ದಾಖಲಾಗಿವೆ. ಎಲ್‌ ವಾರ್ಡ್‌ನಲ್ಲಿರುವ ಕುರ್ಲಾದಲ್ಲಿ 48,450 ಪ್ರಕರಣಗಳು ಮತ್ತು ಕೆ ಈಸ್ಟ್‌ ವಾರ್ಡ್‌ನಲ್ಲಿರುವ ಅಂಧೇರಿ, ವಿಲೇ ಪಾರ್ಲೆ ಮತ್ತು ಜೋಗೇಶ್ವರಿ ಪೂರ್ವದ ಕೆಲವು ಭಾಗಗಳಲ್ಲಿ 48,366 ಪ್ರಕರಣಗಳು, ಭಾಂಡೂಪ್‌ ಪ್ರದೇಶಗಳನ್ನು ಒಳಗೊಂಡಿರುವ ಎಸ್‌ ವಾರ್ಡ್‌ನಲ್ಲಿ 47,180 ಪ್ರಕರಣಗಳನ್ನು ದಾಖಲಿಸಲಾಗಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.