
ನ್ಯಾಯಾಲಯದಲ್ಲಿ 5 ಸಾವಿರ ರೆಮ್ಡಿಸಿವಿರ್
Team Udayavani, Apr 26, 2021, 11:59 AM IST

ಮುಂಬಯಿ: ಕೊರೊನಾ ಸೋಂಕಿತರ ಚಿಕಿತ್ಸೆಗೆ ಬಳಸಲಾಗುವ ರೆಮ್ಡಿಸಿವಿರ್ ಔಷಧ ಯನ್ನು ಪೂರೈಸುವ ಬಗ್ಗೆ ಮಹಾರಾಷ್ಟ್ರ ಸರಕಾರವು ಕೇಂದ್ರದೊಂದಿಗೆ ಜಗಳವಾಡುತ್ತಿರುವ ಮಧ್ಯೆ ರಾಜ್ಯ ಏಜೆನ್ಸಿಗಳು ವಶಪಡಿಸಿಕೊಂಡ ಸುಮಾರು 5,000 ರೆಮ್ಡಿಸಿವಿರ್ ಬಾಟಲಿಗಳು ನ್ಯಾಯಾಲಯದ ಅನುಮತಿಯಿಲ್ಲದೆ ಬಾಕಿ ಉಳಿದಿವೆ.
ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ಆಹಾರ ಮತ್ತು ಔಷಧ ಆಡಳಿತ (ಎಫ್ಡಿಎ) ಮತ್ತು ಪೊಲೀಸ್ ಇಲಾಖೆ ನಡೆಸಿದ ದಾಳಿ ವೇಳೆ ಈ ಬಾಟಲುಗಳನ್ನು ವಶಪಡಿಸಿಕೊಳ್ಳಲಾಗಿದೆ. ದಾಳಿಯ ಸಮಯದಲ್ಲಿ ಸುಮಾರು 5,000 ರೆಮ್ಡಿಸಿವಿರ್ ಬಾಟಲುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನು ಬಳಸಲು ನ್ಯಾಯಾಲಯವು ಆದಷ್ಟು ಬೇಗ ಅನುಮತಿ ನೀಡಬೇಕು ಎಂದು ಎಫ್ಡಿಎ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ವಶಪಡಿಸಿಕೊಂಡ ಬಳಿಕ ನಾವು ಸಾಕ್ಷ್ಯಗಳನ್ನು ಸಂಗ್ರಹಿಸಬೇಕು, ವಶಪಡಿಸಿಕೊಂಡ ಔಷಧಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕು. ಪ್ರಕರಣವನ್ನು ಗೆಲ್ಲಲು ಸಾಕ್ಷ್ಯಗಳು ತುಂಬಾ ಬಲವಾಗಿರಬೇಕು. ಆಗ ಮಾತ್ರ ಈ ಬಾಟಲುಗಳನ್ನು ಕೋವಿಡ್ ರೋಗಿಗಳಿಗೆ ಬಳಸಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ. ಸೋಂಕಿನ ನಿರ್ದಿಷ್ಟ ಅವಧಿಯಲ್ಲಿ ರೆಮ್ಡಿಸಿವಿರ್ ಅನ್ನು ಬಳಸಬೇಕಾಗುತ್ತದೆ. ಸಾಮಾನ್ಯವಾಗಿ ಕನಿಷ್ಠ ಆರು ದಿನಗಳ ಸೋಂಕನ್ನು ಪೂರ್ಣಗೊಳಿಸಿದ ರೋಗಿಗಳ ಮೇಲೆ ಬಳಿಸಿದಾಗ ಇದು ಕಾರ್ಯನಿರ್ವಹಿಸುವುದಿಲ್ಲ.
ತಡವಾಗಿ ಸೇವಿಸಿದರೆ ಔಷಧ ರೋಗಿಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ವಶಪಡಿಸಿಕೊಂಡ ಬಾಟಲುಗಳ ಈ ಸಂಗ್ರಹವನ್ನು ನಾವು ಬಳಸದಿದ್ದರೆ, ಕೆಲವು ಕೋವಿಡ್ ರೋಗಿಗಳ ಸ್ಥಿತಿ ಹದಗೆಡುವುದನ್ನು ನಾವು ತಡೆಯಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

ಕ್ಲೀವ್ ಲ್ಯಾಂಡ್: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

ಮೊಗವೀರ್ಸ್ ಬಹ್ರೈನ್ ಪ್ರೊ ಕಬಡ್ಡಿ;ತುಳುನಾಡ್ ತಂಡ ಪ್ರಥಮ,ಪುನಿತ್ ಬೆಸ್ಟ್ All ರೌಂಡರ್
MUST WATCH
ಹೊಸ ಸೇರ್ಪಡೆ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.