67ನೇ ವಾರ್ಷಿಕ ಗಣೇಶೋತ್ಸವ ಸಂಪನ್ನ; ಸ್ನೇಹ ಸಮ್ಮಿಲನ

ಜಿಎಸ್‌ಬಿ ಸೇವಾ ಮಂಡಲ ಮುಂಬಯಿ ಕಿಂಗ್‌ಸರ್ಕಲ್‌

Team Udayavani, Sep 25, 2021, 2:46 PM IST

67ನೇ ವಾರ್ಷಿಕ ಗಣೇಶೋತ್ಸವ ಸಂಪನ್ನ; ಸ್ನೇಹ ಸಮ್ಮಿಲನ

ಮುಂಬಯಿ: ಜಿಎಸ್‌ಬಿ ಸೇವಾ ಮಂಡಲ ಮುಂಬಯಿ ಇದರ ಶ್ರೀಮಂತ ಗಣಪತಿ ಎಂದೇ ಪ್ರಸಿದ್ಧಿ ಪಡೆದ ಕಿಂಗ್‌ಸರ್ಕಲ್‌ನ 67ನೇ ವಾರ್ಷಿಕ ಗಣೇಶೋತ್ಸವವು ಐದು ದಿನಗಳ ಕಾಲ ನಡೆದು ಸಮಾಪ್ತಿಗೊಂಡಿದ್ದು, ಇದರ ಯಶಸ್ಸಿನ ಹಿನ್ನೆಲೆಯಲ್ಲಿ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಸೆ. 18ರಂದು ಸಯಾನ್‌ನಲ್ಲಿರುವ ಮಂಡಲದ ಶ್ರೀ ಗುರುಗಣೇಶ ಪ್ರಸಾದ್‌ ಸಭಾಗೃಹದಲ್ಲಿ ನಡೆಯಿತು.

ಸೇವಾ ಮಂಡಲದ ಕಾರ್ಯಕಾರಿ ಮಂಡಳಿ, ಆಯೋಜನ ಸಮಿತಿ, ಸ್ವಯಂಸೇವಕರು, ಭಕ್ತರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನೆರವೇರಿತು. ಸೇವಾ ಮಂಡಲದ ಕಾರ್ಯದರ್ಶಿ ಶಿವಾನಂದ ಭಟ್‌ ಪ್ರಾರ್ಥನೆಗೈದರು. ಅಧ್ಯಕ್ಷತೆ ವಹಿಸಿದ್ದ ಗಣೇಶೋತ್ಸವ ಆಯೋಜನ ಸಮಿತಿಯ ಸಂಚಾಲಕ ಡಾ| ಭುಜಂಗ ಪೈ ಸ್ವಾಗತಿಸಿ, ಪ್ರಧಾನ ಅರ್ಚಕ ವಿಜಯ ಭಟ್‌ ನೇತೃತ್ವದಲ್ಲಿ ಮುಂಬಯಿ ಹಾಗೂ ಊರಿನ ವೈಧಿಕರು ಗಣೇಶೋತ್ಸವವನ್ನು ಯಶಸ್ವಿಯಾಗಿ ನೆರವೇರಿಸಿದ್ದಾರೆ. ನನ್ನನ್ನು ಗಣೇಶೋತ್ಸವಕ್ಕೆ ಪ್ರಧಾನ ಸಂಚಾಲಕರನ್ನಾಗಿ ನಿಯುಕ್ತಿಗೊಳಿಸಿದಕ್ಕೆ ಸೇವಾ ಮಂಡಲದ ಕಾರ್ಯಕಾರಿ ಮಂಡಳಿ, ಸಹಕರಿಸಿದ ಸಹ ಸಂಚಾಲಕರಿಗೆ ಕೃತಜ್ಞತೆಗಳು ಎಂದರು.

ಸೇವಾ ಮಂಡಳದ ಅಧ್ಯಕ್ಷ ರಮೇಶ್‌ ಭಂಡಾರ್ಕರ್‌ ಅವರು ಉತ್ಸವಕ್ಕೆ ಸಹಕರಿಸಿದ ಸರ್ವ ಸಮಾಜ ಬಾಂಧವರು, ಸ್ವಯಂಸೇವಕರಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ಸಹ ಸಂಚಾಲಕ ಜಿ. ಡಿ. ರಾವ್‌ ಮಾತನಾಡಿ, ಸರಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ ದ್ದೇವೆ. ಗಣೇಶೋತ್ಸವದ ಮಂಟ ಪದೊಳಗೆ ಅನೇಕ ಸ್ವಯಂಸೇವಕರಿಗೂ ಪ್ರವೇಶ ಪಡೆಯಲು ಸಾಧ್ಯವಾಗಲಿಲ್ಲ. ಆದ್ದರಿಂದ ಕಡಿಮೆ ಸಂಖ್ಯೆಯಲ್ಲಿ ಸ್ವಯಂ ಸೇವಕರು ಪಾಲ್ಗೊಂಡು ಅಚ್ಚುಕಟ್ಟಾಗಿ ಎಲ್ಲ ಸೇವೆಗಳನ್ನು ಮಾಡಿರುವುದು ಅಭಿನಂದನೀಯ ಎಂದು ಹೇಳಿದರು.

ಇದನ್ನೂ ಓದಿ:ಆರೋಗ್ಯ ಸೇವೆಗೆ ಸರ್ಕಾರ ಬದ್ಧ,ಅರೋಗ್ಯ ಸೇವಾ ಕೇಂದ್ರಗಳ ನಿರ್ಮಾಣಕ್ಕೆ ಆದ್ಯತೆ:ಸಿಎಂ ಬೊಮ್ಮಾಯಿ

ಸಹ ಸಂಚಾಲಕ ರಮೇಶ್‌ ಪ್ರಭು ಮಾತನಾಡಿ, ಸೇವಾ ಮಂಡಲವು ಶಿಸ್ತಿಗೆ ಹೆಸರಾಗಿದೆ. ಸರಕಾರದ ನಿಯಮಗಳಿಗೆ ಅನುಸಾರವಾಗಿ ಯಾವುದೇ ರೀತಿಯಲ್ಲಿ ಚ್ಯುತಿ ಬಾರದಂತೆ ಸರ್ವರೂ ಸಹಕರಿಸಿರುವುದು ಅಭಿಮಾನದ ವಿಷಯವಾಗಿದೆ ಎಂದು ಹೇಳಿ ಶುಭ ಹಾರೈಸಿದರು.

ಮಾಜಿ ಸಹ ಸಂಚಾಲಕ ಜಿ. ಜಿ. ಪ್ರಭು ಅವರು ಧನಸಂಗ್ರಹಕ್ಕಾಗಿ ಕೆಲವರ ಹೆಸರನ್ನು ಉಲ್ಲೇಖೀಸಿ ದೇವರ ಅನುಗ್ರಹ ಅವರ ಮೇಲೆ ಸದಾಯಿರಲಿ ಎಂದು ಪ್ರಾರ್ಥಿಸಿದರು. ಸತೀಶ್‌ ರಾಮ ನಾಯಕ್‌ ಅವರು ಸಲಹೆ-ಸೂಚನೆಗಳನ್ನು ನೀಡಿ ಸಹಕರಿಸಿದರು. ಟ್ರಸ್ಟಿ ಆರ್‌. ಜಿ. ಭಟ್‌ ಮಾತನಾಡಿ, ಗಣೇಶೋತ್ಸವಲ್ಲಿ ಪೂಜೆ, ಸೇವೆ ಸಲ್ಲಿಸಿದ ಭಕ್ತರಿಗೆ ಪ್ರಸಾದವನ್ನು ಅವರ ವಿಳಾಸಕ್ಕೆ ತಲುಪಿಸಲು ವಿಳಂಬವಾದರೂ ಹೆಚ್ಚಿನ ಪ್ರಯತ್ನಪಟ್ಟಿದ್ದೇವೆ ಎಂದರು.

ಕಾರ್ಯದರ್ಶಿ ಶಿವಾನಂದ ಭಟ್‌ ಮಾತನಾಡಿ, ಈ ವರ್ಷ ಕೊರೊನಾ ನಿಮಿತ್ತ ಸರಕಾರಿ ನಿಬಂಧನೆಗಳಿಂದ ಅಪಾರ ಭಕ್ತರಿಗೆ ತೊಂದ ರೆಯಾಗಿದೆ. ಮುಂದಿನ ವರ್ಷದ ಗಣೇಶೋತ್ಸವ ಸಂದರ್ಭದಲ್ಲಿ ಎಲ್ಲಾ ವಿಘ್ನಗಳು ದೂರವಾಗಿ ವಿಜೃಂಭಣೆಯಿಂದ ಜರಗುವಂತಾಗಲಿ ಎಂದು ಪ್ರಾರ್ಥಿಸಿ ಸರ್ವರಿಗೂ ವಂದಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.