ಆತ್ಮ ನಿರ್ಭರ ಭಾರತ ಕನಸನ್ನು ನನಸಾಗಿಸಿ: ರಾಜ್ಯಪಾಲ ಕೋಶ್ಯಾರಿ


Team Udayavani, Mar 14, 2021, 4:14 PM IST

ಆತ್ಮ ನಿರ್ಭರ ಭಾರತ ಕನಸನ್ನು ನನಸಾಗಿಸಿ: ರಾಜ್ಯಪಾಲ ಕೋಶ್ಯಾರಿ

ಮುಂಬಯಿ: ಮಹಾರಾಷ್ಟ್ರದ ಜನರು ರಾಷ್ಟ್ರದ ವೈಭವಯುತ ಇತಿಹಾಸವನ್ನು ನೆನಪಿಸಿಕೊಳ್ಳಬೇಕು ಮತ್ತು ಮಹಾತ್ಮಾ ಗಾಂಧಿಯವರ ಆತ್ಮ ನಿರ್ಭರ ಭಾರತದ ಕನಸನ್ನು ನನಸಾಗಿಸಲು ಶ್ರಮಿಸುವ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಬೇಕು ಎಂದು ಮಹಾರಾಷ್ಟ್ರ ರಾಜ್ಯಪಾಲ ಭಗತ್‌ ಸಿಂಗ್‌ ಕೋಶ್ಯಾರಿ ಅವರು ಆಗ್ರಹಿಸಿದರು.

ಶುಕ್ರವಾರ ರಾತ್ರಿ ಮುಂಬಯಿಯ ಸ್ವಾತಂತ್ರ್ಯ ವೀರ ಸಾವರ್ಕರ್‌ ಸಭಾಗೃಹದಲ್ಲಿ ನಡೆದ ಆಜಾದಿ ಕಾ ಅಮೃತ ಮಹೋತ್ಸವ ಸಂಭ್ರಮಾಚರಣೆಯ ಅಂಗವಾಗಿ ಮಹಾರಾಷ್ಟ್ರ ಸರಕಾರ ಆಯೋಜಿಸಿದ್ದ  ಸಾಂಸ್ಕೃತಿಕ ಕಾರ್ಯಕ್ರಮದ  ಅಮೃತ್‌ ಭಾರತ್‌ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಭಾರತವು ಅಭಿವೃದ್ಧಿ ಹೊಂದುತ್ತಿರುವ ಸಮೃದ್ಧ ರಾಷ್ಟ್ರವಾಗಿದೆ. ದೇಶದ ಇತಿಹಾಸದಲ್ಲಿ ಸುವರ್ಣ ನೆನಪುಗಳಿವೆ. ಇನ್ನೊಂದೆಡೆ ವಸಾಹತುಶಾಹಿಯ ಕರಾಳ ಅವಧಿಯೂ ಇದೆ ಎಂದರು. ಉಪ್ಪಿಗೆ ತೆರಿಗೆ ವಿಧಿಸುವುದನ್ನು ವಿರೋಧಿಸಲು ಉಪ್ಪಿನ ಸತ್ಯಾಗ್ರಹವನ್ನು ನಡೆಸುವ ಮೂಲಕ ಗಾಂಧೀಜಿಯವರು ಸ್ವಾತಂತ್ರ್ಯ ಚಳವಳಿ ನಡೆಸಿದರು. ಮಹಾರಾಷ್ಟ್ರದ ಸ್ವಾತಂತ್ರ್ಯ ಹೋರಾಟಗಾರರ ಸೈನ್ಯವು ಭಾರತದ ಸ್ವಾತಂತ್ರ್ಯ ಚಳವಳಿಯ ಮುಂಚೂಣಿಯಲ್ಲಿದೆ ಎಂದು ಹೇಳಿದ ರಾಜ್ಯಪಾಲರು, 75 ವರ್ಷಗಳ ಭಾರತೀಯ ಸ್ವಾತಂತ್ರ್ಯದ ವರ್ಷಾಚರಣೆಯ ಸಂದರ್ಭದಲ್ಲಿ ದೇಶದ ವಿವಿಧ ಭಾಗಗಳ ಕಲಾವಿದರನ್ನು ರಾಜ್ಯದಲ್ಲಿ ಪ್ರದರ್ಶನಕ್ಕೆ ಆಹ್ವಾನಿಸಬೇಕು ಎಂದು ಹೇಳಿದರು.

ಸಾಂಸ್ಕೃತಿಕ ವ್ಯವಹಾರ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಅಮಿತ್‌ ದೇಶು¾ಖ್‌ ಅವರು ಮಾತನಾಡಿ, ಭಾರತ ಸ್ವಾತಂತ್ರ್ಯದ 75ನೇ ವರ್ಷಾಚರಣೆಯಂದು ದೇಶಾದ್ಯಂತ ಆಚರಿಸಲಾಗುತ್ತಿರುವ ಆಜಾದಿ ಕಾ ಅಮೃತ ಮಹೋತ್ಸವ ಆಚರಣೆಯಲ್ಲಿ ಮಹಾರಾಷ್ಟ್ರವು ಮುನ್ನಡೆ ಸಾಧಿಸುತ್ತಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗಿವೆ. ಈ ಅವಧಿಯಲ್ಲಿ ಮಹಾರಾಷ್ಟ್ರವೂ ಸಂಭ್ರಮಕ್ಕೆ ಸಾಕ್ಷಿಯಾಗಲಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಾಣ ತ್ಯಾಗ ಮಾಡಿದ ಮಹಾಪುರುಷರನ್ನು ಈ ಉಪಕ್ರಮದ ಮೂಲಕ ಗೌರವಿಸಲಾಗುತ್ತಿರುವುದು ಸಂತೋಷದ ಸಂಗತಿ. ಸ್ವಾತಂತ್ರ್ಯ ಅಮೃತ್‌ ಮಹೋತ್ಸವವನ್ನು ಆಚರಿಸುವಾಗ ಕೊರೊನಾ ಸಾಂಕ್ರಾಮಿಕ ಮಾರ್ಗಸೂಚಿಗಳನ್ನು ನೋಡಿಕೊಳ್ಳಬೇಕು ಎಂದು ನುಡಿದರು.

ಈ ಸಂದರ್ಭ ಸಾಂಸ್ಕೃತಿಕ ವ್ಯವಹಾರಗಳ ಕಾರ್ಯದರ್ಶಿ ಸೌರವ್‌ ವಿಜಯ್‌ ಮತ್ತು ಸಾಂಸ್ಕೃತಿಕ ವ್ಯವಹಾರಗಳ ನಿರ್ದೇಶಕ ಬಿಭಿಶನ್‌ ಚಾರ್ವೆ ಉಪಸ್ಥಿತರಿದ್ದರು. ಕೋವಿಡ್ ಹಿನ್ನೆಲೆ ರಾಜ್ಯ ಸರಕಾರದ ಮಾರ್ಗಸೂಚಿಗಳ ಅನುಸಾರ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.