ಕಲ್ಯಾಣ್-ಡೊಂಬಿವಲಿಯಲ್ಲಿ 487 ಮಂದಿ ವಿರುದ್ಧ ಕ್ರಮ
Team Udayavani, Jun 27, 2020, 5:16 PM IST
ಸಾಂದರ್ಭಿಕ ಚಿತ್ರ
ಕಲ್ಯಾಣ್, ಜೂ.26: ಕಲ್ಯಾಣ್-ಡೊಂ ಬಿವಲಿ ಪರಿಸರಗಳಲ್ಲಿ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದ ರೊಂದಿಗೆ ಕೋವಿಡ್ ನಿಯಮ ಉಲ್ಲಂಘಿಸುವವರ ಸಂಖ್ಯೆ ಹೆಚ್ಚಾಗಿದ್ದು ಅವರ ವಿರುದ್ಧ ಮುನ್ಸಿಪಲ್ ಕಾರ್ಪೊರೇಶನ್ ಆಡಳಿತ ಮತ್ತು ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.
ಮನಪಾ ಆಡಳಿತ ಹಾಗೂ ಪೊಲೀಸರು ಕಳೆದ ಎರಡು ದಿನಗಳಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ 487 ಮಂದಿಯ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಇವರಲ್ಲಿಮಾಸ್ಕ್ ಬಳಸದಿರುವುದು, ನಿಯಮ ಉಲ್ಲಂಘಿಸುವ ಚಾಲಕರು ಹಾಗೂ ವ್ಯಾಪಾರಿಗಳು ಸೇರಿದ್ದಾರೆ. ಪೊಲೀಸರು ಈ ವರೆಗೆ ಸುಮಾರು 465 ಮಂದಿ ವಿರುದ್ದ ಕ್ರಮಕೈಗೊಂಡಿದೆ. ಕಲ್ಯಾಣ್-ಡೊಂಬಿವಲಿ ಪರಿಸರಗಳಲ್ಲಿ ಮಾಸ್ಕ್ ಬಳಕೆ ಕಡ್ಡಾಯಗೊಳಿಸಲಾಗಿದೆ. ಕೋವಿಡ್ ಸೋಂಕಿತರ ಕುಟುಂಬದವರನ್ನು ಹೋಂ ಕ್ವಾರಂಟೈನ್ ಮಾಡಿ ಮನಪಾ ಮೊಹರು ಹಾಕಿದರೂ, ಕೈಗೆ ಕರವಸ್ತ್ರ ಕಟ್ಟಿಕೊಂಡು ಮಾರುಕಟ್ಟೆ, ಬೀದಿಗಳಲ್ಲಿ, ಸೊಸೈಟಿ ಆವರಣಗಳಲ್ಲಿ ತಿರುಗಾಡುತ್ತಿದ್ದು ಅವರ ವಿರುದ್ಧ ಆಡಳಿತ ಕ್ರಮ ಕೈಗೊಂಡಿದೆ. ವ್ಯಾಪಾರಿಗಳಿಗೆ ಒಂದುದಿನ ಬಿಟ್ಟು ಇನ್ನೊಂದು ದಿನದಂತೆ ಅಂಗಡಿ ತೆರೆಯಲು ಅವಕಾಶವನ್ನು ಮಹಾನಗರ ಪಾಲಿಕೆ ಮಾಡಿಕೊಟ್ಟಿದೆ. ಆದರೆ ಕೆಲವು ಅಂಗಡಿಯವರು ಎರಡೂ ದಿನಗಳು ಅಂಗಡಿಯನ್ನು ತೆರೆದಿಡುವ ಮೂಲಕ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ಅಂತಹ ಅಂಗಡಿಯವರಿಗೆ ವಾರ್ಡ್ ಅಧಿಕಾರಿಗಳು ದಂಡ ವಿಧಿಸುತ್ತಿದ್ದಾರೆ. ಫಡ್ಕೆ ರಸ್ತೆ, ದತ್ನಗರ, ರಾಜಾಜಿ ರಸ್ತೆ, ರೈಲ್ವೆ ನಿಲ್ದಾಣ ಪರಿಸರಗಳಲ್ಲಿ ಅನೇಕ ಬೀದಿ ವ್ಯಾಪಾರಿಗಳು ಬೆಳಗ್ಗೆಯಿಂದ ಸಂಜೆಯವರೆಗೆ ವ್ಯಾಪಾರ ಮಾಡಲು ಪ್ರಯತ್ನಿಸುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಬುಧಾಬಿ: ಯು.ಎ.ಇ: ಸಿ.ಬಿ.ಎಸ್.ಸಿ.ಕ್ಲಸ್ಟರ್ ವಿಭಾಗದ ಚೆಸ್ ಟೂರ್ನಮೆಂಟ್ ಉದ್ಘಾಟನೆ
Desi Swara: “ಅಕ್ಕ’ ಅರಮನೆಯ ರಚನೆಯ ನೆನ್ನೆ, ಇಂದು, ನಾಳೆಗಳು
Desi Swara: 12ನೆಯ ಅಕ್ಕ ಸಮ್ಮೇಳನ: ವೀರಶೈವ 10 ಸಾವಿರ ವರ್ಷಗಳ ಪ್ರಾಚೀನ ಧರ್ಮ
Desi Swara: ಮಸ್ಕತ್- 40ನೇ ವರ್ಷದ ಗಣೇಶೋತ್ಸವ-ಮೂರು ದಿನದ ಉತ್ಸವ
Desi Swara: ಹೊನ್ನುಡಿ-ಜ್ಞಾನ ಬಳಸಿದರಷ್ಟೇ ಶ್ರೇಷ್ಠ..ಗರ್ವದಿಂದ ಹೊತ್ತು ತಿರುಗಬಾರದು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.