ಪರಿವಾರದೊಂದಿಗೆ ಗೋಪಾಲ ಶೆಟ್ಟಿ ಮತದಾನ


Team Udayavani, Apr 30, 2019, 11:22 AM IST

2904MUM02

ಮುಂಬಯಿ: ಉತ್ತರ ಮುಂಬಯಿ ಲೋಕಸಭಾ ಕ್ಷೇತ್ರದ ಸಂಸದ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿ, ತುಳು-ಕನ್ನಡಿಗ ಗೋಪಾಲ ಶೆಟ್ಟಿಯವರು ಪರಿವಾರದೊಂದಿಗೆ ಇಂದು ಮುಂಜಾನೆ ಬೊರಿವಲಿ ಪಶ್ಚಿಮ ಸಾಯಿಬಾಬ ನಗರದ ಜೆ. ಬಿ. ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಇವರೊಂದಿಗೆ ತಾಯಿ ಗುಲಾಬಿ ಶೆಟ್ಟಿ, ಪತ್ನಿ ಉಷಾ ಶೆಟ್ಟಿ, ಪುತ್ರಿ ಜ್ಯೋತಿ ಮತ್ತು ಪುತ್ರ ರಾಕೇಶ್‌ ಶೆಟ್ಟಿ ಅವರೂ ತಮ್ಮ ಹಕ್ಕನ್ನು ಚಲಾಯಿಸಿದರು. ಆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮತದಾರರು ನನ್ನ ಸೇವಾ ಕಾರ್ಯಗಳನ್ನು ಗುರುತಿಸಿದ್ದು ಬಹುಮತದಿಂದ ಗೆಲ್ಲುವುದರಲ್ಲಿ ಸಂದೇಹವಿಲ್ಲ ಎಂದರು. ಗೋಪಾಲ ಶೆಟ್ಟಿ ತುಳು ಕನ್ನಡಿಗ ಅಭಿಮಾನಿ ಬಳಗದ ರೂವಾರಿ, ಪ್ರಚಾರ ಸಮಿತಿಯ ಪ್ರಮುಖ, ಉದ್ಯಮಿ ಎರ್ಮಾಳ್‌ ಹರೀಶ್‌ ಶೆಟ್ಟಿ ಇದೇ ಸಂದರ್ಭದಲ್ಲಿ ಮತ ಚಲಾಯಿಸಿದರು.

ಚುನಾವಣೆಗೆ ಮೊದಲು ಎರ್ಮಾಳ್‌ ಹರೀಶ್‌ ಶೆಟ್ಟಿ ಅವರು, ತುಳು ಕನ್ನಡಿಗ ಅಭಿಮಾನಿ ಬಳಗದ ವತಿಯಿಂದ ಬೊರಿವಲಿ, ದಹಿಸರ್‌, ಕಾಂದಿವಲಿ, ಮಲಾಡ್‌ ಪರಿಸರದಲ್ಲಿ ತುಳು ಕನ್ನಡಿಗರನ್ನು ಒಟ್ಟುಗೂಡಿಸಿ ಸಭೆಯನ್ನು ಆಯೋಜಿಸಿ ಗೋಪಾಲ ಶೆಟ್ಟಿ ಅವರನ್ನು ದೊಡ್ಡ ಪ್ರಮಾಣದ ಅಂತರದಲ್ಲಿ ಜಯಿಸುವಂತೆ ಮಾಡಲು ನಿರಂತರವಾಗಿ ಪ್ರಯತ್ನಿಸಿ¨ªಾರೆ. ಅಲ್ಲದೆ ಇಂದು ನಗರದ ತುಳು ಕನ್ನಡಿಗ ಜಾತೀಯ ಹಾಗೂ ಇತರ ಎÇÉಾ ಸಂಘ ಸಂಸ್ಥೆಗಳ ಪ್ರಮುಖರು, ತುಳು ಕನ್ನಡಿಗರು ಮಹಾನಗರದಿಂದ ಹೊರಗೆ ಪ್ರಯಾಣಿಸದೆ ತಮ್ಮ ಮತ ಚಲಾಯಿಸಿದರು.

ಬೊರಿವಲಿ ಶಾಸಕ, ರಾಜ್ಯ ಶಿಕ್ಷಣ ಸಚಿವ ವಿನೋದ್‌ ತಾಬ್ಡೆ, ದಹಿಸರ್‌ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕಿ ಮನೀಷಾ ಚೌಧರಿ, ಮಾಘಾಠಾಣೆ ಶಿವಸೇನೆ ಶಾಸಕರಾದ ಪ್ರಕಾಶ್‌ ಸುರ್ವೆ, ಕಾಂದಿವಲಿ ಪೂರ್ವದ ಬಿಜೆಪಿ ಶಾಸಕ ಅತುಲ್‌ ಭಟ್‌ ಖಳ್ಕರ್‌, ಚಾರ್‌ಕೋಪ್‌ ಬಿಜೆಪಿ ಶಾಸಕ ಯೋಗೇಶ್‌ ಸಾಗರ್‌, ಎಂಎಲ್‌ಸಿಗಳಾದ ವಿಜಯ್‌ ಭೈ ಗಿರ್ಕರ್‌ ಮತ್ತು ಪ್ರವೀಣ್‌ ಧಾರೆಕಾರ್‌ ಹಾಗೂ 40 ಕ್ಕೂ ಅಧಿಕ ವಾರ್ಡ್‌ಗಳ ಮುನ್ಸಿಪಾಲ್‌ ಕಾರ್ಪೋರೇಟರ್‌ಗಳು ಗೋಪಾಲ್‌ ಶೆಟ್ಟಿ ಅವರ ಪ್ರಚಾರ ಕಾರ್ಯದಲ್ಲಿ ಈಗಾಗಲೆ ಗುರುತಿಸಿಕೊಂಡಿದ್ದು, ಎದುರಾಳಿ ಸ್ಪರ್ಧಿಯಾಗಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಬಾಲಿವುಡ್‌ ನಟಿ ಊರ್ಮಿಳಾ ಮಾತೊಂಡ್ಕರ್‌ ಅವರ ವಿರುದ್ಧ ಗೋಪಾಲ್‌ ಶೆಟ್ಟಿ ಅವರನ್ನು ಭರ್ಜರಿಯಾಗಿ ಜಯಗಳಿಸುವ ನಿಟ್ಟಿನಲ್ಲಿ ರಣತಂತ್ರವನ್ನು ರೂಪಿಸಿ ಪ್ರಚಾರ ನಡೆಸಲಾಗಿದೆ.

ಉತ್ತರ ಮುಂಬಯಿ ಲೋಕಸಭಾ ಕ್ಷೇತ್ರದಲ್ಲಿ ಗೋಪಾಲ್‌ ಶೆಟ್ಟಿ ಅವರು ಮಾಡಿರುವ ಅಭಿವೃದ್ಧಿಪರ ಕಾರ್ಯಗಳು ಮತದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಗಲಿದೆ. ಇನ್ನೊಂದೆಡೆ ಮೋದಿ ಅಲೆ ಗೋಪಾಲ್‌ ಶೆಟ್ಟಿ ಅವರ ಗೆಲುವಿನ ಅಂತರವನ್ನು ಮತ್ತಷ್ಟು ಹೆಚ್ಚಿಸುವಲ್ಲಿ ಸಂಶಯವಿಲ್ಲ ಎನ್ನಲಾಗುತ್ತಿದೆ. ಒಂದು ಕಾಲದಲ್ಲಿ ಉತ್ತರ ಮುಂಬಯಿ ಕ್ಷೇತ್ರ ಗುಜರಾತಿ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶವಾಗಿತ್ತು. ಆದರೆ ಪ್ರಸ್ತುತ ಎಲ್ಲಾ ಭಾಷಿಗರು ಇಲ್ಲಿ ನೆಲೆಸಿದ್ದು, ವಿಶೇಷವೆಂದರೆ ತುಳು-ಕನ್ನಡಿಗ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿರುವುದು ಗೋಪಾಲ್‌ ಶೆಟ್ಟಿ ಅವರಿಗೆ ವರದಾನವಾಗಲಿದೆ.

2014ರಲ್ಲಿ ಭಾರತೀಯ ಬಿಜೆಪಿಯು ರಾಮ್‌ ನಾಯ್ಕ ಅವರ ಬದಲಾಗಿ ಅವರ ಅಪ್ಪಟ ಶಿಷ್ಯ ಗೋಪಾಲ ಶೆಟ್ಟಿ ಅವರನ್ನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದು, ಸುಮಾರು 6,64,004 ಮತಗಳನ್ನು ಪಡೆದ ಗೋಪಾಲ ಶೆಟ್ಟಿ ಎದುರಾಳಿ ಕಾಂಗ್ರೆಸ್‌ನ ಸಂಜಯ್‌ ನಿರೂಪಮ್‌ ಅವರಗಿಂತ 4,46,562 ಹೆಚ್ಚುವರಿ ಮತಗಳೊಂದಿಗೆ ಭರ್ಜರಿ ಜಯಭೇರಿ ಪಡೆದು ರಾಷ್ಟ್ರದ ಜನತೆ ಈ ಕ್ಷೇತ್ರದತ್ತ ಚಿತ್ತಹರಿಸುವಂತೆ ಮಾಡಿದ್ದರು. ಮಾತ್ರವಲ್ಲದೆ ಅತ್ಯಾಧಿಕ ಮತಗಳನ್ನು ಪಡೆದು ರಾಷ್ಟ್ರದಲ್ಲೇ ಐದನೇ ಸ್ಥಾನ ಮತ್ತು ಮಹಾರಾಷ್ಟ್ರ ರಾಜ್ಯದಲ್ಲೇ ಪ್ರಥಮ ಸ್ಥಾ§ನದ ಪಡೆದ ಕೀರ್ತಿಗೆ ಪಾತ್ರರಾಗಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.