ನೆರೂಲ್‌ ಶ್ರೀ ಕ್ಷೇತ್ರ: ಚಂಡಿಕಾ ಮಹಾಯಾಗ


Team Udayavani, Sep 30, 2017, 2:58 PM IST

1-aa.jpg

ನವಿಮುಂಬಯಿ: ನೆರೂಲ್‌ನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಗಣಪತಿ ಅಯ್ಯಪ್ಪ ದುರ್ಗಾದೇವಿ ಕ್ಷೇತ್ರದಲ್ಲಿ ಶರನ್ನವರಾತ್ರಿಯ ನಿಮಿತ್ತ ವಿಶೇಷ ಕಾರ್ಯಕ್ರಮಗಳು ವಿವಿಧ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯುತ್ತಿದೆ. ವಿವಿಧ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಮಂದಿರದ ಪ್ರಧಾನ ಅರ್ಚಕರಾದ ಶ್ರೀಕೃಷ್ಣ ಭಟ್‌ ಅವರ ಮುಂದಾಳತ್ವದಲ್ಲಿ ಹಾಗು ತಂತ್ರಿಗಳಾದ ಶ್ರೀ ರಾಮಚಂದ್ರ ಬಾಯರಿ ಅವರ ಮಾರ್ಗದರ್ಶನದಲ್ಲಿ ಜರಗುತ್ತಿದೆ.

ಸೆ. 26 ರಂದು ಬೆಳಗ್ಗೆ ಯಿಂದ  ಕ್ಷೀರಾಭಿಷೇಕ, ಮಂಗಳಾರತಿ, ಪ್ರಾರ್ಥನೆ, ಸಂಕಲ್ಪ, ಪುಣ್ಯಾಹ ವಾಚನ, ಚಂಡಿಕಾ ಹೋಮ, ಪೂರ್ಣಾಹುತಿ, ಸುಹಾಸಿನಿ ಪೂಜೆ, ಕನ್ನಿಕಾ ಪೂಜೆ, ಮಧ್ಯಾಹ್ನ ಮಂಗಳಾರತಿ, ಪ್ರಸಾದ ವಿತರಣೆ, ಅನ್ನ ಪ್ರಸಾದ ನೆರವೇರಿತು. ಸಂಜೆ  ಹರಿದ್ರಾ ಅಲಂಕಾರ, ದುರ್ಗಾ ಸಪ್ತಶತೀ ಪಾರಾಯಣ, ಲಲಿತ ಸಹಸ್ರನಾಮ ಪಾರಾಯಣ, ಶ್ರೀ ಗಣಪತಿ ಅಯ್ಯಪ್ಪ ದುರ್ಗಾದೇವಿ ಭಜನಾ ಮಂಡಳಿಯವರಿಂದ ಭಜನೆ, ಮಹಾ ಮಂಗಳಾರತಿ ತದನಂತರ ಅನ್ನಪ್ರಸಾದವನ್ನು ಆಯೋಜಿಸಲಾಗಿತ್ತು. ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ನವಿಮುಂಬಯಿ ಮಾಜಿ ನಗರ ಸೇವಕ, ನೆರೂಲ್‌ ಶ್ರೀ ಶನೀಶ್ವರ ಮಂದಿರದ ಕಾರ್ಯಾಧ್ಯಕ್ಷ ಸಂತೋಷ್‌ ಡಿ. ಶೆಟ್ಟಿ, ನೆರೂಲ್‌ ಶ್ರೀ ದುರ್ಗಾದೇವಿ ಮಂದಿರದ ಕಟ್ಟಡ ನಿಧಿ ಸಮಿತಿಯ ಕಾರ್ಯಾಧ್ಯಕ್ಷ ಸಂಜೀವ ಎನ್‌. ಶೆಟ್ಟಿ, ವಿಶ್ವಸ್ಥರಾದ ಖಾಂದೇಶ್‌ ಭಾಸ್ಕರ ಶೆಟ್ಟಿ, ಜಿತೇಶ್‌ ಕುಸುಮೋದರ ಶೆಟ್ಟಿ ಮೊದಲಾದವರನ್ನು ಗೌರವಿಸಲಾಯಿತು.

ಸೆ. 27 ರಂದು ಬೆಳಗ್ಗೆಯಿಂದ ಕ್ಷೀರಾಭಿಷೇಕ, ಮಂಗಳಾರತಿ, ಸಂಜೆ ದುರ್ಗಾ ಸಪ್ತಶತೀ ಪಾರಾಯಣ, ಲಲಿತ ಸಹಸ್ರನಾಮ ಪಾರಾಯಣ, ಖಾಂದೇಶ್ವರ ಭಜನಾ ಮಂಡಳಿ ಖಾಂದ ಕಾಲನಿಯವರಿಂದ ಭಜನೆ, ಮಹಾ ಮಂಗಳಾರತಿ ತದನಂತರ ಅನ್ನಪ್ರಸಾದ ಜರಗಿತು. ಪೂರ್ವಾಹ್ನ 10 ರಿಂದ ಪ್ರಸಿದ್ಧ ನಾಡಿವೈದ್ಯರಿಂದ ಚಿಕಿತ್ಸಾ ವಿಧಾನ ಹಾಗೂ ಗೋ ಮೂತ್ರದ ವಿಶೇಷತೆಯ ಬಗ್ಗೆ ವಿಶೇಷ ಕಾರ್ಯಗಾರ ನಡೆಯಿತು.  ಸೆ. 28 ರಂದು ಬೆಳಗ್ಗೆಯಿಂದ ನೈರ್ಮಲ್ಯ ದರ್ಶನ,  ಕ್ಷೀರಾಭಿಷೇಕ, ಮಂಗಳಾರತಿ, ಸಂಜೆ ದುರ್ಗಾ ಸಪ್ತಶತೀ ಪಾರಾಯಣ, ಲಲಿತ ಸಹಸ್ರನಾಮ ಪಾರಾಯಣ, ಹರಿ ಕೃಷ್ಣ ಭಜನಾ ಮಂಡಳಿ ಆಶ್ರಯದವರಿಂದ ಭಜನೆ, ಮಹಾ ಮಂಗಳಾರತಿ ತದನಂತರ ಅನ್ನಪ್ರಸಾದವನ್ನು ಆಯೋಜಿಸಲಾಗಿತ್ತು.

ಶ್ರೀ ಕ್ಷೇತ್ರದ ಆಡಳಿತ ಸಮಿತಿಯ ಕಾರ್ಯಾಧ್ಯಕ್ಷ ಕೆ. ಡಿ. ಶೆಟ್ಟಿ, ಅಧ್ಯಕ್ಷ ಕಿಶೋರ್‌ ಕುಮಾರ್‌ ಶೆಟ್ಟಿ, ಉಪಾಧ್ಯಕ್ಷ ದಾಮೋದರ ಎಸ್‌. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸುಂದರ ಡಿ. ಪೂಜಾರಿ, ಜತೆ ಕಾರ್ಯದರ್ಶಿ ಹರಿ ಎಲ್‌. ಶೆಟ್ಟಿ, ಗೌರವ ಕೋಶಾಧಿಕಾರಿ ಸುರೇಶ್‌ ಜಿ. ಶೆಟ್ಟಿ, ಜತೆ ಕೋಶಾಧಿಕಾರಿ ರಾಜೇಂದ್ರ ಪ್ರಸಾದ್‌ ಮ್ಹಾಡಾ, ಕಟ್ಟಡ ನಿಧಿ ಸಮಿತಿಯ ಕಾರ್ಯಾಧ್ಯಕ್ಷ ಸಂಜೀವ ಎನ್‌. ಶೆಟ್ಟಿ, ಟ್ರಸ್ಟಿಗಳಾದ ರವಿ ಆರ್‌.ಶೆಟ್ಟಿ, ರಿತೇಶ್‌ ಜಿ. ಕುರುಪ್‌, ಡಾ| ಶಿವ ಮೂಡಿಗೆರೆ, ಪ್ರಕಾಶ್‌ ಎಸ್‌. ಮಹಾಡಿಕ್‌, ಖಾಂದೇಶ್‌ ಭಾಸ್ಕರ್‌ ಶೆಟ್ಟಿ, ಹರೀಶ್‌ ಎನ್‌. ಶೆಟ್ಟಿ, ಮಹೇಶ್‌ ಡಿ. ಪಟೇಲ್‌, ನಾರಾಯಣ ಪಟೇಲ್‌, ರಾಮಕೃಷ್ಣ ಶೆಟ್ಟಿ, ಅಣ್ಣಪ್ಪ ಕೋಟೆಕಾರ್‌, ಸುರೇಂದ್ರ ಆರ್‌. ಶೆಟ್ಟಿ,ನಿತ್ಯಾನಂದ ವಿ. ಶೆಟ್ಟಿ, ಸದಾಶಿವ ಎನ್‌. ಶೆಟ್ಟಿ, ಮೋಹನ್‌ದಾಸ್‌ ಕೆ. ರೈ, ಮೇಘರಾಜ್‌ ಶೆಟ್ಟಿ, ಸುರೇಶ್‌ ಆರ್‌. ಶೆಟ್ಟಿ, ವಿಶ್ವನಾಥ ಶೆಟ್ಟಿ, ರಘು ವಿ. ಶೆಟ್ಟಿ, ಇಂದಿರಾ ಎಸ್‌.ಶೆಟ್ಟಿ ಹಾಗೂ ಪರಿಸರದ ಭಕ್ತರು, ವಿವಿಧ ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ  ಸಂಘ ಟನೆಗಳ ಪದಾಧಿಕಾರಿಗಳು ನವರಾತ್ರಿ ಉತ್ಸವದ ಯಶಸ್ಸಿಗೆ ಸಹಕರಿಸುತ್ತಿದ್ದಾರೆ.

ಸೆ. 29 ರಂದು ಬೆಳಗ್ಗೆ 6 ರಿಂದ ನೈರ್ಮಲ್ಯ ದರ್ಶನ, ಕ್ಷೀರಾಭಿಷೇಕ, ಮಂಗಳಾರತಿ, ಪೂರ್ವಾಹ್ನ  9.30 ರಿಂದ ಪ್ರಾರ್ಥನೆ, ಸಂಕಲ್ಪ, ಪುಣ್ಯಾಹ ವಾಚನ, ಪೂರ್ವಾಹ್ನ 10 ರಿಂದ ದುರ್ಗಾ ಹೋಮ, ಪೂರ್ವಾಹ್ನ  11.30 ಪೂರ್ಣಾಹುತಿ, 11.45 ಕ್ಕೆ ಮಂಗಳಾರತಿ, ಮಧ್ಯಾಹ್ನ 12.00 ಕ್ಕೆ ಪ್ರಸಾದ ವಿತರಣೆ, ಸಂಜೆ 5.30 ರಿಂದ ದುರ್ಗಾ ಸಪ್ತಶತೀ ಪಾರಾಯಣ, 6.30 ರಿಂದ ಲಲಿತ ಸಹಸ್ರನಾಮ ಪಾರಾಯಣ, 7 ರಿಂದ  ಶ್ರೀ  ಗಣಪತಿ ಅಯ್ಯಪ್ಪ ದುರ್ಗಾದೇವಿ ಭಜನಾ ಮಂಡಳಿಯವರಿಂದ ಭಜನೆ, ಮಹಾ ಮಂಗಳಾರತಿ, ದಾಂಡಿಯಾ ನೃತ್ಯ ತದನಂತರ ಅನ್ನಪ್ರಸಾದ ಜರಗಲಿದೆ. ಸೆ. 30 ರಂದು ಬೆಳಗ್ಗೆ  9 ರಿಂದ ಶಾರದಾ ಪೂಜೆ, ಪೂರ್ವಾಹ್ನ 10 ರಿಂದ ಅಕ್ಷರಾಭ್ಯಾಸ, ಪೂರ್ವಾಹ್ನ 11 ರಿಂದ ಆಯುಧ ಪೂಜೆ, ಅನ್ನದಾನ ನಡೆಯಲಿದೆ. ವಿಶೇಷ ಪೂಜೆಗಳನ್ನು ನೀಡಲಿಚ್ಚಿಸುವ ಭಕ್ತಾದಿಗಳು ಮಂದಿರದ   ಸಂಬಂಧಪಟ್ಟವರನ್ನು (9820313827, 9833284044, 9004256777) ಸಂಪರ್ಕಿಸಬಹುದು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.