ಕೋವಿಡ್‌ ಕಾಲದಲ್ಲಿ ಸ್ಪರ್ಧೆಯಿಂದ ಮಕ್ಕಳ ಮನೋಸ್ಥೈರ್ಯ ವೃದ್ಧಿ’

ವಸಾಯಿ ಕರ್ನಾಟಕ ಸಂಘ ಆನ್‌ಲೈನ್‌ ಮಕ್ಕಳ ಭಾಷಣ ಸ್ಪರ್ಧೆ ಫಲಿತಾಂಶ ಪ್ರಕಟ ಕಾರ್ಯಕ್ರಮ

Team Udayavani, Aug 31, 2021, 2:13 PM IST

ಕೋವಿಡ್‌ ಕಾಲದಲ್ಲಿ ಸ್ಪರ್ಧೆಯಿಂದ ಮಕ್ಕಳ ಮನೋಸ್ಥೈರ್ಯ ವೃದ್ಧಿ’

ವಸಾಯಿ: ಕಳೆದ ಎರಡು ವರ್ಷ ಗಳಿಂದ ಕೋವಿಡ್‌  ಬಿಕ್ಕಟ್ಟಿನಿಂದ ತುಳು, ಕನ್ನಡಿಗ ಸಂಘ ಸಂಸ್ಥೆಗಳ ಕಾರ್ಯ ಚಟುವಟಿಕೆಗಳು ನಿಂತ ನೀರಿನಂತಾಗಿದೆ. ಅದರಲ್ಲಿಯೂ ಶೈಕ್ಷಣಿಕ ವ್ಯವಸ್ಥೆಯಂತೂ ಆನ್‌ಲೈನ್‌ ಮೂಲಕ ನಡೆಸುವ ಸ್ಥಿತಿಗೆ ತಲುಪಿದೆ. ಆನ್‌ಲೈನ್‌ ಶಿಕ್ಷಣದ ವ್ಯವಸ್ಥೆಯಿಂದಾಗಿ ಮಕ್ಕಳ ದೈಹಿಕ ಚಟುವಟಿಕೆಗಳು, ಸಾಂಸ್ಕೃತಿಕ ಚಟುವಟಿಕೆಗಳು ನಿಂತಿದ್ದು, ಮುಂಬಯಿ ತುಳು ಕನ್ನಡಿಗ ಮಕ್ಕಳ ಮನೋಸ್ಥೈರ್ಯವನ್ನು ಬಲಪಡಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಸಾಯಿ ಕರ್ನಾಟಕ ಸಂಘದ ವತಿಯಿಂದ ದೇಶದ ಸ್ವಾತಂತ್ರ್ಯಅಮೃತ ಮಹೋತ್ಸವದ ಈ ಶುಭ ಸಂದರ್ಭದಲ್ಲಿ ಮಕ್ಕಳ ಭಾಷಣ ಸ್ಪರ್ಧೆಯನ್ನು ಆಯೋಜಿಸಿದೆ. ಭಾಗವಹಿಸಿದ ಮಕ್ಕಳ ಉತ್ಸಾಹ, ಭಾಷಾ ಪ್ರಯೋಗ ಹಾಗೂ ಭಾಷಣದ ಪ್ರಸ್ತುತಿ ಕಂಡು ಸಂತಸವಾಯಿತು. ಎಲ್ಲ ಮಕ್ಕಳು ಆಯಾಯ ಪ್ರಾಯಕ್ಕನುಗುಣವಾಗಿ ತಮ್ಮ ಭಾಷಣವನ್ನು ಪ್ರಸ್ತುತಿಪಡಿದ್ದಾರೆ. ಭಾಗವಹಿಸಿದ ಎಲ್ಲ ಪುಟಾಣಿ ಸ್ಪರ್ಧಿಗಳಿಗೆ, ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸಿದ ಪಾಲಕರಿಗೆ ಕೃತಜ್ಞತಾಪೂರ್ವಕ ಅಭಿನಂದನೆಗಳು. ಸ್ಪರ್ಧೆಯು ಕೋವಿಡ್‌ ಕಾಲದಲ್ಲಿ ಮಕ್ಕಳ ಮನೋಸ್ಥೈರ್ಯವನ್ನು ವೃದ್ಧಿಸಿದೆ ಎಂದು ವಸಾಯಿ ಕರ್ನಾಟಕ ಸಂಘದ ಅಧ್ಯಕ್ಷ ಪಾಂಡು ಎಲ್‌. ಶೆಟ್ಟಿ ತಿಳಿಸಿದರು.

ವಸಾಯಿ ಪೂರ್ವದ ಹೊಟೇಲ್‌ ರುದ್ರ ಶೆಲ್ಟರ್‌ ಇಂಟರ್‌ನ್ಯಾಶನಲ್‌ ಸಭಾಗೃಹದಲ್ಲಿ ವಸಾಯಿ ಕರ್ನಾಟಕ ಸಂಘದ ವತಿಯಿಂದ ಸಂಘದ ಫೇಸ್‌ಬುಕ್‌ ನೇರಪ್ರಸಾರ ಕಾರ್ಯಕ್ರಮದ ಮೂಲಕ ಆಯೋಜಿಸಿದ ಮಕ್ಕಳ ಭಾಷಣ ಸ್ಪರ್ಧೆಯ ಫಲಿತಾಂಶ ಪ್ರಕಟ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅವರು ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿ ಶುಭ ಹಾರೈಸಿದರು.

ಇದನ್ನೂ ಓದಿ:ಲಸಿಕೆಯ 2 ಡೋಸ್ ಪಡೆದವರಿಗೆ ಗೋವಾ ಪ್ರವೇಶಕ್ಕೆ ಅನುಮತಿ : ಗೋವಾ ನ್ಯಾಯಪೀಠ

ಮಕ್ಕಳ ಭಾಷಣ ಸ್ಪರ್ಧೆಯ ಬಹುಮಾನದ ಪ್ರಾಯೋಜಕತ್ವ ವಹಿಸಿಕೊಂಡಿದ್ದ ಸಂಘದ ಗೌರವ ಅಧ್ಯಕ್ಷ, ವಿನೀತ್‌ ಕೆಮಿಕಲ್ಸ್‌ ಪ್ರೈ. ಲಿ.ನ ಆಡಳಿತ ನಿರ್ದೇಶಕ ವಿಶ್ವನಾಥ ಪಿ. ಶೆಟ್ಟಿಯವರನ್ನು ವಿಶೇಷವಾಗಿ ಸಂಘದ ಪರವಾಗಿ ಗೌರವಿಸಲಾಯಿತು. ಗೌರವ ಸ್ವೀಕರಿಸಿ ಮಾತನಾಡಿದ ಅವರು, ಮಕ್ಕಳ ಭಾಷಾ ಪ್ರೌಢಿಮೆಗೆ ಪೂರಕವೆನ್ನುವಂತಹ ಕಾರ್ಯಕ್ರಮವನ್ನು ವಸಾಯಿ ಕರ್ನಾಟಕ ಸಂಘದ ಪರವಾಗಿ ಆಯೋಜಿಸಿರುವುದು ಅಭಿನಂದನೀಯ. ಕನ್ನಡ ಭಾಷೆಯ ಕಂಪು ಲೋಕಾದ್ಯಂತ ಪಸರಿಸಲಿ, ಭಾಗವಹಿಸಿದ ಎಲ್ಲ ಮಕ್ಕಳಿಗೂ ಶುಭವಾಗಲಿ ಎಂದರು.

ಮಕ್ಕಳ ಭಾಷಣ ಸ್ಪರ್ಧೆಯ ಫಲಿತಾಂಶವನ್ನು ಸಂಘದ ಅಧ್ಯಕ್ಷ ಪಾಂಡು ಎಲ್‌. ಶೆಟ್ಟಿ, ಗೌರವ ಅಧ್ಯಕ್ಷ ವಿಶ್ವನಾಥ ಪಿ. ಶೆಟ್ಟಿ, ಗೌರವ ಕೋಶಾಧಿಕಾರಿ ವಿಜಯ್‌ ಎಂ. ಶೆಟ್ಟಿ, ಸಲಹಾ ಸಮಿತಿ ಕಾರ್ಯಾಧ್ಯಕ್ಷ ಒ. ಪಿ. ಪೂಜಾರಿ, ಜತೆ ಕಾರ್ಯದರ್ಶಿ ರವೀಂದ್ರ ಕೆ. ಶೆಟ್ಟಿ, ಜತೆ ಕೋಶಾಧಿಕಾರಿ ಹರಿಪ್ರಸಾದ್‌ ಎಸ್‌. ಶೆಟ್ಟಿ, ಮಹಿಳಾ ವಿಭಾಗ ಕಾರ್ಯಾಧ್ಯಕ್ಷೆ ಪ್ರಮೀಳಾ ಎನ್‌. ಅಮೀನ್‌, ಯುವ ವಿಭಾಗ ಕಾರ್ಯಾಧ್ಯಕ್ಷ ಪೃಥ್ವಿರಾಜ್‌ ಎಸ್‌. ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಮಂಜುನಾಥ ಎನ್‌. ಶೆಟ್ಟಿ ಕೊಡ್ಲಾಡಿ ಅವರು ಘೋಷಿಸಿದರು.

ಮುಂಬಯಿಯ ಹೆಸರಾಂತ ಉದ ಯೋನ್ಮುಖ ಗಾಯಕ ವಿಜಯ್‌ ಶೆಟ್ಟಿ ಮೂಡುಬೆಳ್ಳೆಯವರಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ಜರಗಿತು. ಮಕ್ಕಳ ಭಾಷಣ ಸ್ಪರ್ಧೆ ಯಶಸ್ವಿಯಾಗಿ ನೆರವೇರಿಸುವಲ್ಲಿ ಸಹಕರಿಸಿದ ರಾಮಚಂದ್ರ ಡಿ. ಹೆಗ್ಡೆ, ನವೀನ್‌ ಎಂ. ಶೆಟ್ಟಿ, ಪ್ರಮೀಳಾ ಎನ್‌. ಅಮೀನ್‌, ಪೃಥ್ವಿರಾಜ್‌ ಎಸ್‌. ಶೆಟ್ಟಿ ಅವರನ್ನು ಗೌರವಿಸಲಾಯಿತು. ಸಂಘದ ಉಪಾಧ್ಯಕ್ಷ ದೇವೇಂದ್ರ ಬಿ. ಬುನ್ನನ್‌ ವಂದಿಸಿದರು. ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ವಿಜಯ್‌ ಪಿ. ಶೆಟ್ಟಿ ಕುತ್ತೆತ್ತೂರು ಕಾರ್ಯಕ್ರಮ ನಿರೂಪಿಸಿದರು.

ಮಕ್ಕಳ ಭಾಷಣ ಸ್ಪರ್ಧೆಗೆ ತೀರ್ಪುಗಾರರಾಗಿ ಗೋವಿಂದದಾಸ ಕಾಲೇಜು ಸುರತ್ಕಲ್‌ ಇದರ ಉಪನ್ಯಾಸಕ ರಾಕೇಶ್‌ ಹೊಸಬೆಟ್ಟು, ಪ್ರಾಧ್ಯಾಪಕಿ ಮತ್ತು ಸಾಹಿತಿ ವಿಜಯಾ ಶೆಟ್ಟಿ ಸಾಲೆತ್ತೂರು ಹಾಗೂ ಕೆನರಾ ಕಾಲೇಜು ಮಂಗಳೂರಿನ ಉಪನ್ಯಾಸಕ, ಖ್ಯಾತ ಟಿವಿ ನಿರೂಪಕ ಡಾ| ಅರುಣ್‌ ಉಳ್ಳಾಲ್‌ ಸಹಕರಿಸಿದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.