ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸಂವಾದ ಕಾರ್ಯಕ್ರಮ


Team Udayavani, Mar 31, 2019, 8:36 PM IST

3003mum01

ಮುಂಬಯಿ: ಪ್ರತಿಯೊಬ್ಬರಲ್ಲೂ ಅಡಗಿರುವ ಕೌಶಲವು ಶ್ರಮದ ಬೆಂಬಲ ಪಡೆದಾಗ ಮಾತ್ರ ವಿನೂತನ ಹಾದಿಯಲ್ಲಿ ಮುನ್ನಡೆಯಲು ಹಾಗೂ ಉನ್ನತ ಸಾಧನೆ ಮಾಡಲು ಸಾಧ್ಯ ಎಂದು ಹೇರ್‌ ಸ್ಟೈಲೋ ಮೂಲಕ ಅಂತಾರಾಷ್ಟ್ರೀಯ ಪ್ರಸಿದ್ಧಿ ಗಿಟ್ಟಿಸಿಕೊಂಡಿರುವ ಮುಂಬಯಿಯ ಖ್ಯಾತ ಕೇಶ ವಿನ್ಯಾಸಕಾರ, ಶಿವಾಸ್‌ ಹೇರ್‌ ಡಿಝೈನರ್ ಪ್ರೈವೇಟ್‌ ಲಿಮಿಟೆಡ್‌ನ‌ ಆಡಳಿತ ನಿರ್ದೇಶಕ ಡಾ| ಶಿವರಾಮ ಕೆ. ಭಂಡಾರಿ ಅವರು ಹೇಳಿದರು.

ಮಾ. 28ರಂದು ಉಜಿರೆಯ ಎಸ್‌ಡಿಎಂ ಸ್ನಾತಕೋತ್ತರ ವಿಭಾಗದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ (ಮಾಸ್‌ ಕಮ್ಯೂನಿಕೇಶನ್‌ ಆ್ಯಂಡ್‌ ಜರ್ನಲಿಸಂ) ವಿಭಾಗದಲ್ಲಿ ಆಯೋಜಿಸಿದ್ದ ವಿಶೇಷ ಸಂವಾದ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. ಬಾಳಾಸಾಹೇಬ್‌ ಠಾಕ್ರೆ, ಅಮಿತಾಭ್‌ ಬಚ್ಚನ್‌ ಸೇರಿದಂತೆ ಬಾಲಿವುಡ್‌ನ‌ ಖ್ಯಾತ ಸಿನೆಮಾ ತಾರೆಯರ ಕೇಶವಿನ್ಯಾಸಕಾರರಾಗಿ ಗುರುತಿಸಿಕೊಂಡಿರುವ ಶಿವರಾಮ ಭಂಡಾರಿ ತಮ್ಮ ವೃತ್ತಿಪರ ಯಾನದ ವಿವಿಧ ವಿವರಗಳನ್ನು ಈ ಸಂದರ್ಭದಲ್ಲಿ ಪ್ರಸ್ತಾಪಿಸಿದರು. ದಕ್ಷಿಣ ಕನ್ನಡದ ಹಳ್ಳಿಯ ಹಿನ್ನೆಲೆಯೊಂದಿಗೆ ಮುಂಬಯಿ ಜಗತ್ತನ್ನು ಪ್ರವೇಶಿಸಿ ಬದುಕನ್ನು ಕಟ್ಟಿಕೊಂಡ ಬಗೆಯನ್ನು ವಿವರಿಸುತ್ತಾ, ಕುಲಕಸಬು ಎನ್ನುವುದು ಭಾರತೀಯರಿಗೆ ಪಾವಿತ್ರÂ ಹಾಗೂ ವಿಶಿಷ್ಟವಾಗಿದ್ದು ಇಂತಹ ಕುಲವೃತ್ತಿಯ ಸಾಧನೆ ಪ್ರತಿಷ್ಠೆ ಮತ್ತು ನೆಮ್ಮದಿಗೆ ಪೂರಕವಾಗಿದೆ. ಅತ್ಯಂತ ಕಡಿಮೆ ಸಂಬಳದೊಂದಿಗೆ ಶುರುವಾದ ಕೇಶವಿನ್ಯಾಸದ ವೃತ್ತಿಪರಯಾನ 250ಕ್ಕಿಂತಲೂ ಹೆಚ್ಚಿನ ಸಿಬಂದಿವರ್ಗ ಹೊಂದಿ ಬೃಹತ್‌ ಸಂಸ್ಥೆಯನ್ನು ಸ್ಥಾಪಿಸುವುದರೊಂದಿಗೆ ಯಶಸ್ಸಿನ ಉತ್ತುಂಗ ತಲಪಿದ್ದನ್ನು ನೆನಪಿಸಿಕೊಂಡರು. ಕಷ್ಟಗಳ ಮಧ್ಯೆಯೇ ಸಾಧಿಸುವ ಛಲ ಬಿಟ್ಟುಕೊಡದ ಕಾರಣಕ್ಕಾಗಿಯೇ ಬಾಲಿವುಡ್‌ನ‌ಲ್ಲಿ ವಿಭಿನ್ನ ಕೇಶವಿನ್ಯಾಸಕಾರ ಎಂಬ ಮೆಚ್ಚುಗೆಗೆ ಪಾತ್ರನಾಗಲು ಸಾಧ್ಯವಾಯಿತು. ಪ್ರತಿಯೊಬ್ಬರೂ ಕಷ್ಟಗಳ ನಡುವೆಯೇ ಬದುಕನ್ನು ಕಟ್ಟಿಕೊಳ್ಳಬೇಕು. ಕಷ್ಟಗಳು ಪ್ರತಿಭೆಯ ಮೇಲೆ ಸವಾರಿ ಮಾಡುವ ಅವಕಾಶ ಕೊಡ
ಬಾರದು. ಪ್ರತಿಭೆಯನ್ನು ಸಕಾಲಿಕವಾಗಿ ಪೂರಕ ವಾಗಿಸಿಕೊಂಡು ಬೆಳೆದು ನಿಲ್ಲುವ ಉತ್ಸಾಹ ಮತ್ತು ಶ್ರಮಿಸುವ ಶ್ರದ್ಧೆಯೊಂದಿಗೆ ಮುನ್ನಡೆದರೆ ಯಶಸ್ಸು ಸಾಧ್ಯವಾಗುತ್ತದೆ ಎಂದರು.

ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಇದರ ಗೌರವ ಪ್ರಧಾನ ಕಾರ್ಯದರ್ಶಿ, ಪತ್ರಕರ್ತ ರೋನ್ಸ್‌ ಬಂಟ್ವಾಳ್‌ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಪರಿಸರ ಕಾಳಜಿ ಸಾಮುದಾಯಿಕವಾಗಿ ವ್ಯಕ್ತವಾಗಬೇಕಾದ ಅಗತ್ಯವನ್ನು ಪ್ರತಿಪಾದಿಸಿದರು. ಮಹಾ ನಗರಗಳು ಸೇರಿದತೆ ಗ್ರಾಮೀಣ ಪ್ರದೇಶಗಳಲ್ಲೂ ಸದ್ಯ ಪ್ರಾಣಿ, ಪಕ್ಷಿ ಸೇರಿದಂತೆ ಜೀವಜಗತ್ತಿನ ಬಗ್ಗೆ ನಿರ್ಲಕ್ಷ್ಯಧೋರಣೆ ಮುಂದುವರಿಯುತ್ತಿದೆ. ಆ ಮೂಲಕ ಜೀವಪರ ಕಾಳಜಿ ಕಣ್ಮರೆಯಾಗುತ್ತಿದೆ. ಪರಿಸರ ಮತ್ತು ಜೀವಜಗತ್ತಿನ ಕುರಿತು ಕಾಳಜಿ ಮೂಡಿಸುವ ನಿಟ್ಟಿನಲ್ಲಿ ಪಾಮಾಣಿಕ ಪ್ರಯತ್ನ ಅತ್ಯವಶ್ಯ.
ವಿದ್ಯಾರ್ಥಿಗಳು ಅಧ್ಯಯನನಿರತರಾದ ಸಂದರ್ಭದಲ್ಲಿ ಸಮಾಜಕ್ಕೆ ಉಪಯುಕ್ತ ಆಗಬಲ್ಲ ಬರಹಗಳನ್ನು ಬರೆಯುವುದರ ಕಡೆಗೆ ವಿಶೇಷ ಆಸಕ್ತಿ ತೋರಬೇಕು ಎಂದು ಸಲಹೆ ನೀಡಿದರು.

ಎಸ್‌. ಡಿ. ಎಂ ಸ್ನಾತಕೋತ್ತರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಗೀತಾ ಎ. ಜೆ. ಬಿಳಿನೆಲೆ, ಡಾ| ಎನ್‌. ಕೆ. ಪ್ರಬಾಕರ್‌, ಪತ್ರಕರ್ತ ಆರಿಫ್‌ ಕಲಕಟ್ಟಾ ಉಪಸ್ಥಿತರಿದ್ದು ಪ್ರೊ| ಎಂ. ಪಿ. ಶ್ರೀನಾಥ್‌ ಅರಸಿನಮಕ್ಕಿ ಸ್ವಾಗತಿಸಿ ಪ್ರಸ್ತಾವನೆಗೈದರು. ಪ್ರಾಧ್ಯಾಪಕ ಡಾ| ಹಂಪೇಶ್‌ ಕೆ. ಎಸ್‌. ವಂದಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.