“ಕಠಿನ ಪರಿಶ್ರಮದೊಂದಿಗೆ ಸದ್ಗುಣ ಬೆಳೆಸಿಕೊಳ್ಳಿ”


Team Udayavani, Feb 26, 2021, 8:38 PM IST

Cultivate virtue

ಮುಂಬಯಿ: ಪದವಿ ಪಡೆಯುವುದು ಜೀವನ ಶಿಕ್ಷಣದ ಪ್ರಾರಂಭ. ಸಾಧಿಸುವ ದೊಡ್ಡ ಗುರಿಗಳನ್ನು ಹೊಂದಿರಬೇಕು. ಆಯ್ಕೆ ಮಾಡಿದ ಕ್ಷೇತ್ರದಲ್ಲಿ ಹೊಸತನವನ್ನು ಹೊಂದಬೇಕು ಮತ್ತು ಆ ಗುರಿಗಳನ್ನು ಸಾಧಿಸಲು ಶ್ರಮಿಸಬೇಕು. ತಮ್ಮ ಕಠಿನ ಪರಿಶ್ರಮಕ್ಕೆ ಸದ್ಗುಣವನ್ನು ಸೇರಿಸಿ ದರೆ ಬಲವಾದ, ಸಮರ್ಥ ಮತ್ತು ಸ್ವಾವಲಂಬಿ ಭಾರತ ವನ್ನು ನಿರ್ಮಿಸಬಹುದು ಎಂದು ರಾಜ್ಯಪಾಲ ಭಗತ್‌ ಸಿಂಗ್‌ ಕೋಶ್ಯಾರಿ ಹೇಳಿದರು.

ಸೋಲಾಪುರದ ಪುಣ್ಯಶ್ಲೋಕ್‌ ಅಹಲ್ಯಾದೇವಿ ಹೊಲ್ಕರ್‌ ವಿಶ್ವವಿದ್ಯಾನಿಲಯದ 16ನೇ ಸಮಾ ವೇಶ ದಲ್ಲಿ ರಾಜ್ಯಪಾಲರು ಮಾತನಾಡಿ, ಯುವ ಜನತೆ ಸದ್ಗುಣಶೀಲ ಜನರೊಂದಿಗೆ ಬೆರೆತರೆ ಜೀವ ನವು ಯಶಸ್ವಿಯಾಗುತ್ತದೆ ಎಂದು ಹೇಳಿದ ರಾಜ್ಯ ಪಾಲರು, ಮುದ್ರಾ, ಸ್ಟಾರ್ಟ್‌ ಅಪ್‌ ಇಂಡಿಯಾ, ಪ್ರಧಾನ್‌ ಮಂತ್ರಿ ಕೌಶಲ ವಿಕಾಸ್‌ ಯೋಜನೆ ಇತ್ಯಾದಿಗಳ ಪ್ರಯೋಜನ ಪಡೆದುಕೊಂಡು ಸ್ವಾವಲಂಬಿಗಳಾಗಬೇಕೆಂದು ಸೂಚಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಶಾಸಕ ಸುಭಾಷ್‌ ದೇಶ್ಮುಖ್‌, ವಿಶ್ವವಿದ್ಯಾನಿಲಯದ ಉಪಕುಲಪತಿ ಮೃಣಾಲಿನಿ ಫಡ್ನವೀಸ್‌, ವಿಶ್ವವಿ ದ್ಯಾನಿಲ ಯದ ವಿವಿಧ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮಾಜಿ ಸಚಿವ ಸುಭಾಷ್‌ ದೇಶ್ಮುಖ್‌ ಪ್ರಸ್ತಾವಿಸಿ, ಪುಣ್ಯಶ್ಲೋಕ್‌ ಅಹಲ್ಯಾ ದೇವಿ ಹೊಲ್ಕರ್‌ ಸೋಲಾಪುರ ವಿಶ್ವವಿದ್ಯಾನಿಲಯವು ಸೋಲಾಪು ರದ ಒಂದು ಜಿಲ್ಲೆಗೆ ಮಾತ್ರ ಕಾರ್ಯನಿರ್ವಹಿ ಸುತ್ತಿ ರುವ ಏಕೈಕ ವಿಶ್ವವಿದ್ಯಾನಿಲಯವಾಗಿದೆ. ಜವಳಿ ಕಾರ್ಮಿಕರ ಕೌಶಲ ಹೆಚ್ಚಿಸಲು ವಿಶ್ವವಿದ್ಯಾನಿಲ ಯವು ಪ್ರಯತ್ನಗಳನ್ನು ಮಾಡಬೇಕೆಂದು ಸಲಹೆ ನೀಡಿದರು.

ಪುಣ್ಯಶ್ಲೋಕ್‌ ಅಹಲ್ಯಾದೇವಿ ಹೊಲ್ಕರ್‌ ಸೋಲಾಪುರ ವಿಶ್ವವಿದ್ಯಾನಿಲಯವು 92 ಕೌಶಲ ಅಭಿವೃದ್ಧಿ ಕೋರ್ಸ್‌ಗಳನ್ನು ಜಾರಿಗೊಳಿಸುತ್ತಿದೆ. ವಿಶ್ವವಿದ್ಯಾನಿಲಯವು ಸಮುದಾಯ ರೇಡಿಯೋ, ಅರ್ಥಶಾಸ್ತ್ರ ಪ್ರಯೋಗಾಲಯ ಮತ್ತು ಪುರಾತತ್ವ ವಸ್ತು ಸಂಗ್ರಹಾಲಯವನ್ನು ಸ್ಥಾಪಿಸುವ ಪ್ರಕ್ರಿಯೆ ಯಲ್ಲಿದೆ ಎಂದು ಉಪಕುಲಪತಿ ಮೃಣಾಲಿನಿ ಫಡ್ನವೀಸ್‌ ತಮ್ಮ ವರದಿಯಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ನಾಲ್ವರು ಶ್ರೇಷ್ಠ ವಿದ್ಯಾ ರ್ಥಿ ಗಳಿಗೆ ಚಿನ್ನದ ಪದಕಗಳನ್ನು ಮತ್ತು 4 ಪದವೀಧರರಿಗೆ ವಿದ್ಯಾವಾಚಸ್ಪತಿ ಪಿಎಚ್‌ಡಿ ಪದವಿ ನೀಡಲಾಯಿತು. ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಜೀವಮಾನ ಸಾಧನೆ ಪ್ರಶಸ್ತಿ, ಅತ್ಯುತ್ತಮ ಶಿಕ್ಷಣ ಸಂಸ್ಥೆ, ಅತ್ಯುತ್ತಮ ಕಾಲೇಜು, ಅತ್ಯುತ್ತಮ ಪ್ರಾಂಶುಪಾಲರು, ಅತ್ಯುತ್ತಮ ಶಿಕ್ಷಕರು ಮತ್ತು ಅತ್ಯುತ್ತಮ ಬೋಧಕೇತರ ಸಿಬಂದಿಯನ್ನು ಗೌರವಿಸಲಾಯಿತು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.