ದೆಹಲಿ ಕರ್ನಾಟಕ ಸಂಘ: ವಿವಿಧ ಬೇಡಿಕೆ ,ಸಿದ್ದರಾಮಯ್ಯಗೆ ಮನವಿ


Team Udayavani, Sep 20, 2017, 2:45 PM IST

17-Mum02.jpg

ಮುಂಬಯಿ: ದೆಹಲಿಯಲ್ಲಿ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ರಾಜ್ಯದ ಪ್ರವಾಸೋದ್ಯಮ ಇಲಾಖೆಯ ಅಧೀನ ಕಚೇರಿಯನ್ನು ಪ್ರಾರಂಭಿಸುವಂತೆ ಸೆ. 16ರಂದು ದೆಹಲಿಯ ಕರ್ನಾಟಕ ಭವನದಲ್ಲಿ ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ವಸಂತ ಶೆಟ್ಟಿ ಬೆಳ್ಳಾರೆ ಹಾಗೂ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ರಾಜಧಾನಿ ನವದೆಹಲಿಯಲ್ಲಿರುವ ತಮಿಳುನಾಡು ಭವನವು ಪೋಂಗಲ್‌, ಕೇರಳ ಭವನವು ಓಣಂ, ಮಹಾರಾಷ್ಟ್ರ ಭವನವು ಗಣೇಶ ಹಬ್ಬ, ಗೋವಾ ಭವನವು ಹೊಸ ವರ್ಷ ಮತ್ತು ಕ್ರಿಸ್‌ಮಸ್‌ಗಳಿಗೆ ತನ್ನತನವನ್ನು ತೋರಿಸಿಕೊಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತವೆ. ಆದರೆ ಕನ್ನಡೇತರರನ್ನು ತಲಪುವಲ್ಲಿ ನಮ್ಮ ರಾಜ್ಯದ ಭವನಗಳು ಹಿಂದೆ ಬಿದ್ದಿವೆ ಎನ್ನಬೇಕು. ರಾಜ್ಯದಿಂದ ಬರುವ ರಾಜಕಾರಣಿಗಳಿಗೆ ಮತ್ತು ಅಧಿಕಾರಿಗಳಿಗೆ ವಸತಿ ವ್ಯವಸ್ಥೆ ಮತ್ತು ವಿವಿಧ ಕಚೇರಿಗಳ ಸಂಪರ್ಕ ಕೊಂಡಿಯಾಗಿ ಸೀಮಿತವಾಗಿ ಈ ಭವನಗಳು ತಮ್ಮ ಕೆಲಸದ ವ್ಯಾಪ್ತಿಯನ್ನು ಸೀಮಿತಗೊಳಿಸಿವೆ. ರಾಜ್ಯ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ನವದೆಹಲಿಯಲ್ಲಿ ತನ್ನ ಕಚೇರಿಯನ್ನು ಹೊಂದಿ, ಕನ್ನಡ ಭಾಷೆ, ಸಂಸ್ಕೃತಿ ಹಾಗು ಕಲೆಗೆ ಒತ್ತುಕೊಟ್ಟು ಕೆಲಸ ಮಾಡಬೇಕಾಗಿದೆ ಎಂದು ಮನವಿಯಲ್ಲಿ ತಿಳಿಸಲಾಯಿತು.

ಅದೇ ರೀತಿ ಒಂದೊಮ್ಮೆ ಕಾಲದಲ್ಲಿ ಉತ್ತಮ ಸಂಪರ್ಕ ಕೇಂದ್ರವಾಗಿದ್ದ ಕರ್ನಾಟಕದ ವಾರ್ತಾ ಕೇಂದ್ರವನ್ನು ಕೂಡಾ ಉತ್ತಮ ಮಟ್ಟಕ್ಕೆ ಏರಿಸಬೇಕಾಗಿದೆ. ಸಿಬಂದಿಗಳಿಗೆ ಸರಿಯಾದ ಕಚೇàರಿಯ ವ್ಯವಸ್ಥೆ, ಹೊರನಾಡಿನಿಂದ ಬರುವವರಿಗೆ ಮಾಹಿತಿ ಮತ್ತು ರಾಜ್ಯದ ಪ್ರಗತಿ ಮತ್ತು ಸಾಧನೆಯನ್ನು ದೇಶದ ರಾಜಧಾನಿಯನ್ನು ಪಸರಿಸುವ ಕೆಲಸವನ್ನು ಮಾಡಬೇಕಾಗಿದೆ. ಕರ್ನಾಟಕವನ್ನು ಹೊರ ರಾಜ್ಯಗಳಲ್ಲಿ ಕರ್ನಾಟಕ ಸರ್ಕಾರದ ವಾರ್ತಾ ಕೇಂದ್ರಗಳು ರಾಯಭಾರಿಯಾಗಿ ವಿವಿಧ ಕ್ಷೇತ್ರಗಳಲ್ಲಿನ ಮಾಹಿತಿಯನ್ನು ಹೊರನಾಡಿನ ಕನ್ನಡಿಗರೂ, ಕನ್ನಡೇತರರಿಗೂ ಹಾಗೂ ಕನ್ನಡದಲ್ಲಿ ಆಸಕ್ತಿ ಇರುವವರಿಗೆ ತಲುಪಿಸುವ ಕೆಲಸ ಮಾಡಬೇಕಾಗಿದೆ. ಅದರಲ್ಲೂ ಬೇರೆ-ಬೇರೆ ದೇಶಗಳ ರಾಯಭಾರಿ ಕಚೇರಿಗಳು, ಶೈಕ್ಷಣಿಕ  ಮತ್ತು ಸಾಂಸ್ಕೃತಿಕ ಕೇಂದ್ರಗಳು, ಪ್ರಭಾವಶಾಲಿ ವ್ಯಕ್ತಿಗಳು ಇರುವ ರಾಜಧಾನಿ ದೆಹಲಿಯಲ್ಲಿ ಕರ್ನಾಟಕ ವಾರ್ತಾ ಕೇಂದ್ರವಂತೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕವನ್ನು ಪ್ರಚಾರ ಮಾಡಲು ಹಲವು ಅವಕಾಶಗಳನ್ನು ಉಪಯೋಗಿಸಿಕೊಳ್ಳಬೇಕಾಗಿದೆ. ಕರ್ನಾಟಕ ಸರ್ಕಾರವು ಈ ಸೌಲಭ್ಯಗಳನ್ನು ಸರಿಯಾಗಿ ಬಳಸಲು ಕಾಯೊìàನ್ಮುಖವಾಗಬೇಕಾಗಿದೆ ಎಂದು ಮುಖ್ಯಮಂತ್ರಿಗಳಿಗೆ ತಿಳಿಸಲಾಯಿತು.

ವಾರ್ತಾ ಕೇಂದ್ರವು ರಾಜ್ಯದ ಮಂತ್ರಿಗಳ ಭಾಷಣಗಳನ್ನು ಮಾಧ್ಯಮಕ್ಕೆ ಬಿಡುಗಡೆ ಮಾಡುವುದಕ್ಕೆ, ಗಣರಾಜ್ಯೋತ್ಸವ ಸ್ಥಬ್ಧಚಿತ್ರಕ್ಕೆ ಮತ್ತು ರಾಜ್ಯೋತ್ಸವ ಸಂದರ್ಭದಲ್ಲಿ ಎರಡು ಮೂರು ದಿನಗಳ ರಾಜ್ಯೋತ್ಸವ ಆಚರಣೆಗಳನ್ನು ನಡೆಸುವುದರ ಜತೆಗೆ ಸಂಪೂರ್ಣ ರಾಜ್ಯದ ಜಾನಪದ, ಕಲೆ, ನಾಟಕ, ಸಂಗೀತ, ಚಾರಿತ್ರಿಕ, ಚಲನಚಿತ್ರ, ಶೈಕ್ಷಣಿಕ ಸಿರಿವಂತಿಕೆಯನ್ನು ಪ್ರಚಾರಪಡಿಸುವ ಕೇಂದ್ರವಾಗಬೇಕು. ಅದಕ್ಕಾಗಿ ಒಂದು ಸುಸಜ್ಜಿತ ಕಚೇರಿ, ಸಿಬಂದಿ ಮತ್ತು ಸಿಬಂದಿಗಳಿಗೆ ಬೇಕಾದ ಪರಿಕರ ಮತ್ತು ಅಧಿಕಾರವನ್ನು ನೀಡಬೇಕು. ದೆಹಲಿಯಲ್ಲಿ ಕರ್ನಾಟಕ ಸಂಘವೂ ಸೇರಿದಂತೆ ಹಲವು ಸಕ್ರಿಯ ಕನ್ನಡಪರ ಸಂಘ ಸಂಸ್ಥೆಗಳಿವೆ. ಅಲ್ಲದೆ ವಿವಿಧ ಕ್ಷೇತ್ರಗಳಲ್ಲಿ ಭಿನ್ನ ಭಿನ್ನ ಹುದ್ದೆಗಳಲ್ಲಿ ಕನ್ನಡಿಗರಿದ್ದಾರೆ.

ಇವರನ್ನೆಲ್ಲಾ ಒಟ್ಟು ಸೇರಿಸಿ ದೆಹಲಿಯಲ್ಲಿರುವ ಕನ್ನಡಿಗರು ರಾಜ್ಯಕ್ಕೆ ಏನು ಕೊಡುಗೆ ನೀಡಬಹುದು ಎನ್ನುವ ಕುರಿತು ಚಿಂತಿಸಿ ರಾಜ್ಯಕ್ಕೆ ಆಗಬಹುದಾದ ಹಲವು ಪ್ರಯೋಜನಗಳನ್ನು ಇವರಿಂದ ಪಡೆಯಬಹುದು. ಮಾತ್ರವಲ್ಲ ಇವರ ಮೂಲಕ ಕರ್ನಾಟಕವನ್ನು ದೆಹಲಿಯಲ್ಲಿ ಪ್ರತಿನಿಧಿಸುವ ಕೆಲಸ ಕಾರ್ಯವನ್ನು ಹಮ್ಮಿಕೊಳ್ಳಬಹುದು. ರಾಷ್ಟ್ರದ ರಾಜಧಾನಿಯಲ್ಲಿ ರಾಜ್ಯ ಸರ್ಕಾರದ ಪ್ರವಾಸೋದ್ಯಮ ಇಲಾಖೆಯನ್ನು ನವದೆಹಲಿಯಲ್ಲಿ ಸ್ಥಾಪಿಸುವುದು ಇಂದಿನ ಕಾಲ ಘಟ್ಟದಲ್ಲಿ ಅತ್ಯಂತ ಸೂಕ್ತ ಹಾಗೂ ಸಮಂಜಸವಾಗಿದೆ. ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ  ಹಲವಾರು ಪ್ರವಾಸಿಗರನ್ನು ಕರ್ನಾಟಕ ರಾಜ್ಯವು ಆಕರ್ಷಿಸುತ್ತಿದೆ. ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ರಾಜ್ಯದ ರಾಜಧಾನಿ ಕೇಂದ್ರ ಬಿಂದುವಾಗಿದೆ. ಕರ್ನಾಟಕ ಪ್ರವಾಸೋಧ್ಯಮವು ಪ್ರವಾಸಿಗರಿಗೆ ಹೆಚ್ಚಿನ ಆಯ್ಕೆಗಳನ್ನು ಕೊಡುತ್ತಿದೆ.

 ಕರ್ನಾಟಕದಲ್ಲಿ ನೂರಾರು ಪ್ರೇಕ್ಷಣೀಯ ಸ್ಥಳಗಳಿವೆ. ದೇಶ ಹಾಗೂ ವಿದೇಶದಿಂದ ಪ್ರವಾಸಿಗರನ್ನು ಸೆಳೆದು ರಾಜ್ಯದ ಪ್ರವಾಸೋಧ್ಯಮ ಅಭಿವೃದ್ಧಿಯಾಗಬೇಕಾದರೆ, ನವದೆಹಲಿಯಂತಹ ಪ್ರದೇಶದಲ್ಲಿ ಪ್ರವಾಸೋಧ್ಯಮ ಕಚೇರಿ ಹೊಂದುವುದು ಅತ್ಯವಶ್ಯಕ. ದೇಶದ ಬಹುತೇಕ ಎಲ್ಲಾ ರಾಜ್ಯಗಳು ಪ್ರವಾಸೋಧ್ಯಮ ಇಲಾಖೆಯ ಕಚೇರಿಗಳನ್ನು ಹೊಂದಿವೆ. ಆದರೆ  ರಾಜ್ಯದ ಪ್ರವಾಸೋಧ್ಯಮ ಇಲಾಖೆ ಕಚೇರಿಯು ಇರುವುದಿಲ್ಲ. ದೆಹಲಿಯಲ್ಲಿ ರಾಜ್ಯ ಪ್ರವಾಸೋಧ್ಯಮ ಕಚೇರಿ ಸ್ಥಾಪಿಸುವುದು  ಅವಶ್ಯಕವಾಗಿದೆ. ರಾಜ್ಯ ಸರ್ಕಾರವು ಈ ಕುರಿತು ತತ್‌ಕ್ಷಣ ಸ್ಪಂದಿಸಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಮತ್ತು ಪ್ರಚಾರ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಅಧೀನ ಕಚೇರಿಯನ್ನು ದೆಹಲಿಯಲ್ಲಿ ಪ್ರಾರಂಭಿಸಿ ರಾಜ್ಯದ ಸಾಂಸ್ಕೃತಿಕ ರಾಯಭಾರಿಯಾಗಿ ಕೆಲಸ ಮಾಡಲು ಸಂಪೂರ್ಣ ಸಹಕಾರ ಮತ್ತು ಅಗತ್ಯತೆಯನ್ನು ಪೂರೈಸಬೇಕು ಎಂದು ದೆಹಲಿ ಕರ್ನಾಟಕ ಸಂಘವು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿ ಮನವಿ ಸಲ್ಲಿಸಿತು.

ಟಾಪ್ ನ್ಯೂಸ್

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

Baharain1

ಮೊಗವೀರ್ಸ್‌ ಬಹ್ರೈನ್‌ ಪ್ರೊ ಕಬಡ್ಡಿ;ತುಳುನಾಡ್‌ ತಂಡ ಪ್ರಥಮ,ಪುನಿತ್‌ ಬೆಸ್ಟ್‌ All ರೌಂಡರ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.