![K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ](https://www.udayavani.com/wp-content/uploads/2024/12/KV-Narayan-415x234.jpg)
ಡೊಂಬಿವಲಿ ಮಂಜುನಾಥ ವಿದ್ಯಾಲಯ SSC ವಿದ್ಯಾರ್ಥಿಗಳ ಬೀಳ್ಕೊಡುಗೆ
Team Udayavani, Feb 23, 2017, 4:43 PM IST
![21-Mum08a.jpg](https://www.udayavani.com/wp-content/uploads/2017/02/23/21-Mum08a.jpg)
ಮುಂಬಯಿ: ಅಂಧಕಾರದಿಂದ ಬೆಳಕಿನೆಡೆಗೆ ಸಾಗುತ್ತ ಉಚ್ಚ ಶಿಕ್ಷಣವನ್ನು ಪಡೆದು ರಾಷ್ಟ್ರಸೇವೆಗೆ ಬದ್ಧರಾಗುವುದರ ಮೂಲಕ ಹೆತ್ತವರನ್ನು, ಕಲಿತ ಶಾಲೆಯನ್ನು, ಕಲಿಸಿದ ಗುರುಗಳನ್ನು ಎಂದಿಗೂ ಮರೆಯದೆ, ಅವರಿಗೆ ಕೀರ್ತಿ ತರುವ ಸಾಧನೆಯನ್ನು ಮಕ್ಕಳು ಮಾಡಬೇಕು. ಕೇವಲ ಶಿಕ್ಷಣವನ್ನು ಪಡೆದರೆ ಸಾಲದು, ಸುಸಂಸ್ಕೃತರಾಗಿ, ಆದರ್ಶಪ್ರಜೆಗಳಾಗಿ ಬೆಳೆಯಬೇಕು ಎಂದು ಡೊಂಬಿವಲಿ ಕರ್ನಾಟಕ ಸಂಘದ ಅಧ್ಯಕ್ಷ ವಿಟಲ ಎ. ಶೆಟ್ಟಿ ಅವರು ನುಡಿದರು.
ಫೆ. 15ರಂದು ಡೊಂಬಿವಲಿ ಕರ್ನಾಟಕ ಸಂಘ ಸಂಚಾಲಿತ ಮಂಜುನಾಥ ವಿದ್ಯಾಲಯದ ಸಭಾಗೃಹದಲ್ಲಿ ನಡೆದ ಸಂಸ್ಥೆಯ ಎಸ್ಎಸ್ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ದಿನಗಳಲ್ಲಿ ಶಿಕ್ಷಣದ ಮಹತ್ವ ಬಹಳಷ್ಟಿದೆ. ವಿಶ್ವವನ್ನೇ ಬದಲಾಯಿಸಬಲ್ಲ ಛಲವನ್ನು ಹೊಂದಿರುವ ವಿದ್ಯಾರ್ಥಿಗಳು ಮೊದಲು ತಮ್ಮನ್ನು ತಾವು ಪರಿವರ್ತಿಸಿಕೊಳ್ಳಬೇಕು ಎಂದು ಕರೆನೀಡಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ಡೊಂಬಿವಲಿ ಕರ್ನಾಟಕ ಸಂಘದ ಕಾರ್ಯಾಧ್ಯಕ್ಷ ಇಂದ್ರಾಳಿ ದಿವಾಕರ ಶೆಟ್ಟಿ ಅವರು ಮಾತನಾಡಿ, ಪ್ರತಿಯೊಬ್ಬರ ಜೀವನದಲ್ಲಿ ಎಡರು-
ತೊಡರುಗಳು ಬರುವುದು ಸಾಮಾನ್ಯ. ಅವುಗಳಿಗೆ ಎದೆಗುಂದದೆ ಹೋರಾಡಿದಾಗ ಮಾತ್ರ ಮನುಷ್ಯ ಯಶಸ್ವಿಯಾಗುತ್ತಾನೆ. ಹೋರಾಟ ನಮ್ಮಲ್ಲಿಯ ಗೆಲುವಿನ ಸಾಮರ್ಥ್ಯವನ್ನು ಹೆಚ್ಚಿಸುತ್ತಿದ್ದು, ವಿದ್ಯಾರ್ಥಿಗಳು ಈ ಮುಖಾಂತರ ಯಶಸ್ವಿಯಾಗಿ ಜೀವನವನ್ನು ಸಾರ್ಥಕಪಡಿಸಿಕೊಳ್ಳಬೇಕು ಎಂದು ಹೇಳಿದರು.
ಪ್ರಬಲವಾದ ಇಚ್ಛಾಶಕ್ತಿ ಹಾಗೂ ಸಾಧಿಸುವ ಛಲವನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಂಡು ಯಶಸ್ವಿ ಪ್ರಜೆಗಳಾಗಿ ಬಾಳಬೇಕು ಎಂದು ಸಂಘದ ಉಪ ಕಾರ್ಯಾಧ್ಯಕ್ಷ ಸುಕುಮಾರ್ ಎನ್. ಶೆಟ್ಟಿ ಅವರು ನುಡಿದರು. ಸಂಘದ ಉಪಾಧ್ಯಕ್ಷ ಡಾ| ದಿಲೀಪ್ ಖೋಪರ್ಡೆ ಅವರು ಶಿಕ್ಷಣ ವ್ಯಕ್ತಿಯ ಪರಿಪೂರ್ಣತೆಯ ಸ್ವರೂಪವಾಗಿದೆ ಎಂದು ನುಡಿದು ಶಿಕ್ಷಣದ ಮಹತ್ವವನ್ನು ವಿವರಿಸಿದರು.
ಸಂಘದ ಕಾರ್ಯದರ್ಶಿ ದೇವದಾಸ್ ಕುಲಾಲ್, ಶಾಲೆಯ ಇಂಗ್ಲೀಷ್ ವಿಭಾಗದ ಮುಖ್ಯ ಶಿಕ್ಷಕಿ ಕಸ್ತೂರಿ ಕೆ., ಕನ್ನಡ ವಿಭಾಗದ ಮುಖ್ಯಶಿಕ್ಷಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನಗೈದರು. ಎಸ್ಎಸ್ಸಿ ವಿದ್ಯಾರ್ಥಿಗಳು ತಮ್ಮ ಶಾಲಾ ಜೀವನದ ಬಗ್ಗೆ ಮಾತನಾಡಿದರು. ಹಿರಿಯ ಶಿಕ್ಷಕಿ ಸುಪ್ರಿಯಾ ಶೆಟ್ಟಿ, ಗೌರಿ ಕೊಡಿಯಾಳ, ರಮಾ ತೋರವಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಶಿಕ್ಷಕಿ ಲತಾ ರಮೇಶ್ ಸ್ವಾಗತಿಸಿ ವಂದಿಸಿದರು. ಸುರೇಖಾ ಪಂಡಿತ್ ಕಾರ್ಯಕ್ರಮವನ್ನು ಸಂಯೋಜಿಸಿದ್ದರು.
ಟಾಪ್ ನ್ಯೂಸ್
![K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ](https://www.udayavani.com/wp-content/uploads/2024/12/KV-Narayan-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ](https://www.udayavani.com/wp-content/uploads/2024/12/ASU1-150x100.jpg)
ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ
![Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ](https://www.udayavani.com/wp-content/uploads/2024/12/Bay1-150x85.jpg)
Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ
![ಕ್ಲೀವ್ ಲ್ಯಾಂಡ್: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ](https://www.udayavani.com/wp-content/uploads/2024/12/Land1-150x83.jpg)
ಕ್ಲೀವ್ ಲ್ಯಾಂಡ್: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ
![Baharain1](https://www.udayavani.com/wp-content/uploads/2024/12/Baharain1-150x95.jpg)
ಮೊಗವೀರ್ಸ್ ಬಹ್ರೈನ್ ಪ್ರೊ ಕಬಡ್ಡಿ;ತುಳುನಾಡ್ ತಂಡ ಪ್ರಥಮ,ಪುನಿತ್ ಬೆಸ್ಟ್ All ರೌಂಡರ್
![ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ](https://www.udayavani.com/wp-content/uploads/2024/12/Cali1-150x71.jpg)
ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ
MUST WATCH
ಹೊಸ ಸೇರ್ಪಡೆ
![Battery theft at Dharwad District Collector’s Office](https://www.udayavani.com/wp-content/uploads/2024/12/dc-2-150x87.jpg)
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
![K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ](https://www.udayavani.com/wp-content/uploads/2024/12/KV-Narayan-150x84.jpg)
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
![Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ](https://www.udayavani.com/wp-content/uploads/2024/12/shiv-150x87.jpg)
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
![Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!](https://www.udayavani.com/wp-content/uploads/2024/12/bomb-2-150x100.jpg)
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
![Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ](https://www.udayavani.com/wp-content/uploads/2024/12/trump-3-150x84.jpg)
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.