ದುಬೈ ಗೆ ಹಾರಿದ ಸಾಂಗ್ಲಿ ಜಿಲ್ಲೆಯ ತಡಾಸರ್ ರೈತರು ಬೆಳೆದ ಡ್ರ್ಯಾಗನ್ ಹಣ್ಣುಗಳು


Team Udayavani, Jun 28, 2021, 2:54 PM IST

Dragon Fruits

ಮುಂಬಯಿ,: ಹಣ್ಣಿನ ರಫ್ತಿಗೆ ಪ್ರಮುಖ ಉತ್ತೇಜನ ನೀಡುವಂತೆ ಕಮಲಂ ಎಂದೂ ಕರೆಯಲ್ಪಡುವ ಫೈಬರ್‌ ಮತ್ತು ಖನಿಜ ಸಮೃದ್ಧ ಡ್ರ್ಯಾಗನ್‌ ಹಣ್ಣುಗಳನ್ನು ದುಬೈ ಗೆ ರಫ್ತು ಮಾಡಲಾಗಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ತಿಳಿಸಿದೆ.  ಡ್ರ್ಯಾಗನ್‌ ಹಣ್ಣುಗಳನ್ನು ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ತಡಾಸರ್‌ ಗ್ರಾಮದ ರೈತರಿಂದ ಪಡೆಯಲಾಗಿದೆ ಮತ್ತು ಇದನ್ನು ಎಪಿಇಡಿಎ ಮಾನ್ಯತೆ ಪಡೆದ ರಫ್ತುದಾರ-ಕೇ ಬೀ ಯಲ್ಲಿ ಸಂಸ್ಕರಿಸಿ ಪ್ಯಾಕ್‌ ಮಾಡಲಾಗಿದೆ ಎಂದು ಸಚಿವಾಲಯ ಹೇಳಿದೆ.

ವೈಜ್ಞಾನಿಕವಾಗಿ ಹೈಲೋಸೆರುಸುಂಡಾಟಸ್‌ ಎಂದು ಕರೆಯಲ್ಪಡುವ ಡ್ರ್ಯಾಗನ್‌ ಹಣ್ಣನ್ನು ಮಲೇಷ್ಯಾ, ಥೈಲ್ಯಾಂಡ್‌, ಫಿಲಿಪೈನ್ಸ್‌, ಯುಎಸ್‌ಎ ಮತ್ತು ವಿಯೆಟ್ನಾಂನಂತಹ ದೇಶಗಳಲ್ಲಿ ಬೆಳೆಯಲಾಗುತ್ತದೆ. ಡ್ರ್ಯಾಗನ್‌ ಹಣ್ಣು ಉತ್ಪಾದನೆಯು 1990ರ ದಶಕದ ಆರಂಭದಲ್ಲಿ ಭಾರತದಲ್ಲಿ ಪ್ರಾರಂಭವಾಗಿದ್ದು, ಮನೆ ತೋಟಗಳಾಗಿ ಬೆಳೆಸಲಾಯಿತು. ಡ್ರ್ಯಾಗನ್‌ ಹಣ್ಣು ದೇಶದಲ್ಲಿ ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಜನಪ್ರಿಯವಾಗಿದೆ. ಇದನ್ನು ವಿವಿಧ ರಾಜ್ಯಗಳ ರೈತರು ಕೃಷಿ ಮಾದರಿಯಲ್ಲೇ ಬೆಳೆಸಿಕೊಂಡಿದ್ದಾರೆ.

ಪ್ರಸ್ತುತ ಡ್ರ್ಯಾಗನ್‌ ಹಣ್ಣನ್ನು ಹೆಚ್ಚಾಗಿ ಕರ್ನಾಟಕ, ಕೇರಳ, ತಮಿಳುನಾಡು, ಮಹಾರಾಷ್ಟ್ರ, ಗುಜರಾತ್‌, ಒಡಿಶಾ, ಪಶ್ಚಿಮ ಬಂಗಾಲ, ಆಂಧ್ರಪ್ರದೇಶ ಮತ್ತು ಅಂಡಮಾನ್‌  ನಿಕೋಬಾರ್‌ನಲ್ಲಿ ಬೆಳೆಯಲಾಗುತ್ತದೆ. ಈ ಹಣ್ಣಿನ ಕೃಷಿಗೆ ಕಡಿಮೆ ನೀರು ಬೇಕಾಗುತ್ತದೆ ಮತ್ತು ವಿವಿಧ ರೀತಿಯ ಮಣ್ಣಿನಲ್ಲಿ ಬೆಳೆಯಬಹುದು.  ಹಣ್ಣಿನಲ್ಲಿ ಮೂರು ಪ್ರಮುಖ ಪ್ರಭೇದಗಳಿವೆ.

ಪ್ರಧಾನಿ ನರೇಂದ್ರ ಮೋದಿ ಅವರು 2020ರ ಜುಲೈಯಲ್ಲಿ  ಮನ್‌ ಕಿ ಬಾತ್‌ ಕಾರ್ಯಕ್ರಮದಲ್ಲಿ ಗುಜರಾತ್‌ನ ಶುಷ್ಕ ಕಚ್‌ ಪ್ರದೇಶದಲ್ಲಿ ಡ್ರಾÂಗನ್‌ ಹಣ್ಣು ಬೆಳೆಸುವ ಬಗ್ಗೆ ಪ್ರಸ್ತಾವಿಸಿದ್ದರು. ಉತ್ಪಾದನೆಯಲ್ಲಿ ಭಾರತದ ಸ್ವಾವಲಂಬನೆ ಖಾತ್ರಿಪಡಿಸಿದ್ದಕ್ಕಾಗಿ ಹಣ್ಣಿನ ಕೃಷಿ ಮಾಡಿದ ಕಚ್‌ ರೈತರನ್ನು ಅವರು ಅಭಿನಂದಿಸಿದ್ದರು. ಹಣ್ಣಿನಲ್ಲಿ ಫೈಬರ್‌, ವಿಟಮಿನ್‌, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳು ಇರುತ್ತವೆ. ಇದು ಆಕ್ಸಿಡೇಟಿವ್‌ ಒತ್ತಡದಿಂದ ಉಂಟಾಗುವ ಜೀವಕೋಶದ ಹಾನಿಯನ್ನು ಸರಿಪಡಿಸಲು ಮತ್ತು ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುವುದಲ್ಲದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ. ಈ ಹಣ್ಣಿನಲ್ಲಿ ಕಮಲವನ್ನು ಹೋಲುವ ಸ್ಪೆçಕ್‌ಗಳು ಮತ್ತು ದಳಗಳು ಇರುವುದರಿಂದ ಇದನ್ನು ಕಮಲಂ ಎಂದೂ ಕರೆಯಲಾಗುತ್ತದೆ.

ಮೂಲ ಸೌಕರ್ಯ ಅಭಿವೃದ್ಧಿ, ಗುಣಮಟ್ಟ ಅಭಿವೃದ್ಧಿ ಮತ್ತು ಮಾರುಕಟ್ಟೆ ಅಭಿವೃದ್ಧಿ ಮೊದಲಾದ ವಿವಿಧ ಘಟಕಗಳ ಅಡಿಯಲ್ಲಿ ರಫ್ತುದಾರರಿಗೆ ನೆರವು ನೀಡುವ ಮೂಲಕ ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತುಗಳನ್ನು ಎಪಿಇಡಿಎ ಉತ್ತೇಜಿಸುತ್ತದೆ. ಇದಲ್ಲದೆ ವಾಣಿಜ್ಯ ಇಲಾಖೆಯು ರಫ್ತು ಯೋಜನೆಗಾಗಿ ವ್ಯಾಪಾರ ಮೂಲ ಸೌಕರ್ಯ, ಮಾರುಕಟ್ಟೆ ಪ್ರವೇಶ ಉಪಕ್ರಮ ಮೊದಲಾದ ವಿವಿಧ ಯೋಜನೆಗಳ ಮೂಲಕ ರಫ್ತಿಗೆ ಸಹಕರಿಸಲಾಗುತ್ತದೆ.

 

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.