ವಾರ್ಷಿಕ ಗುರುಮೂರ್ತಿ ಪ್ರತಿಷ್ಠಾಪನ ದಿನಾಚರಣೆ, ಆಹಾರ ಕಿಟ್‌ ವಿತರಣೆ


Team Udayavani, Jul 9, 2021, 12:15 PM IST

Food Kit Delivery

ಮುಂಬಯಿ: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ಬೊರಿವಿಲಿ – ದಹಿಸರ್‌ ಸ್ಥಳೀಯ ಕಚೇರಿಯ ವತಿಯಿಂದ ಜು. 6ರಂದು ಬೆಸ್ಟ್‌ ಕ್ವಾಟ್ರìಸ್‌, ಬಿಎಂಸಿ ಗ್ಯಾರೇಜಿನ ಹತ್ತಿರ, ಶಿಂಪೋಲಿ ರೋಡ್‌ ಗೊರಾಯಿ, ಬೊರಿವಿಲಿ ಪಶ್ಚಿಮದಲ್ಲಿರುವ ಸ್ಥಳೀಯ ಕಚೇರಿ ಗುರುಸನ್ನಿಧಿಯಲ್ಲಿ ಉಳೂ¤ರು ಶೇಖರ ಶಾಂತಿ ಮತ್ತು ಸಂಗಡಿಗರಿಂದ ಗುರುಮೂರ್ತಿ ಪ್ರತಿಷ್ಠಾಪನೆಯ ವಾರ್ಷಿಕ ದಿನಾಚರಣೆ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳು ಜರಗಿದವು.

ಬೆಳಗ್ಗೆ 7ರಿಂದ ಪ್ರಾರಂಭಗೊಂಡ ಧಾರ್ಮಿಕ ಕಾರ್ಯಕ್ರಮದಲ್ಲಿ ಮೂರ್ತಿಶುದ್ಧಿ, ವಿವಿಧ ಅಭಿಷೇಕ, ಅಲಂಕಾರ, ಮಂಗಳಾರತಿ ಕಾರ್ಯಕ್ರಮಗಳು ನೆರವೇರಿದವು. ಪೂಜಾ ಕೈಂಕರ್ಯದ ಯಜಮಾನತ್ವವನ್ನು ಮಾಜಿ ಕಾರ್ಯಾಧ್ಯಕ್ಷ ಜಿ. ಎಂ. ಕೋಟ್ಯಾನ್‌ ಮತ್ತು ಲೀಲಾ ದಂಪತಿ ವಹಿಸಿದ್ದರು. ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರಿಂದ ಭಜನ ಕಾರ್ಯಕ್ರಮ ಜರಗಿತು. ಮಂಗಳಾರತಿ, ಭಕ್ತರಿಗೆ, ಸದಸ್ಯರಿಗೆ ಪ್ರಸಾದ ವಿತರಣೆ ಜರಗಿತು.

ಇದೇ ಸಂದರ್ಭದಲ್ಲಿ  ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ಅಧ್ಯಕ್ಷ ಹರೀಶ್‌ ಜಿ. ಅಮೀನ್‌ ಅವರ ಮುಂದಾಳತ್ವದಲ್ಲಿ ಸಮಾಜದ ದಾನಿಗಳ ನೆರವಿನಿಂದ ಅಸೋಸಿಯೇಶನ್‌ನ ಎಲ್ಲ ಸ್ಥಳೀಯ ಕಚೇರಿಗಳಿಗೆ ಕೊರೊನಾ

ದಿಂದ ಆರ್ಥಿಕ ಬಿಕ್ಕಟ್ಟಿನಲ್ಲಿ ತೊಂದರೆಗೀ ಡಾದ ಸಮಾಜದ ಬಡ ಅಶಕ್ತ ಕುಟುಂ ಬಗಳಿಗೆ ಕೊಡಮಾಡಿದ ಆಹಾರ ಕಿಟ್‌ಗಳನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಸ್ಥಳೀಯ ಕಚೇರಿಯ ಕಾರ್ಯಾಧ್ಯಕ್ಷ ಮೋಹನ್‌ ಬಿ. ಅಮೀನ್‌ ಮಾತನಾಡಿ, ಸಂಸ್ಥೆಯ ಹಿರಿಯರ ಮಾರ್ಗದರ್ಶನದ ಮೂಲಕ ಹಲವಾರು ಜನಪರ ಕಾರ್ಯಕ್ರಮ ಗಳನ್ನು ನೀಡಿ ಆ ಮೂಲಕ ಸಮಾಜದ ಬಡವರ್ಗದ ಜನರಿಗೆ ಹಿಂದಿನಿಂದಲೂ ಬಿಲ್ಲವರ ಅಸೋಸಿಯೇಶನ್‌ ಆಶಾಕಿರ ಣವಾಗಿ ಸಮಾಜದ ಜನರ ಸುಖ, ದುಃಖಗಳಿಗೆ ಸ್ಪಂದಿಸುತ್ತ ಬಂದ ಸಂಸ್ಥೆಯಾಗಿದೆ. ಕೊರೊನಾದಿಂದ ಜಗತ್ತೇ ಸಂಕಷ್ಟಕ್ಕೊಳಗಾಗಿರುವ ಸಮಯದಲ್ಲಿ ಸಮಾಜದ ಹಲವಾರು ಕುಟುಂಬ ಗಳುಗಳು ಕಂಗೆಟ್ಟಿದ್ದು, ಇಂತಹ ಪರಿಸ್ಥಿತಿ ಯಲ್ಲಿ ನಾರಾಯಣಗುರುಗಳ ತತ್ತÌದಂತೆ ಸಂಘಟನೆಯಿಂದ ನಾವೆಲ್ಲ ಬಲಯುತರಾಗಿ ಆರ್ಥಿಕ ಸಂಕಷ್ಟದ ಕುಟುಂಬಗಳಿಗೆ ಸಹಾಯ ಮಾಡಲು ಮುಂದಾಗೋಣ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಕಚೇರಿಯ ಉಪ ಕಾರ್ಯಾಧ್ಯಕ್ಷ ರಜಿತ್‌ ಎಲ್‌. ಸುವರ್ಣ, ಗೌರವ ಕಾರ್ಯದರ್ಶಿ ಶೇಖರ್‌ ಅಮೀನ್‌, ಜತೆ ಕಾರ್ಯದರ್ಶಿ ವತ್ಸಲಾ ಕೆ. ಪೂಜಾರಿ, ಜತೆ ಕೋಶಾಧಿಕಾರಿ ಉಮೇಶ್‌ ಜಿ. ಕೋಟ್ಯಾನ್‌, ಕೃಷ್ಣರಾಜ್‌ ಸುವರ್ಣ, ಕೇಶರಂಜನ್‌ ಮೂಲ್ಕಿ, ರಾಘು ಜಿ. ಪೂಜಾರಿ, ಚಂದ್ರಶೇಖರ ಎ. ಪೂಜಾರಿ, ಸುಂದರಿ ಪೂಜಾರಿ, ಕೇಂದ್ರ ಕಚೇರಿ ಉಪ ಯುವ ಸಮಿತಿಯ ಕಾರ್ಯಾಧ್ಯಕ್ಷ ನಾಗೇಶ್‌ ಎಂ. ಕೋಟ್ಯಾನ್‌, ಕೇಂದ್ರ ಕಚೇರಿಯ ಜತೆ ಕಾರ್ಯದರ್ಶಿ ಕೇಶವ ಕೋಟ್ಯಾನ್‌, ಮಾಜಿ ಕಾರ್ಯದರ್ಶಿ ಧರ್ಮಪಾಲ ಅಂಚನ್‌, ಭಾರತ್‌ ಕೋ-ಆಪರೇಟಿವ್‌ ಬ್ಯಾಂಕ್‌ ಬೊರಿವಿಲಿ ಪೂರ್ವ ಶಾಖಾ ಪ್ರಬಂಧಕ ಅಶೋಕ್‌ ಶೆಟ್ಟಿ, ಭಾರತ್‌ ಬ್ಯಾಂಕ್‌ ಬೊರಿವಲಿ ಪಶ್ಚಿಮ ಶಾಖೆಯ ಕಸ್ತೂರಿ ಅಮೀನ್‌, ದಯಾನಂದ ಸುವರ್ಣ, ಕರುಣಾಕರ ಪೂಜಾರಿ, ವಾರಿಜಾ ಕೆ. ಸನಿಲ್‌, ಸುಜಾತಾ ಕೆ. ಪೂಜಾರಿ, ಆರ್‌. ಡಿ. ಕೋಟ್ಯಾನ್‌, ಹರೀಶ್‌ ಕೋಟ್ಯಾನ್‌, ರವಿ ಪೂಜಾರಿ, ಶಿವಾನಂದ ಪೂಜಾರಿ, ಅಶೋಕ್‌ ನಿಂಜೂರು ಉಪಸ್ಥಿತರಿದ್ದರು.

ಪರಿಸರದ ಸಮಾಜದ ಬಡ ಕುಟುಂಬಗಳಿಗೆ ಕೇಂದ್ರ ಕಚೇರಿ ನೀಡಿದ ಆಹಾರದ ಪೊಟ್ಟಣಗಳನ್ನು ಕಾರ್ಯ ಕ್ರಮದಲ್ಲಿ ಸಮಿತಿಯ ಪದಾಧಿಕಾರಿಗಳು, ಅತಿಥಿಗಳು ವಿತರಿಸಿದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.