ಜನಮನ ಗೆದ್ದ ಗೋರೆಗಾಂವ್‌ ಕರ್ನಾಟಕ ಸಂಘದ  ಸಾಂಸ್ಕೃತಿಕ ವೈವಿಧ್ಯ


Team Udayavani, Apr 3, 2018, 12:19 PM IST

0204mum03.jpg

ಕಳೆದ ಅರ್ವತ್ತು ವರ್ಷಗಳಿಂದ ಮಹಾನಗರದಲ್ಲಿನ ಹಾಗೂ ನಾಡಿನ ಪ್ರತಿಭಾವಂತ ಕನ್ನಡಿಗರ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ವೇದಿಕೆಯನ್ನು ಕಲ್ಪಿಸುತ್ತಾ ಬಂದಿರುವ ಮುಂಬಯಿ ಕನ್ನಡಿಗರ ನೆಚ್ಚಿನ ಸಂಘಟನೆಯಾಗಿರುವ ಗೋರೆಗಾಂವ್‌ ಕರ್ನಾಟಕ ಸಂಘ ಪ್ರಸ್ತುತ ವಜ್ರಮಹೋತ್ಸವದ ಸಂಭ್ರಮದಲ್ಲಿದೆ.

ವಜ್ರಮಹೋತ್ಸವದ ಉದ್ಘಾಟನ ಸಮಾರಂಭವು ಇತ್ತೀಚೆಗೆ ಮಲಾಡ್‌ ಪಶ್ಚಿಮದ ಬಜಾಜ್‌ ಹಾಲ್‌ನಲ್ಲಿ ತ್ರಿವಳಿ ಕಾರ್ಯಕ್ರಮಗಳೊಂದಿಗೆ ದಿನಪೂರ್ತಿ ಅದ್ದೂರಿಯಾಗಿ ಜರಗಿತು. ಸಾಹಿತ್ಯಕ ವಿಚಾರ ಗೋಷ್ಠಿಗಳೊಂದಿಗೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಕಲಾಭಿಮಾನಿಗಳನ್ನು ಹಾಗೂ ಸಾಹಿತ್ಯಾಭಿಮಾನಿಗಳ ಗಮನ ಸೆಳೆಯುವಲ್ಲಿ ಯಶಸ್ವಿಯಾಯಿತು.

ಯುವ ನೃತ್ಯ ಕಲಾವಿದರು ವಿವಿಧತೆಯಿಂದ ಏಕತೆಯನ್ನು ಸಾರುವ ಕರ್ನಾಟಕದ ವಿವಿಧ ರೀತಿಯ ನೃತ್ಯ ಪ್ರಕಾರಗಳನ್ನು ಪ್ರಸ್ತುತಪಡಿಸಿ ಕಲಾಭಿಮಾನಿಗಳ ಮೆಚ್ಚುಗೆಗೆ ಪಾತ್ರರಾದರು. ಮಾತ್ರವಲ್ಲದೆ ಸಂಘದ ರಂಗಸ್ಥಳ ವಿಭಾಗದ ಸದಸ್ಯರು ಮತ್ತು ಉತ್ಸಾಹಿ ಮಹಿಳಾ ಕಲಾವಿದೆಯರುಗಳಿಂದ ಕಿರು ಹಾಸ್ಯ ಪ್ರಹಸನಗಳು ಸುಂದರವಾಗಿ ಮೂಡಿಬಂತು. ಸಂಘದ ಮಹಿಳಾ ಸದಸ್ಯರಿಂದ ಜಾನಪದ ಹಾಡುಗಳ ಗಾಯನ ಹಾಗೂ ಇತರ ಉಪ ವಿಭಾಗಗಳಿಂದ ವೈವಿಧ್ಯಮಯ ನೃತ್ಯಗಳು ಪ್ರದರ್ಶನಗೊಂಡಿತು.

ಸಮಾರಂಭದ ಕೊನೆಯಲ್ಲಿ ಗೋರೆಗಾಂವ್‌ ಕರ್ನಾಟಕ ಸಂಘದ ಮಾಜಿ ಅಧ್ಯಕ್ಷ, ತೆಂಕು-ಬಡುಗು ತಿಟ್ಟಿನ ಯಕ್ಷಗಾನ ಭಾಗವತ, ಯಕ್ಷನೃತ್ಯ ಗುರು, ನಿರ್ದೇಶಕ ದೇವಲ್ಕುಂದ ಭಾಸ್ಕರ ಶೆಟ್ಟಿ ಇವರ ನಿರ್ದೇಶನದಲ್ಲಿ ಸಂಘದ ಮಹಿಳಾ ಸದಸ್ಯೆಯರಿಂದ ಶಶಿಪ್ರಭ ಪರಿಣಯ ಯಕ್ಷಗಾನ ತಾಳಮದ್ದಳೆಯು ವಿಶೇಷವಾಗಿ ಆಕರ್ಷಣೀಯ ಆಗಿ ನಡೆ ಯಿತು. ಮಹಿಳಾ ವಿಭಾಗದ ಕಲಾವಿದೆಯರು ಒಬ್ಬರಿಂದೊಬ್ಬರು ತಮ್ಮ ವಾಕ್ಚಾತುರ್ಯದಿಂದ ಕಲಾಭಿಮಾನಿಗಳ ಪ್ರಶಂಸೆಗೆ ಪಾತ್ರರಾದರು. ಒಟ್ಟಿನಲ್ಲಿ ದಿನಪೂರ್ತಿ ನಡೆದ ಕಾರ್ಯಕ್ರಮವು ಹಲವು ವಿಶೇಷತೆಗಳಿಗೆ ಕಾರಣವಾಯಿತು.

ತನ್ನ ವೈವಿಧ್ಯಮಯ ಕಾರ್ಯಕ್ರಮ ಗಳೊಂದಿಗೆ ತುಳು- ಕನ್ನಡಿಗರ ಮನೆ- ಮನಗಳನ್ನು ಗೆದ್ದಿರುವ ಗೋರೆಗಾಂವ್‌ ಕರ್ನಾಟಕ ಸಂಘವು ವಜ್ರಮಹೋತ್ಸವ ಸಂಭ್ರಮದಲ್ಲಿರುವುದು  ನಮಗೆಲ್ಲ  ಅಭಿಮಾನದ ಸಂಗತಿಯಾಗಿದೆ. ಸಂಘವು ಸಾಹಿತ್ಯ ವಾಗಿ, ಸಾಂಸ್ಕೃತಿಕ ವಾಗಿ, ಧಾರ್ಮಿಕವಾಗಿ ಹಲವಾರು ವೈಶಿಷ್ಟÂತೆಗಳಿಗೆ ಸಾಕ್ಷಿಯಾಗಿದೆ. ಸಂಘದ ವಜ್ರಮಹೋತ್ಸವ ಸಂಭ್ರಮವು ಮುಂದಿನ ದಿನಗಳಲ್ಲಿ ಅದ್ದೂರಿಯಾಗಿ ಇನ್ನಷ್ಟು ಕಲಾವೈವಿಧ್ಯತೆಯೊಂದಿಗೆ ನಡೆಯಲಿ ಎನ್ನುವುದು ನಮ್ಮ ಹಾರೈಕೆ. 

ಈಶ್ವರ ಎಂ.ಐಲ್‌

ಟಾಪ್ ನ್ಯೂಸ್

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

Zeeka-Virus

Zika Virus: ಗರ್ಭಿಣಿಯರೇ ಝೀಕಾ ಬಗ್ಗೆ ಎಚ್ಚರ: ಸರಕಾರ ಸೂಚನೆ

MBPatil

Airport: ರಾಜಧಾನಿ ಸಮೀಪ ವಿಮಾನ ನಿಲ್ದಾಣಕ್ಕೆ ಜಾಗದ ಹುಡುಕಾಟ: ಎಂ.ಬಿ. ಪಾಟೀಲ್‌

Charmadi Ghat: ತಡೆಗೋಡೆ ಅಪಾಯದಲ್ಲಿ: ಕೊಚ್ಚಿ ಹೋಗುತ್ತಿರುವ ಮಣ್ಣು

Charmadi Ghat: ತಡೆಗೋಡೆ ಅಪಾಯದಲ್ಲಿ: ಕೊಚ್ಚಿ ಹೋಗುತ್ತಿರುವ ಮಣ್ಣು

1-a-da

Rain; ಭಾರತ ಮತ್ತು ದಕ್ಷಿಣ ಆಫ್ರಿಕಾ ವನಿತಾ ಟಿ20 ರದ್ದು

Heavy Rain ದ.ಕ.ದಲ್ಲಿ ಬಿರುಸಿನ ಗಾಳಿ-ಮಳೆ; ಕೆಲವೆಡೆ ಹಾನಿ

Heavy Rain ದ.ಕ.ದಲ್ಲಿ ಬಿರುಸಿನ ಗಾಳಿ-ಮಳೆ; ಕೆಲವೆಡೆ ಹಾನಿ

Udupi ಜ್ಞಾನ, ಭಕ್ತಿಯ ಶರಣಾಗತಿಯಿಂದ ಶ್ರೇಯಸ್ಸು: ಚಿತ್ರಾಪುರ ಶ್ರೀ

Udupi ಜ್ಞಾನ, ಭಕ್ತಿಯ ಶರಣಾಗತಿಯಿಂದ ಶ್ರೇಯಸ್ಸು: ಚಿತ್ರಾಪುರ ಶ್ರೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara:ತವರು ಮನೆ ಮಿಲನದ ಸಂಭ್ರಮ: ಕುಟುಂಬ, ಸಂಬಂಧದ ಮೌಲ್ಯವನ್ನು ತಿಳಿಸಿದ ಭೇಟಿ

Desi Swara:ತವರು ಮನೆ ಮಿಲನದ ಸಂಭ್ರಮ: ಕುಟುಂಬ, ಸಂಬಂಧದ ಮೌಲ್ಯವನ್ನು ತಿಳಿಸಿದ ಭೇಟಿ

Desi Swara: “ಆದ್ಯ ಪೂಜ್ಯ’ ಗಣೇಶನ ಅಷ್ಟ ಅವತಾರಗಳ ವಿಭಿನ್ನ, ಮನಮೋಹಕ ಪ್ರಸ್ತುತಿ

Desi Swara: “ಆದ್ಯ ಪೂಜ್ಯ’ ಗಣೇಶನ ಅಷ್ಟ ಅವತಾರಗಳ ವಿಭಿನ್ನ, ಮನಮೋಹಕ ಪ್ರಸ್ತುತಿ

Desi Swara: ಕ್ಷಮೆ ಕೇಳುವುದು ಹಿರಿದೋ? ಕ್ಷಮಿಸುವುದು ಹಿರಿದೋ?

Desi Swara: ಕ್ಷಮೆ ಕೇಳುವುದು ಹಿರಿದೋ? ಕ್ಷಮಿಸುವುದು ಹಿರಿದೋ?

Desi Swara: ವೈಯಕ್ತಿಕ ಸಂತೋಷ ಸದಾ ಜೀವಂತವಾಗಿರಲಿ

Desi Swara: ವೈಯಕ್ತಿಕ ಸಂತೋಷ ಸದಾ ಜೀವಂತವಾಗಿರಲಿ

Desi Swara: ಸುಮಧುರ ಸಂಗೀತ ಸಂಜೆ: ಮಲ್ಹಾರ್‌ 2.0 ಕಾರ್ಯಕ್ರಮ

Desi Swara: ಸುಮಧುರ ಸಂಗೀತ ಸಂಜೆ: ಮಲ್ಹಾರ್‌ 2.0 ಕಾರ್ಯಕ್ರಮ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

1-paris

Paris Olympics; ಅಲ್ಡ್ರಿನ್‌, ಅಂಕಿತಾ ಧ್ಯಾನಿಗೆ ಒಲಿಂಪಿಕ್ಸ್‌ ಟಿಕೆಟ್‌

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

1-eweweqw

Wrestling; ವಿನೇಶ್‌ ಫೋಗಾಟ್‌ ಗೆ ಸ್ವರ್ಣ ಪದಕ

Zeeka-Virus

Zika Virus: ಗರ್ಭಿಣಿಯರೇ ಝೀಕಾ ಬಗ್ಗೆ ಎಚ್ಚರ: ಸರಕಾರ ಸೂಚನೆ

1-a-chinna

Asian ಪೆಸಿಫಿಕ್‌ ಬೆಂಚ್‌ ಪ್ರಸ್‌ ಚಾಂಪಿಯನ್‌ಶಿಪ್‌: ವಿಜಯ ಕಾಂಚನ್‌ಗೆ 2 ಚಿನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.