
ಜನಮನ ಗೆದ್ದ ಗೋರೆಗಾಂವ್ ಕರ್ನಾಟಕ ಸಂಘದ ಸಾಂಸ್ಕೃತಿಕ ವೈವಿಧ್ಯ
Team Udayavani, Apr 3, 2018, 12:19 PM IST

ಕಳೆದ ಅರ್ವತ್ತು ವರ್ಷಗಳಿಂದ ಮಹಾನಗರದಲ್ಲಿನ ಹಾಗೂ ನಾಡಿನ ಪ್ರತಿಭಾವಂತ ಕನ್ನಡಿಗರ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ವೇದಿಕೆಯನ್ನು ಕಲ್ಪಿಸುತ್ತಾ ಬಂದಿರುವ ಮುಂಬಯಿ ಕನ್ನಡಿಗರ ನೆಚ್ಚಿನ ಸಂಘಟನೆಯಾಗಿರುವ ಗೋರೆಗಾಂವ್ ಕರ್ನಾಟಕ ಸಂಘ ಪ್ರಸ್ತುತ ವಜ್ರಮಹೋತ್ಸವದ ಸಂಭ್ರಮದಲ್ಲಿದೆ.
ವಜ್ರಮಹೋತ್ಸವದ ಉದ್ಘಾಟನ ಸಮಾರಂಭವು ಇತ್ತೀಚೆಗೆ ಮಲಾಡ್ ಪಶ್ಚಿಮದ ಬಜಾಜ್ ಹಾಲ್ನಲ್ಲಿ ತ್ರಿವಳಿ ಕಾರ್ಯಕ್ರಮಗಳೊಂದಿಗೆ ದಿನಪೂರ್ತಿ ಅದ್ದೂರಿಯಾಗಿ ಜರಗಿತು. ಸಾಹಿತ್ಯಕ ವಿಚಾರ ಗೋಷ್ಠಿಗಳೊಂದಿಗೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಕಲಾಭಿಮಾನಿಗಳನ್ನು ಹಾಗೂ ಸಾಹಿತ್ಯಾಭಿಮಾನಿಗಳ ಗಮನ ಸೆಳೆಯುವಲ್ಲಿ ಯಶಸ್ವಿಯಾಯಿತು.
ಯುವ ನೃತ್ಯ ಕಲಾವಿದರು ವಿವಿಧತೆಯಿಂದ ಏಕತೆಯನ್ನು ಸಾರುವ ಕರ್ನಾಟಕದ ವಿವಿಧ ರೀತಿಯ ನೃತ್ಯ ಪ್ರಕಾರಗಳನ್ನು ಪ್ರಸ್ತುತಪಡಿಸಿ ಕಲಾಭಿಮಾನಿಗಳ ಮೆಚ್ಚುಗೆಗೆ ಪಾತ್ರರಾದರು. ಮಾತ್ರವಲ್ಲದೆ ಸಂಘದ ರಂಗಸ್ಥಳ ವಿಭಾಗದ ಸದಸ್ಯರು ಮತ್ತು ಉತ್ಸಾಹಿ ಮಹಿಳಾ ಕಲಾವಿದೆಯರುಗಳಿಂದ ಕಿರು ಹಾಸ್ಯ ಪ್ರಹಸನಗಳು ಸುಂದರವಾಗಿ ಮೂಡಿಬಂತು. ಸಂಘದ ಮಹಿಳಾ ಸದಸ್ಯರಿಂದ ಜಾನಪದ ಹಾಡುಗಳ ಗಾಯನ ಹಾಗೂ ಇತರ ಉಪ ವಿಭಾಗಗಳಿಂದ ವೈವಿಧ್ಯಮಯ ನೃತ್ಯಗಳು ಪ್ರದರ್ಶನಗೊಂಡಿತು.
ಸಮಾರಂಭದ ಕೊನೆಯಲ್ಲಿ ಗೋರೆಗಾಂವ್ ಕರ್ನಾಟಕ ಸಂಘದ ಮಾಜಿ ಅಧ್ಯಕ್ಷ, ತೆಂಕು-ಬಡುಗು ತಿಟ್ಟಿನ ಯಕ್ಷಗಾನ ಭಾಗವತ, ಯಕ್ಷನೃತ್ಯ ಗುರು, ನಿರ್ದೇಶಕ ದೇವಲ್ಕುಂದ ಭಾಸ್ಕರ ಶೆಟ್ಟಿ ಇವರ ನಿರ್ದೇಶನದಲ್ಲಿ ಸಂಘದ ಮಹಿಳಾ ಸದಸ್ಯೆಯರಿಂದ ಶಶಿಪ್ರಭ ಪರಿಣಯ ಯಕ್ಷಗಾನ ತಾಳಮದ್ದಳೆಯು ವಿಶೇಷವಾಗಿ ಆಕರ್ಷಣೀಯ ಆಗಿ ನಡೆ ಯಿತು. ಮಹಿಳಾ ವಿಭಾಗದ ಕಲಾವಿದೆಯರು ಒಬ್ಬರಿಂದೊಬ್ಬರು ತಮ್ಮ ವಾಕ್ಚಾತುರ್ಯದಿಂದ ಕಲಾಭಿಮಾನಿಗಳ ಪ್ರಶಂಸೆಗೆ ಪಾತ್ರರಾದರು. ಒಟ್ಟಿನಲ್ಲಿ ದಿನಪೂರ್ತಿ ನಡೆದ ಕಾರ್ಯಕ್ರಮವು ಹಲವು ವಿಶೇಷತೆಗಳಿಗೆ ಕಾರಣವಾಯಿತು.
ತನ್ನ ವೈವಿಧ್ಯಮಯ ಕಾರ್ಯಕ್ರಮ ಗಳೊಂದಿಗೆ ತುಳು- ಕನ್ನಡಿಗರ ಮನೆ- ಮನಗಳನ್ನು ಗೆದ್ದಿರುವ ಗೋರೆಗಾಂವ್ ಕರ್ನಾಟಕ ಸಂಘವು ವಜ್ರಮಹೋತ್ಸವ ಸಂಭ್ರಮದಲ್ಲಿರುವುದು ನಮಗೆಲ್ಲ ಅಭಿಮಾನದ ಸಂಗತಿಯಾಗಿದೆ. ಸಂಘವು ಸಾಹಿತ್ಯ ವಾಗಿ, ಸಾಂಸ್ಕೃತಿಕ ವಾಗಿ, ಧಾರ್ಮಿಕವಾಗಿ ಹಲವಾರು ವೈಶಿಷ್ಟÂತೆಗಳಿಗೆ ಸಾಕ್ಷಿಯಾಗಿದೆ. ಸಂಘದ ವಜ್ರಮಹೋತ್ಸವ ಸಂಭ್ರಮವು ಮುಂದಿನ ದಿನಗಳಲ್ಲಿ ಅದ್ದೂರಿಯಾಗಿ ಇನ್ನಷ್ಟು ಕಲಾವೈವಿಧ್ಯತೆಯೊಂದಿಗೆ ನಡೆಯಲಿ ಎನ್ನುವುದು ನಮ್ಮ ಹಾರೈಕೆ.
ಈಶ್ವರ ಎಂ.ಐಲ್
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

ಕ್ಲೀವ್ ಲ್ಯಾಂಡ್: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

ಮೊಗವೀರ್ಸ್ ಬಹ್ರೈನ್ ಪ್ರೊ ಕಬಡ್ಡಿ;ತುಳುನಾಡ್ ತಂಡ ಪ್ರಥಮ,ಪುನಿತ್ ಬೆಸ್ಟ್ All ರೌಂಡರ್
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ

Mollywood: ಸೂಪರ್ ಸ್ಟಾರ್ ಮೋಹನ್ ಲಾಲ್ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.