![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Aug 22, 2021, 1:46 PM IST
ಮುಂಬಯಿ: ಬಿಲ್ಲವರ ಅಸೋಸಿಯೇಶನ್ ಮುಂಬಯಿ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ 75ನೇ ಸ್ವಾತಂತ್ರ್ಯೋತ್ಸವವನ್ನು ಆ. 15ರಂದು ಆಚರಿಸಲಾಯಿತು. ಧರ್ಮರಾಜ್ ಪೂಜಾರಿ ಗುರು ಪೂಜೆ ಮಾಡಿ ಪ್ರಾರ್ಥನೆಗೈದರು. ಗಣ್ಯರು, ಮಹಿಳೆಯರು, ಯುವಾಭ್ಯುದಯ ಸಮಿತಿ ಸದಸ್ಯರು, ಮಕ್ಕಳು ದೇಶದ ಪ್ರಗತಿಗಾಗಿ ಗುರು ಸನ್ನಿಧಿಯಲ್ಲಿ ಪ್ರಾರ್ಥಿಸಿದರು.
ಕಾರ್ಯಾಧ್ಯಕ್ಷ ದೇವರಾಜ್ ಪೂಜಾರಿ ಧ್ವಜಾರೋಹಣಗೈದು ಧ್ವಜವಂದನೆ ಸ್ವೀಕರಿಸಿ ಮಾತನಾಡಿ, ನಾವೆಲ್ಲರೂ ಶಿಸ್ತುಬದ್ಧರಾಗಿ ದೇಶದ ಸೇವೆ ಮಾಡೋಣ ಎಂದು ಕರೆ ನೀಡಿದರು.
ಇದನ್ನೂ ಓದಿ:ತಮಿಳುನಾಡು ಬಿಜೆಪಿ ನಾಯಕ ಎಲ್.ಗಣೇಶನ್ ಮಣಿಪುರ ರಾಜ್ಯಪಾಲರಾಗಿ ನೇಮಕ
ಮಾಜಿ ಕಾರ್ಯಾಧ್ಯಕ್ಷ ರವಿ ಸನಿಲ್, ಉಪ ಕಾರ್ಯಾಧ್ಯಕ್ಷರಾದ ಚಂದ್ರಹಾಸ್ ಎಸ್. ಪಾಲನ್, ಶ್ರೀಧರ ಬಿ. ಆಮೀನ್, ಜತೆ ಕೋಶಾಧಿಕಾರಿ ರಾಜೇಶ್ ಕೋಟ್ಯಾನ್ ಉಪಸ್ಥಿತರಿದ್ದರು. ಮಾಜಿ ಕಾರ್ಯಾಧ್ಯಕ್ಷ ರವಿ ಎಸ್. ಸನಿಲ್ ಸ್ವಾಗತಿಸಿದರು.
ರವಿ ಎಸ್. ಸನಿಲ್ ಕಾರ್ಯಕ್ರಮ ನಿರೂಪಿಸಿದರು. ಗೌರವ ಕಾರ್ಯದರ್ಶಿ ಪುರಂದರ ಪೂಜಾರಿ ಅಸೋಸಿಯೇಶನ್ ಮುಂದಿನ ಕಾರ್ಯಕ್ರಮಗಳ ಬಗ್ಗೆ ವಿವರಣೆ ನೀಡಿ ವಂದಿಸಿದರು. ಕಾರ್ಯಕ್ರಮದಲ್ಲಿ ಲಘು ಉಪಹಾರದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು.
You seem to have an Ad Blocker on.
To continue reading, please turn it off or whitelist Udayavani.