ಸಾಧಕರನ್ನು ಗುರುತಿಸುವುದು ಸಂಸ್ಥೆಯ ಕರ್ತವ್ಯ: ಕೋಟ್ಯಾನ್‌


Team Udayavani, Sep 24, 2019, 6:26 PM IST

mumbai-tdy-2

ಮುಂಬಯಿ, ಸೆ. 23: ಸಮಾಜದಲ್ಲಿಉತ್ತಮ ಸಾಧನೆ ಮಾಡಿದವರನ್ನು ಗೌರವಿಸುವುದು ಯಾವುದೇ ಸಂಸ್ಥೆಯ ಕರ್ತವ್ಯವಾಗಿದೆ. ಹಾಗೆ ಮಾಡುವುದರಿಂದ ಅವರು ಮತ್ತಷ್ಟು ಸಾಧನೆ ಮಾಡಲು ಸಾಧ್ಯವಾಗುತ್ತದೆ. ಡಾ| ಭರತ್‌ ಕುಮಾರ್‌ ಪೊಲಿಪುರವರು ಮುಂಬಯಿಯಲ್ಲಿ ಸಾಮಾಜಿಕವಾಗಿ. ಸಾಂಸ್ಕೃತಿಕವಾಗಿ ಹಾಗು ಶೈಕ್ಷಣಿಕವಾಗಿ ಬಹಳಷ್ಟು ಸಾಧನೆ ಮಾಡಿದ್ದಾರೆ.

ಅವರು ಮೊಗವೀರ ಬ್ಯಾಂಕಿನ ಸಿಬ್ಬಂದಿ ಎಂದು ಹೇಳಲು ನಮಗೆ ಹೆಮ್ಮೆಯಾಗುತ್ತದೆ. ಅವರು ಬ್ಯಾಂಕಿಗೆ ಸೇರಿದ ನಂತರವೇ ಕನ್ನಡದಲ್ಲಿ ಎಂಎ ಮತ್ತು ಡಾಕ್ಟರೇಟ್‌ ಪದವಿಯನ್ನು ಮಾಡಿದ್ದಾರೆ. ಅನೇಕ ಮಾನ ಸಮ್ಮಾನಗಳನ್ನು ಪಡೆದಿದ್ದಾರೆ. ಕರ್ನಾಟಕದಲ್ಲಿಯೂ ಅವರು ಪ್ರಸಿದ್ಧಿಯನ್ನು ಹೊಂದಿದ್ದಾರೆ ಎಂದು ಮೊಗವೀರ ಬ್ಯಾಂಕಿನ ಕಾರ್ಯಾಧ್ಯಕ್ಷರಾದ ಸದಾನಂದ ಎ. ಕೊಟ್ಯಾನ್‌ ಅವರು ನುಡಿದರು.

ಅವರು ಮೊಗವೀರ ಬ್ಯಾಂಕಿನಲ್ಲಿ ಅಧಿಕಾರಿಯಾಗಿ ಸೇವಾನಿವೃತ್ತಿ ಹೊಂದಿದ ಡಾ| ಭರತ್‌ ಕುಮಾರ್‌ ಪೊಲಿಪು ಅವರನ್ನು ಬ್ಯಾಂಕಿನ ನಿರ್ದೇಶಕ ಮಂಡಳಿ ಪರವಾಗಿ ಗೌರವಿಸಿ ಮಾತನಾಡಿ, ಅವರ ಸಿದ್ಧಿ-ಸಾಧನೆಗಳನ್ನು ಶ್ಲಾಘಿಸಿ ಅಭಿನಂದಿಸಿ ಶುಭ ಹಾರೈಸಿದರು. ಗೌರವ ಸ್ವೀಕರಿಸಿ ಮಾತನಾಡಿದ ಪೊಲಿಪು ಅವರು, ಮೊಗವೀರ ಬ್ಯಾಂಕ್‌ ನನ್ನ ಬದುಕಿನ ಅಂಗ. ಅದನ್ನು ಯಾವತ್ತು ಬೇರ್ಪಡಿಸಲು

ಸಾಧ್ಯವಿಲ್ಲ.

ಬ್ಯಾಂಕ್‌ ತನಗೆ ಎಲ್ಲವನ್ನುನೀಡಿದೆ. ಈ ತನಕದ ಎಲ್ಲಾ ನಿರ್ದೇಶಕ ಮಂಡಳಿ, ಕಾರ್ಮಿಕ ಸಂಘ ಹಾಗೂ ಸಹುದ್ಯೋಗಿಗಳೂ ಸಹಕಾರ, ಪ್ರೋತ್ಸಾಹ ನೀಡಿದ್ದರಿಂದಲೆ ತನಗೆ ಸಾಂಸ್ಕೃತಿಕ ರಂಗದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಸಾಧ್ಯವಾಯಿತು. ಈ ದಿನ ನಿರ್ದೇಶಕ ಮಂಡಳಿ ತುಂಬ ಸಹೃದಯತೆಯಿಂದ ಅಭಿಮಾನ, ಪ್ರೀತಿಯಿಂದ ಗೌರವಿಸಿದ್ದು ಅತ್ಯಂತ ಆನಂದ ತಂದಿದೆ. ಇದು ನನ್ನ ಬದುಕಿನ ಅವಿಸ್ಮರಣೇಯ ಘಟನೆಯಾಗಿದೆ. ಇದಕ್ಕಾಗಿ ಋಣಿಯಾಗಿದ್ದೇನೆ. ಈ ಪರಂಪರೆ ಮುಂದುವಯುತ್ತಿರಲಿ ಎಂದು ಆಶಿಸುತ್ತೇನೆ ಎಂದರು.

ಸಮಾರಂಭದಲ್ಲಿ ಉಪ ಕಾರ್ಯಾ ಧ್ಯಕ್ಷರಾದ ಪಿ. ಧರ್ಮಪಾಲ, ನಿರ್ದೇ ಶಕರಾದ ಗೋಪಾಲ ಪುತ್ರನ್‌, ಪುರುಷೋತ್ತಮ ಶ್ರೀಯಾನ್‌, ಮಾಧವ ಕಾಂಚನ್‌, ಮುಕೇಶ್‌ ಬಂಗೇರ, ದಾಮೋದರ ಕರ್ಕೇರ. ಶೀಲಾ ಅಮೀನ್‌, ಜನಾರ್ದನ್‌ ಮುಲ್ಕಿ, ಜಯಶೀಲ ತಿಂಗಳಾಯ, ವಸಂತ ಕುಂದರ್‌, ಯಧುವೀರ ಪುತ್ರನ್‌, ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೆ. ಡಿ. ಶಿರಾಲಿ, ಎಜಿಎಂ ಉದಯ ಕುಮಾರ್‌ ಕುಂದರ್‌, ಎಚ್‌. ಆರ್‌. ಡಿ ಹಿರಿಯ ಪ್ರಬಂಧಕಿ ಶಿಲ್ಪಾ ಪಡ್ನೇಕರ್   ಮೊದಲಾದವರು ಉಪಸ್ಥಿತರಿದ್ದರು. ಈ ಹಿಂದೆ ನಿವೃತ್ತಿ ದಿನ ಆ. 30ರಂದು ಬ್ಯಾಂಕಿನ ಪರವಾಗಿ ದಾಮೋದರ ಕರ್ಕೇರ ಮತ್ತು ಮುಕೇಶ್‌ ಬಂಗೇರ,ಶಿಲ್ಪಾ ಪಡ್ನೇಕರ್   ಅವರು ಡಾ| ಪೊಲಿಪು ಅವರನ್ನು ಗೌರವಿಸಿ ಶುಭ  ಹಾರೈಸಿದರು. ಯದುವೀರ ಪುತ್ರನ್‌ ನೇತೃತ್ವದಲ್ಲಿ ಕಾರ್ಮಿಕ ಸಂಘದ ಪರವಾಗಿ ಹಾಗೂ ನಿಶಿ ಶ್ರೀಯಾನ್‌ ನೇತೃತ್ವದಲ್ಲಿ ಅಂಧೇರಿ ಶಾಖೆಯ ಪರವಾಗಿ ಗೌರವಿಸಲಾಗಿತ್ತು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.