ನೂತನ ಕಾರ್ಯಾಧ್ಯಕ್ಷರಾಗಿ ಜೋನ್‌ ಡಿ’ಸಿಲ್ವಾ ಕಾರ್ಕಳ ಆಯ್ಕೆ

ಅಧ್ಯಕ್ಷ ಜೋನ್‌ ಡಿ'ಸಿಲ್ವಾ ಅವರಿಗೆ ಪುಷ್ಪಗುಚ್ಛ ನೀಡಿ ಅಧಿಕಾರ ಹಸ್ತಾಂತರಿಸಿ ಅಭಿನಂದಿಸಿದರು.

Team Udayavani, Jul 29, 2021, 3:17 PM IST

ನೂತನ ಕಾರ್ಯಾಧ್ಯಕ್ಷರಾಗಿ ಜೋನ್‌ ಡಿ’ಸಿಲ್ವಾ ಕಾರ್ಕಳ ಆಯ್ಕೆ

ಮುಂಬಯಿ, ಜು. 28: ಕ್ರಿಶ್ಚಿಯನ್‌ ಛೇಂಬರ್‌ ಆಫ್‌ ಕಾಮರ್ಸ್‌ ಆ್ಯಂಡ್‌ ಇಂಡಸ್ಟ್ರೀಸ್‌ (ಸಿಸಿಸಿಐ) ಇದರ ನೂತನ ಕಾರ್ಯಾಧ್ಯಕ್ಷರಾಗಿ ಜೋನ್‌ ಡಿ’ಸಿಲ್ವಾ ಕಾರ್ಕಳ ಆಯ್ಕೆಯಾಗಿದ್ದಾರೆ. ಡಿ’ಸಿಲ್ವಾ ಅವರು ಈ ವರೆಗೆ ಉಪಕಾರ್ಯಾ ಧ್ಯಕ್ಷ, ಸಿಸಿಸಿಐ ಅಂತಾರಾಷ್ಟ್ರೀಯ ಪುರಸ್ಕಾರ ಸಮಿತಿಯ ಸಂಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು. ಸಿಸಿಸಿಐ ಕಾರ್ಯಾಧ್ಯಕ್ಷ ಆ್ಯಂಟನಿ ಸಿಕ್ವೇರಾ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ
ಜೋನ್‌ ಡಿ’ಸಿಲ್ವಾ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು.

ಸಭೆಯಲ್ಲಿ ಸಿಸಿಸಿಐ ಸ್ಥಾಪಕಾಧ್ಯಕ್ಷ ವಿನ್ಸೆಂಟ್‌ ಮಥಾಯಸ್‌, ಉಪ ಕಾರ್ಯಾಧ್ಯಕ್ಷರಾದ ಆಲ್ಬರ್ಟ್‌ ಡಬ್ಲ್ಯು. ಡಿ’ಸೋಜಾ, ಮಾಜಿ ಕಾರ್ಯಾಧ್ಯಕ್ಷ ಹೆನ್ರಿ ಲೋಬೋ ಅವರು ನೂತನ ಅಧ್ಯಕ್ಷ ಜೋನ್‌ ಡಿ’ಸಿಲ್ವಾ ಅವರಿಗೆ ಪುಷ್ಪಗುಚ್ಛ ನೀಡಿ ಅಧಿಕಾರ ಹಸ್ತಾಂತರಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಸಿಸಿಸಿಐ ನಿರ್ದೇಶಕ ಲಾರೆನ್ಸ್‌ ಕುವೆಲ್ಲೊ, ನ್ಯಾಯವಾದಿ ಪಿಯುಸ್‌ ವಾಸ್‌, ಜಾನ್ಸನ್‌ ಥೆರಟಿಲ್‌, ರಾಲ್ಫ್ ಪಿರೇರಾ, ಆಗ್ನೇಲ್ಲೋ ರಾಜೇಶ್‌ ಅಥೈಡೆ, ಗ್ರೆಗೋರಿ ಮಾರ್ಕ್‌ ಡಿ’ಸೋಜಾ, ಸದಸ್ಯರು ಉಪಸ್ಥಿತರಿದ್ದರು. ಸಿಸಿಸಿಐ ಕಾರ್ಯದರ್ಶಿ ರೋಹನ್‌ ಟೆಲ್ಲಿಸ್‌ ಸ್ವಾಗತಿಸಿ, ವಂದಿಸಿದರು.

ಜೋನ್‌ ಡಿ’ಸಿಲ್ವಾ ಕಾರ್ಕಳ ಮೂಲತಃ ಕಾರ್ಕಳ ಸಾಣೂರು ಗ್ರಾಮದವರಾದ ಜೋನ್‌ ಡಿ’ಸಿಲ್ವಾ ಸೈಂಟ್‌ ಜೋಸೆಫ್‌ ಪ್ರೈಮರಿ ಶಾಲೆ, ಸಾಣೂರು ಕಿರಿಯ ಪ್ರಾಥಮಿಕ, ಎಸ್‌ವಿಟಿ ಹೈಯರ್‌ ಎಲಿಮೆಂಟರಿ ಶಾಲೆ ಕಾರ್ಕಳ ಇಲ್ಲಿ ಹಿರಿಯ ಪ್ರಾಥಮಿಕ ವಿದ್ಯಾಭ್ಯಾಸ ಪೂರೈಸಿ ಮುಂಬಯಿಗೆ ಆಗಮಿಸಿ ಕರ್ನಾಟಕ ಫ್ರೀ ನೈಟ್‌ ಹೈಸ್ಕೂಲ್‌ ಮುಂಬಯಿ ಇಲ್ಲಿ ಎಸ್‌ಎಸ್‌ಸಿ ಶಿಕ್ಷಣ, ಜೈ ಹಿಂದ್‌ ಕಾಲೇಜಿನಲ್ಲಿ ಬಿ.ಎ. ಪದವಿ ಮತ್ತು ಆರ್‌ಎ ಪೊದರ್‌ ಕಾಲೇಜ್‌ನಲ್ಲಿ ಬಿ.ಕಾಂ. ಪದವಿ ಪೂರೈಸಿ ಬ್ಯಾಂಕಿಗ್‌ ದಿಗ್ಗಜರಾಗಿ ಡಾ| ಟಿ. ಎಂ.ಎ. ಪೈ ಫೌಂಡೇಶನ್‌ನ 2008ನೇ ಸಾಲಿನ ಪುರಸ್ಕಾರ ಪಡೆದಿದ್ದಾರೆ.

ಬ್ಯಾಂಕಿಂಗ್‌ ಕ್ಷೇತ್ರದ ಹಿರಿಯ ಮೇಧಾವಿಯಾಗಿರುವ ಇವರು ಸಹಕಾರಿ ರಂಗದ ಪಿತಾಮಹ ಎಂದೇ ಪ್ರಸಿದ್ಧರು. ಅಭ್ಯುದಯ ಸಹಕಾರಿ ಬ್ಯಾಂಕ್‌ನ ಮುಖ್ಯ ಪ್ರವರ್ತಕ ಮತ್ತು ಕಾರ್ಯಾಧ್ಯಕ್ಷರಾಗಿ, ನ್ಯೂ ಇಂಡಿಯಾ ಕೋ. ಆ. ಬ್ಯಾಂಕ್‌ ಲಿಮಿಟೆಡ್‌, ಸಿಟಿಜನ್‌ ಕ್ರೆಡಿಟ್‌ ಕೋ. ಆ. ಬ್ಯಾಂಕ್‌ ಲಿಮಿಟೆಡ್‌ ಮತ್ತು ಮೋಡೆಲ್‌ ಕೋ. ಆ. ಬ್ಯಾಂಕ್‌ ಲಿಮಿಟೆಡ್‌ ಈ ನಾಲ್ಕು ಸಹಕಾರಿ ಬ್ಯಾಂಕ್‌ಗಳ ಮುಖ್ಯ ಪ್ರವರ್ತಕರಾಗಿ ಮತ್ತು ಮೊದಲ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಸಹಕಾರಿ ಬ್ಯಾಂಕರ್‌ಗಳ ಕೈಪಿಡಿ ಮತ್ತು ನಗರ ಬ್ಯಾಂಕ್‌ಗಳ ಅಖೀಲ ಭಾರತ ಡೈರೆಕ್ಟರಿಯ ಪ್ರಧಾನ ಸಂಪಾದಕರಾಗಿದ್ದಾರೆ. ಮಂಗಳೂರು ಕೆಥೋಲಿಕ್‌ ಎಜುಕೇಶನಲ್‌
ಕೋ. ಆ. ಕ್ರೆಡಿಟ್‌ ಸೊಸೈಟಿ ಲಿಮಿಟೆಡ್‌, ಫುಡಾರ್‌ ಪ್ರತಿಷ್ಠಾನ ಮತ್ತು ಕೊಂಕಣಿ ಭಾಷಾ ಮಂಡಳಿ ಮಹಾರಾಷ್ಟ್ರ ಇದರ ಅಧ್ಯಕ್ಷರಾಗಿದ್ದಾರೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.