ಜೋಗೇಶ್ವರಿ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ 


Team Udayavani, Sep 2, 2018, 4:44 PM IST

3108mum11.jpg

ಮುಂಬಯಿ: ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ 347 ನೇ ಆರಾಧನಾ ಮಹೋತ್ಸವವು ಆ. 29 ರಂದು ಸಂಪನ್ನಗೊಂಡಿತು. ಮೂರು ದಿನಗಳ ಕಾಲ ನಡೆದ ವಿವಿಧ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಾವಿರಾರು ಭಕ್ತಾದಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

ಶ್ರಾವಣ ಬಹುಳ ದ್ವಿತೀಯ ದಿನದಂದು ಶ್ರೀ ರಾಘವೇಂದ್ರ ಸ್ವಾಮಿಗಳು ಬೃಂದಾವನಾಸ್ಥರಾಗಿರುವ ದಿನವನ್ನು ಮಧ್ಯಾರಾಧನೆ ಉತ್ಸವವಾಗಿ ಆಚರಿಸಲಾಗುತ್ತಿದೆ. ಈ ದಿನ ರಾಯರಿಗೆ  ನೈರ್ಮಲ್ಯ ವಿಸರ್ಜನೆ, ವೇದ ಪಾರಾಯಣ, ಪ್ರಹ್ಲಾದಾ ಚಾರ್ಯರ ಸಾಮೂಹಿಕ ಪಾದಪೂಜೆ, ಫಲ ಪಂಚಾಮೃತ ಅಭಿಷೇಕ, ರಾಘವೇಂದ್ರ ಸ್ವಾಮಿ ಮಹಿಮಾ ಭಜನೆ, ಪಾದಪೂಜೆ, ಸರ್ವ ಸೇವಾ ಪೂಜೆ, ರಥೋತ್ಸವ, ಕನಕ ಮಹಾಪೂಜೆ, ಅಲಂಕಾರ ಪೂಜೆ, ಅಷೊuàಧಕ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿತರಣೆ, ಮಂತ್ರಾಕ್ಷತೆ ಪೂಜೆಯು ವಿವಿಧ ವಿಧಿ-ವಿಧಾನಗಳೊಂದಿಗೆ ನಡೆಯಿತು.

ಈ ಸಂದರ್ಭದಲ್ಲಿ ಮಠದ ಪ್ರಬಂಧಕರಾದ ಜಯ ತೀರ್ಥಾಚಾರ್‌ ಅವರು ನೆರೆದ ಭಕ್ತಾದಿಗಳಿಗೆ ಶ್ರೀ ರಾಘವೇಂದ್ರ ಸ್ವಾಮಿಗಳ ಮಹಿಮೆಯ ಬಗ್ಗೆ ತಿಳಿಸಿ, ಆಶೀರ್ವಚನ ನೀಡಿ, ಶ್ರೀ ಮಂತ್ರಾಲಯದ ಬೃಂದಾನವು ಸುಮಾರು 700 ಸಾಲಿಗ್ರಾಮದಿಂದ ಸ್ಥಾಪಿಸಲ್ಪಟ್ಟಿದ್ದು, ದೇಶದ ಎರಡನೇ ಬೃಹತ್‌ ಬೃಂದಾವನವು ಈ ಮಹಾನಗರದಾಗಿದ್ದು, ಇದು 500 ಸಾಲಿಗ್ರಾಮಗಳಿಂದ ಸ್ಥಾಪಿಸಲ್ಪಟ್ಟಿದೆ. ಆದ್ದರಿಂದಲೇ ಇದನ್ನು ಅಭಿನವ ಮಂತ್ರಾಲಯ ಎಂದು ನಾಮಕರಣಗೊಳಿಸಲಾಗಿದೆ. 

ಈ ಮೂಲಕ ಸರ್ವ ಭಕ್ತರ ಇಷ್ಟಾರ್ಥಗಳನ್ನು  ಪೂರೈಸುತ್ತಿರುವ ಶ್ರೀ ರಾಘವೇಂದ್ರ ಸ್ವಾಮಿಗಳು ಶ್ರೀರಾಮನ ಪರಮ ಭಕ್ತರು, ಸ್ತೋತ್ರ ಹಾಗೂ ಚಿಂತನೆಯಿಂದ ಬರುವ ಪ್ರತಿಯೋರ್ವ ಭಕ್ತರಿಗೆ ಅನುಗ್ರಹ ನೀಡಿ ರಾಯರು ಹರಸುತ್ತಾರೆ. ಇಲ್ಲಿ ದೊರೆಯುವ ಮಂತ್ರಾಕ್ಷತೆಯು ಅದ್ಭುತವಾದ ಮಹಿಮೆ ಹೊಂದಿದ್ದು, ಇದರ ಸದುಪಯೋಗವನ್ನು ಎಲ್ಲರು ಪಡೆದುಕೊಳ್ಳುವಂತೆ ವಿನಂತಿಸಿದರು.

ಮೂರು ದಿನಗಳ ಕಾಲ ನಡೆದ ಉತ್ಸವದಲ್ಲಿ ಮಹಾನಗರದ ಭಕ್ತಾದಿಗಳು ಪಾಲ್ಗೊಂಡು ವಿವಿಧ ಪೂಜೆ ಹಾಗೂ ಸೇವೆಯನ್ನು ಅರ್ಪಿಸಿದರು. ನಗರದ ವಿವಿಧ ಕ್ಷೇತ್ರಗಳ ಗಣ್ಯರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು, ಉದ್ಯಮಿಗಳು ಪಾಲ್ಗೊಂಡು  ಶ್ರೀ ರಾಘವೇಂದ್ರ ಸ್ವಾಮಿಗಳ  ಅನುಗ್ರಹಕ್ಕೆ ಪಾತ್ರರಾದರು.

ಶ್ರೀ ಮಂತ್ರಾಲಯದ ಪೀಠಾಧೀಪತಿ ಶ್ರೀ ಸುಬುದೇಂದ್ರ ತೀರ್ಥ ಶ್ರೀಗಳ ಶುಭಾಶೀರ್ವಾ ದಗಳೊಂದಿಗೆ ನಡೆದ ಉತ್ಸವವು ಮಠದ ಮುಖ್ಯ ಅರ್ಚಕ ಗುರುರಾಜ ಆಚಾರ್‌ ಮತ್ತು ಬಳಗದವರು ಪೂಜಾ ಕೈಂಕರ್ಯಗಳನ್ನು ನಡೆಸಿಕೊಟ್ಟರು. ಪೂರ್ಣಪ್ರಜ್ಞ, ಮಠದ ಆಡಳಿತ ವರ್ಗದವರು ಆರಾಧನೆಯ ಯಶಸ್ಸಿಗೆ ಸಹಕರಿಸಿದರು. 

ಚಿತ್ರ-ವರದಿ : ರಮೇಶ್‌ ಉದ್ಯಾವರ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.