ಕನ್ನಡಿಗ ಪತ್ರಕರ್ತರ ಸಂಘ:ಕ್ರಿಕೆಟ್‌ ಪಂದ್ಯಾಟ ಸಮಾರೋಪ


Team Udayavani, Jan 30, 2018, 4:29 PM IST

2901mum05.jpg

ಮುಂಬಯಿ: ವಾಸ್ತವಿಕ ಸನ್ನಿವೇಶಗಳ ಅಂಕು-ಡೊಂಕುಗಳನ್ನು ತಿದ್ದುವ ಪ್ರಬಲ ಅಸ್ತ್ರ ಪತ್ರಕರ್ತರ ಲೇಖನಿಯಲ್ಲಿದೆ. ವಿಶೇಷ ಅಧ್ಯಾಯದೊಂದಿಗೆ ಅವಿಶ್ರಾಂತ ದುಡಿಯುವ ಪತ್ರಕರ್ತರು ರಾಷ್ಟ್ರದ ವಿದ್ಯಮಾನವನ್ನು ಜಾಗೃತಗೊಳಿಸುತ್ತಾರೆ. ಮುಂಬಯಿ ನಗರ ಹಾಗೂ ಉಪನಗರದ ಸಂಘ-ಸಂಸ್ಥೆಗಳ ಸವಿಸ್ತಾರ ವರದಿಯನ್ನು ನೀಡುವ ಮುಂಬಯಿಯ ಕನ್ನಡ ದಿನಪತ್ರಿಕೆಗಳು ಸಂಘಟನೆಗೆ ಮಹತ್ತರವಾದ ಯೋಗದಾನ ನೀಡುತ್ತಿವೆ ಎಂದು ಬಂಟರ ಸಂಘ ಮೀರಾ-ಭಾಯಂದರ್‌ ಪ್ರಾದೇಶಿಕ ಸಮಿತಿಯ ನೂತನ ಕಾರ್ಯಾಧ್ಯಕ್ಷ ಗಿರೀಶ್‌ ಶೆಟ್ಟಿ ತೆಳ್ಳಾರ್‌ ನುಡಿದರು.

ಜ. 26ರಂದು ಭಾಯಂದರ್‌ ಪೂರ್ವದ ನವಘರ್‌ ರೋಡ್‌, ಗುರುದ್ವಾರ ಸಮೀಪದ ಸಚಿನ್‌ ತೆಂಡೂಲ್ಕರ್‌ ಮೈದಾನದಲ್ಲಿ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಇದರ ದಶಮಾನೋತ್ಸವದ ಅಂಗವಾಗಿ ನಡೆದ ಸದಸ್ಯರ  ಕ್ರಿಕೆಟ್‌ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿದ ಇವರು, ದಶಮಾನೋತ್ಸವದ ಹೊಸ್ತಿಲಿನಲ್ಲಿರುವ ಇಂದಿನ ಕ್ರಿಕೆಟ್‌ ಪಂದ್ಯಾಟ ಪತ್ರಕರ್ತ ಬಂಧುಗಳ ಸಮಾವೇಶವಾಗಿದೆ. ಮಾನಸಿಕ ನೆಮ್ಮದಿ, ದೈಹಿಕ ಸ್ಥಿರತೆಯನ್ನು ಕಾಪಾಡುವ ಕಾರ್ಯಚಟುವಟಿಕೆಗಳು ಸಂಸ್ಥೆಯಿಂದ ನಿರಂತರವಾಗಿ ನಡೆಯುತ್ತಿರಲಿ. ಅದಕ್ಕೆ ಬೇಕಾಗುವ ಎಲ್ಲ ರೀತಿಯ, ಸಹಾಯ, ಸಹಕಾರ ದೊರೆಯಲಿದೆ ಎಂದು ನುಡಿದು ಶುಭಹಾರೈಸಿದರು.

ಗೌರವ ಅತಿಥಿಯಾಗಿ ಉಪಸ್ಥಿತರಿದ್ದ ಬಂಟ್ಸ್‌ ಸಂಘ ಮೀರಾ-ಭಾಯಂದರ್‌ ಪ್ರಾದೇಶಿಕ ಸಮಿತಿಯ ಉಪ ಕಾರ್ಯಾಧ್ಯಕ್ಷ ಮುನ್ನಲಾಯಿಗುತ್ತು ಸಚ್ಚಿದಾನಂದ ಶೆಟ್ಟಿ ಅವರು ಮಾತನಾಡಿ, ಉದ್ಯಮಿಗಳು, ಸಾಮಾಜಿಕ ಸೇವಾಕಾರ್ಯಕರ್ತರು, ಸಂಘ-ಸಂಸ್ಥೆಗಳು ಹಾಗೂ ಪತ್ರಕರ್ತರ ಸಮ್ಮಿಲನದಂತೆ ಇಂದಿನ ಕ್ರಿಕೆಟ್‌ ಪಂದ್ಯಾಟವು ತೋರುತ್ತಿದೆ. ದಶಮಾನೋತ್ಸವದ ಎಲ್ಲ ಕಾರ್ಯಕ್ರಮ ಗಳು ಇತಿಹಾಸ ನಿರ್ಮಿಸುವಂತಾಗಲಿ ಎಂದು ಶುಭಹಾರೈಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಅಧ್ಯಕ್ಷ ಚಂದ್ರಶೇಖರ ಪಾಲೆತ್ತಾಡಿ ಮಾತನಾಡಿ, ದಶಮಾನೋತ್ಸವದ ಅಂಗವಾಗಿ ಹಮ್ಮಿಕೊಂಡ ಕ್ರಿಕೆಟ್‌ ಪಂದ್ಯಾಟವು ಒಂದು ಸೌಹಾರ್ದ ಕೂಟವಾಗಿದೆ. ಇದು ಸೋಲು-ಗೆಲುವುಗಳ ಸಮಾಂತರ ವೇದಿಕೆ. ಒಟ್ಟಾಗಿ ಕೂಡಿ ಬಾಳುವ ಕಲೆ ನಮ್ಮದಾಗಬೇಕು. ಮೀರಾ-ಭಾಯಂದರ್‌ ಜನತೆಯ ಸಹಕಾರ ಅವಿಸ್ಮರಣೀಯ. ಪಂದ್ಯಾಟವು ಯಶಸ್ವಿಯಾಗಲು ಸಹಕರಿಸಿದ ಕಾರ್ಯಕ್ರಮದ ಪ್ರಾಯೋಜಕರಿಗೆ, ಉದ್ಯಮಿಗಳಿಗೆ, ತುಳು-ಕನ್ನಡಿಗರಿಗೆ, ರಾಜಕೀಯ ಮುಖಂಡರಿಗೆ ಹಾಗೂ ಆಯೋಜಕರನ್ನು ಅಭಿನಂದಿಸಿ ಕೃತಜ್ಞತೆ ಸಲ್ಲಿಸಿದರು.

ಕ್ರಿಕೆಟ್‌ ಪಂದ್ಯಾಟದಲ್ಲಿ ವಿನ್ನರ್‌ ಪ್ರಶಸ್ತಿಗೆ ಭಾಜನರಾದ ಡಾ| ಶಿವ ಎಂ. ಮೂಡಿಗೆರೆ ನಾಯಕತ್ವದ ಪಿಂಕ್‌ ತಂಡ ಮತ್ತು ರನ್ನರ್ ಪ್ರಶಸ್ತಿ ಪಡೆದ ಬಾಬು ಕೆ. ಬೆಳ್ಚಡ ನಾಯಕತ್ವದ ಯೆಲ್ಲೊ ತಂಡ ಹಾಗೂ ಶಿಸ್ತಿನ ತಂಡ ಪುರಸ್ಕಾರವನ್ನು ಪಡೆದ ಸುರೇಶ್‌ ಶೆಟ್ಟಿ ಯೆಯ್ನಾಡಿ ನಾಯಕತ್ವದ ಬ್ಲೂ ತಂಡಗಳಿಗೆ ಗಣ್ಯರು ಪ್ರಶಸ್ತಿ ಪ್ರದಾನಿಸಿ ಶುಭಹಾರೈಸಿದರು.

ಅತ್ಯುತ್ತಮ ಎಸೆತಗಾರ ಪ್ರಶಸ್ತಿಯನ್ನು ಅಶೋಕ್‌ ಆರ್‌. ದೇವಾಡಿಗ, ಸರಣಿ ಶ್ರೇಷ್ಠ ಹಾಗೂ ಉತ್ತಮ ವಿಕೆಟ್‌ ಕೀಪರ್‌ ಪ್ರಶಸ್ತಿಯನ್ನು ರಮೇಶ್‌ ಎಂ. ಬಿಲ್ಲವ, ಉತ್ತಮ ಕ್ಷೇತ್ರರಕ್ಷಕ ಪ್ರಶಸ್ತಿಯನ್ನು ಕರುಣಾಕರ ವಿ. ಶೆಟ್ಟಿ ಅವರು ಪಡೆದರು. ಅಲ್ಲದೆ ಉತ್ತಮ ದಾಂಡಿಗರಾಗಿ ಅಶೋಕ್‌ ಆರ್‌. ದೇವಾಡಿಗ ಮತ್ತು ಪುರಂದರ ಅಮೀನ್‌ ಅವರು ಬಹುಮಾನಕ್ಕೆ ಪಾತ್ರರಾದರು.

ವೇದಿಕೆಯಲ್ಲಿ ಉದ್ಯಮಿ ರವೀಂದ್ರ ಎಸ್‌. ಕರ್ಕೇರ, ಬಂಟ್ಸ್‌ ಸಂಘ ಮುಂಬಯಿ ಇದರ ಉನ್ನತ ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ಕಿಶೋರ್‌ ಕುಮಾರ್‌ ಶೆಟ್ಟಿ ಕುತ್ಯಾರು, ಸಂಘಟಕದ ದಿನೇಶ್‌ ಶೆಟ್ಟಿ ಕಾಪು ಅವರು ಉಪಸ್ಥಿತರಿದ್ದು ಶುಭಹಾರೈಸಿದರು. ವೀಕ್ಷಕ ವಿವರಣೆ ನೀಡಿದ ಶ್ರೀ ಅಯ್ಯಪ್ಪ ವೃಂದದ ಕೋಶಾಧಿಕಾರಿ ವಿಶ್ವನಾಥ ಎನ್‌. ಶೆಟ್ಟಿ, ಮೀರಾ-ಭಾಯಂದರ್‌ ಬಂಟ್ಸ್‌ ಫೋರಂನ ಸುಖ್‌ದೀಪ್‌ ಶೆಟ್ಟಿ, ತೀರ್ಪುಗಾರರಾಗಿ ಸಹಕರಿಸಿದ ರಮಾನಂದ ಪೂಜಾರಿ, ಶ್ರೀಕಾಂತ್‌ ಪೂಜಾರಿ, ಗಂಗಾಧರ ಪೂಜಾರಿ ಮತ್ತು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಕ್ರೀಡಾ ಸಮಿತಿಯ ಕಾರ್ಯಾಧ್ಯಕ್ಷ ಜಯ ಸಿ. ಪೂಜಾರಿ, ಸದಸ್ಯ ಉಮೇಶ್‌ ಅಂಚನ್‌ ಅವರನ್ನು ಗೌರವಿಸಲಾಯಿತು.

ಗೌರವ ಕಾರ್ಯದರ್ಶಿ ರೋನ್ಸ್‌ ಬಂಟ್ವಾಳ್‌ ಸ್ವಾಗತಿಸಿದರು. ಉಪಾಧ್ಯಕ್ಷ ದಯಾಸಾಗರ್‌ ಚೌಟ ಸ್ವಾಗತಿಸಿದರು. ತಾರಾ ಆರ್‌. ಬಂಟ್ವಾಳ್‌, ಸವಿತಾ ಎಸ್‌. ಶೆಟ್ಟಿ, ವಿದ್ಯಾ ಎಂ. ಭಂಡಾರಿ ರಾಷ್ಟÅಗೀತೆ ಹಾಡಿದರು. ಕಾರ್ಯಕ್ರಮದಲ್ಲಿ ತುಳು-ಕನ್ನಡೇತರರು, ವಿವಿಧ ಸಂಘಟನೆಗಳ ಪ್ರತಿನಿಧಿಗಳು, ವಿವಿಧ ಕ್ಷೇತ್ರಗಳ ಗಣ್ಯರು, ಉದ್ಯಮಿಗಳು ಆಗಮಿಸಿ ಶುಭಹಾರೈಸಿದರು.

 ಚಿತ್ರ-ವರದಿ: ರಮೇಶ್‌ ಅಮೀನ್‌

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.