ಕಾತ್ರಜ್‌ ಶ್ರೀ ಅಯ್ಯಪ್ಪ ದೇವಸ್ಥಾನ: ಮಕರ ಸಂಕ್ರಾಂತಿ


Team Udayavani, Jan 16, 2018, 1:43 PM IST

1501mum07.jpg

ಪುಣೆ: ಕಾತ್ರಜ್‌ ಸಚ್ಚಾಯಿ ಮಾತಾ ನಗರದ ಶ್ರೀ  ಅಯ್ಯಪ್ಪ ಸ್ವಾಮೀ ದೇವಸ್ಥಾನದ ಸನ್ನಿಧಾನದಲ್ಲಿ   ಮಕರ ಸಂಕ್ರಾಂತಿ ಉತ್ಸವ ಆಚರಣೆಯು ಜ. 14 ರಂದು ವಿವಿಧ ಧಾರ್ಮಿಕ  ಕಾರ್ಯಕ್ರಮಗಳೊಂದಿಗೆ ವಿಜೃಂ ಭಣೆಯಿಂದ  ಜರಗಿತು.

ಸೂರ್ಯ ದೇವನು ತನ್ನ ಪಥದಲ್ಲಿ ದಿಕ್ಕನ್ನು ಬದಲಾಯಿಸುವ, ಉತ್ತಾರಾಯಣ ಪ್ರಾರಂಭದ ಪ್ರಾಕೃತಿಕವಾಗಿ ಬದಲಾವಣೆಯ ಒಂದು ಪರ್ವ ದಿನವು  ಪ್ರತಿ ವರ್ಷ ಜ. 14ರಂದು ಬರುತ್ತದೆ. ಅಲ್ಲದೆ ಈದಿನ   ಮಕರ ಸಂಕ್ರಮಣದ ಶುಭ ದಿನವಾಗಿಯು ತುಂಬಾ ವಿಶೇಷವಾಗಿದೆ. ಶಬರಿ ಮಲೆ ಅಯ್ಯಪ್ಪ ಸನ್ನಿಧಾನದಲ್ಲಿ ಜ್ಯೋತಿ ದರ್ಶನದ ಮೂಲಕ ಅಯ್ಯಪ್ಪ ಸ್ವಾಮೀ ಭಕ್ತರಿಗೆ ಕಾಣಿಸಿಕೊಳ್ಳುತ್ತಾನೆ ಎಂಬ ಪ್ರತೀತಿ ಇದೆ.

ಈ ಶುಭ ದಿನದಂದು ಪುಣೆ ಕಾತ್ರಜ್‌ ಅಯ್ಯಪ್ಪ ದೇವಸ್ಥಾನದಲ್ಲಿ   ಪ್ರಧಾನ ಅರ್ಚಕರಾದ  ವೇದಮೂರ್ತಿ ಹರೀಶ ಭಟ್‌ ಅವರ ನೇತೃತ್ವದಲ್ಲಿ ಕ್ಷೇತ್ರದ ಆರಾಧ್ಯ ದೇವರಾದ ಶ್ರೀ ಅಯ್ಯಪ್ಪ ಸ್ವಾಮೀಗೆ ಹಾಗೂ ಪರಿವಾರ ದೇವರುಗಳಿಗೆ  ವಿಶೇಷ ಪೂಜೆ ಮತ್ತು ಮಹಾಪೂಜೆ, ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಅಲ್ಲದೆ ಭಕ್ತ ವೃಂದದವರಿಂದ ಭಜನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಸಂಜೆ   6.45ರಿಂದ ಶ್ರೀ  ಕ್ಷೇತ್ರ ಶಬರಿ ಮಲೆಯ ಜ್ಯೋತಿ ದರ್ಶನದ ನೇರ ಪ್ರಸಾರವನ್ನು ದೇವಸ್ಥಾನದಲ್ಲಿ ಹಾಕಲಾದ ವಿಶಾಲ ಪರದೆಯಲ್ಲಿ ಸೇರಿದ ನೂರಾರು ಸಂಖ್ಯೆಯ ಅಯ್ಯಪ್ಪ ಭಕ್ತರು ನೋಡಿ ಕಣ್ತುಂಬಿಕೊಂಡರು. ರಾತ್ರಿ  8 ರಿಂದ ದೇವರಿಗೆ ಮಹಾಪೂಜೆ, ಮಹಾ  ಮಂಗಳಾರತಿ ಜರಗಿತು. ಕಾತ್ರಜ್‌ ಶ್ರೀ  ಅಯ್ಯಪ್ಪ ಸ್ವಾಮೀ ಮಹಿಳಾ ಸಂಘದವರಿಂದ ಮಕರ ಸಂಕ್ರಮಣದ ಪರ್ವ ಕಾಲದಲ್ಲಿ ಪ್ರತಿ ವರ್ಷ  ನಡೆಸಿಕೊಂಡು ಬಂದಿರುವ ಅರಶಿನ ಕುಂಕುಮ ಕಾರ್ಯಕ್ರಮ ನೆರವೇರಿತು.  ನಂತರ  ಪ್ರಸಾದ ವಿತರಣೆ ಮತ್ತು ಅನ್ನಸಂತರ್ಪಣೆ ಜರಗಿತು.

ಅನ್ನಸಂತರ್ಪನೆಯು  ಪ್ರಶಾಂತ್‌ ಆಳ್ವ ಮತ್ತು ಪ್ರವೀಣ್‌ ಆಳ್ವ  ಅವರ  ಸೇವಾರ್ಥಕವಾಗಿ ನಡೆಯಿತು. ಈ   ಕಾರ್ಯಕ್ರಮದಲ್ಲಿ  ಪುಣೆಯ ತುಳು ಕನ್ನಡಿಗರು, ಅಯ್ಯಪ್ಪ ಸಾಮಿ ಭಕ್ತರು, ಮಹಿಳೆಯರು ಮಕ್ಕಳು   ಪಾಲ್ಗೊಂಡು ಗಂಧ  ಪ್ರಸಾದ ಸ್ವೀಕರಿಸಿ ಹರಿಹರ ಪುತ್ರ  ಶ್ರೀ ಅಯ್ಯಪ್ಪ ಸ್ವಾಮಿಯ ಕೃಪೆಗೆ ಪಾತ್ರರಾದರು. ಶ್ರೀ  ಅಯ್ಯಪ್ಪ ಸ್ವಾಮಿ ದೇವಸ್ಥಾನ ಕಾತ್ರಜ್‌ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಂಘದ ವಿಶ್ವಸ್ತ ಮಂಡಳಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಶ್ರೀ ಆಯ್ಯ±³ ‌ ಸ್ವಾಮಿ ಸೇವಾ ಸಂಘದ ಕಾರ್ಯಕಾರಿ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಶ್ರೀ ಅಯ್ಯಪ್ಪ ಸ್ವಾಮೀ ಮಹಿಳಾ ಮಂಡಳಿಯ ಅಧ್ಯಕ್ಷೆ ಮತ್ತು ಪದಾಧಿಕಾರಿಗಳು, ಸದಸ್ಯರ  ಸಹಕಾರದೊಂದಿಗೆ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ನೂರಾರು ಭಕ್ತಾದಿಗಳು ಪಾಲ್ಗೊಂಡಿದ್ದರು.

 ಚಿತ್ರ-ವರದಿ:ಹರೀಶ್‌ ಮೂಡಬಿದ್ರೆ ಪುಣೆ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.