ಕೆ.ಡಿ.ಶೆಟ್ಟಿ ಅವರಿಗೆ ದಿ.ನ್ಯೂಸ್ ಪೇಪರ್ಸ್ ಪ್ರಶಸ್ತಿ
Team Udayavani, Dec 9, 2017, 4:30 PM IST
ಮುಂಬಯಿ: ನಗರದ ಪ್ರಸಿದ್ಧ ಉದ್ಯಮಿ, ಸಮಾಜ ಸೇವಕ, ಕೊಡುಗೈದಾನಿ ಭವಾನಿ ಫೌಂಡೇಶನ್ ಮುಂಬಯಿ ಸಂಸ್ಥಾಪಕ ಕುಸುಮೋದರ ಡಿ. ಶೆಟ್ಟಿ ಅವರಿಗೆ 2017 ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.
ಕರ್ನಾಟಕದಾದ್ಯಂತ ಇರುವ ಸುದ್ದಿ ಮಾಧ್ಯಮಗಳಾದ ದಿನಪತ್ರಿಕೆಗಳು, ಪಾಕ್ಷಿಕ, ಮಾಸಿಕ, ಟಿವಿ ಚಾನೆಲ್, ಆಕಾಶವಾಣಿ, ಆನ್ಲೈನ್ ಚಾನೆಲ್ಸ್ಗಳ ಸಂಘಟನಾ ಸಂಸ್ಥೆ ದಿ. ನ್ಯೂಸ್ ಪೇಪರ್ ಅಸೋಸಿಯೇಶನ್ ಆಫ್ ಕರ್ನಾಟಕ ಸಂಸ್ಥೆಯು ಪತ್ರಿಕೋದ್ಯಮದ ಇತಿಹಾಸದಲ್ಲೇ ಇದೇ ಪ್ರಪ್ರಥಮವಾಗಿ 62 ನೇ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ನ. 30 ರಂದು ಬೆಂಗಳೂರಿನ ಕುಮಾರ ಸ್ವಾಮಿ ಬಡಾವಣೆಯಲ್ಲಿರುವ ದಯಾನಂದ ಸಾಗರ್ ಇಂಜಿನಿಯರಿಂಗ್ ಕಾಲೇಜು ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಆಯೋಜಿಸಿದ್ದು, ಇದೇ ಸಂದರ್ಭದಲ್ಲಿ ಉದ್ಯಮಿ ಕೆ. ಡಿ. ಶೆಟ್ಟಿ ಅವರಿಗೆ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನಿಸಿ ಶುಭಹಾರೈಸಲಾಯಿತು.
ಹಿರಿಯ ಪತ್ರಕರ್ತ, ಸ್ವಾತಂತ್ರ ಹೋರಾಟಗಾರ ದೊರೆಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆಸಲ್ಪಟ್ಟ ವರ್ಣರಂಜಿತ ಸಮಾರಂಭದಲ್ಲಿ ಬೆಂಗಳೂರು ದೂರದರ್ಶನದ ನಿಕಟಪೂರ್ವ ಮಹಾ ನಿರ್ದೇಶಕ ಡಾ| ಮಹೇಶ್ ಜೋಶಿ, ಮಾಜಿ ಕ್ರಿಕೆಟ್ಪಟು ಗುಂಡಪ್ಪ ವಿಶ್ವನಾಥ್, ರಾಜ್ಯ ಮಹಿಳಾ ಅಯೋಗದ ನಾಗಲಕ್ಷಿ¾à ಬಾಯಿ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರೆ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಸಮಾರಂಭದಲ್ಲಿ ಸಮಾಜ ಸೇವೆ ಹಾಗೂ ಉದ್ಯಮ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆಗೈದಿರುವ ಹೊರನಾಡ ಮುಂಬಯಿಯ ಸಾಧಕ, ಮುಂಬು ಉದ್ಯಮಿ, ಸಮಾಜ ಸೇವಕ, ಭವಾನಿ ಫೌಂಡೇಶನ್ ಸಂಸ್ಥೆಯ ಸಂಸ್ಥಾಪಕ ಕಾರ್ಯಾಧ್ಯಕ್ಷ ದಡªಂಗಡಿ ಚೆಲ್ಲಡ್ಕ ಕುಸುಮೋದರ ಡಿ. ಶೆಟ್ಟಿ ಇವರಿಗೆ “ಪತ್ರಿಕೋದ್ಯಮ ಕನ್ನಡ ರಾಜ್ಯೋತ್ಸವ ಪ್ರಶಸ್ತಿ-2017′ ಪ್ರದಾನಿ ಶಾಲು ಹೊದಿಸಿ, ಪುಷ್ಪಗುಚ್ಚ, ಸ್ಮರಣಿಕೆ, ಸ್ವರ್ಣಪದಕವನ್ನು ಪ್ರದಾನಿಸಿ ಗೌರವಿಸಲಾಯಿತು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಡಿಸಿಪಿ ರೂಪಾ (ಐಪಿಎಸ್), ಮಾಜಿ ಕ್ರಿಕೆಟಿಗ ಜಿ. ಆರ್ ವಿಶ್ವನಾಥ್, ನಟಿ ಗಿರಿಜಾ ಲೋಕೇಶ್, ಸೃಜನ್ ಲೋಕೇಶ್, ಸಾಧು ಕೋಕಿಲ, ರಚಿತಾ ರಾಮು ಮತ್ತಿತರ ಚಿತ್ರರಂಗದ ಗಣ್ಯರಿಗೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನಿಸಿ ಅಭಿನಂದಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಬುಧಾಬಿ: ಯು.ಎ.ಇ: ಸಿ.ಬಿ.ಎಸ್.ಸಿ.ಕ್ಲಸ್ಟರ್ ವಿಭಾಗದ ಚೆಸ್ ಟೂರ್ನಮೆಂಟ್ ಉದ್ಘಾಟನೆ
Desi Swara: “ಅಕ್ಕ’ ಅರಮನೆಯ ರಚನೆಯ ನೆನ್ನೆ, ಇಂದು, ನಾಳೆಗಳು
Desi Swara: 12ನೆಯ ಅಕ್ಕ ಸಮ್ಮೇಳನ: ವೀರಶೈವ 10 ಸಾವಿರ ವರ್ಷಗಳ ಪ್ರಾಚೀನ ಧರ್ಮ
Desi Swara: ಮಸ್ಕತ್- 40ನೇ ವರ್ಷದ ಗಣೇಶೋತ್ಸವ-ಮೂರು ದಿನದ ಉತ್ಸವ
Desi Swara: ಹೊನ್ನುಡಿ-ಜ್ಞಾನ ಬಳಸಿದರಷ್ಟೇ ಶ್ರೇಷ್ಠ..ಗರ್ವದಿಂದ ಹೊತ್ತು ತಿರುಗಬಾರದು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.