ಕೆರ್ವಾಶೆ ಗ್ರಾಮಸ್ಥರ ಸಮಿತಿ ಮುಂಬಯಿ ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ


Team Udayavani, Feb 21, 2017, 4:05 PM IST

20-Mum02a.jpg

ಮುಂಬಯಿ: ಬ್ರಹ್ಮಕಲಾಶಭಿಷೇಕ ಹನ್ನೆರಡು ವರ್ಷಕ್ಕೊಮ್ಮೆ ಬರುವಂಥದ್ದು. ಆದರೆ ದೇವಸ್ಥಾನದ ಜೀರ್ಣೋದ್ಧಾರ ನಮ್ಮ ಜೀವಮಾನದಲ್ಲಿ ಒಮ್ಮೆ ಕಾಣಲು ಸಿಗು ವಂಥದ್ದಾಗಿದೆ. ಸಾವಿರ ವರ್ಷಗಳ ಇತಿಹಾಸವನ್ನು ಹೊಂದಿರುವ ಕೆರ್ವಾಶೆ ಶ್ರೀ ಮಹಾಲಿಂಗೇಶ್ವರ ಮಂದಿರ ಒಂದು ಐತಿಹಾಸಿಕ ಕ್ಷೇತ್ರವಾಗಿದೆ. ವಿಶ್ವಾಸ ಎಂಬುವುದೇ ಪರಮಾತ್ಮನಾಗಿದ್ದು, ಆ  ನಂಬಿಕೆಯ ಆಧಾರದಿಂದ ಬದುಕು ಕಟ್ಟುತ್ತಾ ಬಂದವರು ನಾವು. ಮುಂಬಯಿ ಜನರ ಗಳಿಕೆಯ ಒಂದು ಭಾಗದಿಂದಾಗಿ ನಮ್ಮ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ದೇವಸ್ಥಾನಗಳು ಉದ್ಧಾರವಾಗುತ್ತಿರುವುದು ನಿಜವಾಗಿಯೂ ಅಭಿನಂದನೀಯ. ಮಾತ್ರ ವಲ್ಲದೆ ಮುಂಬಯಿಗರಿಂದ ಎರಡು ಜಿಲ್ಲೆಗಳ ಬದಲಾವಣೆ ಸಾಧ್ಯವಾಗಿದೆ  ಎಂದು ಕರ್ನಾಟಕ ಸರಕಾರದ ವಿಧಾನ ಪರಿಷತ್‌ನ ವಿರೋಧ ಪಕ್ಷದ ಮುಖ್ಯ ಸಚೇತಕ ಮತ್ತು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕ್ಯಾಪ್ಟನ್‌ ಗಣೇಶ್‌ ಕಾರ್ಣಿಕ್‌ ನುಡಿದರು.

 ಕಾರ್ಕಳ ತಾಲೂಕಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಕೆರ್ವಾಶೆ ಇದರ ಅಷ್ಟಬಂಧ ಪುನಃಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ನಿಮಿತ್ತ ಫೆ. 19 ರಂದು  ಸಾಯನ್‌ ಪೂರ್ವದ ನಿತ್ಯಾನಂದ ಸಭಾಗೃಹದಲ್ಲಿ ಕೆರ್ವಾಶೆ ಗ್ರಾಮಸ್ಥರ ಸಮಿತಿ ಮುಂಬಯಿ ಆಯೋಜಿಸಿದ್ದ  ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ದೇವಸ್ಥಾನ ಜೀರ್ಣೋದ್ಧಾರ ಎಂಬ ಪುಣ್ಯ ಕಾರ್ಯದಲ್ಲಿ ಭಾಗಿಯಾಗುವ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ಇದಕ್ಕೆ ಪೂರ್ವಜನ್ಮದ ಪುಣ್ಯದ ಫಲ ಬೇಕು. ಮುಂಬಯಿಯ ಭಕ್ತಾಭಿಮಾನಿಗಳು ಈ ದೇವತಾ ಕಾರ್ಯಕ್ರಮದಲ್ಲಿ ಸಕ್ರಿಯರಾಗಿ ಜೀವನವನ್ನು ಪಾವನವನ್ನಾಗಿಸಿಕೊಳ್ಳಬೇಕು. ನಮ್ಮ ಗಳಿಕೆಯ ಸ್ವಲ್ಪಾಂಶವನ್ನು ಇಂತಹ ಕಾರ್ಯಗಳಿಗೆ ವಿನಿಯೋಗಿಸಿಕೊಂಡಾಗ ಮನಸ್ಸು ಪ್ರಫುಲ್ಲಗೊಳ್ಳುತ್ತದೆ. ಈ ಪುಣ್ಯ ಕಾರ್ಯದಲ್ಲಿ ಜಾತಿ, ಮತ, ಧರ್ಮವನ್ನು ಮರೆತು ಎಲ್ಲರೂ ಒಂದಾಗಿ ಭಾಗಿಯಾಗಬೇಕು ಎಂದರು.

ಮುಂಬಯಿ ಉದ್ಯಮಿ, ಧಾರ್ಮಿಕ ಚಿಂತಕ ಕರಿಯಣ್ಣ ಶೆಟ್ಟಿ ಅವರು  ಅಧ್ಯಕ್ಷತೆ ವಹಿಸಿ ಮಾತ ನಾಡಿ, ನಮ್ಮ ಕ್ರೀಯಾಶೀಲತೆಯಿಂದ ಮಾತ್ರ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆಲಸ ಅದಷ್ಟು ಶೀಘ್ರವಾಗಿ ನೇರವೇರಿಸಲು ಸಾಧ್ಯ. ಅಲ್ಲದೆ ಜೀರ್ಣೋದ್ಧಾರ ಕಾರ್ಯವೂ ಯಾವತ್ತೂ ಮುಗಿಯಬೇಕಿತ್ತು.   ಇಷ್ಟು ತಡವಾದುದಕ್ಕೆ  ನಾನು ವಿಷಾದ ವ್ಯಕ್ತಪಡಿಸುತ್ತಿದ್ದೇನೆ. ದೇವರ ಕಾರ್ಯದಲ್ಲಿ ಯಾವುದೇ ರೀತಿಯ ತಾರತಮ್ಯ ವಹಿಸದೆ, ಮುಂಬಯಿಯ ಭಕ್ತಾಭಿಮಾನಿಗಳು, ದಾನಿಗಳು ಕೈಜೋಡಿಸಬೇಕು. ಮಾನಸಿಕವಾಗಿ ನಾವು ನೆಮ್ಮದಿಯನ್ನು ಕಾಣಬೇಕಿದ್ದರೆ, ನಮ್ಮ ಬದುಕಿನ ಜಂಜಾಟ ಸ್ವಲ್ಪ ಸಮಯವನ್ನು ಇಂತಹ ಕಾರ್ಯಗಳಿಗೆ ವಿನಿಯೋಗಿಸಿಕೊಳ್ಳುವುದರಲ್ಲಿ ಅರ್ಥವಿದೆ ಎಂದರು.

ಮಹಾಸಭೆಯಲ್ಲಿ ಅತಿಥಿಗಳಾಗಿ ಭಾಗ ವಹಿಸಿದ ನಗರದ  ಉದ್ಯಮಿ, ಸಮಾಜ ಸೇವಕರಾದ ಮಹೇಶ್‌ ಶೆಟ್ಟಿ,  ಶೇಖರ ಶೆಟ್ಟಿ, ವೇದಮೂರ್ತಿ ರಾಮ್‌ ಭಟ್‌ 

ಸಾಣೂರು, ಕೆ. ಸುಧಾಕರ ಬಂಗೇರ, ಸಂಜೀವ ರಾವ್‌ ಅವರು ಸಂದಭೋìಚಿತವಾಗಿ ಮಾತನಾಡಿ ಈ ಪುಣ್ಯಕಾರ್ಯಕ್ಕೆ ಎಲ್ಲರ ಸಹಕಾರವಿರಲಿ ಎಂದರು.

ದೇವಸ್ಥಾನದ ಹಿರಿಯ ಅರ್ಚಕ ಕೆ. ಪದ್ಮನಾಭ ಭಟ್‌, ಸಂಜೀವ ರಾವ್‌, ಕುಲ್‌ದೀಪ್‌ ಸಿಂಗ್‌, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರ್ವಾಶೆ ಅಧ್ಯಕ್ಷ ಹರೀಶ್‌ ಕಾರ್ಣಿಕ್‌  ಮತ್ತಿತರರು ಉಪಸ್ಥಿತರಿದ್ದರು. 
ಶ್ರೀ  ಕೃಷ್ಣ ವಿಠಲ ಪ್ರತಿಷ್ಠಾನ ಮುಂಬಯಿ ಇದರ ಸಂಸ್ಥಾಪಕ ಅಧ್ಯಕ್ಷ ವಿದ್ವಾನ್‌  ಕೈರಬೆಟ್ಟು ವಿಶ್ವನಾಥ ಭಟ್‌ ಅವರು ದೀಪ ಬೆಳಗಿಸಿ ಸಭೆಗೆ ಚಾಲನೆಯಿತ್ತು  ಆಶೀರ್ವಚನ ನೀಡಿದರು.

ವಿಜಯ್‌ ಶೆಟ್ಟಿ ಮುಂಬಯಿ, ಕೆರ್ವಾಶೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಧರ್ಮರಾಜ ಹೆಗ್ಡೆ, ಸುನಿಲ್‌ ಶೆಟ್ಟಿ, ಪ್ರಭಾಕರ ನಾಯಕ್‌, ಸದಾನಂದ ಸಾಲ್ಯಾನ್‌, ಮಹೇಶ್‌ ಶೆಟ್ಟಿ ಅವರು ಪಾಲ್ಗೊಂಡಿದ್ದರು. 

ಸಭೆಯಲ್ಲಿ ಶಿರ್ಲಾಲು, ಮೂಂಡ್ಲಿ, ಮುಡಾರು, ಮಾಳ, ಐದು ಮಾಗಣೆ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದು ತಮ್ಮ ಸಲಹೆ – ಸೂಚನೆಗಳನ್ನಿತ್ತು ಸಭೆಯ ಯಶಸ್ಸಿಗೆ ಸಹಕರಿಸಿದರು.

ಕೆರ್ವಾಶೆ ಗ್ರಾಮಸ್ಥರ ಸಮಿತಿ ಮುಂಬಯಿ  ಪರವಾಗಿ ಸಾಂತಾಕ್ರೂಜ್‌ ಪೇಜಾವರ  ಮಠದ ಪ್ರಬಂಧಕ ಕೆ. ಹರಿ ಭಟ್‌ ಅವರು ಆಯೋಜಿಸಿದ್ದರು. 
ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಕೆ‌ರ್ವಾಶೆ ಇದರ ಅಧ್ಯಕ್ಷ ಹರೀಶ್‌ ಕಾರ್ನಿಕ್‌ ಸ್ವಾಗತಿಸಿದರು. ಸಂಜೀವ ದೇವಾಡಿಗ ಕೆರ್ವಾಶೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ನಮ್ಮ ಊರಿನ ಧಾರ್ಮಿಕ ಕ್ಷೇತ್ರಗಳನ್ನು ಉದ್ಧಾರಗೊಳಿಸುವ ಕರ್ತವ್ಯ ನಮ್ಮ ಮೇಲಿದೆ. ನಮ್ಮ ಊರು ಅನ್ನುವುದು ಶರೀರದಂತೆ. ಶರೀರ ಕ್ರಿಯಾತ್ಮಕವಾಗಿರಬೇಕಾದರೆ ಅದು ಜೀವಂತವಾಗಿರಬೇಕು. ಆದುದರಿಂದ ನಮ್ಮ ಊರಿನ ದೇವಸ್ಥಾನಗಳ ಸಂಪೂರ್ಣ ಜೀರ್ಣೋದ್ಧಾರದ ಅಗತ್ಯವಿದೆ. ಊರಿನ ದೇವಸ್ಥಾನ ಎಂದರೆ ಅದೊಂದು ಸಂಪರ್ಕ ಕೇಂದ್ರ. ಮನುಷ್ಯನಾದವನು ನಾಲ್ಕು ವರ್ಷ ಕಲಿತರು ಸಂಸ್ಕಾರಯುಕ್ತವಾದ ಕಲಿಕೆಯಾದರೆ ಅದೇ ಸರಿಯಾದ ಶಿಕ್ಷಣವಾಗುತ್ತದೆ. ಆದುದರಿಂದ ದೇವಸ್ಥಾನದ ಜೀರ್ಣೋದ್ಧಾರ ಎಂದರೆ ನಮ್ಮನ್ನು ನಾವೇ ಜೀರ್ಣೋದ್ಧಾರ ಗೊಳಿಸುವುದು ಎಂದು ಅರ್ಥ. ಈ ಪುಣ್ಯ ಕಾರ್ಯದಲ್ಲಿ ಎಲ್ಲರ ಸಹಕಾರ, ಪ್ರೋತ್ಸಾಹ ಅಗತ್ಯವಾಗಿದೆ 
– ವಿದ್ವಾನ್‌  ಕೈರಬೆಟ್ಟು ವಿಶ್ವನಾಥ ಭಟ್‌ (ಸಂಸ್ಥಾಪಕ ಅಧ್ಯಕ್ಷರು :  ಶ್ರೀ  ಕೃಷ್ಣ ವಿಠಲ ಪ್ರತಿಷ್ಠಾನ ಮುಂಬಯಿ).

ಚಿತ್ರ-ವರದಿ : ರೊನಿಡಾ ಮುಂಬಯಿ

ಟಾಪ್ ನ್ಯೂಸ್

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

ed raid on mysore muda office

Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

ವಿಶ್ವಬ್ರಾಹ್ಮಣ ಒಕ್ಕೂಟ ಮಸ್ಕತ್‌: ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ವಿಶ್ವಬ್ರಾಹ್ಮಣ ಒಕ್ಕೂಟ ಮಸ್ಕತ್‌: ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

10

Katpadi: ತ್ಯಾಜ್ಯ ಗುಂಡಿಯಾಗುತ್ತಿದೆ ಕುರ್ಕಾಲು ಮದಗ

Belagavi: UT Khader, Basavaraja Horatti visited Suvrana vidhasoudha

Belagavi: ಸುವರ್ಣ ವಿಧಾನಸೌಧಕ್ಕೆ‌ ಯು.ಟಿ.ಖಾದರ್‌, ಬಸವರಾಜ ಹೊರಟ್ಟಿ ಭೇಟಿ

16-bng

Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.