ಕುರಾರ್‌ ಶ್ರೀ ಶನೀಶ್ವರ ಪೂಜಾ ಸಮಿತಿಯ 43ನೇ ವಾರ್ಷಿಕ ಮಹಾಪೂಜೆ


Team Udayavani, Feb 14, 2017, 12:19 PM IST

13-Mum05a.jpg

ಮುಂಬಯಿ: ಜೀವನದಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಮೈಗೂಡಿಸಿಕೊಂಡಾಗ ಜೀವನ ಪಾವನಗೊಳ್ಳುವುದರಲ್ಲಿ ಸಂಶಯವಿಲ್ಲ. ದೇವಸ್ಥಾನಗಳು ಎಲ್ಲರನ್ನು ಒಂದುಗೂಡಿಸುವ ಶಕ್ತಿ ಕೇಂದ್ರವಿದ್ದಂತೆ. ನಾವೆಷ್ಟು ಬೆಳೆದರೂ ಧಾರ್ಮಿಕ ಮನೋಭಾವನೆಯನ್ನು ನಿರಂತರವಾಗಿ ಬೆಳೆಸಿಕೊಂಡಾಗ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯವಿದೆ. ಮಕ್ಕಳಿಗೆ ಎಳವೆಯಿಂದಲೇ ಧಾರ್ಮಿಕತೆಯ ಬಗ್ಗೆ ಅರಿವು ಮೂಡಿಸಿದಾಗ ಸಂಸ್ಕೃತಿ-ಸಂಸ್ಕಾರ, ಸಂಪ್ರದಾಯಗಳು ಉಳಿದು ಬೆಳೆಯಲು ಸಾಧ್ಯವಿದೆ ಎಂದು ಮಲಾಡ್‌ ಶ್ರೀ ಶನೀಶ್ವರ ದೇವಸ್ಥಾನದ ಅಧ್ಯಕ್ಷ ಶ್ರೀನಿವಾಸ ಪಿ. ಸಾಫಲ್ಯ ಅವರು ಹೇಳಿದರು.

ಫೆ. 11ರಂದು  ಮಲಾಡ್‌ ಪೂರ್ವದ ಕುರಾರ್‌ ವಿಲೇಜ್‌ನ ಶ್ರೀ ಶನೀಶ್ವರ ದೇವಸ್ಥಾನದ ಶ್ರೀ ಶನೀಶ್ವರ ಪೂಜಾ ಸಮಿತಿಯ 43ನೇ ವಾರ್ಷಿಕ ಮಹಾಪೂಜೆಯ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಳೆದ 43 ವರ್ಷಗಳಿಂದ ಧಾರ್ಮಿಕಕಾರ್ಯಕ್ರಮಗಳೊಂದಿಗೆ ತುಳು-ಕನ್ನಡಿ ಗರೊಂದಿಗೆ ಒಂದುಗೂಡಿಸಿ, ಧಾರ್ಮಿಕ ಪ್ರಜ್ಞೆಯನ್ನು ದೇವಸ್ಥಾನವು ಮೂಡಿಸುತ್ತಿದೆ. ಶ್ರೀಕ್ಷೇತ್ರದಲ್ಲಿ ನಾವೆಲ್ಲರು ಒಂದೇ ತಾಯಿಯ ಮಕ್ಕಳಂತಿದ್ದು, ಧಾರ್ಮಿಕತೆಯೊಂದಿಗೆ ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲೂ ನಿರಂತರವಾಗಿ ತೊಡಗಿಸಿಕೊಂಡಿದ್ದೇವೆ. ಶ್ರೀ ಕ್ಷೇತ್ರದ ಹಿರಿಯ ಸದಸ್ಯ ರನ್ನು ಗೌರವಿಸಲು ಸಂತೋಷವಾಗುತ್ತಿದೆ ಎಂದರು.

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಬಂಟರ ಸಂಘ ಮುಂಬಯಿ ಅಧ್ಯಕ್ಷ ಪ್ರಭಾಕರ ಎಲ್‌. ಶೆಟ್ಟಿ ಅವರು ಮಾತನಾಡಿ, ದೇವರ ಸೇವೆ ಮತ್ತು ಸಮಾಜ ಸೇವೆಯು ನಮ್ಮ ಮನಸ್ಸಿಗೆ ಸದಾ ಶಾಂತಿಯನ್ನು ನೀಡುತ್ತದೆ. ಇದನ್ನು ಮನಗಂಡು ನಮ್ಮ ಹಿರಿಯರು ಮುಂಬಯಿಯಲ್ಲಿ ಅತೀ ಹೆಚ್ಚು ಸಂಘ-ಸಂಸ್ಥೆಗಳು, ಧಾರ್ಮಿಕ ಕೇಂದ್ರಗಳನ್ನು ನಿರ್ಮಿಸಿ ಸಮಾಜ ಸೇವೆಯಲ್ಲಿ ತೊಡಗಿದ್ದಾರೆ. ಇದು ನಿಜವಾಗಿಯೂ ಅಭಿನಂದನೀಯ ಎಂದು ಹೇಳಿದರು.

ಗೌರವ ಅತಿಥಿಯಾಗಿ ಉಪಸ್ಥಿತರಿದ್ದ ಎಸ್‌ಎಂ ಶೆಟ್ಟಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ನಿತ್ಯಾನಂದ ಹೆಗ್ಡೆ ನಡಿಬೆಟ್ಟು ಅವರು ಮಾತನಾಡಿ, ದೇವರ ಕಾರ್ಯ ಮಾಡುವುದರೊಂದಿಗೆ ಸಮಾಜಪರ, ಶೈಕ್ಷಣಿಕ ಚಟುವಟಿಕೆಗಳಲ್ಲೂ ನಿರಂತರವಾಗಿ ನಡೆಸುವುದರಿಂದ ಆ ಕ್ಷೇತ್ರವು ಬೆಳೆಯುತ್ತದೆ. ಜನಪರ ಕಾರ್ಯದಿಂದ ದೇವರ ಆಶೀರ್ವಾದ ಲಭಿಸುತ್ತದೆ ಎಂದು ನುಡಿದರು.

ಆಶೀರ್ವಚನ ನೀಡಿದ ಶ್ರೀ ಉಮಾ ಮಹೇಶ್ವರಿ ಮಂದಿರದ ಜೆರಿಮರಿ ಇದರ ಪ್ರಧಾನ ಅರ್ಚಕ ಶ್ರೀನಿವಾಸ ಎನ್‌. ಉಡುಪ ಅವರು, ನಮ್ಮನ್ನು ಸಮಾಜದಲ್ಲಿ ಸುಸಂಸ್ಕೃತ ವ್ಯಕ್ತಿಯನ್ನಾಗಿಸುವಲ್ಲಿ ಭಕ್ತಿ, ಶ್ರದ್ಧಾ ಕೇಂದ್ರಗಳ ಪಾತ್ರ ಮಹತ್ತವಾಗಿರುತ್ತದೆ. ಒಂದು ಪ್ರದೇಶದಲ್ಲಿ ಒಂದು ಮಂದಿರವಿದ್ದರೆ, ಆ ಕ್ಷೇತ್ರ ಹಾಗೂ ಪರಿಸರದ ಜನರನ್ನು ಶಾಂತಿ, ಸೌಹಾರ್ದತೆಯಿಂದ ಬಾಳುವಂತೆ ಪ್ರೇರೇಪಿಸುತ್ತದೆ ಎಂದು ಹೇಳಿದರು.

ಸಮಾರಂಭದಲ್ಲಿ ಸಮಿತಿಯ ಮಾಜಿ ಅಧ್ಯಕ್ಷ ಶ್ರೀಧರ ಆರ್‌. ಶೆಟ್ಟಿ, ಸಮಿತಿಯ ಹಿರಿಯ ಸದಸ್ಯರುಗಳಾದ ಸುಭಾಷ್‌ ಅಮೀನ್‌ ದಂಪತಿಗಳನ್ನು ಗಣ್ಯರ ಸಮ್ಮುಖದಲ್ಲಿ ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಲಾಯಿತು.

ಅತಿಥಿಯಾಗಿ ಆಗಮಿಸಿದ ಸಮಾಜ ಸೇವಕ ಗಿರೀಶ್‌ ಶೆಟ್ಟಿ ತೆಳ್ಳಾರು ಅವರು ಮಾತನಾಡಿ, ಸಮಾಜ ಸೇವೆ ಮಾಡುವುದರಿಂದ ದೇವರ ಅನುಗ್ರಹ ಸದಾಯಿರುತ್ತದೆ. ಸಮಾಜ ಸೇವೆ ಮಾಡುವ ಸೌಭಾಗ್ಯವನ್ನು ದೇವರು ನಮಗೆ ಕರುಣಿಸಲಿ ಎಂದು ಆಶಿಸಿದರು. ಪೂಜಾ ಸಮಿತಿಯ ಅಧ್ಯಕ್ಷ ಸಂತೋಷ್‌ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಮಂದಿರದ ಸಿದ್ಧಿ-ಸಾಧನೆಗಳನ್ನು ವಿವರಿಸಿದರು. ಪತ್ರಕರ್ತ ದಿನೇಶ್‌ ಕುಲಾಲ್‌ ಅವರು ಕಾರ್ಯಕ್ರಮ ನಿರ್ವಹಿಸಿದರು. ಸಲಹೆಗಾರ ಬಿ. ಎನ್‌. ಚಂದನ್‌  ವಂದಿಸಿದರು.

ಉಪಾಧ್ಯಕ್ಷರಾದ ನಾರಾಯಣ ಶೆಟ್ಟಿ ಮತ್ತು ವಿಶ್ವನಾಥ ಶೆಟ್ಟಿ ಪೇತ್ರಿ, ಗೌರವ ಪ್ರಧಾನ ಕಾರ್ಯದರ್ಶಿ ಎಂ. ಡಿ. ಬಿಲ್ಲವ, ಕೋಶಾಧಿಕಾರಿ ಹರೀಶ್‌ ಸಾಲ್ಯಾನ್‌, ಜತೆ ಕಾರ್ಯದರ್ಶಿಗಳಾದ ನಿತ್ಯಾನಂದ ಕೋಟ್ಯಾನ್‌ ಮತ್ತು ಸಂತೋಷ್‌ ಶೆಟ್ಟಿ, ಜತೆ ಕೋಶಾಧಿಕಾರಿಗಳಾದ ದಿನೇಶ್‌ ಕುಂಬ್ಳೆ ಮತ್ತು ಶಿವಾನಂದ ಎನ್‌. ದೇವಾಡಿಗ, ಸಲಹೆಗಾರರಾದ ಶ್ರೀಧರ ಆರ್‌. ಶೆಟ್ಟಿ, ಬಿ. ಎನ್‌. ಚಂದನ್‌, ಮಹಿಳಾ ಮಂಡಳಿಯ ಮುಖ್ಯಸ್ಥೆ ಶೀತಲ್‌ ಎನ್‌. ಕೋಟ್ಯಾನ್‌, ಆಡಳಿತ ಸಮಿತಿಯ ಸದಸ್ಯರಾದ ರಾಮಕೃಷ್ಣ ಶೆಟ್ಟಿಯಾನ್‌, ಹರೀಶ್‌ ಕುಂದರ್‌, ಪ್ರಭಾಕರ ಶೆಟ್ಟಿ, ಸದಾನಂದ ಕೆ. ನಾಯಕ್‌, ಸಂತೋಷ್‌ ರಾವ್‌, ಶಾಲಿನಿ ಆರ್‌. ಶೆಟ್ಟಿ, ಸಹ ಸದಸ್ಯರಾದ ಮಧುಸೂದನ್‌ ಪಾಲನ್‌, ಸ್ನೇಹಲತಾ ಎಸ್‌. ನಾಯಕ್‌, ಯಶೋದಾ ಡಿ. ಕುಂಬ್ಳೆ, ಗಿರಿಜಾ ಎಸ್‌. ಮರಕಲ, ರಾಜಶ್ರೀ ಎಸ್‌. ಪೂಜಾರಿ, ಜಯಂತಿ ಸಾಲ್ಯಾನ್‌ ಮೊದಲಾದವರು ಉಪಸ್ಥಿತರಿದ್ದರು.  

ಸ್ಥಳೀಯ ಮಕ್ಕಳಿಂದ  ವಿವಿಧ ನೃತ್ಯಾವಳಿ,  ರಂಗಮಿಲನ ತಂಡದಿಂದ ಮನೋಹರ ಶೆಟ್ಟಿ ನಂದಳಿಕೆಯವರ ನಿರ್ದೇಶನದಲ್ಲಿ ಸಾಮಾಜಿಕ ಹಾಸ್ಯ ನಾಟಕ “ಆಯಿನ ಆಂಡ ಬುಡುದು ಬುಡ್ಲೆ’ ಪ್ರದರ್ಶನಗೊಂಡಿತು. 

ಚಿತ್ರ-ವರದಿ: ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕತಾರ್: ಶಿಕ್ಷಕರ ದಿನಾಚರಣೆ- ಶಿಕ್ಷಕರನ್ನು ಸನ್ಮಾನಿಸಿದ ಇಂಡಿಯನ್‌ ಕಲ್ಚರಲ್‌ ಸೆಂಟರ್

ಕತಾರ್: ಶಿಕ್ಷಕರ ದಿನಾಚರಣೆ- ಶಿಕ್ಷಕರನ್ನು ಸನ್ಮಾನಿಸಿದ ಇಂಡಿಯನ್‌ ಕಲ್ಚರಲ್‌ ಸೆಂಟರ್

Dubai Green Planet: ವಿಶ್ವದ ಗಮನ ಸೆಳೆಯುವ ದುಬೈ ಗ್ರೀನ್‌ ಪ್ಲಾನೆಟ್‌ ಬೇಸಗೆ ಶಿಬಿರಾನುಭವ

Dubai Green Planet: ವಿಶ್ವದ ಗಮನ ಸೆಳೆಯುವ ದುಬೈ ಗ್ರೀನ್‌ ಪ್ಲಾನೆಟ್‌ ಬೇಸಗೆ ಶಿಬಿರಾನುಭವ

ಮೊಗವೀರ್ಸ್‌ ಬಹ್ರೈನ್‌ ಸಂಘಟನೆ;ವಿದ್ಯುಕ್ತ ಪದಗ್ರಹಣ, ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ

ಮೊಗವೀರ್ಸ್‌ ಬಹ್ರೈನ್‌ ಸಂಘಟನೆ;ವಿದ್ಯುಕ್ತ ಪದಗ್ರಹಣ, ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ

ಹೊನ್ನುಡಿ: ಜೀವನಾನುಭವ ಮುಖ್ಯ-ಭರವಸೆಯೊಂದು ಬಾಳಿನ ಆಶಾಕಿರಣವಿದ್ದಂತೆ…

ಹೊನ್ನುಡಿ: ಜೀವನಾನುಭವ ಮುಖ್ಯ-ಭರವಸೆಯೊಂದು ಬಾಳಿನ ಆಶಾಕಿರಣವಿದ್ದಂತೆ…

NRI: “ಸತ್ಕುಲ ಪ್ರಸೂತರು’ ಶ್ರೇಣಿಕೃತ ಸಮಾಜದ ಕಥನ-ಕಾದಂಬರಿ ಲೋಕಾರ್ಪಣೆ

NRI: “ಸತ್ಕುಲ ಪ್ರಸೂತರು’ ಶ್ರೇಣಿಕೃತ ಸಮಾಜದ ಕಥನ-ಕಾದಂಬರಿ ಲೋಕಾರ್ಪಣೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.