ಗೋಕುಲದ ಕಲಾ ಪ್ರಕಾರಗಳ ತರಬೇತಿಯಲ್ಲಿ ಮಕ್ಕಳು ಪಾಲ್ಗೊಳ್ಳಲಿ: ಡಾ| ಸುರೇಶ್‌ ರಾವ್‌

ಧಾರ್ಮಿಕತೆ ಯೊಂದಿಗೆ ಕಲೆಗೂ ಉತ್ತಮ ಪ್ರೋತ್ಸಾಹ ನೀಡುತ್ತಾ ಬಂದಿದೆ

Team Udayavani, Oct 31, 2023, 6:17 PM IST

ಗೋಕುಲದ ಕಲಾ ಪ್ರಕಾರಗಳ ತರಬೇತಿಯಲ್ಲಿ ಮಕ್ಕಳು ಪಾಲ್ಗೊಳ್ಳಲಿ: ಡಾ| ಸುರೇಶ್‌ ರಾವ್‌

ಮುಂಬಯಿ: ಬಿಎಸ್‌ಕೆಬಿ ಅಸೋಸಿಯೇಶನ್‌ ಗೋಕುಲದ ಭವ್ಯ ಶ್ರೀಕೃಷ್ಣನ ಮಂದಿರದಲ್ಲಿ ಸನಾತನ ಹಿಂದೂ ಸಂಸ್ಕೃತಿಯನ್ನು ಪ್ರೋತ್ಸಾಹಿಸಿ ಬೆಳೆಸುವಂತಹ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಂಪೂರ್ಣ ಸಹಕಾರ ನೀಡುತ್ತಿದ್ದೇವೆ. ನಮ್ಮ ಸಂಸ್ಥೆಯ
ಆಶ್ರಯದಲ್ಲಿ ಯಕ್ಷಗಾನ, ನಾಟಕ, ಸಂಗೀತ, ನೃತ್ಯ, ಭಜನೆ ಸಹಿತ ವಿವಿಧ ಕಲೆಗಳನ್ನು ಆಸಕ್ತ ಮಕ್ಕಳಿಗೆ ಕಲಿಸುವ ತರಬೇತಿ ಪ್ರಾರಂಭಿಸಲಾಗುವುದು. ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಬಿಎಸ್‌ಕೆಬಿ ಅಸೋಸಿಯೇಶನ್‌ ಅಧ್ಯಕ್ಷ ಡಾ| ಸುರೇಶ್‌ರಾವ್‌ ತಿಳಿಸಿದರು.

ಬಿಎಸ್‌ಕೆಬಿ ಅಸೋಸಿಯೇಶನ್‌ ಸಹಕಾರ ದೊಂದಿಗೆ ಪ್ರಕಾಶ್‌ ಎಂ. ಶೆಟ್ಟಿ ಸುರತ್ಕಲ್‌ ಸಂಚಾಲಕತ್ವದ ಕಲಾ ಪ್ರಕಾಶ ಪ್ರತಿಷ್ಠಾನ ಮುಂಬಯಿ ಸಂಯೋಜನೆಯಲ್ಲಿ ಸಯಾನ್‌ ಬಿಎಸ್‌ಕೆಬಿ ಅಸೋಸಿಯೇಶನ್‌ ಗೋಕುಲದ  ಸರಸ್ವತಿ ಸಭಾಗೃಹದಲ್ಲಿ ಅ. 27ರಂದು ಸಂಜೆ ನಡೆದ ಶ್ರೀ ಅನಂತ ಪದ್ಮನಾಭ ಯಕ್ಷಗಾನ ಮಂಡಳಿ ಪೆರ್ಡೂರು ಮೇಳದ ಈ ವರ್ಷದ ಮುಂಬಯಿ ಪ್ರವಾಸದ ಉದ್ಘಾಟನ ಸಮಾರಂಭದಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಕಲೆ – ಕಲಾವಿದರನ್ನು ಗೌರವಿಸುವ ಕಾರ್ಯವು
ಮುಂಬಯಿಯಲ್ಲಿ ಸದಾ ನಡೆಯುತ್ತಿರುವುದು ಅಭಿಮಾನದ ಸಂಗತಿ ಎಂದರು.

ಮುಖ್ಯ ಅತಿಥಿಯಾಗಿದ್ದ ನಗರದ ಪ್ರಸಿದ್ಧ ಹೃದಯ ಶಸ್ತ್ರಚಿಕಿತ್ಸಾ ತಜ್ಞ ಡಾ| ಸದಾನಂದ ಶೆಟ್ಟಿ ಮಾತನಾಡಿ, ಪ್ರಕಾಶ್‌ ಶೆಟ್ಟಿಯವರು ಕಳೆದ ಸುಮಾರು 35 ವರ್ಷಗಳಿಂದ ಮುಂಬಯಿಗೆ ಯಕ್ಷಗಾನ  ತಂಡವನ್ನು ಆಹ್ವಾನಿಸಿ ಆ ಮೂಲಕ ಕಲಾಸೇವೆ ಮಾಡುತ್ತಿದ್ದಾರೆ. ನಮ್ಮ ತುಳುನಾಡಿನ ಸಂಸ್ಕೃತಿ ಯಕ್ಷಗಾನವನ್ನು ಮುಂಬಯಿ ಮಹಾ ನಗರದಲ್ಲಿ ಪ್ರದರ್ಶಿಸಿ ಯಕ್ಷಗಾನವನ್ನು
ಉಳಿಸಿ-ಬೆಳೆಸಲು ಅವರು ಮಾಡುತ್ತಿರುವ ಕಾರ್ಯ ಅಭಿನಂದನೀಯ ಎಂದು ಹೇಳಿದರು.

ಕರ್ನಾಟಕ ಸಂಘ ಸಯಾನ್‌ ಗೌರವಾಧ್ಯಕ್ಷ ಜಯರಾಮ್‌ ಶೆಟ್ಟಿ ಮಾತನಾಡಿ, ಪ್ರಕಾಶ್‌ ಎಂ. ಶೆಟ್ಟಿಯವರು ಯಕ್ಷಗಾನದ ಮೇಲಿರುವ ಅಭಿಮಾನದಿಂದ ನಿಸ್ವಾರ್ಥವಾಗಿ ಈ ಕಲಾ ಸೇವೆ ಮಾಡುತ್ತಿದ್ದಾರೆ ಎಂದರು. ಇನ್ನೋರ್ವ ಅತಿಥಿ ಪ್ರಭಾದೇವಿ ಶ್ರೀ
ಸಿದ್ಧಿವಿನಾಯಕ ಮಂದಿರದ ಟ್ರಸ್ಟಿ ಭಾಸ್ಕರ ಶೆಟ್ಟಿ ಮಾತನಾಡಿ, ಸಯಾನ್‌ ಪರಿಸರದಲ್ಲಿರುವ ಬಿಎಸ್‌ಕೆಬಿ ಅಸೋಸಿಯೇಶನ್‌ ಧಾರ್ಮಿಕತೆ ಯೊಂದಿಗೆ ಕಲೆಗೂ ಉತ್ತಮ ಪ್ರೋತ್ಸಾಹ ನೀಡುತ್ತಾ ಬಂದಿದೆ. ಯಕ್ಷಗಾನದಂತಹ ಸಾಂಸ್ಕೃತಿಕ ಕಲೆಗೆ ಆಶ್ರಯ ನೀಡುತ್ತಿರುವುದು ಅಭಿನಂದನೀಯ ಎಂದು ಹೇಳಿದರು.

ಉದ್ಯಮಿ ಶಿಮಂತೂರು ಚಂದ್ರಹಾಸ ಶೆಟ್ಟಿ, ಕಲಾಪೋಷಕ ಸುಧೀರ್‌ ಶೆಟ್ಟಿ ಕೆಂಚನೂರು, ಹರೀಶ್‌ ಶೆಟ್ಟಿ ಜಾರ್ಕಳ, ಮೇಳದ
ಮುಂಬಯಿ ಸಂಚಾಲಕ ಪ್ರಕಾಶ್‌ ಎಂ. ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಅತಿಥಿಗಳು ದೀಪ ಪ್ರಜ್ವಲಿಸಿ ಕಾರ್ಯ
ಕ್ರಮಕ್ಕೆ ಚಾಲನೆ ನೀಡಿದರು. ಕಲಾಪ್ರಕಾಶ ಪ್ರತಿಷ್ಠಾನದ ರೂವಾರಿ ಪ್ರಕಾಶ್‌ ಎಂ. ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿದರು.

ಪೆರ್ಡೂರು ಮೇಳದ ಖ್ಯಾತ ಕಲಾವಿದ ಶ್ರೀಪಾದ್‌ ಭಟ್‌ ಥಂಡಿಮನೆಯವರನ್ನು ಕಲಾ ಪ್ರಕಾಶ ಪ್ರತಿಷ್ಠಾನದ ವತಿಯಿಂದ ಅತಿಥಿಗಳು ಶಾಲು ಹೊದೆಸಿ, ಫ‌ಲಪುಷ್ಪ ಹಾಗೂ ಹತ್ತು ಸಾವಿರ ರೂ. ನಗದು ನೀಡಿ ಗೌರವಿಸಿದರು. ಕಾರ್ಯಕ್ರಮವನ್ನು ಸಂಘಟಕ ವಿಜಯ್‌ ಶೆಟ್ಟಿ ಕುತ್ತೆತ್ತೂರು ನಿರೂಪಿಸಿ, ವಂದಿಸಿದರು. ಉದ್ಘಾಟನ ಸಮಾರಂಭದ ಬಳಿಕ ಪಾವನ ತುಳಸಿ ಯಕ್ಷಗಾನ ಪ್ರದರ್ಶನಗೊಂಡಿತು. ಕಲಾಭಿ ಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಚಿತ್ರ- ವರದಿ: ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.