ಮೀರಾರೋಡ್‌ ಮಹಾಲಿಂಗೇಶ್ವರ ದೇವಸ್ಥಾನ: ಕಾರ್ತಿಕ ದೀಪೋತ್ಸವ


Team Udayavani, Nov 15, 2017, 11:57 AM IST

14-Mum04b.jpg

ಮುಂಬಯಿ: ಮೀರಾರೋಡ್‌ ಪೂರ್ವದ ಮೀರಾಗಾಂವ್‌ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ವಿಶೇಷ ದೀಪೋತ್ಸವವು ನ. 13ರಂದು ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳೊಂದಿಗೆ ನೆರವೇರಿತು.

ದೇವಸ್ಥಾನದ ಟ್ರಸ್ಟಿ ಹಾಗೂ ಪ್ರಧಾನ ಅರ್ಚಕ ಸಾಂತಿಂಜ ಜನಾರ್ದನ ಭಟ್‌ ಅವರ ಪೌರೋಹಿತ್ಯದಲ್ಲಿ ಪರಿವಾರ ದೇವರಾದ ಶ್ರೀ ಮಹಾಗಣಪತಿ, ಶ್ರೀ ದುರ್ಗಾ ಪರಮೇಶ್ವರಿ, ಶ್ರೀ ಆಂಜನೇಯ ಶ್ರೀ ನವಗ್ರಹಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.  ದೇವಸ್ಥಾನದ ಎದುರಿನ ಹಣತೆ ದೀಪ ಸ್ತಂಭಕ್ಕೆ ಹಾಗೂ ಹೊರಾಂಗಣ ಒಳಾಂಗಣದ ದೀಪಕ್ಕೆ ವಿವಿಧ ಪೂಜಾ ವಿಧಿ-ವಿಧಾನದೊಂದಿಗೆ ದೀಪೋತ್ಸವಕ್ಕೆ ಚಾಲನೆಯಿತ್ತು  ಆಶೀರ್ವಚನ ನೀಡಿದ ಸಾಂತಿಂಜ ಜನಾರ್ಧನ ಭಟ್‌ ಅವರು, ಐಕ್ಯತೆಯ ಪ್ರಕಾಶ ನಮ್ಮ ಬದುಕಿನ ಪ್ರೇರಣ ಶಕ್ತಿಯಾಗಿದೆ. ಪರಿಸರ ಶುದ್ಧಿಗಾಗಿ, ತೈಲದ ದೀಪ ಪರೋಕ್ಷವಾಗಿ ಸಹಕರಿಸುತ್ತದೆ. ಸಾಲು ಹಣತೆಗಳು ಸುಖ, ಸಮೃದ್ಧಿ, ಐಶ್ವರ್ಯದ ಧೊÂàತಕವಾಗಿದೆ. ಇದರ ಶೋಭೆ ಮನೆ-ಮನಗಳನ್ನು ಬೆಳಗಿಸುತ್ತದೆ. ಕಾರ್ತಿಕ ಮಾಸದ ದೀಪಾರಾಧನೆ ಮನುಷ್ಯನ 

ಮತ್ತು ದೇವರ ನಡುವಿನ ಸೂಕ್ಷ್ಮಪ್ರಜ್ಞೆಯ ಸಂಕೇತವಾಗಿದೆ ಎಂದು ನುಡಿದರು.ದೇವಸ್ಥಾನದ ಸ್ಥಾಪಕ ಕೃಷ್ಣ ಜಿ. ಶೆಟ್ಟಿ, ಅಧ್ಯಕ್ಷ ಶಿಮಂತೂರು ಮಜಲಗುತ್ತು ಬಾಬಾ ರಂಜನ್‌ ಶೆಟ್ಟಿ, ಕಾರ್ಯದರ್ಶಿ ಪ್ರಮೋದ್‌ ವಿ. ಮ್ಹಾತ್ರೆ, ಕೋಶಾಧಿಕಾರಿ ವೆಂಕಟೇಶ್‌ ಡಿ. ಪಾಟೀಲ್‌, ಟ್ರಸ್ಟಿಗಳಾದ ಅನಿಲ್‌ ಶೆಟ್ಟಿ, ಸುಂದರ ಶೆಟ್ಟಿಗಾರ್‌, ಹೇಮಂತ್‌ ಸಂಕಪಾಲ್‌, ಪ್ರಸನ್ನ ಬಿ. ಶೆಟ್ಟಿ, ಕೆ. ಪ್ರಸನ್ನ ಶೆಟ್ಟಿ ಮೊದಲಾದವರು ಪಾಲ್ಗೊಂಡಿದ್ದರು. ವಿವಿಧ ಪೂಜಾ ಕಾರ್ಯಕ್ರಮಗಳಲ್ಲಿ ಸಾಂತಿಂಜ ಮಾಧವ ಭಟ್‌, ಸುರೇಶ್‌ ಭಟ್‌  ಕುಂಟಾಡಿ, ವಿಠಲ್‌ ಭಟ್‌, ರಾಘವೇಂದ್ರ ಭಟ್‌ ಮಾಣೆ ಹಾಗೂ ಗಣೇಶ್‌ ರಾವ್‌ ಪಡುಬಿದ್ರೆ ಸಹಕರಿಸಿದರು.

ಬಿಲ್ಲವರ ಅಸೋಸಿಯೇಶನ್‌ ಮೀರಾರೋಡ್‌ ಸ್ಥಳೀಯ ಸಮಿತಿ ಹಾಗೂ ಶ್ರೀ ಲಕ್ಷ್ಮೀನಾರಾಯಣ ಭಜನ ಮಂಡಳಿ ಮೀರಾರೋಡ್‌ ಇದರ ಸದಸ್ಯರಿಂದ ಭಜನೆಯನ್ನು ಆಯೋಜಿಸಲಾಗಿತ್ತು. ಅಧಿಕ ಸಂಖ್ಯೆಯಲ್ಲಿ ಭಕ್ತಾದಿಗಳು ಹಣತೆಗಳನ್ನು ಹಚ್ಚುವ ಮೂಲಕ ದೀಪದಿಂದ ದೀಪ ಬೆಳಗಿಸಿದರು. ಮಹಾಪೂಜೆಯ ಆನಂತರ ಮಹಾಪ್ರಸಾದ ನಡೆಯಿತು. 

ಚಿತ್ರ-ವರದಿ: ರಮೇಶ್‌ ಅಮೀನ್‌

ಟಾಪ್ ನ್ಯೂಸ್

Devara-Mane

Banakal: ದೇವರಮನೆಯಲ್ಲಿ ಮೋಜು-ಮಸ್ತಿಗೆ ಕಡಿವಾಣ

1-BC

Shivamogga:ಅಳಿಯನ ಸಾವಿನ ಕುರಿತು ಪ್ರತಿಕ್ರಿಯಿಸಿದ ಬಿ.ಸಿ.ಪಾಟೀಲ್

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

1-dsadsad

Corruption ತಡೆಯುವಲ್ಲಿ ಬಿಜೆಪಿ, ಕಾಂಗ್ರೆಸ್ ಸರ್ಕಾರಗಳು ವಿಫಲ: ಚಾಮರಸ ಮಾಲಿ ಪಾಟೀಲ್

Militants opened fire on an army vehicle at Kathua

Kathua; ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ ಉಗ್ರರು

1-qewqewqe

Udupi; ನೆರೆ ನೀರಲ್ಲಿ ಕೊಚ್ಚಿಹೋದ ಕಾರು: ಮೂವರು ಪ್ರಾಣಾಪಾಯದಿಂದ ಪಾರು

Heavy-rain

Heavy Rain: ಕರಾವಳಿ ಜಿಲ್ಲೆಗಳು ಸೇರಿ ರಾಜ್ಯಾದ್ಯಂತ ಇನ್ನು 5 ದಿನ ಭಾರೀ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara:ತವರು ಮನೆ ಮಿಲನದ ಸಂಭ್ರಮ: ಕುಟುಂಬ, ಸಂಬಂಧದ ಮೌಲ್ಯವನ್ನು ತಿಳಿಸಿದ ಭೇಟಿ

Desi Swara:ತವರು ಮನೆ ಮಿಲನದ ಸಂಭ್ರಮ: ಕುಟುಂಬ, ಸಂಬಂಧದ ಮೌಲ್ಯವನ್ನು ತಿಳಿಸಿದ ಭೇಟಿ

Desi Swara: “ಆದ್ಯ ಪೂಜ್ಯ’ ಗಣೇಶನ ಅಷ್ಟ ಅವತಾರಗಳ ವಿಭಿನ್ನ, ಮನಮೋಹಕ ಪ್ರಸ್ತುತಿ

Desi Swara: “ಆದ್ಯ ಪೂಜ್ಯ’ ಗಣೇಶನ ಅಷ್ಟ ಅವತಾರಗಳ ವಿಭಿನ್ನ, ಮನಮೋಹಕ ಪ್ರಸ್ತುತಿ

Desi Swara: ಕ್ಷಮೆ ಕೇಳುವುದು ಹಿರಿದೋ? ಕ್ಷಮಿಸುವುದು ಹಿರಿದೋ?

Desi Swara: ಕ್ಷಮೆ ಕೇಳುವುದು ಹಿರಿದೋ? ಕ್ಷಮಿಸುವುದು ಹಿರಿದೋ?

Desi Swara: ವೈಯಕ್ತಿಕ ಸಂತೋಷ ಸದಾ ಜೀವಂತವಾಗಿರಲಿ

Desi Swara: ವೈಯಕ್ತಿಕ ಸಂತೋಷ ಸದಾ ಜೀವಂತವಾಗಿರಲಿ

Desi Swara: ಸುಮಧುರ ಸಂಗೀತ ಸಂಜೆ: ಮಲ್ಹಾರ್‌ 2.0 ಕಾರ್ಯಕ್ರಮ

Desi Swara: ಸುಮಧುರ ಸಂಗೀತ ಸಂಜೆ: ಮಲ್ಹಾರ್‌ 2.0 ಕಾರ್ಯಕ್ರಮ

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

1-wewewq

Ullal: ಕಾರಿನ ಮೇಲೆ ಉರುಳಿ ಬಿದ್ದ ಬೃಹತ್ ಮರ

Devara-Mane

Banakal: ದೇವರಮನೆಯಲ್ಲಿ ಮೋಜು-ಮಸ್ತಿಗೆ ಕಡಿವಾಣ

1-BC

Shivamogga:ಅಳಿಯನ ಸಾವಿನ ಕುರಿತು ಪ್ರತಿಕ್ರಿಯಿಸಿದ ಬಿ.ಸಿ.ಪಾಟೀಲ್

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

family drama movie title track

Sandalwood; “ಫ್ಯಾಮಿಲಿ ಡ್ರಾಮಾ’ ಚಿತ್ರದ ಟೈಟಲ್‌ ಟ್ರ್ಯಾಕ್‌ ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.