ಮುಂಬಯಿ ಕನ್ನಡಿಗರು ಸಾಮರಸ್ಯಕ್ಕೆ ಹೆಸರಾದವರು: ಸಂಸದ ರಾಹುಲ್‌ ಶೆವ್ಹಾಲೆ

ಕೆ. ಟಿ. ವೇಣುಗೋಪಾಲ್‌ ಕಪಸಮ ರಾಷ್ಟ್ರೀಯ ಮಾಧ್ಯಮಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ

Team Udayavani, Sep 21, 2021, 2:20 PM IST

ಮುಂಬಯಿ ಕನ್ನಡಿಗರು ಸಾಮರಸ್ಯಕ್ಕೆ ಹೆಸರಾದವರು: ಸಂಸದ ರಾಹುಲ್‌ ಶೆವ್ಹಾಲೆ

ಮುಂಬಯಿ: ಪ್ರಸ್ತುತ ದಿನಗಳಲ್ಲಿ ಆನ್‌ಲೈನ್‌ ಮಾಧ್ಯಮಗಳು ಮುಂಚೂಣಿಯಲ್ಲಿದ್ದರೂ ವೃತ್ತಪತ್ರಿಕೆಗಳು ತಮ್ಮ ಸ್ಥಾನವನ್ನು ಯಥಾಸ್ಥಿತಿಯಲ್ಲಿ ಕಾಪಾಡಿಕೊಂಡಿವೆ. ಮರಾಠಿ ಮಣ್ಣಿನಲ್ಲಿ ಕನ್ನಡಿಗರು ಸಾಮರಸ್ಯದಿಂದ ಜೀವನ ನಡೆಸುತ್ತಿರುವುದಲ್ಲದೆ ಹಲವಾರು ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿರುವುದು ಹೆಮ್ಮೆಯ ವಿಷಯ ವಾಗಿದೆ. ಕನ್ನಡಿಗರ ಜತೆಗೆ ಅನ್ಯೋನ್ಯವಾಗಿದ್ದು, ಕನ್ನಡಿಗರ ಪ್ರತಿಯೊಂದು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸಂತೋಷವಾಗುತ್ತಿದೆ ಎಂದು ದಕ್ಷಿಣ-ಮಧ್ಯ ಮುಂಬಯಿ ಸಂಸದ ರಾಹುಲ್‌ ಶೆವ್ಹಾಲೆ ತಿಳಿಸಿದರು.

ಸೆ. 19ರಂದು ಅಂಧೇರಿ ಪೂರ್ವದ ಸಾಲೀಟರಿ ಕಾರ್ಪೊರೇಟ್‌ ಪಾರ್ಕ್‌ ಕ್ಲಬ್‌ ಹೌಸ್‌ನ ದಿ| ಆನಂದ ಕೆ. ಪೂಜಾರಿ ಪಾಲಡ್ಕ ಸಭಾಗೃಹದ ಅಪ್ಪಿ ಕೃಷ್ಣ ಶೆಟ್ಟಿ ಕಂಬಿಹಳ್ಳಿ-ಚಿಕ್ಕಮಗಳೂರು ವೇದಿಕೆಯಲ್ಲಿ ಆಯೋಜಿಸಲಾಗಿದ್ದ ಕೆ. ಟಿ. ವೇಣುಗೋಪಾಲ್‌ ಕಪಸಮ ರಾಷ್ಟ್ರೀಯ ಮಾಧ್ಯಮಶ್ರೀ ಪ್ರಶಸ್ತಿ-2021 ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಕನ್ನಡಿಗ ಪತ್ರಕರ್ತರ ಸಂಘವು ಇಷ್ಟೊಂದು ಅರ್ಥಪೂರ್ಣವಾದ ಕಾರ್ಯಕ್ರಮವನ್ನು ಆಯೋಜಿಸಿ ಹಿರಿಯ ಪತ್ರಕರ್ತರೊಬ್ಬರಿಗೆ ಪ್ರಶಸ್ತಿ ಪ್ರದಾನ ಮಾಡುತ್ತಿರುವುದು ಅಭಿನಂದನೀಯ. ನಿಮ್ಮ ಎಲ್ಲ ಕಾರ್ಯಕ್ರಮಗಳಿಗೆ ಸಂಸದನಾಗಿ ನನ್ನ ಪ್ರೋತ್ಸಾಹ, ಸಹಕಾರ ಸದಾಯಿದೆ ಎಂದರು.

ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್‌ ಬಂಟ್ವಾಳ್‌ ಅಧ್ಯಕ್ಷತೆಯಲ್ಲಿ ಜರಗಿದ ಸಮಾರಂಭದಲ್ಲಿ ಅಜಂತಾ ಕ್ಯಾಟರರ್ ಮುಂಬಯಿ ಇದರ ಪ್ರವರ್ತಕ ಜಯರಾಮ ಬಿ. ಶೆಟ್ಟಿ, ಚಿತ್ತಾರಿ ಹಾಸ್ಪಿಟಾಲಿಟಿ ಪ್ರೈ. ಲಿ.ನ ಆಡಳಿತ ನಿರ್ದೇಶಕ ಸದರಾಮ ಎನ್‌. ಶೆಟ್ಟಿ, ಪ್ರಶಸ್ತಿ ಆಯ್ಕೆ ಸಮಿತಿಯ ಕಾರ್ಯಾಧ್ಯಕ್ಷೆ ಡಾ| ಸುನೀತಾ ಎಂ. ಶೆಟ್ಟಿ, ಕಪಸಮ ಉಪಾಧ್ಯಕ್ಷ ರಂಗ ಎಸ್‌. ಪೂಜಾರಿ ಅವರು ಕಾಸರಗೋಡಿನ ಹಿರಿಯ ಕನ್ನಡಿಗ ಪತ್ರಕರ್ತ ಅಚ್ಯುತ ಚೇವಾರ್‌ ಅವರನ್ನು ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆ, 25,000 ರೂ. ನಗದು, ಸಮ್ಮಾನಪತ್ರವನ್ನಿತ್ತು ಪ್ರಶಸ್ತಿ ಪ್ರದಾನ ಮಾಡಿ ಶುಭ ಹಾರೈಸಿದರು.

ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಅಚ್ಯುತ ಚೇವಾರ್‌ ಮಾತನಾಡಿ, ಇದೊಂದು ಗ್ರಾಮೀಣ ಪ್ರದೇಶಕ್ಕೆ ಸಂದ ಪ್ರಶಸ್ತಿ. ಕೆ. ಟಿ. ಗೋಪಾಲ್‌ ಗೌರವ ಅಂದರೆ ಅದು ಅವರ ತವರೂರು ಕಾಸರಗೋಡಿನ ಗೌರವ ಎಂದೆಣಿಸಿದ್ದೇನೆ ಎಂದರು.

ಇದನ್ನೂ ಓದಿ:ಶಾರುಖ್ ಸಿನಿಮಾ ಟ್ರೈಲರ್‍ ನೋಡಿ ಮೋಸಹೋದ ಪ್ರೇಕ್ಷಕಳಿಗೆ ಸುಪ್ರೀಂ ಕೋರ್ಟ್‍ನಲ್ಲಿ ಜಯ

ಸಮಾರಂಭದಲ್ಲಿ ಶಿವಾಸ್‌ ಸಂಸ್ಥೆಯ ಡಾ| ಶಿವರಾಮ ಕೃಷ್ಣ ಭಂಡಾರಿ, ಬಂಟರ ಸಂಘ ಮುಂಬಯಿ ಅಧ್ಯಕ್ಷ ಚಂದ್ರಹಾಸ ಕೆ. ಶೆಟ್ಟಿ, ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಅಧ್ಯಕ್ಷ ಹರೀಶ್‌ ಜಿ. ಅಮೀನ್‌, ಮಾಜಿ ಅಧ್ಯಕ್ಷರಾದ ಚಂದ್ರಶೇಖರ್‌ ಎಸ್‌. ಪೂಜಾರಿ, ನಿತ್ಯಾನಂದ ಡಿ. ಕೋಟ್ಯಾನ್‌, ಭಾರತ್‌ ಬ್ಯಾಂಕ್‌ನ ನಿರ್ದೇಶಕ ಸೂರ್ಯಕಾಂತ್‌ ಜಯ ಸುವರ್ಣ, ಎನ್‌ಸಿಪಿ ಪಕ್ಷದ ಮುಂಬಯಿ ಉತ್ತರ ಮಧ್ಯ ಜಿಲ್ಲಾ ನಿರೀಕ್ಷಕ ಲಕ್ಷ್ಮಣ ಸಿ. ಪೂಜಾರಿ ಚಿತ್ರಾಪು, ಯುವ ನೇತಾರ ನಿರಂಜನ್‌ ಎಲ್‌. ಪೂಜಾರಿ, ಸಮಾಜ ಸೇವಕ ರಮಾನಂದ್‌ ಸಾಲ್ಯಾನ್‌ ಅಳಿಯೂರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾಸರಗೋಡು ಜಿಲ್ಲಾ ಸಮಿತಿ ಘಟಕದ ಅಧ್ಯಕ್ಷ ಅಬ್ದುಲ್‌ ರಹಮಾನ್‌ ಸುಬ್ಬಯ್ಯಕಟ್ಟೆ, ಪ್ರಧಾನ ಕಾರ್ಯದರ್ಶಿ ಕೆ. ಗಂಗಾಧರ ಯಾದವ್‌, ಕೋಶಾಧಿಕಾರಿ ಪುರುಷೋತ್ತಮ ಪೆರ್ಲ ಮತ್ತಿತರರು ಉಪಸ್ಥಿತರಿದ್ದರು.

ಸಂಘದ ಸಲಹಾ ಸಮಿತಿಯ ಸದಸ್ಯರಾದ ಸಿಎ ಐ. ಆರ್‌. ಶೆಟ್ಟಿ, ಗ್ರೇಗೊರಿ ಡಿ’ಅಲ್ಮೇಡಾ, ಸುರೇಂದ್ರ ಎ. ಪೂಜಾರಿ, ಕಡಂದಲೆ ಸುರೇಶ್‌ ಎಸ್‌. ಭಂಡಾರಿ, ಪಂಡಿತ್‌ ನವೀನ್‌ಚಂದ್ರ ಆರ್‌. ಸನಿಲ್‌, ಸುಧಾಕರ್‌ ಉಚ್ಚಿಲ್‌, ಕಾರ್ಯಕಾರಿ ಸಮಿತಿಯ ಸದಸ್ಯರಾದ ನಾಗರಾಜ್‌ ಕೆ. ದೇವಾಡಿಗ, ಅನಿತಾ ಪಿ. ಪೂಜಾರಿ ತಾಕೋಡೆ, ಅಶೋಕ್‌ ಆರ್‌. ದೇವಾಡಿಗ, ವಿಶೇಷ ಆಮಂತ್ರಿತ ಸದಸ್ಯರಾದ ಸಾ. ದಯಾ, ಗೋಪಾಲ್‌ ತ್ರಾಸಿ, ಸದಾನಂದ ಕೆ. ಸಫಲಿಗ ಶಿರ್ವ, ಕರುಣಾಕರ್‌ ವಿ. ಶೆಟ್ಟಿ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಸವಿತಾ ಸುರೇಶ್‌ ಶೆಟ್ಟಿ ಪ್ರಾರ್ಥನೆಗೈದರು. ಗೌರವ ಪ್ರಧಾನ ಕಾರ್ಯದರ್ಶಿ ಅಶೋಕ್‌ ಎಸ್‌. ಸುವರ್ಣ ಸ್ವಾಗತಿಸಿದರು. ಪತ್ರಕರ್ತರ ಭವನ ಸಮಿತಿಯ ಕಾರ್ಯಾಧ್ಯಕ್ಷ ಡಾ| ಶಿವ ಮೂಡಿಗೆರೆ ಪ್ರಸ್ತಾವನೆಗೈದರು. ಕಾರ್ಯಕಾರಿ ಸಮಿತಿ ಸದಸ್ಯ ವಿಶ್ವನಾಥ್‌ ಪೂಜಾರಿ ನಿಡ್ಡೋಡಿ ಕಾರ್ಯಕ್ರಮ ನಿರ್ವಹಿಸಿದರು. ಎ. ಆರ್‌. ಸುಬ್ಬಯ್ಯಕಟ್ಟೆ, ಅಭಿನಂದನ ನುಡಿಗಳನ್ನಾಡಿದರು. ಜತೆ ಕೋಶಾಧಿಕಾರಿ ಡಾ| ಜಿ. ಪಿ. ಕುಸುಮಾ, ಗೌರವ ಕೋಶಾಧಿಕಾರಿ ನಾಗೇಶ್‌ ಪೂಜಾರಿ ಏಳಿಂಜೆ, ಜಯಂತ್‌ ಕೆ. ಸುವರ್ಣ ಅತಿಥಿಗಳನ್ನು ಪರಿಚಯಿಸಿದರು. ಗೌರವ ಕಾರ್ಯದರ್ಶಿ ರವೀಂದ್ರ ಆರ್‌. ಶೆಟ್ಟಿ ತಾಳಿಪಾಡಿ ವಂದಿಸಿದರು.

ಯೋಗ್ಯ ವ್ಯಕ್ತಿಗೆ ಪ್ರಶಸ್ತಿ
ಪತ್ರಕರ್ತ ನಿರ್ಭೀತನಾಗಿರಬೇಕು. ಒಬ್ಬ ಪತ್ರಕರ್ತನಲ್ಲಿರುವ ನಿರ್ಭೀತಿ ಸಾಹಿತಿಗೆ ಇರುವುದಿಲ್ಲ. ಭಯವಿಲ್ಲದ ವೃತ್ತಿ ಎಂದರೆ ಅದು ಪತ್ರಕರ್ತನ ವೃತ್ತಿ. ಸಾಹಿತಿಗೆ ಅಂಜಿಕೆ, ದಾಕ್ಷಿಣ್ಯ ಇರುತ್ತದೆ, ಆದರೆ ಪತ್ರಕರ್ತನಿಗಿಲ್ಲ. ಇದನ್ನೇ ಕೆ. ಟಿ. ವೇಣುಗೋಪಾಲ್‌ ರೂಢಿಸಿಕೊಂಡಿದ್ದರು. ಯೋಗ್ಯ ವ್ಯಕ್ತಿಗೆ ಪ್ರಶಸ್ತಿ ಲಭಿಸಿದೆ. ಚೇವಾರ್‌ ಪತ್ರಿಕೋದ್ಯಮದಲ್ಲಿ ವಿಶೇಷ ಸಾಧನೆ ಮಾಡಿದ್ದಾರೆ.
-ಡಾ| ಸುನೀತಾ ಎಂ. ಶೆಟ್ಟಿ, ಹಿರಿಯ ಸಾಹಿತಿ

ಸದಸ್ಯರಿಗೆ ಸಹಕಾರಿಯಾಗಲಿ
ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಇಲ್ಲಿನ ಕನ್ನಡಿಗ ಪತ್ರಕರ್ತರಿಗೆ ಶ್ರೀರಕ್ಷೆಯಾಗಿದೆ. ಸಂಘವು ಇನ್ನಷ್ಟು ಅಭಿವೃದ್ಧಿಯತ್ತ ಸಾಗಿ ಸದಸ್ಯರಿಗೆ ಸಹಕಾರಿಯಾಗಲಿ. ನಮ್ಮದೇ ಸಂಸ್ಥೆ ಎಂಬ ಹೆಮ್ಮೆಯಿಂದ ಬಂದಿದ್ದೇನೆ. ನನ್ನ ಸಹಾಯ, ಸಹಕಾರ ಸಂಸ್ಥೆಗೆ ಸದಾಯಿದೆ. ಎಲ್ಲರೂ ಒಂದಾಗಿ ಸಂಸ್ಥೆಯನ್ನು ಇನ್ನಷ್ಟು ಶಕ್ತಿಶಾಲಿಯಾಗಿ ಬೆಳೆಸಿ.
-ಜಯರಾಮ ಬಿ. ಶೆಟ್ಟಿ,
ಪ್ರವರ್ತಕರು, ಅಜಂತಾ ಕ್ಯಾಟರರ್ ಮುಂಬಯಿ

ಸಂಘಟನೆ ಅಭಿವೃದ್ಧಿಯತ್ತ
ಹೊರನಾಡ ಮತ್ತು ಗಡಿನಾಡ ಪತ್ರಕರ್ತರ ಶಕ್ತಿ ಪ್ರದರ್ಶನದ ಸಂಕೇತ ಈ ಕಾರ್ಯಕ್ರಮವಾಗಿದೆ. ನಾವೆಲ್ಲರೂ ಸಾಂಘಿಕವಾಗಿದ್ದರೆ ಸಂಘದ ಮೂಲಕ ಸರಕಾರದ ಸವಲತ್ತುಗಳನ್ನು ಪಡೆದುಕೊಳ್ಳಲು ಸಾಧ್ಯವಾಗಬಹುದು. ಒಗ್ಗಟ್ಟಿನಿಂದ ಸಂಘಟನೆಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯೋಣ.
-ರೋನ್ಸ್‌ ಬಂಟ್ವಾಳ್‌
ಅಧ್ಯಕ್ಷರು, ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.