“ಮುಂಬಯಿ ತುಳು ಕನ್ನಡಿಗರ ರಾಯಭಾರಿ ಎಂ.ಡಿ.ಶೆಟ್ಟಿ’ ಕೃತಿ ಬಿಡುಗಡೆ 


Team Udayavani, Mar 17, 2019, 2:25 PM IST

1605mum17.jpg

ಮುಂಬಯಿ: ನಾನು ಈ ಮಹಾನಗರಿಯನ್ನು ಸೇರಿ 6 ದಶಕಗಳು ಕಳೆದಿದೆ. ಆದ್ದರಿಂದ ಸ್ಪಷ್ಟ ತುಳು ಕನ್ನಡ ಭಾಷೆ ನನಗೆ ಕಷ್ಟವಾದರೂ ಭಾಷಾಭಿಮಾನ ನನ್ನಲ್ಲಿ ಜೀವಂತ ವಾಗಿದೆ. ಈ ಭಾಷಾಭಿಮಾನವೇ  ಎಂ. ಡಿ. ಶೆಟ್ಟಿ ಅವರೊಂದಿಗೆ ಸುಮಾರು 40 ವರ್ಷಗಳ ಸ್ನೇಹವನ್ನು ಬಲಪಡಿಸಿದೆ. ಅವರ ಸಾಮಾಜಿಕ ಕಳಕಳಿ, ತುಳುನಾಡ ಅಭಿಮಾನ, ಸ್ವಸಮಾಜದ ಸ್ವಾಭಿಮಾನ  ಅನನ್ಯವಾದುದು. ಎಲ್ಲರಲ್ಲೂ ಧೈರ್ಯ ತುಂಬಿ ಆತ್ಮಸ್ಥೈರ್ಯ ತುಂಬಿಸಿ ಮುಂಬಯಿ ಹೊಟೇಲ್‌ ಉದ್ಯಮಕ್ಕೆ ಇವರು ಮೇಲ್ಪಂಕ್ತಿಯಾಗಿದ್ದಾರೆ. ಇವರ ಸರ್ವೋತ್ಕೃಷ್ಟ ಸೇವೆಯ ಗೌರವವೇ ಈ ಕೃತಿಯಾಗಿದೆ ಎಂದು ಬೃಹನ್ಮುಂಬಯಿ ಪೊಲೀಸ್‌ ನಿವೃತ್ತ  ಪೊಲೀಸ್‌ ಆಯುಕ್ತ ರೋನಿ ಎಚ್‌. ಮೆಂಡೋನ್ಸಾ ನುಡಿದರು.

ಮಾ. 16ರಂದು ಸಂಜೆ ಸಾಂತಾಕ್ರೂಜ್‌ ಪೂರ್ವದ ವಿದ್ಯಾನಗರಿಯ ಜೆ. ಪಿ. ನಾಯಕ್‌ ಭವನದಲ್ಲಿ ಮುಂಬಯಿ ವಿವಿ ಕನ್ನಡ ವಿಭಾಗದ ವತಿಯಿಂದ ಸುರೇಖಾ ಹರಿಪ್ರಸಾದ್‌ ಶೆಟ್ಟಿ ರಚಿತ “ಮುಂಬಯಿ ತುಳು ಕನ್ನಡಿಗರ ರಾಯಭಾರಿ ಎಂ. ಡಿ. ಶೆಟ್ಟಿ’ ಕೃತಿ ಬಿಡುಗಡೆಗೊಳಿಸಿ ಮಾತನಾಡಿ,   ಮಹಾನಗರ ದಲ್ಲಿ ಡಾ| ಅಡ್ಯಂತ್ತಾ¤ಯ, ಡಾ| ಕೆ. ಆರ್‌. ಶೆಟ್ಟಿ, ಫೋರ್‌ಎಸ್‌ ಸದಾನಂದ ಶೆಟ್ಟಿ ಇವರು ಸಮಾಜಕ್ಕೆ ನೀಡಿದ ಸೇವೆಯೂ ದೊಡ್ಡದು. ಸಂಘಟನೆಗಳ ಸರದಾರ ಎನಿಸಿದ ಎಂ. ಡಿ. ಶೆಟ್ಟಿ ಅಂತಹ ವ್ಯಕ್ತಿ ಪರಿಚಿತ ಕೃತಿ ತುಳುನಾಡ ಭಾವೀ ಯುವ ಜನತೆಗೆ ಒಂದು ಆದರ್ಶವಾಗಲಿ ಎಂದು ಹಾರೈಸಿದರು.
ಮುಂಬಯಿ ವಿವಿ ಕನ್ನಡ ವಿಭಾಗದ ಮುಖ್ಯಸ್ಥ ಡಾ| ಜಿ. ಎನ್‌. ಉಪಾಧ್ಯ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಮುಂಬಯಿ ಕನ್ನಡಿಗರ ಅಭಿಮಾನದ ಮೂರ್ತಿ ಎಂ. ಡಿ. ಶೆಟ್ಟಿ ಅವರ  ವ್ಯಕ್ತಿತ್ವ ಇತರರಿಗೆ ಮಾದರಿಯಾಗಿದೆ ಎಂದರು.

ಮಹಾರಾಷ್ಟ್ರ ಎನ್‌ಐಎ ಇದರ ವಿಶೇಷ ನ್ಯಾಯವಾದಿ ಕಡಂದಲೆ ಪರಾರಿ ಪ್ರಕಾಶ್‌ ಎಲ್‌. ಶೆಟ್ಟಿ ಅವರು ಮಾತನಾಡಿ, ಎಂ. ಪಿ. ಶೆಟ್ಟಿ ಅವರು ಎಲ್ಲರಲ್ಲೂ ಆತ್ಮವಿಶ್ವಾಸ ತುಂಬಬಲ್ಲ ವ್ಯಕ್ತಿಯಾಗಿದ್ದಾರೆ. ಇವರ ಜೀವನ ಸಾಧನೆ ದಾಖಲಾಗುತ್ತಿರುವುದು ಸ್ತುತ್ಯರ್ಹ. ಹೊಸ ತಲೆಮಾರಿಗೆ ಈ ಕೃತಿ ಮಾದರಿ ಎಂದರು.

ಅತಿಥಿ ಅಭ್ಯಾಗತರಾಗಿ ಮೈಸೂರಿನ ಹಿರಿಯ ಸಾಹಿತಿ ಡಾ| ಕಾಳೇಗೌಡ ನಾಗವಾರ, ಹುಬ್ಬಳ್ಳಿಯ ವಿಮರ್ಶಕ, ಹಿರಿಯ ಸಾಹಿತಿ ಡಾ| ಶ್ಯಾಮಸುಂದರ ಬಿದರಕುಂದಿ, ಹಿರಿಯ ಸಾಹಿತಿ ಡಾ| ವಿಶ್ವನಾಥ್‌ ಕಾರ್ನಾಡ್‌, ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ  ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಸುಧಾಕರ್‌ ಹೆಗ್ಡೆ, ಪತ್ರಕರ್ತ ಚಂದ್ರಶೇಖರ ಪಾಲೆತ್ತಾಡಿ, ಬಂಟರವಾಣಿ ಮಾಸಿಕದ ಮಾಜಿ ಸಂಪಾದಕ ರತ್ನಾಕರ ಆರ್‌. ಶೆಟ್ಟಿ ಉಪಸ್ಥಿತರಿದ್ದರು.

ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್‌.  ಪಯ್ಯಡೆ ಮಾತನಾಡಿ, ಎಂ. ಡಿ. ಶೆಟ್ಟಿ ಅವರು ಮೇರು ವ್ಯಕ್ತಿತ್ವವುಳ್ಳ ವರಾಗಿದ್ದು ಇಂತಹ ಯುಗ ಪುರುಷರು ಶತಮಾನ ಮೀರಿ ಬಾಳಬೇಕು ಎಂದು ಅವರ ಭವಿಷ್ಯಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಎನ್‌. ಸಿ. ಶೆಟ್ಟಿ, ಸಿಎ ಐ. ಆರ್‌. ಶೆಟ್ಟಿ, ಕವಿತಾ ಐ. ಆರ್‌. ಶೆಟ್ಟಿ, ಸರಿತಾ ಆರ್‌. ಶೆಟ್ಟಿ, ಅಶೋಕ್‌ ಶೆಟ್ಟಿ, ಶಿಮಂತೂರು ಚಂದ್ರಹಾಸ ಶೆಟ್ಟಿ, ಸರಿತಾ ರಮೇಶ್‌ ಶೆಟ್ಟಿ, ವೇಣು ಆರ್‌. ಶೆಟ್ಟಿ, ಅಶ್ವಿ‌ನ್‌ ಶೆಟ್ಟಿ, ರವೀಂದ್ರ ಎಂ. ಅರಸ, ಸಂಜೀವ ಶೆಟ್ಟಿ, ಪಾಂಡು ಶೆಟ್ಟಿ, ಶಿವರಾಮ ಜಿ. ಶೆಟ್ಟಿ ಅಜೆಕಾರು, ನ್ಯಾಯವಾದಿ  ಅಶೋಕ್‌ ಶೆಟ್ಟಿ, ಸಿಎ ಸಂಜೀವ ಶೆಟ್ಟಿ, ಡಾ| ವಿಜೇತಾ  ಶೆಟ್ಟಿ, ಸುಜಯಾ ಆರ್‌. ಶೆಟ್ಟಿ, ಲತಾ ಪಿ. ಭಂಡಾರಿ, ಮಮತಾ ಶೆಟ್ಟಿ, ಜಯರಾಮ ಎನ್‌. ಶೆಟ್ಟಿ, ಶಿವರಾಮ ಜಿ. ಶೆಟ್ಟಿ, ಪಿ. ಗ. ಶೆಟ್ಟಿ, ರತ್ನಾಕರ ವಿ. ಶೆಟ್ಟಿ, ನ್ಯಾಯವಾದಿ  ಬಿ. ಸುಭಾಷ್‌ ಶೆಟ್ಟಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದು ಎಂ. ಡಿ. ಶೆಟ್ಟಿ ಅವರಿಗೆ ಪುಷ್ಪಗುತ್ಛವನ್ನಿತ್ತು ಅಭಿನಂದಿಸಿದರು.

ಅತಿಥಿ-ಗಣ್ಯರು ಮಾತನಾಡಿ ಎಂ. ಡಿ. ಶೆಟ್ಟಿ ಅವರ ಸಿದ್ಧಿ-ಸಾಧನೆಗಳನ್ನು ವಿವರಿಸಿ ಶುಭ ಹಾರೈಸಿದರು. ಸುರೇಖಾ ಹರಿಪ್ರಸಾದ್‌ ಶೆಟ್ಟಿ ಪರಿವಾರದವರು ಡಾ| ಜಿ. ಎನ್‌. ಉಪಾಧ್ಯ ಅವರಿಗೆ ಗುರುಕಾಣಿಕೆಯನ್ನಿತ್ತು ಗೌರವಿಸಿದರು. ಅತಿಥಿ-ಗಣ್ಯರನ್ನು ಶಾಲು ಹೊದಿಸಿ, ಪುಷ್ಪಗುತ್ಛ, ಗ್ರಂಥ ಗೌರವವನ್ನಿತ್ತು  ಗೌರವಿಸಿದರು. ಡಾ| ಜಿ. ಎನ್‌. ಉಪಾಧ್ಯ ಸ್ವಾಗತಿಸಿದರು. ಕವಿ, ಸಂಘಟಕ ಪೇತ್ರಿ ವಿಶ್ವನಾಥ ಶೆಟ್ಟಿ ಅವರು ಕೃತಿಗಳನ್ನು  ಪರಿಚಯಿಸಿದರು. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ| ಪೂರ್ಣಿಮಾ ಸುಧಾಕರ್‌ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿ ಕಾರ್ಯಕ್ರಮ ನಿರೂಸಿದರು.    ಸುರೇಖಾ ಹರಿಪ್ರಸಾದ್‌ ವಂದಿಸಿದರು. 

  ನಾನು ಉದ್ಯೋಗವನ್ನರಸಿ ಹಣ ಮಾಡಲು ಮುಂಬಯಿ ಸೇರಿದವನಲ್ಲ. ಸಾಮಾಜಿಕ ಕಳಕಳಿ, ಸೇವಾ ತುಡಿತ ನನ್ನನ್ನು ಇಲ್ಲಿಗೆ ಆಹ್ವಾನಿಸಿದಂತಿದೆ. ಅದೇ ನನ್ನನ್ನು ಇಷ್ಟರ ಮಟ್ಟಿಗೆ ಬೆಳೆಸಿ ಇಂತಹ  ಕೃತಿಗೆ ಪಾತ್ರವಾಗಿಸಿದೆ. ಬಹುಶಃ ಮುಂಬಯಿ ಮಹಾನಗರದಲ್ಲಿ ನೆಲೆಯಾಗಿ 75 ವರ್ಷಗಳಿಂದ  ನಿರಂತರ ಸಂಸ್ಥೆಯೊಂದರ ಮೂಲಕ ಸೇವೆಗೈಯುವ ಭಾಗ್ಯ ನನಗೆ ಸಂತಸ ತಂದಿದೆ. ಈ ಕಾರ್ಯಕ್ರಮದಿಂದ ಅನೇಕರ ಹೊಗಳುವಿಕೆಯಿಂದ ಇನ್ನೂ ಐದಾರು ವರ್ಷಗಳ ಆಯುಷ್ಯ ಹೆಚ್ಚಿಸಿಕೊಂಡಂತಾಗಿದೆ. ಬದುಕಿನಲ್ಲಿ ಕಷ್ಟ ಸುಖ ಅನುಭವಿಸಿದರೂ ವೃದ್ಧಾಪ್ಯ ಜೀವನದಲ್ಲಿ ನೆಮ್ಮದಿ ಅನುಭವಿಸುತ್ತಿರುವುದೇ ನನ್ನ ಯಶಸ್ವಿನ ಬದುಕಾಗಿದೆ 
 – ಎಂ. ಡಿ. ಶೆಟ್ಟಿ (ನಗರದ ಹಿರಿಯ ಕನ್ನಡಿಗ).

ಚಿತ್ರ-ವರದಿ: ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

Baharain1

ಮೊಗವೀರ್ಸ್‌ ಬಹ್ರೈನ್‌ ಪ್ರೊ ಕಬಡ್ಡಿ;ತುಳುನಾಡ್‌ ತಂಡ ಪ್ರಥಮ,ಪುನಿತ್‌ ಬೆಸ್ಟ್‌ All ರೌಂಡರ್‌

ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ

ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.